Homeಕರ್ನಾಟಕಬೆಂಗಳೂರು | ಯುಎಪಿಎ ಕಾನೂನು ರದ್ದಾಗಬೇಕು: ಪ್ರಗತಿಪರ ಸಂಘಟನೆಗಳಿಂದ ಒಕ್ಕೊರಲ ಆಗ್ರಹ

ಬೆಂಗಳೂರು | ಯುಎಪಿಎ ಕಾನೂನು ರದ್ದಾಗಬೇಕು: ಪ್ರಗತಿಪರ ಸಂಘಟನೆಗಳಿಂದ ಒಕ್ಕೊರಲ ಆಗ್ರಹ

- Advertisement -
- Advertisement -

ಮಾನವ ಹಕ್ಕುಗಳ ಹೋರಾಟಗಾರ್ತಿ ಅರುಂಧತಿ ರಾಯ್ ಮತ್ತು ಪ್ರೊ. ಶೇಖ್‌ ಶೌಕತ್‌ ಹುಸೇನ್‌ ಅವರ ಮೇಲೆ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಲು ಅನುಮತಿ ನೀಡಿರುವುದನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರಗತಿಪರ ಸಂಘಟನೆಗಳ ವತಿಯಿಂದ ಗುರುವಾರ (ಜೂನ್ 20) ಪ್ರತಿಭಟನೆ ನಡೆಯಿತು.

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಿಂದ ಅನೇಕ ಪ್ರಗತಿಪರ ಚಿಂತಕರನ್ನು ಕಠೋರ ಮತ್ತು ಪ್ರಜಾಪ್ರಭುತ್ವ ವಿರೋಧಿ ಕಾನೂನಾದ ಯುಎಪಿಎ ಕಾಯ್ದೆ ಅಡಿ ಬಂಧಿಸಿ ಬಾಯಿ ಮುಚ್ಚಿಸುತ್ತಿದೆ ಎಂದು ಪ್ರಗತಿಪರ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಕಾಶ್ಮೀರಿ ಜನರ ಸಮಸ್ಯೆಗಳ ಕುರಿತು 2010ರಲ್ಲಿ ಮಾತನಾಡಿದಕ್ಕಾಗಿ ಇಬ್ಬರ ಮೇಲೆ ಈಗ ಯುಎಪಿಎ ಅಡಿ ಕ್ರಮ ಜರುಗಿಸಲು ದೆಹಲಿಯ ಲೆಫ್ಟಿನೆಂಟ್ ಗವರ್ನರ್‌ ವಿಕೆ. ಸಕ್ಸೇನಾ ದೆಹಲಿ ಪೊಲೀಸರಿಗೆ ಅನುಮತಿ ನೀಡಿರುವುದು ಖಂಡನೀಯ ಎಂದು ಎಐಸಿಸಿಟಿಯು, ಎಐಪಿಡಬಲ್ಯೂಎ, ಎಐಎಸ್‌ಎ, ಸಿಪಿಐಎಂಎಲ್‌, ಆರ್‌ಐಎ ಸಂಘಟನೆಗಳ ಮುಖಂಡರು ಒಕ್ಕೊರಳಿನಿಂದ ಹೇಳಿದರು.

ವಕೀಲ ಕ್ಲಿಫ್ಟನ್.‌ ಡಿ. ರೊಜಾರಿಯೊ ಮಾತನಾಡಿ, “ಯಾವುದೇ ಕಾನೂನಿನ ಪ್ರಕ್ರಿಯೆ ಇಲ್ಲದೆ ಕೇವಲ ಪ್ರಕರಣ ದಾಖಲಾದ ತಕ್ಷಣಕ್ಕೆ ವ್ಯಕ್ತಿಗಳನ್ನು ಬಂಧಿಸುವ ಯುಎಪಿಎ ಕಾಯ್ದೆಯು ಅಸಾಂವಿಧಾನಿಕವಾದ್ದದ್ದು. ವ್ಯಕ್ತಿಯ ಮೂಲಭೂತ ಹಕ್ಕುಗಳನ್ನು ಕಸಿಯುತ್ತದೆ. ದಲಿತರು, ರೈತರು, ಮಹಿಳೆಯರು, ಅಲ್ಪಸಂಖ್ಯಾತರು ಮತ್ತು ವಿದಾರ್ಥಿಗಳ ಪರ ನಾವು ಸದಾ ದನಿ ಎತ್ತುತ್ತೇವೆ. ಅದು ನಮ್ಮ ಹಕ್ಕು. ಹತ್ತು ವರ್ಷಗಳಿಂದ ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿರುವ ವಿದ್ಯಾರ್ಥಿ ನಾಯಕರು, ಹೋರಾಟಗಾರರು, ಪ್ರಗತಿಪರ ಚಿಂತಕರನ್ನು ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

“ಭೀಮಾ ಕೊರೆಂಗಾವ್‌ನಲ್ಲಿ ಕಾರ್ಮಿಕರು ಗುತ್ತಿಗೆ ಪದ್ಧತಿ ರದ್ದಾಗಬೇಕು ಎಂದು ಪ್ರತಿಭಟಿಸಿದ್ದ ಕಾರಣಕ್ಕಾಗಿ ಅವರ ಮೇಲೆ ಯುಎಪಿಎ ಅಡಿ ಕ್ರಮ ಜರುಗಿಸಿದ್ದರು. ಜನರಿಗೆ ಸಂವಿಧಾನದ ಅಡಿಯಲ್ಲಿ ಸರ್ಕಾರ ಮತ್ತು ಅದು ರೂಪಿಸುವ ನೀತಿಗಳ ವಿರುದ್ಧ ಪ್ರಶ್ನಿಸುವ ಹಕ್ಕಿದೆ. ಆದರೆ, ಎಲ್ಲ ರಾಜಕೀಯ ಪಕ್ಷಗಳು ಈ ಹಕ್ಕನ್ನು ನಾನಾ ರೂಪದಲ್ಲಿ ಕಸಿಯುತ್ತಿವೆ. ದೇವನಹಳ್ಳಿಯಲ್ಲಿ ರೈತನಿಗೆ ಅನ್ಯಾಯವಾದರೆ 25 ಕಿಲೋ ಮೀಟರ್‌ ದೂರದಲ್ಲಿರುವ ಸ್ವಾತಂತ್ರ್ಯ ಉದ್ಯಾವನಕ್ಕೆ ಬಂದು ಪ್ರತಿಭಟಿಸಬೇಕಾಗಿದೆ. ಹೀಗೆ ಪ್ರತಿಭಟಿಸುವ ಹಕ್ಕನ್ನು ಕೂಡ ಜನರಿಂದ ಕಿತ್ತುಕೊಳ್ಳಲಾಗಿದೆ” ಎಂದು ಎಐಎಸ್‌ಎ ಸದಸ್ಯ ಶರತ್ ಬೇಸರ ವ್ಯಕ್ತಪಡಿಸಿದರು.

ಆಲ್ ಇಂಡಿಯಾ ಲಾಯರ್ಸ್ ಅಸೋಷಿಯೇಷನ್ ಫಾರ್ ಜಸ್ಟೀಸ್‌ನ ಸದಸ್ಯೆ ಶಿಲ್ಪಾ, ಬಹುತ್ವ ಕರ್ನಾಟಕದ ತನ್ವೀರ್, ಅರತ್ರಿಕಾ, ನರಸಿಂಹಮೂರ್ತಿ, ವಿನಯ್ ಕುಮಾರ್ ಮತ್ತಿತರು ಹಾಜರಿದ್ದರು.

ಇದನ್ನೂ ಓದಿ : ನೀಟ್-ಯುಜಿ ವಿವಾದ: ಸುಪ್ರೀಂ ಕೋರ್ಟಿನಿಂದ ಎನ್‌ಟಿಎ-ಕೇಂದ್ರಕ್ಕೆ ನೋಟಿಸ್, ಹೈಕೋರ್ಟ್‌ ವಿಚಾರಣೆಗೆ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...