Homeಕರ್ನಾಟಕಬೆಂಗಳೂರು ಪೊಲೀಸರ ಚಿತ್ರಹಿಂಸೆಯಿಂದ ಕೈಕಳೆದುಕೊಂಡ ಯುವಕ: ಪಿಎಫ್‌ಐ ಆರೋಪ

ಬೆಂಗಳೂರು ಪೊಲೀಸರ ಚಿತ್ರಹಿಂಸೆಯಿಂದ ಕೈಕಳೆದುಕೊಂಡ ಯುವಕ: ಪಿಎಫ್‌ಐ ಆರೋಪ

ತನಗಾದ ಅನ್ಯಾಯಕ್ಕೆ ನ್ಯಾಯ ಸಿಗಬೇಕೆಂದು ಒತ್ತಾಯಿಸಿ ಸಂತ್ರಸ್ತ ಸಲ್ಮಾನ್ ಖಾನ್ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

- Advertisement -
- Advertisement -

ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಯುವಕನೊಬ್ಬನನ್ನು ಬಂಧನದಲ್ಲಿಟ್ಟು ಸತತ ಚಿತ್ರಹಿಂಸೆ ನೀಡಿ ಆತ ಕೈಕಳೆದುಕೊಳ್ಳುವಂತೆ ಮಾಡಿದ್ದಾರೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬೆಂಗಳೂರು ಜಿಲ್ಲಾಧ್ಯಕ್ಷ ಸೈಯ್ಯದ್ ಜಾವೇದ್ ಆರೋಪಿಸಿದ್ದಾರೆ.

ಸಲ್ಮಾನ್ ಖಾನ್ ಎಂಬ ಯುವಕನನ್ನು ಯಾವುದೇ ದೂರು ದಾಖಲಿಸದೇ, ನಾಲ್ಕೈದು ದಿನ ಅಕ್ರಮ ಬಂಧನದಲ್ಲಿಟ್ಟು, ಬರ್ಬರವಾಗಿ ಥಳಿಸಿ ಚಿತ್ರಹಿಂಸೆ ನೀಡಿದ ಸರ್ಕಲ್ ಇನ್ಸ್ ಪೆಕ್ಟರ್ ಸೋಮಶೇಖರ್, ಎಸ್ಸೈ ಮಂಜುನಾಥ್ ರನ್ನು ಕೂಡಲೇ ಅಮಾನತುಗೊಳಿಸಬೇಕು. ಅವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿ ಬಂಧಿಸಬೇಕು. ಕುಟುಂಬದ ಆಧಾರಸ್ಥಂಭವಾಗಿದ್ದ ಸಲ್ಮಾನ್ ಕೈಕಳೆದುಕೊಂಡಿದ್ದು, ಸರಕಾರವು ಕುಟುಂಬಕ್ಕೆ 25 ಲಕ್ಷ ಪರಿಹಾರ ಧನ ಘೋಷಿಸಬೇಕು ಮತ್ತು ಆತನ ಚಿಕಿತ್ಸಾ ವೆಚ್ಚವನ್ನು ಸರಕಾರದ ವತಿಯಿಂದಲೇ ಭರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಕಳ್ಳತನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೋಳಿ ಅಂಗಡಿ ನಡೆಸುತ್ತಿರುವ ಸಲ್ಮಾನ್ ಖಾನ್ ಎಂಬ ಯುವಕನನ್ನು ವರ್ತೂರು ಪೊಲೀಸರು ಅಕ್ಟೋಬರ್ 27ರಂದು ಬಂಧಿಸಿದ್ದರು. ಆತನ ಬಗ್ಗೆ ಯಾವುದೇ ಸುಳಿವು ಸಿಗದೇ ಇದ್ದಾಗ ಮನೆಮಂದಿ ನಾಪತ್ತೆ ದೂರು ದಾಖಲಿಸಲು ನಿರಂತರ ಮೂರು ದಿನಗಳ ವರೆಗೆ ಪೊಲೀಸ್ ಠಾಣೆಗೆ ಅಲೆದಾಡಿದ್ದರು. ತಮಗೆ ಆತನ ಬಗ್ಗೆ ಮಾಹಿತಿ ಇಲ್ಲ ಎಂದಿದ್ದ ಪೊಲೀಸರು ದೂರು ದಾಖಲಿಸಿಕೊಳ್ಳಲೂ ನಿರಾಕರಿಸಿದ್ದರು. ನಾಲ್ಕನೇ ದಿನ ತಾಯಿ ಠಾಣೆಗೆ ತೆರಳಿದ್ದ ಸಂದರ್ಭದಲ್ಲಿ ಸಲ್ಮಾನ್ ನನ್ನು ಠಾಣೆಯಲ್ಲಿ ಕೂಡಿ ಹಾಕಿರುವ ವಿಚಾರ ಆಕೆಯ ಗಮನಕ್ಕೆ ಬಂದಿದೆ. ಆ ವೇಳೆ ಆತನನ್ನು ಬಿಡುಗಡೆ ಮಾಡಬೇಕಾದರೆ 50,000 ರೂಪಾಯಿ ನೀಡಬೇಕೆಂದು ಪೊಲೀಸರು ಒತ್ತಡ ಹೇರಿದ್ದರೆಂದು ಸ್ವತಃ ಕುಟುಂಬಸ್ಥರು ಹೇಳಿದ್ದಾರೆ. ಎರಡು-ಮೂರು ದಿನಗಳ ಬಳಿಕ ತಾಯಿ 10,000 ರೂಪಾಯಿ ಹೊಂದಿಸಿ ಆತನನ್ನು ಬಿಡಿಸಿಕೊಂಡು ಬಂದಿದ್ದರು. ಮನೆಗೆ ಬಂದ ಬಳಿಕ, ಪೊಲೀಸರು ಠಾಣೆಯಲ್ಲಿ ಅಮಾನವೀಯವಾಗಿ ಚಿತ್ರಹಿಂಸೆ ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ಆಸ್ಪತ್ರೆಗೆ ದಾಖಲಿಸಿದಾಗ ಪೊಲೀಸರ ಗಂಭೀರ ಹೊಡೆತದ ಪರಿಣಾಮ ಆತನ ಕೈಯಲ್ಲಿ ಸಂಪೂರ್ಣವಾಗಿ ಕೀವು ತುಂಬಿದ್ದು, ಕೂಡಲೇ ಕೈ ಕತ್ತರಿಸಬೇಕೆಂದು ವೈದ್ಯರು ಸೂಚಿಸಿದ್ದಾರೆ. ಪೊಲೀಸರ ಇಂತಹ ನಿಷ್ಕರುಣೆಯ ಕ್ರಮ ನಾಗರಿಕ ಸಮಾಜವನ್ನು ಆತಂಕಕ್ಕೆ ತಳ್ಳಿದೆ ಎಂದು ಸೈಯ್ಯದ್ ಜಾವೇದ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತನಗಾದ ಅನ್ಯಾಯಕ್ಕೆ ನ್ಯಾಯ ಸಿಗಬೇಕೆಂದು ಒತ್ತಾಯಿಸಿ ಸಂತ್ರಸ್ತ ಸಲ್ಮಾನ್ ಖಾನ್ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.


ಇದನ್ನೂ ಓದಿ: ಕನಸಿನ ಭಾರತಕ್ಕೆ ಸಂವಿಧಾನವೇ ರೋಡ್‌ ಮ್ಯಾಪ್‌: ಗಾಯಕಿ ಎಂ.ಡಿ.ಪಲ್ಲವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...