Homeಕರ್ನಾಟಕಬೆಂಗಳೂರು: ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ಮೋದಿ; ನಗರ ತುಂಬಾ ಟ್ರಾಫಿಕ್ ಜಾಂ

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ಮೋದಿ; ನಗರ ತುಂಬಾ ಟ್ರಾಫಿಕ್ ಜಾಂ

- Advertisement -
- Advertisement -

ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟನೆ ಮತ್ತು ವಿವಿಧ ಕಾರ್ಯಕ್ರಮಗಳಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಮುಂಜಾನೆ ಬೆಂಗಳೂರಿಗೆ ಬಂದಿಳಿದ್ದು, ಮುಂಜಾನೆಯಿಂದಲೆ ನಗರ ಟ್ರಾಫಿಕ್ ಜಾಂನಿಂದಾಗಿ ತತ್ತರಿಸಿ ಹೋಗಿದೆ. ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ದಕ್ಷಿಣ ಭಾರತದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಭೇಟಿ ಅವರು ನೀಡಲಿದ್ದಾರೆ.

ಇಂದು ಪ್ರಧಾನಮಂತ್ರಿ ವಿಧಾನಸೌಧದಲ್ಲಿ ಕನಕದಾಸರು ಮತ್ತು ವಾಲ್ಮೀಕಿ ಪ್ರತಿಮೆಗಳಿಗೆ ಪುಷ್ಪನಮನ ಸಲ್ಲಿಸಿ, ನಂತರ ಬೆಂಗಳೂರಿನ ಕೆಎಸ್‌ಆರ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅದರ ನಂತರ ಅವರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನ್ನು ಪ್ರಧಾನಿ ಉದ್ಘಾಟಿಸಿ, ಮಧ್ಯಾಹ್ನ 12 ಗಂಟೆಗೆ ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಮಧ್ಯಾಹ್ನ 12:30 ಕ್ಕೆ ಬೆಂಗಳೂರಿನಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಭಾಷಣ ಮಾಡಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಧಾನಿ ಮೋದಿ ಬೆಂಗಳೂರು ಭೇಟಿ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ವಿಮಾನ ನಿಲ್ದಾಣದಿಂದ ಮತ್ತು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಜನರ ಸಂಚಾರ ಮಾರ್ಗವನ್ನು ಬದಲಾಯಿಸಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕ ಕಾರ್ಯಕ್ರಮ ಇರುವುದರಿಂದ ನಗರದಿಂದ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಟ್ರಾಫಿಕ್‌‌ ದಟ್ಟಣೆ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ ಎಂದು ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.

ವಿಮಾನ ನಿಲ್ದಾಣಕ್ಕೆ ತೆರಳುವ ಜನರು ಮೈಲನಹಳ್ಳಿ-ಬೇಗೂರು ರಸ್ತೆಯಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ತೆರಳುವಂತೆ ತಿಳಿಸಲಾಗಿದೆ. ವಿಮಾನ ನಿಲ್ದಾಣ ಮತ್ತು ನಗರದ ನಡುವೆ ಪ್ರಯಾಣಿಸುವವರಿಗೂ ಬೆಳಿಗ್ಗೆ 9 ರಿಂದ ಸಂಜೆ 5 ರ ನಡುವೆ ಇದೇ ರಸ್ತೆಯನ್ನು ಬಳಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು: ಬೆಳಿಗ್ಗೆ ಹೊರಡಿಸಿದ್ದ ಸುತ್ತೋಲೆ ಸಂಜೆ ವಾಪಸ್!

ನಗರಕ್ಕೂ ಪ್ರಧಾನಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ಹಲವಾರು ಸಂಚಾರ ನಿರ್ಬಂಧಗಳು ಮತ್ತು ತಿರುವುಗಳನ್ನು ಸಹ ಜಾರಿಗೆ ತಂದಿದ್ದಾರೆ. ಸಿಟಿಒ ಜಂಕ್ಷನ್, ಪೊಲೀಸ್ ತಿಮ್ಮಯ್ಯ ವೃತ್ತ, ರಾಜಭವನ ರಸ್ತೆ, ಬಸವೇಶ್ವರ ವೃತ್ತ, ಅರಮನೆ ರಸ್ತೆ, ರೇಸ್ ಕೋರ್ಸ್ ರಸ್ತೆ, ಸ್ಯಾಂಕಿ ರಸ್ತೆ, ಕ್ವೀನ್ಸ್ ರಸ್ತೆ, ಬಳ್ಳಾರಿ ರಸ್ತೆ, ಏರ್‌ಪೋರ್ಟ್ ಎಲಿವೇಟೆಡ್ ಕಾರಿಡಾರ್, ಶೇಷಾದ್ರಿ ರಸ್ತೆ(ಮಹಾರಾಣಿ ಸೇತುವೆಯಿಂದ ಕೆಆರ್‌ಎಸ್ ರೈಲು ನಿಲ್ದಾಣದ ಪ್ರವೇಶದವರೆಗೆ), ಕೆ.ಜಿ.ರಸ್ತೆ, ವಾಟಾಳ್ ನಾಗರಾಜ್ ರಸ್ತೆ ಮತ್ತು ಕೆಂಪೇಗೌಡ ಅಂತರರಾಷ್ಟ್ರೀಯ ರಸ್ತೆಯ ಸುತ್ತಮುತ್ತಲಿನ ಎಲ್ಲಾ ರಸ್ತೆಗಳಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಸಂಚಾರ ನಿರ್ಬಂಧವನ್ನು ನಿರೀಕ್ಷಿಸಲಾಗಿದೆ.

ಪ್ರಧಾನಿ ಮೋದಿ ಆಗಮನದಿಂದಾಗಿ ನಗರದಲ್ಲಿ ಮುಂಜಾನೆಯಿಂದಲೇ ಟ್ರಾಫಿಕ್ ಜಾಂ ಕಿರಿಕಿರಿ ಹೆಚ್ಚಾಗಿದೆ. ಪ್ರಧಾನಿಯ ಸಾರ್ವಜನಿಕ ಭಾಷಣಕ್ಕೆ ಜನಸೇರಿಸಲು ಬಿಜೆಪಿ ಹೆಚ್ಚಿನ ಬಿಎಂಟಿಸಿಯ ಬಸ್ಸುಗಳನ್ನು ಬುಕ್‌ ಮಾಡಿದ್ದು, ಹೀಗಾಗಿ ತಮ್ಮ ದಿನನಿತ್ಯದ ಕೆಲಸಕ್ಕೆ ತೆರಳುವ ಸಾಮಾನ್ಯ ಜನರು ಬಸ್‌ಗಳು ಇಲ್ಲದೆ ಬಸ್‌ ನಿಲ್ದಾಣದಲ್ಲಿ ಕಾಯುತ್ತಿದ್ದಾರೆ. ಈ ನಡುವೆ ಬರುವ ಬಸ್‌ಗಳು ಕಿಕ್ಕಿರಿದು ಪ್ರಯಾಣಿಸುತ್ತಿವೆ.

ಕೆಂಪೇಗೌಡರ ಬೃಹತ್ ಪ್ರತಿಮೆ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ಸೇರಿದೆ ಎಂದು ವರದಿಯಾಗಿದೆ. ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಪ್ರಕಾರ, ಕೆಂಪೇಗೌಡರ ಮೊದಲ ಮತ್ತು ಅತೀ ಎತ್ತರದ ಪ್ರತಿಮೆಯಾಗಿದೆ. ವಿಶ್ವ ದಾಖಲೆ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ. 108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ 6 ಸಾವಿರ ಕಾಲೇಜು ವಿದ್ಯಾರ್ಥಿಗಳನ್ನು ಕರೆತನ್ನಿ: DDPU ಸುತ್ತೋಲೆಗೆ ಕಾಂಗ್ರೆಸ್ ಆಕ್ರೋಶ

ಬೃಹತ್ ಪ್ರತಿಮೆಯನ್ನು ಕಂಚಿನಿಂದ ನಿರ್ಮಿಸಲಾಗಿದ್ದು, ವಿಮಾನ ನಿಲ್ದಾಣದ 23 ಎಕರೆ ಆವರಣದಲ್ಲಿ ಕೆಂಪೇಗೌಡರಿಗೆ ಮೀಸಲಾದ ಪಾರಂಪರಿಕ ಉದ್ಯಾನವನವಾಗಿ ಅಭಿವೃದ್ಧಿಪಡಿಸಲಾಗಿದೆ. ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಬೃಹತ್ ಪ್ರತಿಮೆ ನಿರ್ಮಾಣವಾಗಿದೆ. 98 ಟನ್ ಕಂಚು ಮತ್ತು 120 ಟನ್ ಉಕ್ಕನ್ನು ಈ ಪ್ರತಿಮೆಗೆ ಬಳಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...