Homeಕರ್ನಾಟಕಬೆಂಗಳೂರು: ಕುಸಿಯುವ ಭೀತಿಯಲ್ಲಿ ಪೊಲೀಸ್ ಕ್ವಾರ್ಟರ್ಸ್, 32 ಕುಟುಂಬಗಳ ಸ್ಥಳಾಂತರ

ಬೆಂಗಳೂರು: ಕುಸಿಯುವ ಭೀತಿಯಲ್ಲಿ ಪೊಲೀಸ್ ಕ್ವಾರ್ಟರ್ಸ್, 32 ಕುಟುಂಬಗಳ ಸ್ಥಳಾಂತರ

- Advertisement -
- Advertisement -

ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಮುಂದುವರೆದಿದ್ದು, ಮೂರು ವರ್ಷದ ಹಿಂದೆ ಕಟ್ಟಲಾಗಿದ್ದ ಪೊಲೀಸ್ ಕ್ವಾರ್ಟರ್ಸ್ ಬಿರುಕು ಬಿಟ್ಟು ಕುಸಿಯುವ ಹಂತದಲ್ಲಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಕಟ್ಟಡದಿಂದ 32 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

ಬಿನ್ನಿ ಮಿಲ್ಸ್ ಬಳಿಯ ಪೊಲೀಸ್ ವಸತಿ ಸಮುಚ್ಚಯದಲ್ಲಿರುವ ಏಳು ಅಂತಸ್ತಿನ ಕಟ್ಟಡದಲ್ಲಿ ವಾಸಿಸುತ್ತಿರುವ ಕುಟುಂಬಗಳನ್ನು ಈಗ ನಗರದ ನಾಗರಭಾವಿಯಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಪೊಲೀಸ್ ಕ್ವಾರ್ಟರ್ಸ್‌ಗೆ ಸ್ಥಳಾಂತರಿಸಲಾಗಿದೆ.

ಬಿನ್ನಿಪೇಟೆ ಬಳಿ ಇರುವ ಪೊಲೀಸ್ ವಸತಿ ಸಮುಚ್ಛಯದ ಬಿ ಬ್ಲಾಕ್ ಕಟ್ಟಡ ತನ್ನ ಬಲಭಾಗಕ್ಕೆ ವಾಲಿಕೊಂಡಿದೆ. ಕಳೆದ ಮೂರು ವಾರಗಳಲ್ಲಿ, ಬೆಂಗಳೂರಿನಲ್ಲಿ ಮೂರು ಕಟ್ಟಡಗಳು ಕುಸಿದಿವೆ. ಸಾಲು ಸಾಲು ಕಟ್ಟಡಗಳು ಕುಸಿತ ಕಾಣುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

ಇದನ್ನೂ ಓದಿ: ಬೆಂಗಳೂರು: ಪೌರಕಾರ್ಮಿಕರ ಘನತೆಯ ಬದುಕು, ಗೌರವ, ವಸತಿ, ಶಿಕ್ಷಣಕ್ಕಾಗಿ 15 ದಿನಗಳ ಜಾಥಾ

ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯು ಕಟ್ಟಡಗಳ ಕುಸಿತಕ್ಕೆ ಒಂದು ಕಾರಣ ಎನ್ನಲಾಗಿದೆ. ಈ ತಿಂಗಳ ಮೊದಲ ಹದಿನೈದು ದಿನಗಳಲ್ಲಿ ಬೆಂಗಳೂರಿನಲ್ಲಿ 155 ಮಿ.ಮೀ.ಗಿಂತ ಹೆಚ್ಚು ಮಳೆ ದಾಖಲಾಗಿದೆ.

ಬೆಂಗಳೂರಿನಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಗುರುತಿಸುವ ಸಮೀಕ್ಷೆಯು ಎರಡು ವರ್ಷಗಳಿಂದ ನಡೆಯುತ್ತಿದೆ.  ಸೆಪ್ಟೆಂಬರ್ 27 ರಂದು ವಿಲ್ಸನ್ ಗಾರ್ಡನ್‌ನಲ್ಲಿ ಮೊದಲ ಕಟ್ಟಡ ಕುಸಿದ ಬಳಿಕ ಸರ್ವೇಯನ್ನು ತೀವ್ರಗೊಳಿಸಲಾಗಿದೆ.

ವಿಲ್ಸನ್ ಗಾರ್ಡನ್ ಕಟ್ಟಡ ಕುಸಿದ ಮರುದಿನ, ಡೈರಿ ವೃತ್ತದಲ್ಲಿ ಮತ್ತೊಂದು ಕಟ್ಟಡ, ಅದರ ನಂತರ ಕಸ್ತೂರಿ ನಗರದಲ್ಲಿ ಕಟ್ಟಡ ಕುಸಿತವಾಗಿತ್ತು. ಬಳಿಕ ಕಮಲಾ ನಗರದ ಕಟ್ಟಡವೊಂದು ವಾಲಿದ್ದರಿಂದ ಅದನ್ನು ನೆಲಸಮ ಮಾಡಲಾಗಿದೆ. ನಗರದಲ್ಲಿ ಸಾಲು ಸಾಲಾಗಿ ಕಟ್ಟಡಗಳು ಕುಸಿಯುತ್ತಿರುವ ಮಧ್ಯೆಯೇ ಹೊಸದಾಗಿ 404 ಶಿಥಿಲ ಕಟ್ಟಡಗಳನ್ನು ಪಾಲಿಕೆ ಗುರುತಿಸಿದೆ.


ಇದನ್ನೂ ಓದಿ: ಬೆಂಗಳೂರು: ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...