Homeಕರ್ನಾಟಕಬೆಂಗಳೂರು : ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ನಿಂದಿಸಿದ ಪ್ರಾಧ್ಯಾಪಕ!

ಬೆಂಗಳೂರು : ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಗೆ ‘ಟೆರರಿಸ್ಟ್’ ಎಂದು ನಿಂದಿಸಿದ ಪ್ರಾಧ್ಯಾಪಕ!

- Advertisement -
- Advertisement -

ಪ್ರಾಧ್ಯಾಪಕರೊಬ್ಬರು ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಯನ್ನು ‘ಟೆರರಿಸ್ಟ್’ ಎಂದು ನಿಂದಿಸಿದ ಘಟನೆ ಬೆಂಗಳೂರಿನ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಪ್ರಾಧ್ಯಾಪಕನನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಎನ್‌ಡಿಟಿವಿ ವರದಿಯ ಪ್ರಕಾರ, ಮಂಗಳವಾರ (ಮಾ.24) ಈ ಘಟನೆ ನಡೆದಿದೆ. ಅಫ್ಫಾನ್ ಎಂಬ ವಿದ್ಯಾರ್ಥಿ ಯಾರನ್ನೋ ಭೇಟಿಯಾಗುವ ಸಲುವಾಗಿ ತರಗತಿಯಿಂದ ಹೊರ ಹೋಗಲು ಅನುಮತಿ ಕೇಳಿದಾಗ ಡಾ. ಮುರಳೀದರ್ ದೇಶಪಾಂಡೆ ಎಂಬ ಪ್ರಾಧ್ಯಾಪಕ ನಿಂದಿಸಿದ್ದಾರೆ ಎನ್ನಲಾಗಿದೆ.

ವೈರಲ್ ವಿಡಿಯೋದಲ್ಲಿ ಪ್ರಾಧ್ಯಾಪಕ ವಿದ್ಯಾರ್ಥಿಯನ್ನು ‘ಟೆರರಿಸ್ಟ್’ ಎಂದು ಕರೆದಿರುವುದು ಮತ್ತು ಇತರ ಪದಗಳನ್ನು ಬಳಸಿ ತುಚ್ಚವಾಗಿ ನಿಂದಿಸಿರುವುದು ಸ್ಪಷ್ಟವಾಗಿ ಕೇಳಿಸುತ್ತದೆ.

“ಶರಮ್ ನಹೀ ಆತಿ ತುಮ್ಕೋ (ನಿಮಗೆ ನಾಚಿಕೆ ಆಗ್ತಿಲ್ವಾ?)” ಎಂದು ಚೆಕ್ ಪ್ಯಾಟರ್ನ್ ಹೊಂದಿರುವ ಅರ್ಧ ತೋಳಿನ ಶರ್ಟ್ ಧರಿಸಿರುವ ಪ್ರಾಧ್ಯಾಪಕ ತರಗತಿ ಕೇಳುವಂತೆ ಜೋರಾಗಿ ಕೂಗಿರುವುದು ವಿಡಿಯೋದಲ್ಲಿ ನೋಡಬಹುದು.

ಎನ್‌ಡಿಟಿವಿ ವರದಿ ಪ್ರಕಾರ, “ಇರಾನ್ ಯುದ್ಧಕ್ಕೆ ಇವನಂತಹ ಜನರೇ ಕಾರಣ” ಎಂದು ದೂಷಿಸಿರುವುದು, “ಡೊನಾಲ್ಡ್ ಟ್ರಂಪ್ ಬಂದು ಇವನನ್ನು ಎಳೆದೊಯ್ಯುತ್ತಾರೆ” ಎಂದು ಹೇಳಿರುವುದು ಮತ್ತು ಆ ವಿದ್ಯಾರ್ಥಿಗೆ “ನರಕಕ್ಕೆ ಹೋಗುತ್ತಾನೆ” ಎಂದು ಶಪಿಸಿರುವುದು – ಹೀಗೆ ಪ್ರಾಧ್ಯಾಪಕ ಹಲವು ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ ಆರೋಪವಿದೆ.

ವೈರಲ್ ವಿಡಿಯೋವನ್ನು ವಿದ್ಯಾರ್ಥಿಗಳು ಸೆರೆ ಹಿಡಿದಿದ್ದಾರೆ.

ವಿಡಿಯೋ ವೈರಲ್ ಆದ ಬಳಿಕ, ವಿಶ್ವವಿದ್ಯಾಲಯ ತನಿಖೆ ಬಾಕಿ ಇರಿಸಿ ಪ್ರಾಧ್ಯಾಪಕನನ್ನು ಅಮಾನತುಗೊಳಿಸಿದೆ. ಘಟನೆ ನಡೆದ ಮೂರು ದಿನಗಳ ಬಳಿಕ ಕ್ರಮ ಕೈಗೊಂಡಿದೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಪ್ರಾಧ್ಯಾಪಕನಿಂದ ನಿಂದನೆಗೆ ಒಳಗಾದ ವಿದ್ಯಾರ್ಥಿಯನ್ನು ಬೆಂಬಲಿಸಿದ ಇತರ ಮೂವರು ವಿದ್ಯಾರ್ಥಿಗಳನ್ನು ಕೂಡ ವಿವಿಧ ಕಾರಣಗಳನ್ನು ನೀಡಿ ಅಮಾನತುಗೊಳಿಸಲಾಗಿದೆ ಎಂದು ಹೆಸರು ಹೇಳಲು ಇಚ್ಚಿಸದ ವಿದ್ಯಾರ್ಥಿಯೊಬ್ಬರು ಹೇಳಿದ್ದಾಗಿ ವರದಿ ಉಲ್ಲೇಖಿಸಿದೆ.

ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ) ಪೊಲೀಸ್ ದೂರು ದಾಖಲಿಸಿದ್ದು, ಪ್ರಾಧ್ಯಾಪಕರ ಸಾರ್ವಜನಿಕ ಕ್ಷಮೆಯಾಚಿಸಬೇಕು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಬುಧಾಬಿ | ಭದ್ರತಾಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...

ಗುರುತು ಬಹಿರಂಗ ಆರೋಪ; ಜೆಫ್ರಿ ಎಪ್ಸ್ಟೀನ್ ಸಂತ್ರಸ್ತರಿಂದ ಗೂಗಲ್‌ ವಿರುದ್ಧ ಮೊಕದ್ದಮೆ

ಜೆಫ್ರಿ ಎಪ್ಸ್ಟೀನ್ ಸಂತ್ರಸ್ತರು ಗೂಗಲ್ ವಿರುದ್ಧ ಯುಎಸ್ ಫೆಡರಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ. ಅದರ ಸರ್ಚ್ ಇಂಜಿನ್ ಮತ್ತು ಎಐ ಪರಿಕರಗಳಲ್ಲಿ ತಮ್ಮ ಹೆಸರುಗಳು, ಇಮೇಲ್‌ಗಳು ಮತ್ತು ಫೋನ್ ಸಂಖ್ಯೆಗಳನ್ನು ಪ್ರಸಾರ ಮಾಡುತ್ತಿವೆ...

ನೇಪಾಳ : ಹೊಸ ಪ್ರಧಾನಿ ಅಧಿಕಾರ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿಯ ಬಂಧನ!

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ (ಬಾಲೆನ್ ಶಾ) ಪ್ರಮಾಣವಚನ ಸ್ವೀಕರಿಸಿದ ಮರುದಿನವೇ (ಮಾ.28, ಶನಿವಾರ), ಮಾಜಿ ಪ್ರಧಾನಿ ಕೆ. ಪಿ. ಶರ್ಮಾ ಓಲಿ ಅವರ ಬಂಧನವಾಗಿದೆ. ಸೆಪ್ಟೆಂಬರ್ 2025ರಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ...

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...