Homeಕರ್ನಾಟಕಎಲ್ಲೆಂದರಲ್ಲಿ ವಾಹನ ಸವಾರರನ್ನು ಅಡ್ಡ ಹಾಕಿ ದಾಖಲೆ ಪರಿಶೀಲಿಸುವಂತಿಲ್ಲ: ಡಿಜಿಪಿ

ಎಲ್ಲೆಂದರಲ್ಲಿ ವಾಹನ ಸವಾರರನ್ನು ಅಡ್ಡ ಹಾಕಿ ದಾಖಲೆ ಪರಿಶೀಲಿಸುವಂತಿಲ್ಲ: ಡಿಜಿಪಿ

- Advertisement -
- Advertisement -

ಬೆಂಗಳೂರಿನಲ್ಲಿ ಯಾವುದೇ ಸಂಚಾರಿ ನಿಯಮ ಉಲ್ಲಂಘನೆಯಾಗದಿದ್ದರೂ ವಾಹನ ಸವಾರರನ್ನು ತಡೆದು ನಿಲ್ಲಿಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಟ್ರಾಫಿಕ್ ಪೊಲೀಸರ ವಿರುದ್ಧ ಪದೇ ಪದೇ ಆರೋಪ ಕೇಳಿ ಬರುತ್ತಿತ್ತು. ಈ ಹಿನ್ನೆಲೆ ಡಿಜಿ, ಐಜಿಪಿ ಪ್ರವೀಣ್ ಸೂದ್, ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.

ಅನವಶ್ಯಕವಾಗಿ ಯಾವುದೇ ಸಂಚಾರಿ ನಿಯಮ ಉಲ್ಲಂಘಟನೆಯಾಗದಿದ್ದರೂ ವಾಹನಗಳನ್ನು ತಡೆದು ದಾಖಲೆ ಪರಿಶೀಲನೆ ನಡೆಸಲಾಗುತ್ತಿತ್ತು. ಇದರಿಂದ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಕೂಡ ಅಧಿಕವಾಗಿತ್ತು. ಇದರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಮಂದಿ ಆಕ್ರೋಶ ಹೊರಹಾಕಿದ್ದರು.

ಈ ಹಿನ್ನೆಲೆ ಸಭೆ ನಡೆಸಿದ ಡಿಜಿಪಿ ಪ್ರವೀಣ್‌ ಸೂದ್ ಬಳಿಕ ಆದೇಶ ಹೊರಡಿಸಿದ್ದಾರೆ. “ನಾನು ಮತ್ತೊಮ್ಮೆ ಪುನರುಚ್ಚರಿಸುತ್ತೇನೆ. ಕಣ್ಣಿಗೆ ಕಾಣುವ ಸಂಚಾರಿ ನಿಯಮ ಉಲ್ಲಂಘನೆ ಹೊರತು ಪಡಿಸಿ ಯಾವುದೇ ವಾಹನವನ್ನು ದಾಖಲೆಗಳನ್ನು ಪರಿಶೀಲಿಸಲು ಮಾತ್ರವೇ ನಿಲ್ಲಿಸುವಂತಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

ಕುಡಿದು ವಾಹನ ಚಲಾಯಿಸುವವರನ್ನು ಹೊರತು ಪಡಿಸಿ, ಈ ಆದೇಶವನ್ನು ತಕ್ಷಣದಿಂದಲೇ ಅನುಷ್ಠಾನಕ್ಕೆ ತರುವಂತೆ ಬೆಂಗಳೂರು ನಗರದ ಪೊಲೀಸ್ ಕಮಿಷನರ್ ಮತ್ತು ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್‌ ಅವರಿಗೆ ಸೂಚನೆ ನೀಡಲಾಗಿದೆ.

ಟ್ರಾಫಿಕ್ ಪೊಲೀಸರು ಕೇವಲ ದಾಖಲೆಗಳನ್ನು ಪರಿಶೀಲಿಸಲು ವಾಹನಗಳನ್ನು ನಿಲ್ಲಿಸಬಾರದು ಎಂದು ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರ ಆದೇಶ ಇದು ಮೊದಲೇನಲ್ಲ.

2021 ರ ಡಿಸೆಂಬರ್‌ನಲ್ಲಿಯೂ ಸಹ, ದಾಖಲೆಗಳನ್ನು ಪರಿಶೀಲಿಸಲು ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಬಾರದು. ವಾಹನ ಸವಾರರಿಗೆ ಕಿರುಕುಳ ನೀಡುವುದು, ಅವರಿಗೆ ವಿಳಂಬವಾದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದರು.

ಯಾವುದೇ ಕಾರಣಕ್ಕೂ ವಾಹನಗಳನ್ನು ಸುಖಾಸುಮ್ಮನೆ ನಿಲ್ಲಿಸುವುದು ಸರಿಯಲ್ಲ. ನಗರದಲ್ಲಿ ಇಂತಹ ಘಟನೆಗಳು ನಡೆಯಬಾರದು ಎಂದು ಅಂದಿನ ನಗರ ಪೊಲೀಸ್ ಮುಖ್ಯಸ್ಥ ಕಮಲ್ ಪಂತ್ ಹೇಳಿದ್ದರು. ಆದರೂ ರಸ್ತೆಯಲ್ಲಿ ವಾಹನಗಳಿಗೆ ಪೊಲೀಸರು ಅಡ್ಡ ಹಾಕುವುದು ನಡೆಯುತ್ತಲೇ ಇತ್ತು.


ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...