Homeಕರ್ನಾಟಕಬೆಂಗಳೂರು ಅರಮನೆ ಮೈದಾನ ಪ್ರಕರಣ | ಟಿಡಿಆರ್ ಬಿಡುಗಡೆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ ರಾಜ್ಯ...

ಬೆಂಗಳೂರು ಅರಮನೆ ಮೈದಾನ ಪ್ರಕರಣ | ಟಿಡಿಆರ್ ಬಿಡುಗಡೆ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರು ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮತ್ತು ಇತರರ ಕಾನೂನುಬದ್ಧ ಉತ್ತರಾಧಿಕಾರಿ ಪರವಾಗಿ 3,400 ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ವರ್ಗಾವಣೆ ಅಭಿವೃದ್ಧಿ ಹಕ್ಕುಗಳ (ಟಿಡಿಆರ್‌) ಪ್ರಮಾಣಪತ್ರಗಳನ್ನು ಬಿಡುಗಡೆ ಮಾಡಲು ಮೇ 22 ರಂದು ಹೊರಡಿಸಲಾದ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಿದೆ. ಬೆಂಗಳೂರು ಅರಮನೆ ಮೈದಾನ ಪ್ರಕರಣ

ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್, ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಅರ್ಜಿಯನ್ನು ಮಂಗಳವಾರ ಪರಿಗಣಿಸಲು ಪೀಠ ಒಪ್ಪಿಕೊಂಡಿದ್ದಾಗಿ ವರದಿಯಾಗಿದೆ.

ಟಿಡಿಆರ್‌ಗಳನ್ನು ಈಗಾಗಲೇ ಶುಕ್ರವಾರ ಹಸ್ತಾಂತರಿಸಲಾಗಿದೆ ಮತ್ತು ಎಲ್ಲಾ ಅರ್ಜಿಗಳನ್ನು ಪರಿಗಣಿಸಿದ ನಂತರ ನಿರ್ದೇಶನವನ್ನು ಅಂಗೀಕರಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಅಂದಿನಿಂದ ಈ ವಿಷಯವು ನಿಷ್ಪ್ರಯೋಜಕವಾಗಿದೆ ಎಂದು ಕೂಡಾ ಸಲ್ಲಿಸಲಾಗಿದೆ.

“ಕಾಯ್ದೆಯೆ ಅನ್ವಯಿಸದೇ ಇರುವಾಗ ಟಿಡಿಆರ್ ಅನ್ನು ಕಾನೂನಿನಲ್ಲಿ ಅಡಿಯಲ್ಲಿ ಹೇಗೆ ನೀಡಲು ಸಾಧ್ಯ? ಟಿಡಿಆರ್ ಜಾರಿಗೆ ಬಂದಿದ್ದು 2004 ರಲ್ಲಾಗಿದೆ, ಹೀಗಿರುವಾಗ ಅವುಗಳನ್ನು ಅದಕ್ಕೂ ಹಿಂದಿನಿಂದ ಲೆಕ್ಕ ಹಾಕಿ ಹೇಗೆ ನೀಡಲು ಸಾಧ್ಯ” ಎಂದು ಸಿಬಲ್ ಪ್ರಶ್ನಿಸಿದ್ದಾರೆ.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರ ಪೀಠವು ಮೇ 22 ರಂದು ಟಿಡಿಆರ್ ಬಿಡುಗಡೆಗೆ ತೀರ್ಪು ನೀಡಿದ್ದು, ಈ ವೇಳೆ ರಾಜ್ಯ ಸರ್ಕಾರದ ಎಲ್ಲಾ ವಾದಗಳನ್ನು ತಿರಸ್ಕರಿಸಿತ್ತು.

ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಕಾನೂನುಬದ್ಧ ಉತ್ತರಾಧಿಕಾರಿ ಮತ್ತು ವಕೀಲೆ ನಯನಾ ತಾರಾ ಬಿ.ಜಿ. ಮತ್ತು ಇತರರನ್ನು ಪ್ರತಿನಿಧಿಸಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗಳ ಗುಂಪನ್ನು ನ್ಯಾಯಾಲಯ ವಿಲೇವಾರಿ ಮಾಡಿತು.

ಜನವರಿ 29, 2025 ರಂದು, ಕರ್ನಾಟಕ ಸರ್ಕಾರವು ಬೆಂಗಳೂರು ಅರಮನೆ (ಭೂಮಿ ಬಳಕೆ ಮತ್ತು ನಿಯಂತ್ರಣ) ಸುಗ್ರೀವಾಜ್ಞೆ 2025 ಅನ್ನು ಅಧಿಸೂಚನೆ ಮಾಡಿತ್ತು. ಡಿಸೆಂಬರ್ 10, 2024 ರಂದು ಸುಪ್ರೀಂಕೋರ್ಟ್ ಟಿಡಿಆರ್ ನೀಡುವ ಬಗ್ಗೆ ಆದೇಶ ಹೊರಡಿಸಿದ ನಂತರ, ಬೆಂಗಳೂರು ನಗರದ ಹೃದಯಭಾಗದಲ್ಲಿರುವ ವಿವಾದಿತ ಅರಮನೆ ಭೂಮಿಯ ಭಾಗಗಳನ್ನು ಸ್ವಾಧೀನಪಡಿಸಿಕೊಳ್ಳದಿರುವ ಹಕ್ಕನ್ನು ಕಾಯ್ದಿರಿಸಿತು.

ಬೆಂಗಳೂರು ಅರಮನೆ (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆ, 1996 ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ 1997 ರ ಸಿವಿಲ್ ಮೇಲ್ಮನವಿಯನ್ನು ಕೈಗೆತ್ತಿಕೊಳ್ಳುವಂತೆ ಸುಪ್ರೀಂಕೋರ್ಟ್ ಅನ್ನು ಒತ್ತಾಯಿಸಿ ಕರ್ನಾಟಕ ಸರ್ಕಾರವು ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದೆ. ಬೆಂಗಳೂರು ಅರಮನೆ ಮೈದಾನ ಪ್ರಕರಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪಾಕ್ ಗುಪ್ತಚರ ಅಧಿಕಾರಿಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆ: ಸಿಆರ್‌ಪಿಎಫ್ ಸಿಬ್ಬಂದಿ ಮೋತಿ ರಾಮ್ ಜಾಟ್ ಬಂಧನ

ಪಾಕ್ ಗುಪ್ತಚರ ಅಧಿಕಾರಿಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆ: ಸಿಆರ್‌ಪಿಎಫ್ ಸಿಬ್ಬಂದಿ ಮೋತಿ ರಾಮ್ ಜಾಟ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...