Homeಕರ್ನಾಟಕಬೆಂಗಳೂರು: ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಬೆಂಗಳೂರು: ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕವನ್ನು ಮತ್ತು ಕರ್ನಾಟಕದ ರೈತರನ್ನು ದ್ವೇಷಿಸುತ್ತಾರೆ. ಕರ್ನಾಟಕಕ್ಕೆ ನ್ಯಾಯ ಕೊಡಿ ಎಂದು ಕೇಳಿದ್ದರೂ, ಇದುವರೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಅದಕ್ಕಾಗಿ ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಹಾಗೂ ದೇಶದ ಜನರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು (ಏಪ್ರಿಲ್ 23) ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರ ನೀಡದಿರುವುದನ್ನು ಖಂಡಿಸಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

“ಸೆಪ್ಟೆಂಬರ್ 22, 2023ರಂದು ಬರದ ಕುರಿತು ನಾವು ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದೆವು. ಬಳಿಕ ಕೇಂದ್ರದ ತಂಡ ರಾಜ್ಯಕ್ಕೆ ಬಂದು 4 ದಿನಗಳ ಕಾಲ ಪರಿಶೀಲನೆ ಮಾಡಿ ಕೇಂದ್ರಕ್ಕೆ ವರದಿಯನ್ನು ಸಲ್ಲಿಸಿತ್ತು. ಈ ಮಧ್ಯೆ ಸಚಿವರಾದ ಕೃಷ್ಣ ಬೈರೇಗೌಡ, ಚೆಲುವರಾಯಸ್ವಾಮಿ ಮತ್ತು ಪ್ರಿಯಾಂಕ್ ಖರ್ಗೆ ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿ ಮಾಡಿ ಕರ್ನಾಟಕ ಎದುರಿಸುತ್ತಿರುವ ಬರಗಾಲದ ಬಗ್ಗೆ ವಿವರಿಸಿದ್ದರು. ರಾಜ್ಯದಲ್ಲಿ ಭೀಕರ ಬರಗಾಲವಿದ್ದು, 240 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಿದ್ದೇವೆ. 100 ವರ್ಷಗಳ ನಂತರ ಇಂತಹ ಬರಗಾಲ ಎದುರಾಗಿದೆ ಎಂದು ನಾವು ಮನವಿ ಕೊಟ್ಟಿದ್ದರೂ ಕೂಡ ಅಮಿತ್ ಶಾ ಚನ್ನಪಟ್ಟಣಕ್ಕೆ ಬಂದಿದ್ದ ಸಂದರ್ಭದಲ್ಲಿ ಮನವಿಯನ್ನು ವಿಳಂಬವಾಗಿ ಸಲ್ಲಿಸಿದ್ದಾರೆ ಎಂದಿದ್ದರು” ಎಂದು ಸಿಎಂ ಹೇಳಿದರು.

ಗ್ಯಾರಂಟಿಗಳಿಗೆ ಒಂದು ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ:

“ನಿರ್ಮಲಾ ಸೀತಾರಾಮನ್ ಅವರು ಗ್ಯಾರಂಟಿ ಯೋಜನೆಗಳಿಗೆ ಹಣ ಕೇಳುತ್ತಿದ್ದಾರೆ, ಬರಗಾಲಕ್ಕೆ ಅಲ್ಲ ಎಂದು ಸುಳ್ಳು ಹೇಳಿದ್ದಾರೆ. ನಾವು ಗ್ಯಾರಂಟಿಗಳಿಗೆ ಒಂದೇ ಒಂದು ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ. ನಮಗೆ ಬೇಕಾಗಿಯೂ ಇಲ್ಲ” ಎಂದು ಸಿಎಂ ತಿಳಿಸಿದರು.

ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ:

“ಗ್ಯಾರಂಟಿಗಳಿಗೆ ನಮ್ಮ ಸಂಪನ್ಮೂಲದಿಂದಲೇ ವೆಚ್ಚ ಭರಿಸಿದ್ದೇವೆ. 36 ಸಾವಿರ ಕೋಟಿ ರೂಪಾಯಿಗಳನ್ನು ಕಳೆದ ವರ್ಷ ಹಾಗೂ 52 ಸಾವಿರ ಕೋಟಿ ರೂಪಾಯಿಗಳನ್ನು ಮುಂದಿನ ಸಾಲಿಗೆ ಮೀಸಲಿರಿಸಿದ್ದೇವೆ. ಬರಗಾಲಕ್ಕೆ 48 ಸಾವಿರ ಹೆಕ್ಟೇರ್ ಪ್ರದೇಶ ಬೆಳೆ ನಷ್ಟವಾಗಿದೆ. ರೈತರು ಕಷ್ಟದಲ್ಲಿದ್ದಾರೆ. ನಮ್ಮ ಸರ್ಕಾರ 2 ಸಾವಿರ ರೂ.ವರೆಗೆ 34 ಲಕ್ಷ ರೈತರಿಗೆ ಪರಿಹಾರ ನೀಡಿದೆ. ಇದಕ್ಕಾಗಿ 650 ಕೋಟಿ ರೂ. ವೆಚ್ಚ ಮಾಡಲಾಗಿದೆ. ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ. ಕುಡಿಯುವ ನೀರು, ಮೇವು, ಜನರಿಗೆ ಕೆಲಸ, ಗುಳೇ ಹೋಗುವುದನ್ನು ತಪ್ಪಿಸುವುದು, ರೈತರಿಗೆ ಮೊದಲ ಕಂತಿನ ಪರಿಹಾರ ನೀಡುವುದನ್ನು ಮಾಡಿದ್ದೇವೆ ಎಂದು ಸಿಎಂ ವಿವರಿಸಿದರು.

ನರೇಂದ್ರ ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ?

ನಾವು 18,172 ಕೋಟಿ ರೂಪಾಯಿ ಬರ ಪರಿಹಾರವನ್ನು ಎನ್‌ಡಿಆರ್‌ಎಫ್‌ನಿಂದ ಬಿಡುಗಡೆ ಮಾಡುವಂತೆ ಕೋರಿದ್ದೇವೆ. ಈ ಸಂಬಂಧ ಮನವಿ ಸಲ್ಲಿಸಿ 7 ತಿಂಗಳಾಗಿವೆ. ನಾನೇ ಸ್ವತಃ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿದ್ದೇನೆ. ಸಂಬಂಧಪಟ್ಟವರಿಗೆ ತಿಳಿಸಿ ಕೂಡಲೇ ಹಣ ಬಿಡುಗಡೆ ಮಾಡುವಂತೆ ಹೇಳುವುದಾಗಿ ಪ್ರಧಾನಿ ಹೇಳಿದ್ದರು. ನಂತರ ನಾನು, ಕೃಷ್ಣಬೈರೇಗೌಡ ಡಿಸೆಂಬರ್ 20, 2023ರಂದು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೆವು. ಡಿಸೆಂಬರ್ 23ಕ್ಕೆ ಸಭೆ ಕರೆದು ಇತ್ಯರ್ಥ ಮಾಡುವುದಾಗಿ ಅವರು ಭರವಸೆ ನೀಡಿದ್ದರು. ಆದರೆ ಈವರೆಗೆ ಏನೂ ಮಾಡಿಲ್ಲ. ಹೀಗಿರುವಾಗ ನರೇಂದ್ರ ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ? ರಾಜ್ಯಕ್ಕೆ ಮೇಲಿಂದ ಮೇಲೆ ಬರಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಹೇಳಿ ಪ್ರತಿಭಟಿಸಿ ಅವರ ಗಮನಕ್ಕೆ ತರುವ ಕೆಲಸ ಮಾಡಿದ್ದೇವೆ ಎಂದರು.

ಗೋ ಬ್ಯಾಕ್ ನರೇಂದ್ರ ಮೋದಿ, ಅಮಿತ್ ಶಾ

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಬಜೆಟ್ ಸಂಸತ್ತಿನಲ್ಲಿ ಅನುಮೋದನೆಯಾಗಿದೆ. ಬೊಮ್ಮಾಯಿಯವರೂ ಕೂಡ ತಮ್ಮ ಬಜೆಟ್‌ನಲ್ಲಿ ಧನ್ಯವಾದ ಹೇಳಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವುದಾಗಿ ಘೋಷಿಸಿದ್ದಾರೆ. ಆದರೆ, ಇಂದಿನವರೆಗೆ ಯಾವುದೂ ಆಗಿಲ್ಲ. ಅದರ ಜೊತೆಗೆ 15ನೇ ಹಣಕಾಸು ಆಯೋಗ ಶಿಫಾರಸ್ಸು ಮಾಡಿರುವ 5,495 ಕೋಟಿ ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಕೊಡದೇ ಇರಲು ಕಾರಣ ನಿರ್ಮಲಾ ಸೀತಾರಾಮನ್ ಮತ್ತು ನರೇಂದ್ರ ಮೋದಿ ಎಂದು ಕಿಡಿಕಾರಿದರು.

ಬೆಂಗಳೂರಿನ ಪೆರಿ ಫೆರಲ್ ರಿಂಗ್ ರಸ್ತೆಗೆ 3 ಸಾವಿರ ಕೋಟಿ ಹಾಗೂ ಬೆಂಗಳೂರಿನ ಅಭಿವೃದ್ಧಿಗೆ 3 ಸಾವಿರ ಕೋಟಿ ಕೊಡಿ ಎಂದು ಹಣಕಾಸು ಆಯೋಗ ಶಿಫಾರಸು ಮಾಡಿದೆ. ಅದನ್ನೂ ಕೊಟ್ಟಿಲ್ಲ. ನರೇಂದ್ರ ಮೋದಿಯವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಈಗ ಕರ್ನಾಟಕದ ಮತದಾರರಿಂದ ಮತ ಕೇಳಲು ಬರುತ್ತಿದ್ದಾರೆ. ಹಾಗಾಗಿ, ಗೋ ಬ್ಯಾಕ್ ನರೇಂದ್ರ ಮೋದಿ, ಗೂ ಬ್ಯಾಕ್ ಅಮಿತ್ ಶಾ ಎಂದು ಹೇಳುತ್ತಿದ್ದೇವೆ ಎಂದರು.

ಅಮಿತ್ ಶಾ ಬರ ಪರಿಹಾರ ಕೊಟ್ಟು ರಾಜ್ಯಕ್ಕೆ ಬರಲಿ

ಇಂದು ಬರುತ್ತಿರುವ ಅಮಿತ್ ಶಾ ಅವರು ಸಭೆ ನಡೆಸಿ 18,171 ಕೋಟಿ ರೂ. ರಾಜ್ಯದ ಬರ ಪರಿಹಾರ ಕೊಟ್ಟು ಆಮೇಲೆ ಬರಲಿ. ನಿಮಗೆ ಯಾವುದೇ ಮತ ಕೇಳುವ ಹಕ್ಕು ಇಲ್ಲ ಎಂದು ಅವರಿಗೆ ಹೇಳುತ್ತೇವೆ. ನ್ಯಾಯಯುತ ಬೇಡಿಕೆ ಇಟ್ಟಿದ್ದೇವೆ ಎಂದು ಸಿಎಂ ಹೇಳಿದರು.

ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಬೇಕಾದ ಸ್ಥಿತಿ

ರಾಜ್ಯ ಸರ್ಕಾರ ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಬೇಕಾದ ಪರಿಸ್ಥಿತಿ ಬಂತು. ಅಲ್ಲಿ ಅಟಾರ್ನಿ ಜನರಲ್ ಅವರು ನರೇಂದ್ರ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಅವರು ಹೇಳಿದ ಸುಳ್ಳಿನ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ತೆರಿಗೆ ಅನ್ಯಾಯದ ಬಗ್ಗೆ ರಾಜ್ಯ ಸರ್ಕಾರ ಸೂಕ್ತವಾದ ಹಾಗೂ ಸತ್ಯಾಂಶವನ್ನು ಮಂಡಿಸಿದ್ದರಿಂದ ಕರ್ನಾಟಕದ ಮೇಲೆ ನ್ಯಾಯಾಲಯ ಕರುಣೆ ತೋರಿತು. ಒಂದು ವೇಳೆ ನಾವು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗದೇ ಇದ್ದಿದ್ದರೆ, ಒಂದು ರೂ.ಪರಿಹಾರ ಕೂಡ ನೀಡುತ್ತಿರಲಿಲ್ಲ ಎಂದರು.

ನ್ಯಾಯ ಕೇಳಲು ಜನತಾ ನ್ಯಾಯಾಲಯದ ಮೊರೆ : ಸುರ್ಜೇವಾಲ

ರಾಜ್ಯದ ಪರವಾಗಿ, ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಭಾರತೀಯ ಚೆಂಬು ಪಕ್ಷದ ಸುಳ್ಳುಗಳನ್ನು ಜನತೆಗೆ ತೋರಿಸುತ್ತೇವೆ. ಈಗಾಗಲೇ ಸರ್ವೋಚ್ಚ ನ್ಯಾಯಾಲಯಕ್ಕೇ ಹೋಗಿದ್ದೇವೆ. ನ್ಯಾಯವನ್ನು ಕೇಳಲು ಜನತಾ ನ್ಯಾಯಾಲಯದ ಮೊರೆ ಹೋಗುತ್ತೇವೆ. ಮೋದಿ ಸರ್ಕಾರವನ್ನು ಕರ್ನಾಟಕದಿಂದ ಮಾತ್ರವಲ್ಲದೆ ಭಾರತದ ಇತರೆಡೆಗಳಿಂದಲೂ ಕಿತ್ತು ಹಾಕಲು ಪ್ರಯತ್ನಿಸುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಿದರು.

ಅನ್ಯಾಯ ಸಹಿಸಲು ಸಾಧ್ಯವಿಲ್ಲ

ರಾಜಕೀಯ ಸಂಘರ್ಷ ಮುಂದುವರೆದರೆ ರಾಜ್ಯಕ್ಕೆ ಬರಬೇಕಾದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುವ ಸಾಧ್ಯತೆ ಇಲ್ಲವೇ? ತೊಂದರೆಯಾಗುವುದಿಲ್ಲವೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಹಾಗಾದರೆ ನ್ಯಾಯ ಕೊಡಲಿ. ಅನ್ಯಾಯ ಸಹಿಸಲು ಸಾಧ್ಯವಿಲ್ಲ ಎಂದರು.

ಪ್ರತಿಭಟನೆಯಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಬೈರತಿ ಸುರೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇದನ್ನೂ ಓದಿ : ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ: ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...