Homeಕರ್ನಾಟಕಬೆಂಗಳೂರು: ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ಮೋದಿ; ನಗರ ತುಂಬಾ ಟ್ರಾಫಿಕ್ ಜಾಂ

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ಮೋದಿ; ನಗರ ತುಂಬಾ ಟ್ರಾಫಿಕ್ ಜಾಂ

- Advertisement -
- Advertisement -

ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟನೆ ಮತ್ತು ವಿವಿಧ ಕಾರ್ಯಕ್ರಮಗಳಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಮುಂಜಾನೆ ಬೆಂಗಳೂರಿಗೆ ಬಂದಿಳಿದ್ದು, ಮುಂಜಾನೆಯಿಂದಲೆ ನಗರ ಟ್ರಾಫಿಕ್ ಜಾಂನಿಂದಾಗಿ ತತ್ತರಿಸಿ ಹೋಗಿದೆ. ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ದಕ್ಷಿಣ ಭಾರತದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಭೇಟಿ ಅವರು ನೀಡಲಿದ್ದಾರೆ.

ಇಂದು ಪ್ರಧಾನಮಂತ್ರಿ ವಿಧಾನಸೌಧದಲ್ಲಿ ಕನಕದಾಸರು ಮತ್ತು ವಾಲ್ಮೀಕಿ ಪ್ರತಿಮೆಗಳಿಗೆ ಪುಷ್ಪನಮನ ಸಲ್ಲಿಸಿ, ನಂತರ ಬೆಂಗಳೂರಿನ ಕೆಎಸ್‌ಆರ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅದರ ನಂತರ ಅವರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನ್ನು ಪ್ರಧಾನಿ ಉದ್ಘಾಟಿಸಿ, ಮಧ್ಯಾಹ್ನ 12 ಗಂಟೆಗೆ ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಮಧ್ಯಾಹ್ನ 12:30 ಕ್ಕೆ ಬೆಂಗಳೂರಿನಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಭಾಷಣ ಮಾಡಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಧಾನಿ ಮೋದಿ ಬೆಂಗಳೂರು ಭೇಟಿ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ವಿಮಾನ ನಿಲ್ದಾಣದಿಂದ ಮತ್ತು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಜನರ ಸಂಚಾರ ಮಾರ್ಗವನ್ನು ಬದಲಾಯಿಸಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕ ಕಾರ್ಯಕ್ರಮ ಇರುವುದರಿಂದ ನಗರದಿಂದ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಟ್ರಾಫಿಕ್‌‌ ದಟ್ಟಣೆ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ ಎಂದು ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.

ವಿಮಾನ ನಿಲ್ದಾಣಕ್ಕೆ ತೆರಳುವ ಜನರು ಮೈಲನಹಳ್ಳಿ-ಬೇಗೂರು ರಸ್ತೆಯಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ತೆರಳುವಂತೆ ತಿಳಿಸಲಾಗಿದೆ. ವಿಮಾನ ನಿಲ್ದಾಣ ಮತ್ತು ನಗರದ ನಡುವೆ ಪ್ರಯಾಣಿಸುವವರಿಗೂ ಬೆಳಿಗ್ಗೆ 9 ರಿಂದ ಸಂಜೆ 5 ರ ನಡುವೆ ಇದೇ ರಸ್ತೆಯನ್ನು ಬಳಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು: ಬೆಳಿಗ್ಗೆ ಹೊರಡಿಸಿದ್ದ ಸುತ್ತೋಲೆ ಸಂಜೆ ವಾಪಸ್!

ನಗರಕ್ಕೂ ಪ್ರಧಾನಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ಹಲವಾರು ಸಂಚಾರ ನಿರ್ಬಂಧಗಳು ಮತ್ತು ತಿರುವುಗಳನ್ನು ಸಹ ಜಾರಿಗೆ ತಂದಿದ್ದಾರೆ. ಸಿಟಿಒ ಜಂಕ್ಷನ್, ಪೊಲೀಸ್ ತಿಮ್ಮಯ್ಯ ವೃತ್ತ, ರಾಜಭವನ ರಸ್ತೆ, ಬಸವೇಶ್ವರ ವೃತ್ತ, ಅರಮನೆ ರಸ್ತೆ, ರೇಸ್ ಕೋರ್ಸ್ ರಸ್ತೆ, ಸ್ಯಾಂಕಿ ರಸ್ತೆ, ಕ್ವೀನ್ಸ್ ರಸ್ತೆ, ಬಳ್ಳಾರಿ ರಸ್ತೆ, ಏರ್‌ಪೋರ್ಟ್ ಎಲಿವೇಟೆಡ್ ಕಾರಿಡಾರ್, ಶೇಷಾದ್ರಿ ರಸ್ತೆ(ಮಹಾರಾಣಿ ಸೇತುವೆಯಿಂದ ಕೆಆರ್‌ಎಸ್ ರೈಲು ನಿಲ್ದಾಣದ ಪ್ರವೇಶದವರೆಗೆ), ಕೆ.ಜಿ.ರಸ್ತೆ, ವಾಟಾಳ್ ನಾಗರಾಜ್ ರಸ್ತೆ ಮತ್ತು ಕೆಂಪೇಗೌಡ ಅಂತರರಾಷ್ಟ್ರೀಯ ರಸ್ತೆಯ ಸುತ್ತಮುತ್ತಲಿನ ಎಲ್ಲಾ ರಸ್ತೆಗಳಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಸಂಚಾರ ನಿರ್ಬಂಧವನ್ನು ನಿರೀಕ್ಷಿಸಲಾಗಿದೆ.

ಪ್ರಧಾನಿ ಮೋದಿ ಆಗಮನದಿಂದಾಗಿ ನಗರದಲ್ಲಿ ಮುಂಜಾನೆಯಿಂದಲೇ ಟ್ರಾಫಿಕ್ ಜಾಂ ಕಿರಿಕಿರಿ ಹೆಚ್ಚಾಗಿದೆ. ಪ್ರಧಾನಿಯ ಸಾರ್ವಜನಿಕ ಭಾಷಣಕ್ಕೆ ಜನಸೇರಿಸಲು ಬಿಜೆಪಿ ಹೆಚ್ಚಿನ ಬಿಎಂಟಿಸಿಯ ಬಸ್ಸುಗಳನ್ನು ಬುಕ್‌ ಮಾಡಿದ್ದು, ಹೀಗಾಗಿ ತಮ್ಮ ದಿನನಿತ್ಯದ ಕೆಲಸಕ್ಕೆ ತೆರಳುವ ಸಾಮಾನ್ಯ ಜನರು ಬಸ್‌ಗಳು ಇಲ್ಲದೆ ಬಸ್‌ ನಿಲ್ದಾಣದಲ್ಲಿ ಕಾಯುತ್ತಿದ್ದಾರೆ. ಈ ನಡುವೆ ಬರುವ ಬಸ್‌ಗಳು ಕಿಕ್ಕಿರಿದು ಪ್ರಯಾಣಿಸುತ್ತಿವೆ.

ಕೆಂಪೇಗೌಡರ ಬೃಹತ್ ಪ್ರತಿಮೆ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ಸೇರಿದೆ ಎಂದು ವರದಿಯಾಗಿದೆ. ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಪ್ರಕಾರ, ಕೆಂಪೇಗೌಡರ ಮೊದಲ ಮತ್ತು ಅತೀ ಎತ್ತರದ ಪ್ರತಿಮೆಯಾಗಿದೆ. ವಿಶ್ವ ದಾಖಲೆ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ. 108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ 6 ಸಾವಿರ ಕಾಲೇಜು ವಿದ್ಯಾರ್ಥಿಗಳನ್ನು ಕರೆತನ್ನಿ: DDPU ಸುತ್ತೋಲೆಗೆ ಕಾಂಗ್ರೆಸ್ ಆಕ್ರೋಶ

ಬೃಹತ್ ಪ್ರತಿಮೆಯನ್ನು ಕಂಚಿನಿಂದ ನಿರ್ಮಿಸಲಾಗಿದ್ದು, ವಿಮಾನ ನಿಲ್ದಾಣದ 23 ಎಕರೆ ಆವರಣದಲ್ಲಿ ಕೆಂಪೇಗೌಡರಿಗೆ ಮೀಸಲಾದ ಪಾರಂಪರಿಕ ಉದ್ಯಾನವನವಾಗಿ ಅಭಿವೃದ್ಧಿಪಡಿಸಲಾಗಿದೆ. ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಬೃಹತ್ ಪ್ರತಿಮೆ ನಿರ್ಮಾಣವಾಗಿದೆ. 98 ಟನ್ ಕಂಚು ಮತ್ತು 120 ಟನ್ ಉಕ್ಕನ್ನು ಈ ಪ್ರತಿಮೆಗೆ ಬಳಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...