Homeಕರ್ನಾಟಕಬೆಂಗಳೂರು : ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ನಿಂದಿಸಿದ ಪ್ರಾಧ್ಯಾಪಕ!

ಬೆಂಗಳೂರು : ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಗೆ ‘ಟೆರರಿಸ್ಟ್’ ಎಂದು ನಿಂದಿಸಿದ ಪ್ರಾಧ್ಯಾಪಕ!

- Advertisement -
- Advertisement -

ಪ್ರಾಧ್ಯಾಪಕರೊಬ್ಬರು ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಯನ್ನು ‘ಟೆರರಿಸ್ಟ್’ ಎಂದು ನಿಂದಿಸಿದ ಘಟನೆ ಬೆಂಗಳೂರಿನ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಪ್ರಾಧ್ಯಾಪಕನನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಎನ್‌ಡಿಟಿವಿ ವರದಿಯ ಪ್ರಕಾರ, ಮಂಗಳವಾರ (ಮಾ.24) ಈ ಘಟನೆ ನಡೆದಿದೆ. ಅಫ್ಫಾನ್ ಎಂಬ ವಿದ್ಯಾರ್ಥಿ ಯಾರನ್ನೋ ಭೇಟಿಯಾಗುವ ಸಲುವಾಗಿ ತರಗತಿಯಿಂದ ಹೊರ ಹೋಗಲು ಅನುಮತಿ ಕೇಳಿದಾಗ ಡಾ. ಮುರಳೀದರ್ ದೇಶಪಾಂಡೆ ಎಂಬ ಪ್ರಾಧ್ಯಾಪಕ ನಿಂದಿಸಿದ್ದಾರೆ ಎನ್ನಲಾಗಿದೆ.

ವೈರಲ್ ವಿಡಿಯೋದಲ್ಲಿ ಪ್ರಾಧ್ಯಾಪಕ ವಿದ್ಯಾರ್ಥಿಯನ್ನು ‘ಟೆರರಿಸ್ಟ್’ ಎಂದು ಕರೆದಿರುವುದು ಮತ್ತು ಇತರ ಪದಗಳನ್ನು ಬಳಸಿ ತುಚ್ಚವಾಗಿ ನಿಂದಿಸಿರುವುದು ಸ್ಪಷ್ಟವಾಗಿ ಕೇಳಿಸುತ್ತದೆ.

“ಶರಮ್ ನಹೀ ಆತಿ ತುಮ್ಕೋ (ನಿಮಗೆ ನಾಚಿಕೆ ಆಗ್ತಿಲ್ವಾ?)” ಎಂದು ಚೆಕ್ ಪ್ಯಾಟರ್ನ್ ಹೊಂದಿರುವ ಅರ್ಧ ತೋಳಿನ ಶರ್ಟ್ ಧರಿಸಿರುವ ಪ್ರಾಧ್ಯಾಪಕ ತರಗತಿ ಕೇಳುವಂತೆ ಜೋರಾಗಿ ಕೂಗಿರುವುದು ವಿಡಿಯೋದಲ್ಲಿ ನೋಡಬಹುದು.

ಎನ್‌ಡಿಟಿವಿ ವರದಿ ಪ್ರಕಾರ, “ಇರಾನ್ ಯುದ್ಧಕ್ಕೆ ಇವನಂತಹ ಜನರೇ ಕಾರಣ” ಎಂದು ದೂಷಿಸಿರುವುದು, “ಡೊನಾಲ್ಡ್ ಟ್ರಂಪ್ ಬಂದು ಇವನನ್ನು ಎಳೆದೊಯ್ಯುತ್ತಾರೆ” ಎಂದು ಹೇಳಿರುವುದು ಮತ್ತು ಆ ವಿದ್ಯಾರ್ಥಿಗೆ “ನರಕಕ್ಕೆ ಹೋಗುತ್ತಾನೆ” ಎಂದು ಶಪಿಸಿರುವುದು – ಹೀಗೆ ಪ್ರಾಧ್ಯಾಪಕ ಹಲವು ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ ಆರೋಪವಿದೆ.

ವೈರಲ್ ವಿಡಿಯೋವನ್ನು ವಿದ್ಯಾರ್ಥಿಗಳು ಸೆರೆ ಹಿಡಿದಿದ್ದಾರೆ.

ವಿಡಿಯೋ ವೈರಲ್ ಆದ ಬಳಿಕ, ವಿಶ್ವವಿದ್ಯಾಲಯ ತನಿಖೆ ಬಾಕಿ ಇರಿಸಿ ಪ್ರಾಧ್ಯಾಪಕನನ್ನು ಅಮಾನತುಗೊಳಿಸಿದೆ. ಘಟನೆ ನಡೆದ ಮೂರು ದಿನಗಳ ಬಳಿಕ ಕ್ರಮ ಕೈಗೊಂಡಿದೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಪ್ರಾಧ್ಯಾಪಕನಿಂದ ನಿಂದನೆಗೆ ಒಳಗಾದ ವಿದ್ಯಾರ್ಥಿಯನ್ನು ಬೆಂಬಲಿಸಿದ ಇತರ ಮೂವರು ವಿದ್ಯಾರ್ಥಿಗಳನ್ನು ಕೂಡ ವಿವಿಧ ಕಾರಣಗಳನ್ನು ನೀಡಿ ಅಮಾನತುಗೊಳಿಸಲಾಗಿದೆ ಎಂದು ಹೆಸರು ಹೇಳಲು ಇಚ್ಚಿಸದ ವಿದ್ಯಾರ್ಥಿಯೊಬ್ಬರು ಹೇಳಿದ್ದಾಗಿ ವರದಿ ಉಲ್ಲೇಖಿಸಿದೆ.

ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ) ಪೊಲೀಸ್ ದೂರು ದಾಖಲಿಸಿದ್ದು, ಪ್ರಾಧ್ಯಾಪಕರ ಸಾರ್ವಜನಿಕ ಕ್ಷಮೆಯಾಚಿಸಬೇಕು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...