Homeಕರ್ನಾಟಕಬೆಂಗಳೂರು: ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ಮೋದಿ; ನಗರ ತುಂಬಾ ಟ್ರಾಫಿಕ್ ಜಾಂ

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ಮೋದಿ; ನಗರ ತುಂಬಾ ಟ್ರಾಫಿಕ್ ಜಾಂ

- Advertisement -
- Advertisement -

ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟನೆ ಮತ್ತು ವಿವಿಧ ಕಾರ್ಯಕ್ರಮಗಳಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಮುಂಜಾನೆ ಬೆಂಗಳೂರಿಗೆ ಬಂದಿಳಿದ್ದು, ಮುಂಜಾನೆಯಿಂದಲೆ ನಗರ ಟ್ರಾಫಿಕ್ ಜಾಂನಿಂದಾಗಿ ತತ್ತರಿಸಿ ಹೋಗಿದೆ. ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ದಕ್ಷಿಣ ಭಾರತದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಭೇಟಿ ಅವರು ನೀಡಲಿದ್ದಾರೆ.

ಇಂದು ಪ್ರಧಾನಮಂತ್ರಿ ವಿಧಾನಸೌಧದಲ್ಲಿ ಕನಕದಾಸರು ಮತ್ತು ವಾಲ್ಮೀಕಿ ಪ್ರತಿಮೆಗಳಿಗೆ ಪುಷ್ಪನಮನ ಸಲ್ಲಿಸಿ, ನಂತರ ಬೆಂಗಳೂರಿನ ಕೆಎಸ್‌ಆರ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅದರ ನಂತರ ಅವರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನ್ನು ಪ್ರಧಾನಿ ಉದ್ಘಾಟಿಸಿ, ಮಧ್ಯಾಹ್ನ 12 ಗಂಟೆಗೆ ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಮಧ್ಯಾಹ್ನ 12:30 ಕ್ಕೆ ಬೆಂಗಳೂರಿನಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಭಾಷಣ ಮಾಡಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಧಾನಿ ಮೋದಿ ಬೆಂಗಳೂರು ಭೇಟಿ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ವಿಮಾನ ನಿಲ್ದಾಣದಿಂದ ಮತ್ತು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಜನರ ಸಂಚಾರ ಮಾರ್ಗವನ್ನು ಬದಲಾಯಿಸಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕ ಕಾರ್ಯಕ್ರಮ ಇರುವುದರಿಂದ ನಗರದಿಂದ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಟ್ರಾಫಿಕ್‌‌ ದಟ್ಟಣೆ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ ಎಂದು ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.

ವಿಮಾನ ನಿಲ್ದಾಣಕ್ಕೆ ತೆರಳುವ ಜನರು ಮೈಲನಹಳ್ಳಿ-ಬೇಗೂರು ರಸ್ತೆಯಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ತೆರಳುವಂತೆ ತಿಳಿಸಲಾಗಿದೆ. ವಿಮಾನ ನಿಲ್ದಾಣ ಮತ್ತು ನಗರದ ನಡುವೆ ಪ್ರಯಾಣಿಸುವವರಿಗೂ ಬೆಳಿಗ್ಗೆ 9 ರಿಂದ ಸಂಜೆ 5 ರ ನಡುವೆ ಇದೇ ರಸ್ತೆಯನ್ನು ಬಳಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು: ಬೆಳಿಗ್ಗೆ ಹೊರಡಿಸಿದ್ದ ಸುತ್ತೋಲೆ ಸಂಜೆ ವಾಪಸ್!

ನಗರಕ್ಕೂ ಪ್ರಧಾನಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ಹಲವಾರು ಸಂಚಾರ ನಿರ್ಬಂಧಗಳು ಮತ್ತು ತಿರುವುಗಳನ್ನು ಸಹ ಜಾರಿಗೆ ತಂದಿದ್ದಾರೆ. ಸಿಟಿಒ ಜಂಕ್ಷನ್, ಪೊಲೀಸ್ ತಿಮ್ಮಯ್ಯ ವೃತ್ತ, ರಾಜಭವನ ರಸ್ತೆ, ಬಸವೇಶ್ವರ ವೃತ್ತ, ಅರಮನೆ ರಸ್ತೆ, ರೇಸ್ ಕೋರ್ಸ್ ರಸ್ತೆ, ಸ್ಯಾಂಕಿ ರಸ್ತೆ, ಕ್ವೀನ್ಸ್ ರಸ್ತೆ, ಬಳ್ಳಾರಿ ರಸ್ತೆ, ಏರ್‌ಪೋರ್ಟ್ ಎಲಿವೇಟೆಡ್ ಕಾರಿಡಾರ್, ಶೇಷಾದ್ರಿ ರಸ್ತೆ(ಮಹಾರಾಣಿ ಸೇತುವೆಯಿಂದ ಕೆಆರ್‌ಎಸ್ ರೈಲು ನಿಲ್ದಾಣದ ಪ್ರವೇಶದವರೆಗೆ), ಕೆ.ಜಿ.ರಸ್ತೆ, ವಾಟಾಳ್ ನಾಗರಾಜ್ ರಸ್ತೆ ಮತ್ತು ಕೆಂಪೇಗೌಡ ಅಂತರರಾಷ್ಟ್ರೀಯ ರಸ್ತೆಯ ಸುತ್ತಮುತ್ತಲಿನ ಎಲ್ಲಾ ರಸ್ತೆಗಳಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಸಂಚಾರ ನಿರ್ಬಂಧವನ್ನು ನಿರೀಕ್ಷಿಸಲಾಗಿದೆ.

ಪ್ರಧಾನಿ ಮೋದಿ ಆಗಮನದಿಂದಾಗಿ ನಗರದಲ್ಲಿ ಮುಂಜಾನೆಯಿಂದಲೇ ಟ್ರಾಫಿಕ್ ಜಾಂ ಕಿರಿಕಿರಿ ಹೆಚ್ಚಾಗಿದೆ. ಪ್ರಧಾನಿಯ ಸಾರ್ವಜನಿಕ ಭಾಷಣಕ್ಕೆ ಜನಸೇರಿಸಲು ಬಿಜೆಪಿ ಹೆಚ್ಚಿನ ಬಿಎಂಟಿಸಿಯ ಬಸ್ಸುಗಳನ್ನು ಬುಕ್‌ ಮಾಡಿದ್ದು, ಹೀಗಾಗಿ ತಮ್ಮ ದಿನನಿತ್ಯದ ಕೆಲಸಕ್ಕೆ ತೆರಳುವ ಸಾಮಾನ್ಯ ಜನರು ಬಸ್‌ಗಳು ಇಲ್ಲದೆ ಬಸ್‌ ನಿಲ್ದಾಣದಲ್ಲಿ ಕಾಯುತ್ತಿದ್ದಾರೆ. ಈ ನಡುವೆ ಬರುವ ಬಸ್‌ಗಳು ಕಿಕ್ಕಿರಿದು ಪ್ರಯಾಣಿಸುತ್ತಿವೆ.

ಕೆಂಪೇಗೌಡರ ಬೃಹತ್ ಪ್ರತಿಮೆ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ಸೇರಿದೆ ಎಂದು ವರದಿಯಾಗಿದೆ. ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಪ್ರಕಾರ, ಕೆಂಪೇಗೌಡರ ಮೊದಲ ಮತ್ತು ಅತೀ ಎತ್ತರದ ಪ್ರತಿಮೆಯಾಗಿದೆ. ವಿಶ್ವ ದಾಖಲೆ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ. 108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ 6 ಸಾವಿರ ಕಾಲೇಜು ವಿದ್ಯಾರ್ಥಿಗಳನ್ನು ಕರೆತನ್ನಿ: DDPU ಸುತ್ತೋಲೆಗೆ ಕಾಂಗ್ರೆಸ್ ಆಕ್ರೋಶ

ಬೃಹತ್ ಪ್ರತಿಮೆಯನ್ನು ಕಂಚಿನಿಂದ ನಿರ್ಮಿಸಲಾಗಿದ್ದು, ವಿಮಾನ ನಿಲ್ದಾಣದ 23 ಎಕರೆ ಆವರಣದಲ್ಲಿ ಕೆಂಪೇಗೌಡರಿಗೆ ಮೀಸಲಾದ ಪಾರಂಪರಿಕ ಉದ್ಯಾನವನವಾಗಿ ಅಭಿವೃದ್ಧಿಪಡಿಸಲಾಗಿದೆ. ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಬೃಹತ್ ಪ್ರತಿಮೆ ನಿರ್ಮಾಣವಾಗಿದೆ. 98 ಟನ್ ಕಂಚು ಮತ್ತು 120 ಟನ್ ಉಕ್ಕನ್ನು ಈ ಪ್ರತಿಮೆಗೆ ಬಳಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...