Homeಕರ್ನಾಟಕಬೆಂಗಳೂರು ಅರಮನೆ ಮೈದಾನ ಪ್ರಕರಣ | ಟಿಡಿಆರ್ ಬಿಡುಗಡೆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ ರಾಜ್ಯ...

ಬೆಂಗಳೂರು ಅರಮನೆ ಮೈದಾನ ಪ್ರಕರಣ | ಟಿಡಿಆರ್ ಬಿಡುಗಡೆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರು ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮತ್ತು ಇತರರ ಕಾನೂನುಬದ್ಧ ಉತ್ತರಾಧಿಕಾರಿ ಪರವಾಗಿ 3,400 ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ವರ್ಗಾವಣೆ ಅಭಿವೃದ್ಧಿ ಹಕ್ಕುಗಳ (ಟಿಡಿಆರ್‌) ಪ್ರಮಾಣಪತ್ರಗಳನ್ನು ಬಿಡುಗಡೆ ಮಾಡಲು ಮೇ 22 ರಂದು ಹೊರಡಿಸಲಾದ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಿದೆ. ಬೆಂಗಳೂರು ಅರಮನೆ ಮೈದಾನ ಪ್ರಕರಣ

ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್, ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಅರ್ಜಿಯನ್ನು ಮಂಗಳವಾರ ಪರಿಗಣಿಸಲು ಪೀಠ ಒಪ್ಪಿಕೊಂಡಿದ್ದಾಗಿ ವರದಿಯಾಗಿದೆ.

ಟಿಡಿಆರ್‌ಗಳನ್ನು ಈಗಾಗಲೇ ಶುಕ್ರವಾರ ಹಸ್ತಾಂತರಿಸಲಾಗಿದೆ ಮತ್ತು ಎಲ್ಲಾ ಅರ್ಜಿಗಳನ್ನು ಪರಿಗಣಿಸಿದ ನಂತರ ನಿರ್ದೇಶನವನ್ನು ಅಂಗೀಕರಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಅಂದಿನಿಂದ ಈ ವಿಷಯವು ನಿಷ್ಪ್ರಯೋಜಕವಾಗಿದೆ ಎಂದು ಕೂಡಾ ಸಲ್ಲಿಸಲಾಗಿದೆ.

“ಕಾಯ್ದೆಯೆ ಅನ್ವಯಿಸದೇ ಇರುವಾಗ ಟಿಡಿಆರ್ ಅನ್ನು ಕಾನೂನಿನಲ್ಲಿ ಅಡಿಯಲ್ಲಿ ಹೇಗೆ ನೀಡಲು ಸಾಧ್ಯ? ಟಿಡಿಆರ್ ಜಾರಿಗೆ ಬಂದಿದ್ದು 2004 ರಲ್ಲಾಗಿದೆ, ಹೀಗಿರುವಾಗ ಅವುಗಳನ್ನು ಅದಕ್ಕೂ ಹಿಂದಿನಿಂದ ಲೆಕ್ಕ ಹಾಕಿ ಹೇಗೆ ನೀಡಲು ಸಾಧ್ಯ” ಎಂದು ಸಿಬಲ್ ಪ್ರಶ್ನಿಸಿದ್ದಾರೆ.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರ ಪೀಠವು ಮೇ 22 ರಂದು ಟಿಡಿಆರ್ ಬಿಡುಗಡೆಗೆ ತೀರ್ಪು ನೀಡಿದ್ದು, ಈ ವೇಳೆ ರಾಜ್ಯ ಸರ್ಕಾರದ ಎಲ್ಲಾ ವಾದಗಳನ್ನು ತಿರಸ್ಕರಿಸಿತ್ತು.

ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಕಾನೂನುಬದ್ಧ ಉತ್ತರಾಧಿಕಾರಿ ಮತ್ತು ವಕೀಲೆ ನಯನಾ ತಾರಾ ಬಿ.ಜಿ. ಮತ್ತು ಇತರರನ್ನು ಪ್ರತಿನಿಧಿಸಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗಳ ಗುಂಪನ್ನು ನ್ಯಾಯಾಲಯ ವಿಲೇವಾರಿ ಮಾಡಿತು.

ಜನವರಿ 29, 2025 ರಂದು, ಕರ್ನಾಟಕ ಸರ್ಕಾರವು ಬೆಂಗಳೂರು ಅರಮನೆ (ಭೂಮಿ ಬಳಕೆ ಮತ್ತು ನಿಯಂತ್ರಣ) ಸುಗ್ರೀವಾಜ್ಞೆ 2025 ಅನ್ನು ಅಧಿಸೂಚನೆ ಮಾಡಿತ್ತು. ಡಿಸೆಂಬರ್ 10, 2024 ರಂದು ಸುಪ್ರೀಂಕೋರ್ಟ್ ಟಿಡಿಆರ್ ನೀಡುವ ಬಗ್ಗೆ ಆದೇಶ ಹೊರಡಿಸಿದ ನಂತರ, ಬೆಂಗಳೂರು ನಗರದ ಹೃದಯಭಾಗದಲ್ಲಿರುವ ವಿವಾದಿತ ಅರಮನೆ ಭೂಮಿಯ ಭಾಗಗಳನ್ನು ಸ್ವಾಧೀನಪಡಿಸಿಕೊಳ್ಳದಿರುವ ಹಕ್ಕನ್ನು ಕಾಯ್ದಿರಿಸಿತು.

ಬೆಂಗಳೂರು ಅರಮನೆ (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆ, 1996 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ 1997 ರ ಸಿವಿಲ್ ಮೇಲ್ಮನವಿಯನ್ನು ಕೈಗೆತ್ತಿಕೊಳ್ಳುವಂತೆ ಸುಪ್ರೀಂಕೋರ್ಟ್ ಅನ್ನು ಒತ್ತಾಯಿಸಿ ಕರ್ನಾಟಕ ಸರ್ಕಾರವು ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದೆ. ಬೆಂಗಳೂರು ಅರಮನೆ ಮೈದಾನ ಪ್ರಕರಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕ್ ಗುಪ್ತಚರ ಅಧಿಕಾರಿಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆ: ಸಿಆರ್‌ಪಿಎಫ್ ಸಿಬ್ಬಂದಿ ಮೋತಿ ರಾಮ್ ಜಾಟ್ ಬಂಧನ

ಪಾಕ್ ಗುಪ್ತಚರ ಅಧಿಕಾರಿಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆ: ಸಿಆರ್‌ಪಿಎಫ್ ಸಿಬ್ಬಂದಿ ಮೋತಿ ರಾಮ್ ಜಾಟ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...