Homeಕರ್ನಾಟಕಬೆಂಗಳೂರು : IIScಯಲ್ಲಿ 'ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ' ಖಂಡಿಸಿ ಪ್ರತಿಭಟನೆ

ಬೆಂಗಳೂರು : IIScಯಲ್ಲಿ ‘ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ’ ಖಂಡಿಸಿ ಪ್ರತಿಭಟನೆ

ಪ್ಯಾಲೆಸ್ತೀನ್ ಧ್ವಜ ಕಿತ್ತೊಯ್ದ ಪೊಲೀಸರು

- Advertisement -
- Advertisement -

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ)ಯಲ್ಲಿ ‘ಭಾರತ-ಇಸ್ರೇಲ್‌ ವ್ಯಾಪಾರ ಶೃಂಗಸಭೆ’ ಆಯೋಜಿಸಿರುವುದನ್ನು ಖಂಡಿಸಿ ಹೋರಾಟಗಾರರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಐಐಎಸ್‌ಸಿ ಸಂಸ್ಥೆಯ ಕ್ಯಾಂಪಸ್ ಒಳಗೆ ಪ್ರತಿಭಟನೆ ಮತ್ತು ಹೊರಗೆ ಸುದ್ದಿಗೋಷ್ಠಿ ನಡೆಯಿತು. ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್‌ಸಿ), ಭಾರತೀಯ ಮ್ಯಾನೇಜ್ಮೆಂಟ್ ಸಂಸ್ಥೆ(ಐಐಎಂ), ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು (ಐಐಐಟಿಬಿ) ರಾಷ್ಟ್ರೀಯ ಉನ್ನತ ಸಂಶೊಧನಾ ಸಂಸ್ಥೆ(ಎನ್‌ಐಎಸ್‌) ಹಾಗೂ ಕರ್ನಾಟಕ ಸರ್ಕಾರ ಶೃಂಗಸಭೆಯಲ್ಲಿ ತೊಡಗಿಸಿಕೊಂಡಿದ್ದನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು.

ಜಗತ್ತಿನಾದ್ಯಂತ ವಿಶ್ವವಿದ್ಯಾಲಯಗಳು ಇಸ್ರೇಲ್‌ನೊಂದಿಗಿನ ಸಂಬಂಧಕ್ಕೆ ಕಡಿವಾಣ ಹಾಕುತ್ತಿರುವಾಗ, ನಮ್ಮ ಉನ್ನತ ಶಿಕ್ಷಣ ಸಂಸ್ಥೆಗಳು ಇಸ್ರೇಲ್ ಜೊತೆ ಕೈಜೋಡಿಸಿ, ನ್ಯಾಯ ಹಾಗೂ ಅಂತಾರಾಷ್ಟ್ರೀಯ ಕಾನೂನಿನ ವಿರುದ್ಧ ನಿಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗಾಝಾದಲ್ಲಿ ನರಮೇಧ ಮತ್ತು ಲೆಬಾನಾನಿ ಜನತೆಯ ವಿರುದ್ಧ ಹಿಂಸಾತ್ಮಕ ಕ್ರಿಯೆಗಳನ್ನು ತೀವ್ರಗೊಳಿಸುತ್ತಾ..ಇಸ್ರೇಲ್ ಸಾವಿರಾರು ಜನರ ಹತ್ಯೆಗೆ ಕಾರಣವಾಗಿರುವ ಸಮಯದಲ್ಲೇ ಐಐಎಸ್‌ಇಯು ತನ್ನ ಸಭಾಂಗಣವನ್ನು ಸಮಾವೇಶಕ್ಕೆ ನೀಡಿರುವುದ್ದಕ್ಕೆ ಪ್ರತಿಭಟನೆ ಮತ್ತು ಸುದ್ದಿಗೋಷ್ಟಿಯಲ್ಲಿದ್ದ ಹೋರಾಟಗಾರರು, ವಿದ್ವಾಂಸರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಭಾರತ ಮತ್ತು ಪ್ಯಾಲೆಸ್ತೀನ್ ಬಾವುಟಗಳನ್ನು ಒಟ್ಟಿಗೆ ಪ್ರದರ್ಶಿಸಲಾಯಿತು. ನ್ಯಾಯ ಮತ್ತು ಶಾಂತಿಗಾಗಿ ಬೆಂಗಳೂರು ಸಂಸ್ಥೆಯ ಐಶ್ವರ್ಯ ಅವರು ಸುದ್ದಿಗೋಷ್ಠಿ ಪ್ರಾರಂಭಿಸುತ್ತಿದ್ದಂತೆಯೇ, ಪೋಲಿಸರು ಬಂದು ಪ್ಯಾಲೆಸ್ತೀನ್ ಬಾವುಟವನ್ನು ತೆಗೆಯಬೇಕೆಂದು ಬಲವಂತ ಮಾಡುತ್ತಾ ಸುದ್ದಿಗೋಷ್ಠಿಯನ್ನು ನಿಲ್ಲಿಸಲು ಪ್ರಯತ್ನಿಸಿದರು. ಪೊಲೀಸರು ಪ್ಯಾಲೆಸ್ತೀನ್ ಬಾವುಟವನ್ನು ಒಬ್ಬ ಪ್ರತಿಭಟನಾಕಾರರ ಕೈಯಿಂದ ಕಿತ್ತೊಯ್ದ ನಂತರವೇ ಸುದ್ದಿಗೋಷ್ಠಿಯನ್ನು ಮುಂದುವರೆಸಲಾಯಿತು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಲ್ ಇಂಡಿಯಾ ಲಾಯರ್ಸ್‌ ಅಸೋಸಿಯೇಷನ್ (ಎಐಎಲ್‌ಎ) ಕ್ಲಿಫ್ಟನ್ ರೊಜಾರಿಯೋ ಅವರು “ನಾವು ಪ್ಯಾಲೆಸ್ತೀನ್‌ನ ಮಕ್ಕಳು ಮಹಿಳೆಯರ ಹತ್ಯೆಯನ್ನೊಳಗೊಂಡ ನರಮೇಧವನ್ನು ನೋಡುತ್ತಿದ್ದೇವೆ. ಹೀಗಿರುವಾಗ ನಮ್ಮ ಸಂಸ್ಥೆಗಳು ಇಸ್ರೇಲ್ ಜೊತೆ ವಾಣಿಜ್ಯ ಸಂಬಂಧಗಳನ್ನು ಬೆಳೆಸುತ್ತಿವೆ. ಇಸ್ರೇಲ್ ಜೊತೆ ಸಂಬಂಧಗಳನ್ನು ಬೆಳೆಸದಂತೆ ಸರ್ಕಾರಗಳಿಗೆ ಅಂತಾರಾಷ್ಟ್ರೀಯ ನ್ಯಾಯಾಲ ಆದೇಶ ನೀಡುತ್ತಿರುವಂತೆಯೇ ಐಐಎಸ್‌ಯು ಇಂದಿನ ಸಮಾವೇಶದಂತಹ ಕಾರ್ಯಕ್ರಮಗಳಿಗೆ ಆಶ್ರಯ ನೀಡಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ” ಎಂದರು.

ಖಗೋಳ ವಿಜ್ಞಾನಿ ಪ್ರಜ್ವಲ್ ಶಾಸ್ತ್ರಿ ಮಾತನಾಡಿ, ಐಐಎಸ್‌ಸಿ ಸಂಸ್ಥೆಯ ವ್ಯವಹಾರ ನೀತಿಗಳನ್ನು ಪ್ರಶ್ನಿಸಿದರು. “ನಾವು ಕೇಳಬೇಕಾಗಿರುವುದು ಏನೆಂದರೆ, ಈ ಸಂಸ್ಥೆಗಳು ಶಾಂತಿ ಮತ್ತು ಸಮಾತೆಯ ಬಾಳ್ವೆಗೋಸ್ಕರ ಜ್ಞಾನಾರ್ಥಿಗಳಾಗಿದ್ದಾವೆಯೇ? ಅಥವಾ ಹಿಂಸೆ, ಘರ್ಷಣೆ ಕದನಗಳನ್ನು ಪ್ರೋತ್ಸಾಹಿಸುತ್ತಿರುವೆಯೇ?. ಇಂತಹ ಸಮಾವೇಶಗಳನ್ನು ನಡೆಸುವುವುದು ಪ್ಯಾಲೆಸ್ತೀನ್‌ನಲ್ಲಿ ನಡೆಯುತ್ತಿರುವ ನರಮೇಧವನ್ನು ಸಮರ್ಥಿಸಿದಂತೆ. ನಾವು ತಮ್ಮ ಸಭಾಂಗಣವನ್ನು ಮಾತ್ರ ಬಾಡಿಗೆಗೆ ನೀಡಿದ್ದೇವೆ ಎಂಬ ಐಐಎಸ್‌ಇಯ ಹೇಳಿಕೆಯನ್ನು ಪ್ರಶ್ನಿಸಬೇಕಾಗಿದೆ. ಅಂಬಾನಿಯಂತಹ ವಾಣಿಜ್ಯದಾರರು ಸಭಾಂಗಣದ ಲಭ್ಯತೆ ಕೋರಿದ್ದರೆ, ಪರಿಣಾಮಗಳನ್ನು ಪರಿಗಣಿಸದಯೇ ಐಐಎಸ್‌ಸಿ ಸಭಾಂಗಣವನ್ನು ನೀಡುತ್ತಿತ್ತೇ?” ಎಂದು ಪ್ರಶ್ನಿಸಿದರು.

“ಪ್ಯಾಲೆಸ್ತೀನ್‌ ಜನತೆಯ ಮೇಲೆ ಅಸ್ತ್ರಗಳನ್ನು ಬಳಸಿ ಇಸ್ರೇಲ್ ತನ್ನ ಅಸ್ತ್ರಗಳ ಶೋಧನೆ ಮಾಡುತ್ತಿದೆ. ಅದನ್ನು ಈ ಸಮಾವೇಶವು ಬೆಂಬಲಿಸುವುದೇ? ನಮ್ಮ ಶೈಕ್ಷಣಿಕ ಸಂಸ್ಥೆಗಳು ಇಂತಹದನ್ನು ಪ್ರಶ್ನೆಯಿಲ್ಲದೆ ಬೆಂಬಲಿಸಲು ನೈತಿಕತೆ ಇಲ್ಲವೇ? ಎಂದು ಸ್ತ್ರೀವಾದಿ ಚಳುವಳಿಗಾರರಾದ ಮಧು ಭೂಷಣ್ ಖಂಡನೆ ವ್ಯಕ್ತಪಡಿಸಿದರು. ಪ್ಯಾಲೆಸ್ತೀನ್ ಜನರಿಗೂ ಜೀವಿಸುವ ಹಕ್ಕಿದೆ. ಅದರೊಂದಿಗೆ ನಾವು ನಿಲ್ಲಬೇಕು. ನಮ್ಮ ಶೆಕ್ಷಣಿಕ ಸಂಸ್ಥೆಗಳ ಈ ನಡೆಯಿಂದ ನಮಗೆ ಬಹಳ ನೋವುಂಟಾಗಿದೆ” ಎಂದು ಹೇಳಿದರು.

ರಕ್ಷಣಾ ಮತ್ತು ಶಸ್ತ್ರಾಸ್ತ್ರ ವ್ಯಾಪಾರದ ಮೇಲೆ ಕೇಂದ್ರೀಕರಿಸಿದ ಈ ಸಮಾವೇಶವು, ಇಸ್ರೇಲ್ ವಿರುದ್ಧದ ಶಸ್ತ್ರಾಸ್ತ್ರ ನಿರ್ಬಂಧದ ಜಾಗತಿಕ ಕರೆಗಳಿಗೆ ವಿರುದ್ಧವಾಗಿವೆ ಎಂದು ಪ್ರತಿಭಟನಾಕಾರರು ಪ್ರತಿಪಾದಿಸಿದರು. ಇಸ್ರೇಲ್‌ನ ಕ್ರಮಗಳನ್ನು ಬೆಂಬಲಿಸದಂತೆ ಸಂಸ್ಥೆಗಳನ್ನು ಒತ್ತಾಯಿಸುವ ಇತ್ತೀಚಿನ ಅಂತಾರಾಷ್ಟ್ರೀಯ ನ್ಯಾಯಾಲಯದ (ಐಸಿಜೆ) ತೀರ್ಪಿನ ಬೆಳಕಿನಲ್ಲಿ, ಈ ಸಮಾವೇಶದಲ್ಲಿ ಕರ್ನಾಟಕ ಸರ್ಕಾರದ ಒಳಗೊಳ್ಳುವಿಕೆಯನ್ನೂ ಖಂಡಿಸಿದರು.

ಜಗತ್ತಿನಾದ್ಯಂತ ಅನೇಕರು ಪ್ಯಾಲೆಸ್ತೀನ್‌ನೊಂದಿಗೆ ಒಗ್ಗಟ್ಟಿನಿಂದ BDS( Boycott, Divestment, Sanctions) ಚಳುವಳಿ ಮೂಲಕ ಇಸ್ರೇಲ್‌ನಿಂದ ಹೂಡಿಕೆಯನ್ನು ತ್ಯಜಿಸಿದ್ದಾರೆ. ಐಐಎಸ್‌ಸಿ ಮತ್ತು ಇತರ ಶೈಕ್ಷಣಿಕ ಸಂಸ್ಥೆಗಳು ಕೂಡ ಈ ಜಾಗತಿಕ ಚಳುವಳಿಗೆ ಸೇರಲು ಸಾರ್ವಜನಿಕರಿಂದ ಮನವಿ ಮಾಡಲಾಯಿತು. ಈ ಸಂಸ್ಥೆಗಳು ಮಾನವ ಹಕ್ಕುಗಳು ಮತ್ತು ನ್ಯಾಯದ ಸಾರ್ವತ್ರಿಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು. ಇಸ್ರೇಲ್ ವಿರುದ್ಧ ಶಸ್ತ್ರಾಸ್ತ್ರ ನಿರ್ಬಂಧದ ಸಾಮೂಹಿಕ ಕರೆಗೆ ಸೇರಬೇಕೆಂದು ಒತ್ತಾಯಿಸಿದರು.

ಭಾರತ-ಇಸ್ರೇಲ್ ಶೃಂಗಸಭೆ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನ ಸಭಾಂಗಣದಲ್ಲಿ ಥಿಂಕ್ ಇಂಡಿಯಾ, ಇಂಡಿಯನ್ ಚೇಂಬರ್ ಆಫ್ ಇಂಟರ್‌ನ್ಯಾಷನಲ್ ಬ್ಯುಸಿನೆಸ್ ಮತ್ತು ಮೈಸೂರು ಲ್ಯಾನ್ಸರ್ಸ್ ಹೆರಿಟೇಜ್ ಫೌಂಡೇಶನ್ ಇಂದು (ಸೆ.23) ಭಾರತ-ಇಸ್ರೇಲ್ ಶೃಂಗಸಭೆ ಕಾರ್ಯಕ್ರಮವನ್ನು ಆಯೋಜಿಸಿದೆ.

ಇದನ್ನೂ ಓದಿ : ‘ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ’ ರದ್ದುಗೊಳಿಸುವಂತೆ ವಿದ್ಯಾರ್ಥಿಗಳು, ಅಧ್ಯಾಪಕರಿಂದ ಬೆಂಗಳೂರಿನ IIScಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...