Homeಕರ್ನಾಟಕಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು ಐಐಎಂನಲ್ಲಿ ಜಾತಿ ದೌರ್ಜನ್ಯ : ನಿರ್ದೇಶಕ, 7 ಪ್ರಾಧ್ಯಾಪಕರ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (ಐಐಎಂ-ಬಿ) ನಿರ್ದೇಶಕ ರಿಷಿಕೇಶ್ ಟಿ ಕೃಷ್ಣನ್, ಡೀನ್ ಡಾ.ದಿನೇಶ್ ಕುಮಾರ್ ಮತ್ತು ಇತರ ಆರು ಪ್ರಾಧ್ಯಾಪಕರ ವಿರುದ್ಧ ಜಾತಿ ಆಧಾರಿತ ದೌರ್ಜನ್ಯದ ಆರೋಪದ ಮೇಲೆ ಡಿಸೆಂಬರ್ 20ರಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದಲಿತ ವಿದ್ವಾಂಸರಾದ ಐಐಎಂ-ಬಿಯ ಅಸೋಸಿಯೇಟ್ ಪ್ರೊಫೆಸರ್ ಗೋಪಾಲ್ ದಾಸ್ ಅವರ ಮೇಲೆ ಜಾತಿ ಆಧಾರಿತ ದೌರ್ಜನ್ಯ ನಡೆದಿರುವುದನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ)  ದೃಢಪಡಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಐಐಎಂ-ಬಿಯ ನಿರ್ದೇಶಕ ರಿಷಿಕೇಶ್ ಟಿ ಕೃಷ್ಣನ್, ಹಿರಿಯ ಅಧ್ಯಾಪಕ ಹಾಗೂ ಡೀನ್ ಡಾ.ದಿನೇಶ್ ಕುಮಾರ್, ಪ್ರಾಧ್ಯಾಪಕರಾದ ಸೈನೇಶ್ ಜಿ, ಶ್ರೀನಿವಾಸ್ ಪ್ರಕಾ, ಚೇತನ್ ಸುಬ್ರಮಣಿಯನ್, ಆಶಿಶ್ ಮಿಶ್ರಾ, ಶ್ರೀಲತಾ ಜೋನಲಗೇಡು ಮತ್ತು ರಾಹುಲ್ ದೆ ವಿರುದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(ಆರ್) (ಎಸ್‌ಸಿ/ಎಸ್‌ಟಿ ವ್ಯಕ್ತಿಯನ್ನು ಅವಮಾನಿಸುವುದು ಅಥವಾ ಬೆದರಿಸುವುದು) ಮತ್ತು 3(1)(ಎಸ್‌) (ಎಸ್‌ಸಿ/ಎಸ್‌ಟಿ ವ್ಯಕ್ತಿಯನ್ನು ಜಾತಿ ಹೆಸರಿನಿಂದ ನಿಂದಿಸುವುದು) ಅಡಿಯಲ್ಲಿ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಜಾಗತಿಕವಾಗಿ ಗುರುತಿಸಲ್ಪಟ್ಟಿರುವ ದಲಿತ ವಿದ್ವಾಂಸರಾದ ಅಸೋಸಿಯೇಟ್ ಪ್ರೊಫೆಸರ್ ಗೋಪಾಲ್ ದಾಸ್ ಅವರು ಐಐಎಂ ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ದೌರ್ಜನ್ಯದ ಕುರಿತು
2024ರ ಜನವರಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದರು. ಅದರಲ್ಲಿ ಹಲವು ಆರೋಪಗಳನ್ನು ಮಾಡಿದ್ದರು.

ಸಾಂಸ್ಥಿಕ ಚಟುವಟಿಕೆಗಳಿಂದ ಹೊರಗಿಡುವುದು, ಸಂಪನ್ಮೂಲಗಳನ್ನು ಪಡೆಯಲು ತಡೆ ಒಡ್ಡುವುದು ಸೇರಿದಂತೆ ಐಐಎಂಬಿಯಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ದೌರ್ಜನ್ಯಗಳ ಕುರಿತು ಪ್ರೊಫೆಸರ್ ಗೋಪಾಲ್ ದಾಸ್ ಅವರು ತನ್ನ ಪತ್ರದಲ್ಲಿ ರಾಷ್ಟ್ರಪತಿಗೆ ವಿವರಿಸಿದ್ದರು. ಬಳಿಕ ರಾಷ್ಟ್ರಪತಿ ಕಚೇರಿಯ ನಿರ್ದೇಶನದ ಮೇರೆಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಮಾರ್ಚ್‌ನಲ್ಲಿ ಜಾತಿ ದೌರ್ಜನ್ಯದ ಕುರಿತು ತನಿಖೆ ಕೈಗೊಂಡಿತ್ತು.

ಮೇ ತಿಂಗಳಲ್ಲಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ ಮಣಿವಣ್ಣನ್ ಅವರಿಗೆ ದೂರು ಸಲ್ಲಿಸಿದ್ದ ಗೋಪಾಲ್ ದಾಸ್ ಅವರು, ಡಿಸಿಆರ್‌ಇ ತನಿಖೆ ಪ್ರಾರಂಭಿಸಿದ ನಂತರ ಕಿರುಕುಳ ಹೆಚ್ಚಾಗಿದೆ ಎಂದು ಆರೋಪಿಸಿದ್ದರು.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅರುಣ್ ಚಕ್ರವರ್ತಿ ನೇತೃತ್ವದ ಡಿಸಿಆರ್‌ಇ ತನಿಖೆಯು ನವೆಂಬರ್‌ನಲ್ಲಿ ಮುಕ್ತಾಯಗೊಂಡಿತ್ತು. ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಿದ್ದ ತನಿಖಾ ವರದಿಯಲ್ಲಿ ಗೋಪಾಲ್ ದಾಸ್ ಅವರ ಮೇಲಿನ ಜಾತಿ ಆಧಾರಿತ ದೌರ್ಜನ್ಯ ಮತ್ತು ಅವರನ್ನು ಕೆಲಸದ ಸ್ಥಳದಿಂದ ಹೊರಗಿಡಲು ಪ್ರಯತ್ನಿಸಿದರ ಕುರಿತು ಮಹತ್ವದ ಸಾಕ್ಷ್ಯವನ್ನು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಸಂಸ್ಥೆಯೊಳಗೆ ಹರಿದಾಡಿದ ಸಾಮೂಹಿಕ ಈ-ಮೇಲ್‌ನಲ್ಲಿ ನಿರ್ದೇಶಕ ರಿಷಿಕೇಶ್ ಕೃಷ್ಣನ್ ಅವರು ಗೋಪಾಲ್ ದಾಸ್ ಅವರ ಜಾತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದಾರೆ ಎಂದು ವರದಿ ಆರೋಪಿಸಿತ್ತು. ರಿಷಿಕೇಶ್ ಮತ್ತು ಡೀನ್ ದಿನೇಶ್ ಕುಮಾರ್ ಅವರು ವೃತ್ತಿಪರ ಚಟುವಟಿಕೆಗಳಲ್ಲಿ ಗೋಪಾಲ್ ದಾಸ್ ಅವರಿಗೆ ಸಮಾನ ಅವಕಾಶಗಳನ್ನು ನಿರಾಕರಿಸಿದ್ದಾರೆ ಎಂದು ವರದಿ ಹೇಳಿತ್ತು.

ಅಲ್ಲದೆ, ಎಸ್‌ಸಿ ಮತ್ತು ಎಸ್‌ಟಿ ಉದ್ಯೋಗಿಗಳ ಕುಂದುಕೊರತೆಗಳನ್ನು ಪರಿಹರಿಸಲು ಸಾಂಸ್ಥಿಕ ಕಾರ್ಯವಿಧಾನವನ್ನು ಸ್ಥಾಪಿಸುವ ಶಾಸನಬದ್ಧ ಜವಾಬ್ದಾರಿಗಳನ್ನು ಅನುಸರಿಸಲು ಐಐಎಂ-ಬಿ ವಿಫಲವಾಗಿದೆ ಎಂದು ವರದಿಯು ಎತ್ತಿ ತೋರಿಸಿತ್ತು.

ವರದಿ ಆಧರಿಸಿ, ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಡಿಸೆಂಬರ್ 9ರಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಐಐಎಂ-ಬಿ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿತ್ತು.

ಎಫ್‌ಐಆರ್ ಪ್ರಕ್ರಿಯೆಗೆ ಹೈಕೋರ್ಟ್ ತಡೆ

ಐಐಎಂ-ಬಿ ಆಡಳಿತ ಮಂಡಳಿಯ ಅಧ್ಯಕ್ಷರಾಗಿರುವ ಪ್ರಮುಖ ಹೃದ್ರೋಗ ತಜ್ಞ ಡಾ ದೇವಿ ಪ್ರಸಾದ್ ಶೆಟ್ಟಿ ವಿರುದ್ದವೂ ಎಫ್‌ಐಆರ್ ದಾಖಲಾಗಿತ್ತು. ಆದರೆ, ಅವರ ವಿರುದ್ದ ಎಫ್‌ಐಆರ್ ಪ್ರಕ್ರಿಯೆಗೆ ಹೈಕೋರ್ಟ್ ಶುಕ್ರವಾರ (ಡಿ.20) ತಡೆ ನೀಡಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ : IIMBಯಲ್ಲಿ ದಲಿತ ಪ್ರಾಧ್ಯಾಪಕನ ವಿರುದ್ಧ ಜಾತಿ ದೌರ್ಜನ್ಯ – ದೃಢಪಡಿಸಿದ ಡಿಸಿಆರ್‌ಇ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...