Homeಕರ್ನಾಟಕಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (ಐಐಎಂ-ಬಿ) ನಿರ್ದೇಶಕ ರಿಷಿಕೇಶ್ ಟಿ ಕೃಷ್ಣನ್, ಡೀನ್ ಡಾ.ದಿನೇಶ್ ಕುಮಾರ್ ಮತ್ತು ಇತರ ಆರು ಪ್ರಾಧ್ಯಾಪಕರ ವಿರುದ್ಧ ಜಾತಿ ಆಧಾರಿತ ದೌರ್ಜನ್ಯದ ಆರೋಪದ ಮೇಲೆ ಡಿಸೆಂಬರ್ 20ರಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದಲಿತ ವಿದ್ವಾಂಸರಾದ ಐಐಎಂ-ಬಿಯ ಅಸೋಸಿಯೇಟ್ ಪ್ರೊಫೆಸರ್ ಗೋಪಾಲ್ ದಾಸ್ ಅವರ ಮೇಲೆ ಜಾತಿ ಆಧಾರಿತ ದೌರ್ಜನ್ಯ ನಡೆದಿರುವುದನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ)  ದೃಢಪಡಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಐಐಎಂ-ಬಿಯ ನಿರ್ದೇಶಕ ರಿಷಿಕೇಶ್ ಟಿ ಕೃಷ್ಣನ್, ಹಿರಿಯ ಅಧ್ಯಾಪಕ ಹಾಗೂ ಡೀನ್ ಡಾ.ದಿನೇಶ್ ಕುಮಾರ್, ಪ್ರಾಧ್ಯಾಪಕರಾದ ಸೈನೇಶ್ ಜಿ, ಶ್ರೀನಿವಾಸ್ ಪ್ರಕಾ, ಚೇತನ್ ಸುಬ್ರಮಣಿಯನ್, ಆಶಿಶ್ ಮಿಶ್ರಾ, ಶ್ರೀಲತಾ ಜೋನಲಗೇಡು ಮತ್ತು ರಾಹುಲ್ ದೆ ವಿರುದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(ಆರ್) (ಎಸ್‌ಸಿ/ಎಸ್‌ಟಿ ವ್ಯಕ್ತಿಯನ್ನು ಅವಮಾನಿಸುವುದು ಅಥವಾ ಬೆದರಿಸುವುದು) ಮತ್ತು 3(1)(ಎಸ್‌) (ಎಸ್‌ಸಿ/ಎಸ್‌ಟಿ ವ್ಯಕ್ತಿಯನ್ನು ಜಾತಿ ಹೆಸರಿನಿಂದ ನಿಂದಿಸುವುದು) ಅಡಿಯಲ್ಲಿ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಜಾಗತಿಕವಾಗಿ ಗುರುತಿಸಲ್ಪಟ್ಟಿರುವ ದಲಿತ ವಿದ್ವಾಂಸರಾದ ಅಸೋಸಿಯೇಟ್ ಪ್ರೊಫೆಸರ್ ಗೋಪಾಲ್ ದಾಸ್ ಅವರು ಐಐಎಂ ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ದೌರ್ಜನ್ಯದ ಕುರಿತು
2024ರ ಜನವರಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದರು. ಅದರಲ್ಲಿ ಹಲವು ಆರೋಪಗಳನ್ನು ಮಾಡಿದ್ದರು.

ಸಾಂಸ್ಥಿಕ ಚಟುವಟಿಕೆಗಳಿಂದ ಹೊರಗಿಡುವುದು, ಸಂಪನ್ಮೂಲಗಳನ್ನು ಪಡೆಯಲು ತಡೆ ಒಡ್ಡುವುದು ಸೇರಿದಂತೆ ಐಐಎಂಬಿಯಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ದೌರ್ಜನ್ಯಗಳ ಕುರಿತು ಪ್ರೊಫೆಸರ್ ಗೋಪಾಲ್ ದಾಸ್ ಅವರು ತನ್ನ ಪತ್ರದಲ್ಲಿ ರಾಷ್ಟ್ರಪತಿಗೆ ವಿವರಿಸಿದ್ದರು. ಬಳಿಕ ರಾಷ್ಟ್ರಪತಿ ಕಚೇರಿಯ ನಿರ್ದೇಶನದ ಮೇರೆಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಮಾರ್ಚ್‌ನಲ್ಲಿ ಜಾತಿ ದೌರ್ಜನ್ಯದ ಕುರಿತು ತನಿಖೆ ಕೈಗೊಂಡಿತ್ತು.

ಮೇ ತಿಂಗಳಲ್ಲಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ ಮಣಿವಣ್ಣನ್ ಅವರಿಗೆ ದೂರು ಸಲ್ಲಿಸಿದ್ದ ಗೋಪಾಲ್ ದಾಸ್ ಅವರು, ಡಿಸಿಆರ್‌ಇ ತನಿಖೆ ಪ್ರಾರಂಭಿಸಿದ ನಂತರ ಕಿರುಕುಳ ಹೆಚ್ಚಾಗಿದೆ ಎಂದು ಆರೋಪಿಸಿದ್ದರು.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅರುಣ್ ಚಕ್ರವರ್ತಿ ನೇತೃತ್ವದ ಡಿಸಿಆರ್‌ಇ ತನಿಖೆಯು ನವೆಂಬರ್‌ನಲ್ಲಿ ಮುಕ್ತಾಯಗೊಂಡಿತ್ತು. ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಿದ್ದ ತನಿಖಾ ವರದಿಯಲ್ಲಿ ಗೋಪಾಲ್ ದಾಸ್ ಅವರ ಮೇಲಿನ ಜಾತಿ ಆಧಾರಿತ ದೌರ್ಜನ್ಯ ಮತ್ತು ಅವರನ್ನು ಕೆಲಸದ ಸ್ಥಳದಿಂದ ಹೊರಗಿಡಲು ಪ್ರಯತ್ನಿಸಿದರ ಕುರಿತು ಮಹತ್ವದ ಸಾಕ್ಷ್ಯವನ್ನು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಸಂಸ್ಥೆಯೊಳಗೆ ಹರಿದಾಡಿದ ಸಾಮೂಹಿಕ ಈ-ಮೇಲ್‌ನಲ್ಲಿ ನಿರ್ದೇಶಕ ರಿಷಿಕೇಶ್ ಕೃಷ್ಣನ್ ಅವರು ಗೋಪಾಲ್ ದಾಸ್ ಅವರ ಜಾತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದಾರೆ ಎಂದು ವರದಿ ಆರೋಪಿಸಿತ್ತು. ರಿಷಿಕೇಶ್ ಮತ್ತು ಡೀನ್ ದಿನೇಶ್ ಕುಮಾರ್ ಅವರು ವೃತ್ತಿಪರ ಚಟುವಟಿಕೆಗಳಲ್ಲಿ ಗೋಪಾಲ್ ದಾಸ್ ಅವರಿಗೆ ಸಮಾನ ಅವಕಾಶಗಳನ್ನು ನಿರಾಕರಿಸಿದ್ದಾರೆ ಎಂದು ವರದಿ ಹೇಳಿತ್ತು.

ಅಲ್ಲದೆ, ಎಸ್‌ಸಿ ಮತ್ತು ಎಸ್‌ಟಿ ಉದ್ಯೋಗಿಗಳ ಕುಂದುಕೊರತೆಗಳನ್ನು ಪರಿಹರಿಸಲು ಸಾಂಸ್ಥಿಕ ಕಾರ್ಯವಿಧಾನವನ್ನು ಸ್ಥಾಪಿಸುವ ಶಾಸನಬದ್ಧ ಜವಾಬ್ದಾರಿಗಳನ್ನು ಅನುಸರಿಸಲು ಐಐಎಂ-ಬಿ ವಿಫಲವಾಗಿದೆ ಎಂದು ವರದಿಯು ಎತ್ತಿ ತೋರಿಸಿತ್ತು.

ವರದಿ ಆಧರಿಸಿ, ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಡಿಸೆಂಬರ್ 9ರಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಐಐಎಂ-ಬಿ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿತ್ತು.

ಎಫ್‌ಐಆರ್ ಪ್ರಕ್ರಿಯೆಗೆ ಹೈಕೋರ್ಟ್ ತಡೆ

ಐಐಎಂ-ಬಿ ಆಡಳಿತ ಮಂಡಳಿಯ ಅಧ್ಯಕ್ಷರಾಗಿರುವ ಪ್ರಮುಖ ಹೃದ್ರೋಗ ತಜ್ಞ ಡಾ ದೇವಿ ಪ್ರಸಾದ್ ಶೆಟ್ಟಿ ವಿರುದ್ದವೂ ಎಫ್‌ಐಆರ್ ದಾಖಲಾಗಿತ್ತು. ಆದರೆ, ಅವರ ವಿರುದ್ದ ಎಫ್‌ಐಆರ್ ಪ್ರಕ್ರಿಯೆಗೆ ಹೈಕೋರ್ಟ್ ಶುಕ್ರವಾರ (ಡಿ.20) ತಡೆ ನೀಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ : IIMBಯಲ್ಲಿ ದಲಿತ ಪ್ರಾಧ್ಯಾಪಕನ ವಿರುದ್ಧ ಜಾತಿ ದೌರ್ಜನ್ಯ – ದೃಢಪಡಿಸಿದ ಡಿಸಿಆರ್‌ಇ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...