Homeಕರ್ನಾಟಕಬೆಂಗಳೂರು | ಯುಎಪಿಎ ಕಾನೂನು ರದ್ದಾಗಬೇಕು: ಪ್ರಗತಿಪರ ಸಂಘಟನೆಗಳಿಂದ ಒಕ್ಕೊರಲ ಆಗ್ರಹ

ಬೆಂಗಳೂರು | ಯುಎಪಿಎ ಕಾನೂನು ರದ್ದಾಗಬೇಕು: ಪ್ರಗತಿಪರ ಸಂಘಟನೆಗಳಿಂದ ಒಕ್ಕೊರಲ ಆಗ್ರಹ

- Advertisement -
- Advertisement -

ಮಾನವ ಹಕ್ಕುಗಳ ಹೋರಾಟಗಾರ್ತಿ ಅರುಂಧತಿ ರಾಯ್ ಮತ್ತು ಪ್ರೊ. ಶೇಖ್‌ ಶೌಕತ್‌ ಹುಸೇನ್‌ ಅವರ ಮೇಲೆ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಲು ಅನುಮತಿ ನೀಡಿರುವುದನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರಗತಿಪರ ಸಂಘಟನೆಗಳ ವತಿಯಿಂದ ಗುರುವಾರ (ಜೂನ್ 20) ಪ್ರತಿಭಟನೆ ನಡೆಯಿತು.

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಿಂದ ಅನೇಕ ಪ್ರಗತಿಪರ ಚಿಂತಕರನ್ನು ಕಠೋರ ಮತ್ತು ಪ್ರಜಾಪ್ರಭುತ್ವ ವಿರೋಧಿ ಕಾನೂನಾದ ಯುಎಪಿಎ ಕಾಯ್ದೆ ಅಡಿ ಬಂಧಿಸಿ ಬಾಯಿ ಮುಚ್ಚಿಸುತ್ತಿದೆ ಎಂದು ಪ್ರಗತಿಪರ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಕಾಶ್ಮೀರಿ ಜನರ ಸಮಸ್ಯೆಗಳ ಕುರಿತು 2010ರಲ್ಲಿ ಮಾತನಾಡಿದಕ್ಕಾಗಿ ಇಬ್ಬರ ಮೇಲೆ ಈಗ ಯುಎಪಿಎ ಅಡಿ ಕ್ರಮ ಜರುಗಿಸಲು ದೆಹಲಿಯ ಲೆಫ್ಟಿನೆಂಟ್ ಗವರ್ನರ್‌ ವಿಕೆ. ಸಕ್ಸೇನಾ ದೆಹಲಿ ಪೊಲೀಸರಿಗೆ ಅನುಮತಿ ನೀಡಿರುವುದು ಖಂಡನೀಯ ಎಂದು ಎಐಸಿಸಿಟಿಯು, ಎಐಪಿಡಬಲ್ಯೂಎ, ಎಐಎಸ್‌ಎ, ಸಿಪಿಐಎಂಎಲ್‌, ಆರ್‌ಐಎ ಸಂಘಟನೆಗಳ ಮುಖಂಡರು ಒಕ್ಕೊರಳಿನಿಂದ ಹೇಳಿದರು.

ವಕೀಲ ಕ್ಲಿಫ್ಟನ್.‌ ಡಿ. ರೊಜಾರಿಯೊ ಮಾತನಾಡಿ, “ಯಾವುದೇ ಕಾನೂನಿನ ಪ್ರಕ್ರಿಯೆ ಇಲ್ಲದೆ ಕೇವಲ ಪ್ರಕರಣ ದಾಖಲಾದ ತಕ್ಷಣಕ್ಕೆ ವ್ಯಕ್ತಿಗಳನ್ನು ಬಂಧಿಸುವ ಯುಎಪಿಎ ಕಾಯ್ದೆಯು ಅಸಾಂವಿಧಾನಿಕವಾದ್ದದ್ದು. ವ್ಯಕ್ತಿಯ ಮೂಲಭೂತ ಹಕ್ಕುಗಳನ್ನು ಕಸಿಯುತ್ತದೆ. ದಲಿತರು, ರೈತರು, ಮಹಿಳೆಯರು, ಅಲ್ಪಸಂಖ್ಯಾತರು ಮತ್ತು ವಿದಾರ್ಥಿಗಳ ಪರ ನಾವು ಸದಾ ದನಿ ಎತ್ತುತ್ತೇವೆ. ಅದು ನಮ್ಮ ಹಕ್ಕು. ಹತ್ತು ವರ್ಷಗಳಿಂದ ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿರುವ ವಿದ್ಯಾರ್ಥಿ ನಾಯಕರು, ಹೋರಾಟಗಾರರು, ಪ್ರಗತಿಪರ ಚಿಂತಕರನ್ನು ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

“ಭೀಮಾ ಕೊರೆಂಗಾವ್‌ನಲ್ಲಿ ಕಾರ್ಮಿಕರು ಗುತ್ತಿಗೆ ಪದ್ಧತಿ ರದ್ದಾಗಬೇಕು ಎಂದು ಪ್ರತಿಭಟಿಸಿದ್ದ ಕಾರಣಕ್ಕಾಗಿ ಅವರ ಮೇಲೆ ಯುಎಪಿಎ ಅಡಿ ಕ್ರಮ ಜರುಗಿಸಿದ್ದರು. ಜನರಿಗೆ ಸಂವಿಧಾನದ ಅಡಿಯಲ್ಲಿ ಸರ್ಕಾರ ಮತ್ತು ಅದು ರೂಪಿಸುವ ನೀತಿಗಳ ವಿರುದ್ಧ ಪ್ರಶ್ನಿಸುವ ಹಕ್ಕಿದೆ. ಆದರೆ, ಎಲ್ಲ ರಾಜಕೀಯ ಪಕ್ಷಗಳು ಈ ಹಕ್ಕನ್ನು ನಾನಾ ರೂಪದಲ್ಲಿ ಕಸಿಯುತ್ತಿವೆ. ದೇವನಹಳ್ಳಿಯಲ್ಲಿ ರೈತನಿಗೆ ಅನ್ಯಾಯವಾದರೆ 25 ಕಿಲೋ ಮೀಟರ್‌ ದೂರದಲ್ಲಿರುವ ಸ್ವಾತಂತ್ರ್ಯ ಉದ್ಯಾವನಕ್ಕೆ ಬಂದು ಪ್ರತಿಭಟಿಸಬೇಕಾಗಿದೆ. ಹೀಗೆ ಪ್ರತಿಭಟಿಸುವ ಹಕ್ಕನ್ನು ಕೂಡ ಜನರಿಂದ ಕಿತ್ತುಕೊಳ್ಳಲಾಗಿದೆ” ಎಂದು ಎಐಎಸ್‌ಎ ಸದಸ್ಯ ಶರತ್ ಬೇಸರ ವ್ಯಕ್ತಪಡಿಸಿದರು.

ಆಲ್ ಇಂಡಿಯಾ ಲಾಯರ್ಸ್ ಅಸೋಷಿಯೇಷನ್ ಫಾರ್ ಜಸ್ಟೀಸ್‌ನ ಸದಸ್ಯೆ ಶಿಲ್ಪಾ, ಬಹುತ್ವ ಕರ್ನಾಟಕದ ತನ್ವೀರ್, ಅರತ್ರಿಕಾ, ನರಸಿಂಹಮೂರ್ತಿ, ವಿನಯ್ ಕುಮಾರ್ ಮತ್ತಿತರು ಹಾಜರಿದ್ದರು.

ಇದನ್ನೂ ಓದಿ : ನೀಟ್-ಯುಜಿ ವಿವಾದ: ಸುಪ್ರೀಂ ಕೋರ್ಟಿನಿಂದ ಎನ್‌ಟಿಎ-ಕೇಂದ್ರಕ್ಕೆ ನೋಟಿಸ್, ಹೈಕೋರ್ಟ್‌ ವಿಚಾರಣೆಗೆ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...