Homeಕರ್ನಾಟಕಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (ಐಐಎಂ-ಬಿ) ನಿರ್ದೇಶಕ ರಿಷಿಕೇಶ್ ಟಿ ಕೃಷ್ಣನ್, ಡೀನ್ ಡಾ.ದಿನೇಶ್ ಕುಮಾರ್ ಮತ್ತು ಇತರ ಆರು ಪ್ರಾಧ್ಯಾಪಕರ ವಿರುದ್ಧ ಜಾತಿ ಆಧಾರಿತ ದೌರ್ಜನ್ಯದ ಆರೋಪದ ಮೇಲೆ ಡಿಸೆಂಬರ್ 20ರಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದಲಿತ ವಿದ್ವಾಂಸರಾದ ಐಐಎಂ-ಬಿಯ ಅಸೋಸಿಯೇಟ್ ಪ್ರೊಫೆಸರ್ ಗೋಪಾಲ್ ದಾಸ್ ಅವರ ಮೇಲೆ ಜಾತಿ ಆಧಾರಿತ ದೌರ್ಜನ್ಯ ನಡೆದಿರುವುದನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ)  ದೃಢಪಡಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಐಐಎಂ-ಬಿಯ ನಿರ್ದೇಶಕ ರಿಷಿಕೇಶ್ ಟಿ ಕೃಷ್ಣನ್, ಹಿರಿಯ ಅಧ್ಯಾಪಕ ಹಾಗೂ ಡೀನ್ ಡಾ.ದಿನೇಶ್ ಕುಮಾರ್, ಪ್ರಾಧ್ಯಾಪಕರಾದ ಸೈನೇಶ್ ಜಿ, ಶ್ರೀನಿವಾಸ್ ಪ್ರಕಾ, ಚೇತನ್ ಸುಬ್ರಮಣಿಯನ್, ಆಶಿಶ್ ಮಿಶ್ರಾ, ಶ್ರೀಲತಾ ಜೋನಲಗೇಡು ಮತ್ತು ರಾಹುಲ್ ದೆ ವಿರುದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(ಆರ್) (ಎಸ್‌ಸಿ/ಎಸ್‌ಟಿ ವ್ಯಕ್ತಿಯನ್ನು ಅವಮಾನಿಸುವುದು ಅಥವಾ ಬೆದರಿಸುವುದು) ಮತ್ತು 3(1)(ಎಸ್‌) (ಎಸ್‌ಸಿ/ಎಸ್‌ಟಿ ವ್ಯಕ್ತಿಯನ್ನು ಜಾತಿ ಹೆಸರಿನಿಂದ ನಿಂದಿಸುವುದು) ಅಡಿಯಲ್ಲಿ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಜಾಗತಿಕವಾಗಿ ಗುರುತಿಸಲ್ಪಟ್ಟಿರುವ ದಲಿತ ವಿದ್ವಾಂಸರಾದ ಅಸೋಸಿಯೇಟ್ ಪ್ರೊಫೆಸರ್ ಗೋಪಾಲ್ ದಾಸ್ ಅವರು ಐಐಎಂ ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ದೌರ್ಜನ್ಯದ ಕುರಿತು
2024ರ ಜನವರಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದರು. ಅದರಲ್ಲಿ ಹಲವು ಆರೋಪಗಳನ್ನು ಮಾಡಿದ್ದರು.

ಸಾಂಸ್ಥಿಕ ಚಟುವಟಿಕೆಗಳಿಂದ ಹೊರಗಿಡುವುದು, ಸಂಪನ್ಮೂಲಗಳನ್ನು ಪಡೆಯಲು ತಡೆ ಒಡ್ಡುವುದು ಸೇರಿದಂತೆ ಐಐಎಂಬಿಯಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ದೌರ್ಜನ್ಯಗಳ ಕುರಿತು ಪ್ರೊಫೆಸರ್ ಗೋಪಾಲ್ ದಾಸ್ ಅವರು ತನ್ನ ಪತ್ರದಲ್ಲಿ ರಾಷ್ಟ್ರಪತಿಗೆ ವಿವರಿಸಿದ್ದರು. ಬಳಿಕ ರಾಷ್ಟ್ರಪತಿ ಕಚೇರಿಯ ನಿರ್ದೇಶನದ ಮೇರೆಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಮಾರ್ಚ್‌ನಲ್ಲಿ ಜಾತಿ ದೌರ್ಜನ್ಯದ ಕುರಿತು ತನಿಖೆ ಕೈಗೊಂಡಿತ್ತು.

ಮೇ ತಿಂಗಳಲ್ಲಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ ಮಣಿವಣ್ಣನ್ ಅವರಿಗೆ ದೂರು ಸಲ್ಲಿಸಿದ್ದ ಗೋಪಾಲ್ ದಾಸ್ ಅವರು, ಡಿಸಿಆರ್‌ಇ ತನಿಖೆ ಪ್ರಾರಂಭಿಸಿದ ನಂತರ ಕಿರುಕುಳ ಹೆಚ್ಚಾಗಿದೆ ಎಂದು ಆರೋಪಿಸಿದ್ದರು.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅರುಣ್ ಚಕ್ರವರ್ತಿ ನೇತೃತ್ವದ ಡಿಸಿಆರ್‌ಇ ತನಿಖೆಯು ನವೆಂಬರ್‌ನಲ್ಲಿ ಮುಕ್ತಾಯಗೊಂಡಿತ್ತು. ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಿದ್ದ ತನಿಖಾ ವರದಿಯಲ್ಲಿ ಗೋಪಾಲ್ ದಾಸ್ ಅವರ ಮೇಲಿನ ಜಾತಿ ಆಧಾರಿತ ದೌರ್ಜನ್ಯ ಮತ್ತು ಅವರನ್ನು ಕೆಲಸದ ಸ್ಥಳದಿಂದ ಹೊರಗಿಡಲು ಪ್ರಯತ್ನಿಸಿದರ ಕುರಿತು ಮಹತ್ವದ ಸಾಕ್ಷ್ಯವನ್ನು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಸಂಸ್ಥೆಯೊಳಗೆ ಹರಿದಾಡಿದ ಸಾಮೂಹಿಕ ಈ-ಮೇಲ್‌ನಲ್ಲಿ ನಿರ್ದೇಶಕ ರಿಷಿಕೇಶ್ ಕೃಷ್ಣನ್ ಅವರು ಗೋಪಾಲ್ ದಾಸ್ ಅವರ ಜಾತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದಾರೆ ಎಂದು ವರದಿ ಆರೋಪಿಸಿತ್ತು. ರಿಷಿಕೇಶ್ ಮತ್ತು ಡೀನ್ ದಿನೇಶ್ ಕುಮಾರ್ ಅವರು ವೃತ್ತಿಪರ ಚಟುವಟಿಕೆಗಳಲ್ಲಿ ಗೋಪಾಲ್ ದಾಸ್ ಅವರಿಗೆ ಸಮಾನ ಅವಕಾಶಗಳನ್ನು ನಿರಾಕರಿಸಿದ್ದಾರೆ ಎಂದು ವರದಿ ಹೇಳಿತ್ತು.

ಅಲ್ಲದೆ, ಎಸ್‌ಸಿ ಮತ್ತು ಎಸ್‌ಟಿ ಉದ್ಯೋಗಿಗಳ ಕುಂದುಕೊರತೆಗಳನ್ನು ಪರಿಹರಿಸಲು ಸಾಂಸ್ಥಿಕ ಕಾರ್ಯವಿಧಾನವನ್ನು ಸ್ಥಾಪಿಸುವ ಶಾಸನಬದ್ಧ ಜವಾಬ್ದಾರಿಗಳನ್ನು ಅನುಸರಿಸಲು ಐಐಎಂ-ಬಿ ವಿಫಲವಾಗಿದೆ ಎಂದು ವರದಿಯು ಎತ್ತಿ ತೋರಿಸಿತ್ತು.

ವರದಿ ಆಧರಿಸಿ, ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಡಿಸೆಂಬರ್ 9ರಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಐಐಎಂ-ಬಿ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿತ್ತು.

ಎಫ್‌ಐಆರ್ ಪ್ರಕ್ರಿಯೆಗೆ ಹೈಕೋರ್ಟ್ ತಡೆ

ಐಐಎಂ-ಬಿ ಆಡಳಿತ ಮಂಡಳಿಯ ಅಧ್ಯಕ್ಷರಾಗಿರುವ ಪ್ರಮುಖ ಹೃದ್ರೋಗ ತಜ್ಞ ಡಾ ದೇವಿ ಪ್ರಸಾದ್ ಶೆಟ್ಟಿ ವಿರುದ್ದವೂ ಎಫ್‌ಐಆರ್ ದಾಖಲಾಗಿತ್ತು. ಆದರೆ, ಅವರ ವಿರುದ್ದ ಎಫ್‌ಐಆರ್ ಪ್ರಕ್ರಿಯೆಗೆ ಹೈಕೋರ್ಟ್ ಶುಕ್ರವಾರ (ಡಿ.20) ತಡೆ ನೀಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ : IIMBಯಲ್ಲಿ ದಲಿತ ಪ್ರಾಧ್ಯಾಪಕನ ವಿರುದ್ಧ ಜಾತಿ ದೌರ್ಜನ್ಯ – ದೃಢಪಡಿಸಿದ ಡಿಸಿಆರ್‌ಇ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...