Homeಕರ್ನಾಟಕಬೆಂಗಳೂರು | ಯುಎಪಿಎ ಕಾನೂನು ರದ್ದಾಗಬೇಕು: ಪ್ರಗತಿಪರ ಸಂಘಟನೆಗಳಿಂದ ಒಕ್ಕೊರಲ ಆಗ್ರಹ

ಬೆಂಗಳೂರು | ಯುಎಪಿಎ ಕಾನೂನು ರದ್ದಾಗಬೇಕು: ಪ್ರಗತಿಪರ ಸಂಘಟನೆಗಳಿಂದ ಒಕ್ಕೊರಲ ಆಗ್ರಹ

- Advertisement -
- Advertisement -

ಮಾನವ ಹಕ್ಕುಗಳ ಹೋರಾಟಗಾರ್ತಿ ಅರುಂಧತಿ ರಾಯ್ ಮತ್ತು ಪ್ರೊ. ಶೇಖ್‌ ಶೌಕತ್‌ ಹುಸೇನ್‌ ಅವರ ಮೇಲೆ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಲು ಅನುಮತಿ ನೀಡಿರುವುದನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರಗತಿಪರ ಸಂಘಟನೆಗಳ ವತಿಯಿಂದ ಗುರುವಾರ (ಜೂನ್ 20) ಪ್ರತಿಭಟನೆ ನಡೆಯಿತು.

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಿಂದ ಅನೇಕ ಪ್ರಗತಿಪರ ಚಿಂತಕರನ್ನು ಕಠೋರ ಮತ್ತು ಪ್ರಜಾಪ್ರಭುತ್ವ ವಿರೋಧಿ ಕಾನೂನಾದ ಯುಎಪಿಎ ಕಾಯ್ದೆ ಅಡಿ ಬಂಧಿಸಿ ಬಾಯಿ ಮುಚ್ಚಿಸುತ್ತಿದೆ ಎಂದು ಪ್ರಗತಿಪರ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಕಾಶ್ಮೀರಿ ಜನರ ಸಮಸ್ಯೆಗಳ ಕುರಿತು 2010ರಲ್ಲಿ ಮಾತನಾಡಿದಕ್ಕಾಗಿ ಇಬ್ಬರ ಮೇಲೆ ಈಗ ಯುಎಪಿಎ ಅಡಿ ಕ್ರಮ ಜರುಗಿಸಲು ದೆಹಲಿಯ ಲೆಫ್ಟಿನೆಂಟ್ ಗವರ್ನರ್‌ ವಿಕೆ. ಸಕ್ಸೇನಾ ದೆಹಲಿ ಪೊಲೀಸರಿಗೆ ಅನುಮತಿ ನೀಡಿರುವುದು ಖಂಡನೀಯ ಎಂದು ಎಐಸಿಸಿಟಿಯು, ಎಐಪಿಡಬಲ್ಯೂಎ, ಎಐಎಸ್‌ಎ, ಸಿಪಿಐಎಂಎಲ್‌, ಆರ್‌ಐಎ ಸಂಘಟನೆಗಳ ಮುಖಂಡರು ಒಕ್ಕೊರಳಿನಿಂದ ಹೇಳಿದರು.

ವಕೀಲ ಕ್ಲಿಫ್ಟನ್.‌ ಡಿ. ರೊಜಾರಿಯೊ ಮಾತನಾಡಿ, “ಯಾವುದೇ ಕಾನೂನಿನ ಪ್ರಕ್ರಿಯೆ ಇಲ್ಲದೆ ಕೇವಲ ಪ್ರಕರಣ ದಾಖಲಾದ ತಕ್ಷಣಕ್ಕೆ ವ್ಯಕ್ತಿಗಳನ್ನು ಬಂಧಿಸುವ ಯುಎಪಿಎ ಕಾಯ್ದೆಯು ಅಸಾಂವಿಧಾನಿಕವಾದ್ದದ್ದು. ವ್ಯಕ್ತಿಯ ಮೂಲಭೂತ ಹಕ್ಕುಗಳನ್ನು ಕಸಿಯುತ್ತದೆ. ದಲಿತರು, ರೈತರು, ಮಹಿಳೆಯರು, ಅಲ್ಪಸಂಖ್ಯಾತರು ಮತ್ತು ವಿದಾರ್ಥಿಗಳ ಪರ ನಾವು ಸದಾ ದನಿ ಎತ್ತುತ್ತೇವೆ. ಅದು ನಮ್ಮ ಹಕ್ಕು. ಹತ್ತು ವರ್ಷಗಳಿಂದ ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿರುವ ವಿದ್ಯಾರ್ಥಿ ನಾಯಕರು, ಹೋರಾಟಗಾರರು, ಪ್ರಗತಿಪರ ಚಿಂತಕರನ್ನು ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

“ಭೀಮಾ ಕೊರೆಂಗಾವ್‌ನಲ್ಲಿ ಕಾರ್ಮಿಕರು ಗುತ್ತಿಗೆ ಪದ್ಧತಿ ರದ್ದಾಗಬೇಕು ಎಂದು ಪ್ರತಿಭಟಿಸಿದ್ದ ಕಾರಣಕ್ಕಾಗಿ ಅವರ ಮೇಲೆ ಯುಎಪಿಎ ಅಡಿ ಕ್ರಮ ಜರುಗಿಸಿದ್ದರು. ಜನರಿಗೆ ಸಂವಿಧಾನದ ಅಡಿಯಲ್ಲಿ ಸರ್ಕಾರ ಮತ್ತು ಅದು ರೂಪಿಸುವ ನೀತಿಗಳ ವಿರುದ್ಧ ಪ್ರಶ್ನಿಸುವ ಹಕ್ಕಿದೆ. ಆದರೆ, ಎಲ್ಲ ರಾಜಕೀಯ ಪಕ್ಷಗಳು ಈ ಹಕ್ಕನ್ನು ನಾನಾ ರೂಪದಲ್ಲಿ ಕಸಿಯುತ್ತಿವೆ. ದೇವನಹಳ್ಳಿಯಲ್ಲಿ ರೈತನಿಗೆ ಅನ್ಯಾಯವಾದರೆ 25 ಕಿಲೋ ಮೀಟರ್‌ ದೂರದಲ್ಲಿರುವ ಸ್ವಾತಂತ್ರ್ಯ ಉದ್ಯಾವನಕ್ಕೆ ಬಂದು ಪ್ರತಿಭಟಿಸಬೇಕಾಗಿದೆ. ಹೀಗೆ ಪ್ರತಿಭಟಿಸುವ ಹಕ್ಕನ್ನು ಕೂಡ ಜನರಿಂದ ಕಿತ್ತುಕೊಳ್ಳಲಾಗಿದೆ” ಎಂದು ಎಐಎಸ್‌ಎ ಸದಸ್ಯ ಶರತ್ ಬೇಸರ ವ್ಯಕ್ತಪಡಿಸಿದರು.

ಆಲ್ ಇಂಡಿಯಾ ಲಾಯರ್ಸ್ ಅಸೋಷಿಯೇಷನ್ ಫಾರ್ ಜಸ್ಟೀಸ್‌ನ ಸದಸ್ಯೆ ಶಿಲ್ಪಾ, ಬಹುತ್ವ ಕರ್ನಾಟಕದ ತನ್ವೀರ್, ಅರತ್ರಿಕಾ, ನರಸಿಂಹಮೂರ್ತಿ, ವಿನಯ್ ಕುಮಾರ್ ಮತ್ತಿತರು ಹಾಜರಿದ್ದರು.

ಇದನ್ನೂ ಓದಿ : ನೀಟ್-ಯುಜಿ ವಿವಾದ: ಸುಪ್ರೀಂ ಕೋರ್ಟಿನಿಂದ ಎನ್‌ಟಿಎ-ಕೇಂದ್ರಕ್ಕೆ ನೋಟಿಸ್, ಹೈಕೋರ್ಟ್‌ ವಿಚಾರಣೆಗೆ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...