Homeಕರ್ನಾಟಕಬೆಂಗಳೂರು : IIScಯಲ್ಲಿ 'ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ' ಖಂಡಿಸಿ ಪ್ರತಿಭಟನೆ

ಬೆಂಗಳೂರು : IIScಯಲ್ಲಿ ‘ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ’ ಖಂಡಿಸಿ ಪ್ರತಿಭಟನೆ

ಪ್ಯಾಲೆಸ್ತೀನ್ ಧ್ವಜ ಕಿತ್ತೊಯ್ದ ಪೊಲೀಸರು

- Advertisement -
- Advertisement -

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ)ಯಲ್ಲಿ ‘ಭಾರತ-ಇಸ್ರೇಲ್‌ ವ್ಯಾಪಾರ ಶೃಂಗಸಭೆ’ ಆಯೋಜಿಸಿರುವುದನ್ನು ಖಂಡಿಸಿ ಹೋರಾಟಗಾರರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಐಐಎಸ್‌ಸಿ ಸಂಸ್ಥೆಯ ಕ್ಯಾಂಪಸ್ ಒಳಗೆ ಪ್ರತಿಭಟನೆ ಮತ್ತು ಹೊರಗೆ ಸುದ್ದಿಗೋಷ್ಠಿ ನಡೆಯಿತು. ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್‌ಸಿ), ಭಾರತೀಯ ಮ್ಯಾನೇಜ್ಮೆಂಟ್ ಸಂಸ್ಥೆ(ಐಐಎಂ), ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು (ಐಐಐಟಿಬಿ) ರಾಷ್ಟ್ರೀಯ ಉನ್ನತ ಸಂಶೊಧನಾ ಸಂಸ್ಥೆ(ಎನ್‌ಐಎಸ್‌) ಹಾಗೂ ಕರ್ನಾಟಕ ಸರ್ಕಾರ ಶೃಂಗಸಭೆಯಲ್ಲಿ ತೊಡಗಿಸಿಕೊಂಡಿದ್ದನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು.

ಜಗತ್ತಿನಾದ್ಯಂತ ವಿಶ್ವವಿದ್ಯಾಲಯಗಳು ಇಸ್ರೇಲ್‌ನೊಂದಿಗಿನ ಸಂಬಂಧಕ್ಕೆ ಕಡಿವಾಣ ಹಾಕುತ್ತಿರುವಾಗ, ನಮ್ಮ ಉನ್ನತ ಶಿಕ್ಷಣ ಸಂಸ್ಥೆಗಳು ಇಸ್ರೇಲ್ ಜೊತೆ ಕೈಜೋಡಿಸಿ, ನ್ಯಾಯ ಹಾಗೂ ಅಂತಾರಾಷ್ಟ್ರೀಯ ಕಾನೂನಿನ ವಿರುದ್ಧ ನಿಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗಾಝಾದಲ್ಲಿ ನರಮೇಧ ಮತ್ತು ಲೆಬಾನಾನಿ ಜನತೆಯ ವಿರುದ್ಧ ಹಿಂಸಾತ್ಮಕ ಕ್ರಿಯೆಗಳನ್ನು ತೀವ್ರಗೊಳಿಸುತ್ತಾ..ಇಸ್ರೇಲ್ ಸಾವಿರಾರು ಜನರ ಹತ್ಯೆಗೆ ಕಾರಣವಾಗಿರುವ ಸಮಯದಲ್ಲೇ ಐಐಎಸ್‌ಇಯು ತನ್ನ ಸಭಾಂಗಣವನ್ನು ಸಮಾವೇಶಕ್ಕೆ ನೀಡಿರುವುದ್ದಕ್ಕೆ ಪ್ರತಿಭಟನೆ ಮತ್ತು ಸುದ್ದಿಗೋಷ್ಟಿಯಲ್ಲಿದ್ದ ಹೋರಾಟಗಾರರು, ವಿದ್ವಾಂಸರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಭಾರತ ಮತ್ತು ಪ್ಯಾಲೆಸ್ತೀನ್ ಬಾವುಟಗಳನ್ನು ಒಟ್ಟಿಗೆ ಪ್ರದರ್ಶಿಸಲಾಯಿತು. ನ್ಯಾಯ ಮತ್ತು ಶಾಂತಿಗಾಗಿ ಬೆಂಗಳೂರು ಸಂಸ್ಥೆಯ ಐಶ್ವರ್ಯ ಅವರು ಸುದ್ದಿಗೋಷ್ಠಿ ಪ್ರಾರಂಭಿಸುತ್ತಿದ್ದಂತೆಯೇ, ಪೋಲಿಸರು ಬಂದು ಪ್ಯಾಲೆಸ್ತೀನ್ ಬಾವುಟವನ್ನು ತೆಗೆಯಬೇಕೆಂದು ಬಲವಂತ ಮಾಡುತ್ತಾ ಸುದ್ದಿಗೋಷ್ಠಿಯನ್ನು ನಿಲ್ಲಿಸಲು ಪ್ರಯತ್ನಿಸಿದರು. ಪೊಲೀಸರು ಪ್ಯಾಲೆಸ್ತೀನ್ ಬಾವುಟವನ್ನು ಒಬ್ಬ ಪ್ರತಿಭಟನಾಕಾರರ ಕೈಯಿಂದ ಕಿತ್ತೊಯ್ದ ನಂತರವೇ ಸುದ್ದಿಗೋಷ್ಠಿಯನ್ನು ಮುಂದುವರೆಸಲಾಯಿತು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಲ್ ಇಂಡಿಯಾ ಲಾಯರ್ಸ್‌ ಅಸೋಸಿಯೇಷನ್ (ಎಐಎಲ್‌ಎ) ಕ್ಲಿಫ್ಟನ್ ರೊಜಾರಿಯೋ ಅವರು “ನಾವು ಪ್ಯಾಲೆಸ್ತೀನ್‌ನ ಮಕ್ಕಳು ಮಹಿಳೆಯರ ಹತ್ಯೆಯನ್ನೊಳಗೊಂಡ ನರಮೇಧವನ್ನು ನೋಡುತ್ತಿದ್ದೇವೆ. ಹೀಗಿರುವಾಗ ನಮ್ಮ ಸಂಸ್ಥೆಗಳು ಇಸ್ರೇಲ್ ಜೊತೆ ವಾಣಿಜ್ಯ ಸಂಬಂಧಗಳನ್ನು ಬೆಳೆಸುತ್ತಿವೆ. ಇಸ್ರೇಲ್ ಜೊತೆ ಸಂಬಂಧಗಳನ್ನು ಬೆಳೆಸದಂತೆ ಸರ್ಕಾರಗಳಿಗೆ ಅಂತಾರಾಷ್ಟ್ರೀಯ ನ್ಯಾಯಾಲ ಆದೇಶ ನೀಡುತ್ತಿರುವಂತೆಯೇ ಐಐಎಸ್‌ಯು ಇಂದಿನ ಸಮಾವೇಶದಂತಹ ಕಾರ್ಯಕ್ರಮಗಳಿಗೆ ಆಶ್ರಯ ನೀಡಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ” ಎಂದರು.

ಖಗೋಳ ವಿಜ್ಞಾನಿ ಪ್ರಜ್ವಲ್ ಶಾಸ್ತ್ರಿ ಮಾತನಾಡಿ, ಐಐಎಸ್‌ಸಿ ಸಂಸ್ಥೆಯ ವ್ಯವಹಾರ ನೀತಿಗಳನ್ನು ಪ್ರಶ್ನಿಸಿದರು. “ನಾವು ಕೇಳಬೇಕಾಗಿರುವುದು ಏನೆಂದರೆ, ಈ ಸಂಸ್ಥೆಗಳು ಶಾಂತಿ ಮತ್ತು ಸಮಾತೆಯ ಬಾಳ್ವೆಗೋಸ್ಕರ ಜ್ಞಾನಾರ್ಥಿಗಳಾಗಿದ್ದಾವೆಯೇ? ಅಥವಾ ಹಿಂಸೆ, ಘರ್ಷಣೆ ಕದನಗಳನ್ನು ಪ್ರೋತ್ಸಾಹಿಸುತ್ತಿರುವೆಯೇ?. ಇಂತಹ ಸಮಾವೇಶಗಳನ್ನು ನಡೆಸುವುವುದು ಪ್ಯಾಲೆಸ್ತೀನ್‌ನಲ್ಲಿ ನಡೆಯುತ್ತಿರುವ ನರಮೇಧವನ್ನು ಸಮರ್ಥಿಸಿದಂತೆ. ನಾವು ತಮ್ಮ ಸಭಾಂಗಣವನ್ನು ಮಾತ್ರ ಬಾಡಿಗೆಗೆ ನೀಡಿದ್ದೇವೆ ಎಂಬ ಐಐಎಸ್‌ಇಯ ಹೇಳಿಕೆಯನ್ನು ಪ್ರಶ್ನಿಸಬೇಕಾಗಿದೆ. ಅಂಬಾನಿಯಂತಹ ವಾಣಿಜ್ಯದಾರರು ಸಭಾಂಗಣದ ಲಭ್ಯತೆ ಕೋರಿದ್ದರೆ, ಪರಿಣಾಮಗಳನ್ನು ಪರಿಗಣಿಸದಯೇ ಐಐಎಸ್‌ಸಿ ಸಭಾಂಗಣವನ್ನು ನೀಡುತ್ತಿತ್ತೇ?” ಎಂದು ಪ್ರಶ್ನಿಸಿದರು.

“ಪ್ಯಾಲೆಸ್ತೀನ್‌ ಜನತೆಯ ಮೇಲೆ ಅಸ್ತ್ರಗಳನ್ನು ಬಳಸಿ ಇಸ್ರೇಲ್ ತನ್ನ ಅಸ್ತ್ರಗಳ ಶೋಧನೆ ಮಾಡುತ್ತಿದೆ. ಅದನ್ನು ಈ ಸಮಾವೇಶವು ಬೆಂಬಲಿಸುವುದೇ? ನಮ್ಮ ಶೈಕ್ಷಣಿಕ ಸಂಸ್ಥೆಗಳು ಇಂತಹದನ್ನು ಪ್ರಶ್ನೆಯಿಲ್ಲದೆ ಬೆಂಬಲಿಸಲು ನೈತಿಕತೆ ಇಲ್ಲವೇ? ಎಂದು ಸ್ತ್ರೀವಾದಿ ಚಳುವಳಿಗಾರರಾದ ಮಧು ಭೂಷಣ್ ಖಂಡನೆ ವ್ಯಕ್ತಪಡಿಸಿದರು. ಪ್ಯಾಲೆಸ್ತೀನ್ ಜನರಿಗೂ ಜೀವಿಸುವ ಹಕ್ಕಿದೆ. ಅದರೊಂದಿಗೆ ನಾವು ನಿಲ್ಲಬೇಕು. ನಮ್ಮ ಶೆಕ್ಷಣಿಕ ಸಂಸ್ಥೆಗಳ ಈ ನಡೆಯಿಂದ ನಮಗೆ ಬಹಳ ನೋವುಂಟಾಗಿದೆ” ಎಂದು ಹೇಳಿದರು.

ರಕ್ಷಣಾ ಮತ್ತು ಶಸ್ತ್ರಾಸ್ತ್ರ ವ್ಯಾಪಾರದ ಮೇಲೆ ಕೇಂದ್ರೀಕರಿಸಿದ ಈ ಸಮಾವೇಶವು, ಇಸ್ರೇಲ್ ವಿರುದ್ಧದ ಶಸ್ತ್ರಾಸ್ತ್ರ ನಿರ್ಬಂಧದ ಜಾಗತಿಕ ಕರೆಗಳಿಗೆ ವಿರುದ್ಧವಾಗಿವೆ ಎಂದು ಪ್ರತಿಭಟನಾಕಾರರು ಪ್ರತಿಪಾದಿಸಿದರು. ಇಸ್ರೇಲ್‌ನ ಕ್ರಮಗಳನ್ನು ಬೆಂಬಲಿಸದಂತೆ ಸಂಸ್ಥೆಗಳನ್ನು ಒತ್ತಾಯಿಸುವ ಇತ್ತೀಚಿನ ಅಂತಾರಾಷ್ಟ್ರೀಯ ನ್ಯಾಯಾಲಯದ (ಐಸಿಜೆ) ತೀರ್ಪಿನ ಬೆಳಕಿನಲ್ಲಿ, ಈ ಸಮಾವೇಶದಲ್ಲಿ ಕರ್ನಾಟಕ ಸರ್ಕಾರದ ಒಳಗೊಳ್ಳುವಿಕೆಯನ್ನೂ ಖಂಡಿಸಿದರು.

ಜಗತ್ತಿನಾದ್ಯಂತ ಅನೇಕರು ಪ್ಯಾಲೆಸ್ತೀನ್‌ನೊಂದಿಗೆ ಒಗ್ಗಟ್ಟಿನಿಂದ BDS( Boycott, Divestment, Sanctions) ಚಳುವಳಿ ಮೂಲಕ ಇಸ್ರೇಲ್‌ನಿಂದ ಹೂಡಿಕೆಯನ್ನು ತ್ಯಜಿಸಿದ್ದಾರೆ. ಐಐಎಸ್‌ಸಿ ಮತ್ತು ಇತರ ಶೈಕ್ಷಣಿಕ ಸಂಸ್ಥೆಗಳು ಕೂಡ ಈ ಜಾಗತಿಕ ಚಳುವಳಿಗೆ ಸೇರಲು ಸಾರ್ವಜನಿಕರಿಂದ ಮನವಿ ಮಾಡಲಾಯಿತು. ಈ ಸಂಸ್ಥೆಗಳು ಮಾನವ ಹಕ್ಕುಗಳು ಮತ್ತು ನ್ಯಾಯದ ಸಾರ್ವತ್ರಿಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು. ಇಸ್ರೇಲ್ ವಿರುದ್ಧ ಶಸ್ತ್ರಾಸ್ತ್ರ ನಿರ್ಬಂಧದ ಸಾಮೂಹಿಕ ಕರೆಗೆ ಸೇರಬೇಕೆಂದು ಒತ್ತಾಯಿಸಿದರು.

ಭಾರತ-ಇಸ್ರೇಲ್ ಶೃಂಗಸಭೆ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನ ಸಭಾಂಗಣದಲ್ಲಿ ಥಿಂಕ್ ಇಂಡಿಯಾ, ಇಂಡಿಯನ್ ಚೇಂಬರ್ ಆಫ್ ಇಂಟರ್‌ನ್ಯಾಷನಲ್ ಬ್ಯುಸಿನೆಸ್ ಮತ್ತು ಮೈಸೂರು ಲ್ಯಾನ್ಸರ್ಸ್ ಹೆರಿಟೇಜ್ ಫೌಂಡೇಶನ್ ಇಂದು (ಸೆ.23) ಭಾರತ-ಇಸ್ರೇಲ್ ಶೃಂಗಸಭೆ ಕಾರ್ಯಕ್ರಮವನ್ನು ಆಯೋಜಿಸಿದೆ.

ಇದನ್ನೂ ಓದಿ : ‘ಭಾರತ-ಇಸ್ರೇಲ್ ವ್ಯಾಪಾರ ಶೃಂಗಸಭೆ’ ರದ್ದುಗೊಳಿಸುವಂತೆ ವಿದ್ಯಾರ್ಥಿಗಳು, ಅಧ್ಯಾಪಕರಿಂದ ಬೆಂಗಳೂರಿನ IIScಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...