Homeಕರ್ನಾಟಕಬೆಂಗಳೂರು : IIScಯಲ್ಲಿ 'ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ' ಖಂಡಿಸಿ ಪ್ರತಿಭಟನೆ

ಬೆಂಗಳೂರು : IIScಯಲ್ಲಿ ‘ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ’ ಖಂಡಿಸಿ ಪ್ರತಿಭಟನೆ

ಪ್ಯಾಲೆಸ್ತೀನ್ ಧ್ವಜ ಕಿತ್ತೊಯ್ದ ಪೊಲೀಸರು

- Advertisement -
- Advertisement -

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ)ಯಲ್ಲಿ ‘ಭಾರತ-ಇಸ್ರೇಲ್‌ ವ್ಯಾಪಾರ ಶೃಂಗಸಭೆ’ ಆಯೋಜಿಸಿರುವುದನ್ನು ಖಂಡಿಸಿ ಹೋರಾಟಗಾರರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಐಐಎಸ್‌ಸಿ ಸಂಸ್ಥೆಯ ಕ್ಯಾಂಪಸ್ ಒಳಗೆ ಪ್ರತಿಭಟನೆ ಮತ್ತು ಹೊರಗೆ ಸುದ್ದಿಗೋಷ್ಠಿ ನಡೆಯಿತು. ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್‌ಸಿ), ಭಾರತೀಯ ಮ್ಯಾನೇಜ್ಮೆಂಟ್ ಸಂಸ್ಥೆ(ಐಐಎಂ), ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು (ಐಐಐಟಿಬಿ) ರಾಷ್ಟ್ರೀಯ ಉನ್ನತ ಸಂಶೊಧನಾ ಸಂಸ್ಥೆ(ಎನ್‌ಐಎಸ್‌) ಹಾಗೂ ಕರ್ನಾಟಕ ಸರ್ಕಾರ ಶೃಂಗಸಭೆಯಲ್ಲಿ ತೊಡಗಿಸಿಕೊಂಡಿದ್ದನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು.

ಜಗತ್ತಿನಾದ್ಯಂತ ವಿಶ್ವವಿದ್ಯಾಲಯಗಳು ಇಸ್ರೇಲ್‌ನೊಂದಿಗಿನ ಸಂಬಂಧಕ್ಕೆ ಕಡಿವಾಣ ಹಾಕುತ್ತಿರುವಾಗ, ನಮ್ಮ ಉನ್ನತ ಶಿಕ್ಷಣ ಸಂಸ್ಥೆಗಳು ಇಸ್ರೇಲ್ ಜೊತೆ ಕೈಜೋಡಿಸಿ, ನ್ಯಾಯ ಹಾಗೂ ಅಂತಾರಾಷ್ಟ್ರೀಯ ಕಾನೂನಿನ ವಿರುದ್ಧ ನಿಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗಾಝಾದಲ್ಲಿ ನರಮೇಧ ಮತ್ತು ಲೆಬಾನಾನಿ ಜನತೆಯ ವಿರುದ್ಧ ಹಿಂಸಾತ್ಮಕ ಕ್ರಿಯೆಗಳನ್ನು ತೀವ್ರಗೊಳಿಸುತ್ತಾ..ಇಸ್ರೇಲ್ ಸಾವಿರಾರು ಜನರ ಹತ್ಯೆಗೆ ಕಾರಣವಾಗಿರುವ ಸಮಯದಲ್ಲೇ ಐಐಎಸ್‌ಇಯು ತನ್ನ ಸಭಾಂಗಣವನ್ನು ಸಮಾವೇಶಕ್ಕೆ ನೀಡಿರುವುದ್ದಕ್ಕೆ ಪ್ರತಿಭಟನೆ ಮತ್ತು ಸುದ್ದಿಗೋಷ್ಟಿಯಲ್ಲಿದ್ದ ಹೋರಾಟಗಾರರು, ವಿದ್ವಾಂಸರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಭಾರತ ಮತ್ತು ಪ್ಯಾಲೆಸ್ತೀನ್ ಬಾವುಟಗಳನ್ನು ಒಟ್ಟಿಗೆ ಪ್ರದರ್ಶಿಸಲಾಯಿತು. ನ್ಯಾಯ ಮತ್ತು ಶಾಂತಿಗಾಗಿ ಬೆಂಗಳೂರು ಸಂಸ್ಥೆಯ ಐಶ್ವರ್ಯ ಅವರು ಸುದ್ದಿಗೋಷ್ಠಿ ಪ್ರಾರಂಭಿಸುತ್ತಿದ್ದಂತೆಯೇ, ಪೋಲಿಸರು ಬಂದು ಪ್ಯಾಲೆಸ್ತೀನ್ ಬಾವುಟವನ್ನು ತೆಗೆಯಬೇಕೆಂದು ಬಲವಂತ ಮಾಡುತ್ತಾ ಸುದ್ದಿಗೋಷ್ಠಿಯನ್ನು ನಿಲ್ಲಿಸಲು ಪ್ರಯತ್ನಿಸಿದರು. ಪೊಲೀಸರು ಪ್ಯಾಲೆಸ್ತೀನ್ ಬಾವುಟವನ್ನು ಒಬ್ಬ ಪ್ರತಿಭಟನಾಕಾರರ ಕೈಯಿಂದ ಕಿತ್ತೊಯ್ದ ನಂತರವೇ ಸುದ್ದಿಗೋಷ್ಠಿಯನ್ನು ಮುಂದುವರೆಸಲಾಯಿತು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಲ್ ಇಂಡಿಯಾ ಲಾಯರ್ಸ್‌ ಅಸೋಸಿಯೇಷನ್ (ಎಐಎಲ್‌ಎ) ಕ್ಲಿಫ್ಟನ್ ರೊಜಾರಿಯೋ ಅವರು “ನಾವು ಪ್ಯಾಲೆಸ್ತೀನ್‌ನ ಮಕ್ಕಳು ಮಹಿಳೆಯರ ಹತ್ಯೆಯನ್ನೊಳಗೊಂಡ ನರಮೇಧವನ್ನು ನೋಡುತ್ತಿದ್ದೇವೆ. ಹೀಗಿರುವಾಗ ನಮ್ಮ ಸಂಸ್ಥೆಗಳು ಇಸ್ರೇಲ್ ಜೊತೆ ವಾಣಿಜ್ಯ ಸಂಬಂಧಗಳನ್ನು ಬೆಳೆಸುತ್ತಿವೆ. ಇಸ್ರೇಲ್ ಜೊತೆ ಸಂಬಂಧಗಳನ್ನು ಬೆಳೆಸದಂತೆ ಸರ್ಕಾರಗಳಿಗೆ ಅಂತಾರಾಷ್ಟ್ರೀಯ ನ್ಯಾಯಾಲ ಆದೇಶ ನೀಡುತ್ತಿರುವಂತೆಯೇ ಐಐಎಸ್‌ಯು ಇಂದಿನ ಸಮಾವೇಶದಂತಹ ಕಾರ್ಯಕ್ರಮಗಳಿಗೆ ಆಶ್ರಯ ನೀಡಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ” ಎಂದರು.

ಖಗೋಳ ವಿಜ್ಞಾನಿ ಪ್ರಜ್ವಲ್ ಶಾಸ್ತ್ರಿ ಮಾತನಾಡಿ, ಐಐಎಸ್‌ಸಿ ಸಂಸ್ಥೆಯ ವ್ಯವಹಾರ ನೀತಿಗಳನ್ನು ಪ್ರಶ್ನಿಸಿದರು. “ನಾವು ಕೇಳಬೇಕಾಗಿರುವುದು ಏನೆಂದರೆ, ಈ ಸಂಸ್ಥೆಗಳು ಶಾಂತಿ ಮತ್ತು ಸಮಾತೆಯ ಬಾಳ್ವೆಗೋಸ್ಕರ ಜ್ಞಾನಾರ್ಥಿಗಳಾಗಿದ್ದಾವೆಯೇ? ಅಥವಾ ಹಿಂಸೆ, ಘರ್ಷಣೆ ಕದನಗಳನ್ನು ಪ್ರೋತ್ಸಾಹಿಸುತ್ತಿರುವೆಯೇ?. ಇಂತಹ ಸಮಾವೇಶಗಳನ್ನು ನಡೆಸುವುವುದು ಪ್ಯಾಲೆಸ್ತೀನ್‌ನಲ್ಲಿ ನಡೆಯುತ್ತಿರುವ ನರಮೇಧವನ್ನು ಸಮರ್ಥಿಸಿದಂತೆ. ನಾವು ತಮ್ಮ ಸಭಾಂಗಣವನ್ನು ಮಾತ್ರ ಬಾಡಿಗೆಗೆ ನೀಡಿದ್ದೇವೆ ಎಂಬ ಐಐಎಸ್‌ಇಯ ಹೇಳಿಕೆಯನ್ನು ಪ್ರಶ್ನಿಸಬೇಕಾಗಿದೆ. ಅಂಬಾನಿಯಂತಹ ವಾಣಿಜ್ಯದಾರರು ಸಭಾಂಗಣದ ಲಭ್ಯತೆ ಕೋರಿದ್ದರೆ, ಪರಿಣಾಮಗಳನ್ನು ಪರಿಗಣಿಸದಯೇ ಐಐಎಸ್‌ಸಿ ಸಭಾಂಗಣವನ್ನು ನೀಡುತ್ತಿತ್ತೇ?” ಎಂದು ಪ್ರಶ್ನಿಸಿದರು.

“ಪ್ಯಾಲೆಸ್ತೀನ್‌ ಜನತೆಯ ಮೇಲೆ ಅಸ್ತ್ರಗಳನ್ನು ಬಳಸಿ ಇಸ್ರೇಲ್ ತನ್ನ ಅಸ್ತ್ರಗಳ ಶೋಧನೆ ಮಾಡುತ್ತಿದೆ. ಅದನ್ನು ಈ ಸಮಾವೇಶವು ಬೆಂಬಲಿಸುವುದೇ? ನಮ್ಮ ಶೈಕ್ಷಣಿಕ ಸಂಸ್ಥೆಗಳು ಇಂತಹದನ್ನು ಪ್ರಶ್ನೆಯಿಲ್ಲದೆ ಬೆಂಬಲಿಸಲು ನೈತಿಕತೆ ಇಲ್ಲವೇ? ಎಂದು ಸ್ತ್ರೀವಾದಿ ಚಳುವಳಿಗಾರರಾದ ಮಧು ಭೂಷಣ್ ಖಂಡನೆ ವ್ಯಕ್ತಪಡಿಸಿದರು. ಪ್ಯಾಲೆಸ್ತೀನ್ ಜನರಿಗೂ ಜೀವಿಸುವ ಹಕ್ಕಿದೆ. ಅದರೊಂದಿಗೆ ನಾವು ನಿಲ್ಲಬೇಕು. ನಮ್ಮ ಶೆಕ್ಷಣಿಕ ಸಂಸ್ಥೆಗಳ ಈ ನಡೆಯಿಂದ ನಮಗೆ ಬಹಳ ನೋವುಂಟಾಗಿದೆ” ಎಂದು ಹೇಳಿದರು.

ರಕ್ಷಣಾ ಮತ್ತು ಶಸ್ತ್ರಾಸ್ತ್ರ ವ್ಯಾಪಾರದ ಮೇಲೆ ಕೇಂದ್ರೀಕರಿಸಿದ ಈ ಸಮಾವೇಶವು, ಇಸ್ರೇಲ್ ವಿರುದ್ಧದ ಶಸ್ತ್ರಾಸ್ತ್ರ ನಿರ್ಬಂಧದ ಜಾಗತಿಕ ಕರೆಗಳಿಗೆ ವಿರುದ್ಧವಾಗಿವೆ ಎಂದು ಪ್ರತಿಭಟನಾಕಾರರು ಪ್ರತಿಪಾದಿಸಿದರು. ಇಸ್ರೇಲ್‌ನ ಕ್ರಮಗಳನ್ನು ಬೆಂಬಲಿಸದಂತೆ ಸಂಸ್ಥೆಗಳನ್ನು ಒತ್ತಾಯಿಸುವ ಇತ್ತೀಚಿನ ಅಂತಾರಾಷ್ಟ್ರೀಯ ನ್ಯಾಯಾಲಯದ (ಐಸಿಜೆ) ತೀರ್ಪಿನ ಬೆಳಕಿನಲ್ಲಿ, ಈ ಸಮಾವೇಶದಲ್ಲಿ ಕರ್ನಾಟಕ ಸರ್ಕಾರದ ಒಳಗೊಳ್ಳುವಿಕೆಯನ್ನೂ ಖಂಡಿಸಿದರು.

ಜಗತ್ತಿನಾದ್ಯಂತ ಅನೇಕರು ಪ್ಯಾಲೆಸ್ತೀನ್‌ನೊಂದಿಗೆ ಒಗ್ಗಟ್ಟಿನಿಂದ BDS( Boycott, Divestment, Sanctions) ಚಳುವಳಿ ಮೂಲಕ ಇಸ್ರೇಲ್‌ನಿಂದ ಹೂಡಿಕೆಯನ್ನು ತ್ಯಜಿಸಿದ್ದಾರೆ. ಐಐಎಸ್‌ಸಿ ಮತ್ತು ಇತರ ಶೈಕ್ಷಣಿಕ ಸಂಸ್ಥೆಗಳು ಕೂಡ ಈ ಜಾಗತಿಕ ಚಳುವಳಿಗೆ ಸೇರಲು ಸಾರ್ವಜನಿಕರಿಂದ ಮನವಿ ಮಾಡಲಾಯಿತು. ಈ ಸಂಸ್ಥೆಗಳು ಮಾನವ ಹಕ್ಕುಗಳು ಮತ್ತು ನ್ಯಾಯದ ಸಾರ್ವತ್ರಿಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು. ಇಸ್ರೇಲ್ ವಿರುದ್ಧ ಶಸ್ತ್ರಾಸ್ತ್ರ ನಿರ್ಬಂಧದ ಸಾಮೂಹಿಕ ಕರೆಗೆ ಸೇರಬೇಕೆಂದು ಒತ್ತಾಯಿಸಿದರು.

ಭಾರತ-ಇಸ್ರೇಲ್ ಶೃಂಗಸಭೆ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನ ಸಭಾಂಗಣದಲ್ಲಿ ಥಿಂಕ್ ಇಂಡಿಯಾ, ಇಂಡಿಯನ್ ಚೇಂಬರ್ ಆಫ್ ಇಂಟರ್‌ನ್ಯಾಷನಲ್ ಬ್ಯುಸಿನೆಸ್ ಮತ್ತು ಮೈಸೂರು ಲ್ಯಾನ್ಸರ್ಸ್ ಹೆರಿಟೇಜ್ ಫೌಂಡೇಶನ್ ಇಂದು (ಸೆ.23) ಭಾರತ-ಇಸ್ರೇಲ್ ಶೃಂಗಸಭೆ ಕಾರ್ಯಕ್ರಮವನ್ನು ಆಯೋಜಿಸಿದೆ.

ಇದನ್ನೂ ಓದಿ : ‘ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ’ ರದ್ದುಗೊಳಿಸುವಂತೆ ವಿದ್ಯಾರ್ಥಿಗಳು, ಅಧ್ಯಾಪಕರಿಂದ ಬೆಂಗಳೂರಿನ IIScಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...