Homeಕರ್ನಾಟಕಬೆಂಗಳೂರು : ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ನಿಂದಿಸಿದ ಪ್ರಾಧ್ಯಾಪಕ!

ಬೆಂಗಳೂರು : ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಗೆ ‘ಟೆರರಿಸ್ಟ್’ ಎಂದು ನಿಂದಿಸಿದ ಪ್ರಾಧ್ಯಾಪಕ!

- Advertisement -
- Advertisement -

ಪ್ರಾಧ್ಯಾಪಕರೊಬ್ಬರು ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಯನ್ನು ‘ಟೆರರಿಸ್ಟ್’ ಎಂದು ನಿಂದಿಸಿದ ಘಟನೆ ಬೆಂಗಳೂರಿನ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಪ್ರಾಧ್ಯಾಪಕನನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಎನ್‌ಡಿಟಿವಿ ವರದಿಯ ಪ್ರಕಾರ, ಮಂಗಳವಾರ (ಮಾ.24) ಈ ಘಟನೆ ನಡೆದಿದೆ. ಅಫ್ಫಾನ್ ಎಂಬ ವಿದ್ಯಾರ್ಥಿ ಯಾರನ್ನೋ ಭೇಟಿಯಾಗುವ ಸಲುವಾಗಿ ತರಗತಿಯಿಂದ ಹೊರ ಹೋಗಲು ಅನುಮತಿ ಕೇಳಿದಾಗ ಡಾ. ಮುರಳೀದರ್ ದೇಶಪಾಂಡೆ ಎಂಬ ಪ್ರಾಧ್ಯಾಪಕ ನಿಂದಿಸಿದ್ದಾರೆ ಎನ್ನಲಾಗಿದೆ.

ವೈರಲ್ ವಿಡಿಯೋದಲ್ಲಿ ಪ್ರಾಧ್ಯಾಪಕ ವಿದ್ಯಾರ್ಥಿಯನ್ನು ‘ಟೆರರಿಸ್ಟ್’ ಎಂದು ಕರೆದಿರುವುದು ಮತ್ತು ಇತರ ಪದಗಳನ್ನು ಬಳಸಿ ತುಚ್ಚವಾಗಿ ನಿಂದಿಸಿರುವುದು ಸ್ಪಷ್ಟವಾಗಿ ಕೇಳಿಸುತ್ತದೆ.

“ಶರಮ್ ನಹೀ ಆತಿ ತುಮ್ಕೋ (ನಿಮಗೆ ನಾಚಿಕೆ ಆಗ್ತಿಲ್ವಾ?)” ಎಂದು ಚೆಕ್ ಪ್ಯಾಟರ್ನ್ ಹೊಂದಿರುವ ಅರ್ಧ ತೋಳಿನ ಶರ್ಟ್ ಧರಿಸಿರುವ ಪ್ರಾಧ್ಯಾಪಕ ತರಗತಿ ಕೇಳುವಂತೆ ಜೋರಾಗಿ ಕೂಗಿರುವುದು ವಿಡಿಯೋದಲ್ಲಿ ನೋಡಬಹುದು.

ಎನ್‌ಡಿಟಿವಿ ವರದಿ ಪ್ರಕಾರ, “ಇರಾನ್ ಯುದ್ಧಕ್ಕೆ ಇವನಂತಹ ಜನರೇ ಕಾರಣ” ಎಂದು ದೂಷಿಸಿರುವುದು, “ಡೊನಾಲ್ಡ್ ಟ್ರಂಪ್ ಬಂದು ಇವನನ್ನು ಎಳೆದೊಯ್ಯುತ್ತಾರೆ” ಎಂದು ಹೇಳಿರುವುದು ಮತ್ತು ಆ ವಿದ್ಯಾರ್ಥಿಗೆ “ನರಕಕ್ಕೆ ಹೋಗುತ್ತಾನೆ” ಎಂದು ಶಪಿಸಿರುವುದು – ಹೀಗೆ ಪ್ರಾಧ್ಯಾಪಕ ಹಲವು ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ ಆರೋಪವಿದೆ.

ವೈರಲ್ ವಿಡಿಯೋವನ್ನು ವಿದ್ಯಾರ್ಥಿಗಳು ಸೆರೆ ಹಿಡಿದಿದ್ದಾರೆ.

ವಿಡಿಯೋ ವೈರಲ್ ಆದ ಬಳಿಕ, ವಿಶ್ವವಿದ್ಯಾಲಯ ತನಿಖೆ ಬಾಕಿ ಇರಿಸಿ ಪ್ರಾಧ್ಯಾಪಕನನ್ನು ಅಮಾನತುಗೊಳಿಸಿದೆ. ಘಟನೆ ನಡೆದ ಮೂರು ದಿನಗಳ ಬಳಿಕ ಕ್ರಮ ಕೈಗೊಂಡಿದೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಪ್ರಾಧ್ಯಾಪಕನಿಂದ ನಿಂದನೆಗೆ ಒಳಗಾದ ವಿದ್ಯಾರ್ಥಿಯನ್ನು ಬೆಂಬಲಿಸಿದ ಇತರ ಮೂವರು ವಿದ್ಯಾರ್ಥಿಗಳನ್ನು ಕೂಡ ವಿವಿಧ ಕಾರಣಗಳನ್ನು ನೀಡಿ ಅಮಾನತುಗೊಳಿಸಲಾಗಿದೆ ಎಂದು ಹೆಸರು ಹೇಳಲು ಇಚ್ಚಿಸದ ವಿದ್ಯಾರ್ಥಿಯೊಬ್ಬರು ಹೇಳಿದ್ದಾಗಿ ವರದಿ ಉಲ್ಲೇಖಿಸಿದೆ.

ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ) ಪೊಲೀಸ್ ದೂರು ದಾಖಲಿಸಿದ್ದು, ಪ್ರಾಧ್ಯಾಪಕರ ಸಾರ್ವಜನಿಕ ಕ್ಷಮೆಯಾಚಿಸಬೇಕು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...