Homeಕರ್ನಾಟಕಬೆಂಗಳೂರು: ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಬೆಂಗಳೂರು: ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕವನ್ನು ಮತ್ತು ಕರ್ನಾಟಕದ ರೈತರನ್ನು ದ್ವೇಷಿಸುತ್ತಾರೆ. ಕರ್ನಾಟಕಕ್ಕೆ ನ್ಯಾಯ ಕೊಡಿ ಎಂದು ಕೇಳಿದ್ದರೂ, ಇದುವರೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಅದಕ್ಕಾಗಿ ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಹಾಗೂ ದೇಶದ ಜನರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು (ಏಪ್ರಿಲ್ 23) ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರ ನೀಡದಿರುವುದನ್ನು ಖಂಡಿಸಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

“ಸೆಪ್ಟೆಂಬರ್ 22, 2023ರಂದು ಬರದ ಕುರಿತು ನಾವು ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದೆವು. ಬಳಿಕ ಕೇಂದ್ರದ ತಂಡ ರಾಜ್ಯಕ್ಕೆ ಬಂದು 4 ದಿನಗಳ ಕಾಲ ಪರಿಶೀಲನೆ ಮಾಡಿ ಕೇಂದ್ರಕ್ಕೆ ವರದಿಯನ್ನು ಸಲ್ಲಿಸಿತ್ತು. ಈ ಮಧ್ಯೆ ಸಚಿವರಾದ ಕೃಷ್ಣ ಬೈರೇಗೌಡ, ಚೆಲುವರಾಯಸ್ವಾಮಿ ಮತ್ತು ಪ್ರಿಯಾಂಕ್ ಖರ್ಗೆ ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿ ಮಾಡಿ ಕರ್ನಾಟಕ ಎದುರಿಸುತ್ತಿರುವ ಬರಗಾಲದ ಬಗ್ಗೆ ವಿವರಿಸಿದ್ದರು. ರಾಜ್ಯದಲ್ಲಿ ಭೀಕರ ಬರಗಾಲವಿದ್ದು, 240 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಿದ್ದೇವೆ. 100 ವರ್ಷಗಳ ನಂತರ ಇಂತಹ ಬರಗಾಲ ಎದುರಾಗಿದೆ ಎಂದು ನಾವು ಮನವಿ ಕೊಟ್ಟಿದ್ದರೂ ಕೂಡ ಅಮಿತ್ ಶಾ ಚನ್ನಪಟ್ಟಣಕ್ಕೆ ಬಂದಿದ್ದ ಸಂದರ್ಭದಲ್ಲಿ ಮನವಿಯನ್ನು ವಿಳಂಬವಾಗಿ ಸಲ್ಲಿಸಿದ್ದಾರೆ ಎಂದಿದ್ದರು” ಎಂದು ಸಿಎಂ ಹೇಳಿದರು.

ಗ್ಯಾರಂಟಿಗಳಿಗೆ ಒಂದು ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ:

“ನಿರ್ಮಲಾ ಸೀತಾರಾಮನ್ ಅವರು ಗ್ಯಾರಂಟಿ ಯೋಜನೆಗಳಿಗೆ ಹಣ ಕೇಳುತ್ತಿದ್ದಾರೆ, ಬರಗಾಲಕ್ಕೆ ಅಲ್ಲ ಎಂದು ಸುಳ್ಳು ಹೇಳಿದ್ದಾರೆ. ನಾವು ಗ್ಯಾರಂಟಿಗಳಿಗೆ ಒಂದೇ ಒಂದು ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ. ನಮಗೆ ಬೇಕಾಗಿಯೂ ಇಲ್ಲ” ಎಂದು ಸಿಎಂ ತಿಳಿಸಿದರು.

ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ:

“ಗ್ಯಾರಂಟಿಗಳಿಗೆ ನಮ್ಮ ಸಂಪನ್ಮೂಲದಿಂದಲೇ ವೆಚ್ಚ ಭರಿಸಿದ್ದೇವೆ. 36 ಸಾವಿರ ಕೋಟಿ ರೂಪಾಯಿಗಳನ್ನು ಕಳೆದ ವರ್ಷ ಹಾಗೂ 52 ಸಾವಿರ ಕೋಟಿ ರೂಪಾಯಿಗಳನ್ನು ಮುಂದಿನ ಸಾಲಿಗೆ ಮೀಸಲಿರಿಸಿದ್ದೇವೆ. ಬರಗಾಲಕ್ಕೆ 48 ಸಾವಿರ ಹೆಕ್ಟೇರ್ ಪ್ರದೇಶ ಬೆಳೆ ನಷ್ಟವಾಗಿದೆ. ರೈತರು ಕಷ್ಟದಲ್ಲಿದ್ದಾರೆ. ನಮ್ಮ ಸರ್ಕಾರ 2 ಸಾವಿರ ರೂ.ವರೆಗೆ 34 ಲಕ್ಷ ರೈತರಿಗೆ ಪರಿಹಾರ ನೀಡಿದೆ. ಇದಕ್ಕಾಗಿ 650 ಕೋಟಿ ರೂ. ವೆಚ್ಚ ಮಾಡಲಾಗಿದೆ. ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ. ಕುಡಿಯುವ ನೀರು, ಮೇವು, ಜನರಿಗೆ ಕೆಲಸ, ಗುಳೇ ಹೋಗುವುದನ್ನು ತಪ್ಪಿಸುವುದು, ರೈತರಿಗೆ ಮೊದಲ ಕಂತಿನ ಪರಿಹಾರ ನೀಡುವುದನ್ನು ಮಾಡಿದ್ದೇವೆ ಎಂದು ಸಿಎಂ ವಿವರಿಸಿದರು.

ನರೇಂದ್ರ ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ?

ನಾವು 18,172 ಕೋಟಿ ರೂಪಾಯಿ ಬರ ಪರಿಹಾರವನ್ನು ಎನ್‌ಡಿಆರ್‌ಎಫ್‌ನಿಂದ ಬಿಡುಗಡೆ ಮಾಡುವಂತೆ ಕೋರಿದ್ದೇವೆ. ಈ ಸಂಬಂಧ ಮನವಿ ಸಲ್ಲಿಸಿ 7 ತಿಂಗಳಾಗಿವೆ. ನಾನೇ ಸ್ವತಃ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿದ್ದೇನೆ. ಸಂಬಂಧಪಟ್ಟವರಿಗೆ ತಿಳಿಸಿ ಕೂಡಲೇ ಹಣ ಬಿಡುಗಡೆ ಮಾಡುವಂತೆ ಹೇಳುವುದಾಗಿ ಪ್ರಧಾನಿ ಹೇಳಿದ್ದರು. ನಂತರ ನಾನು, ಕೃಷ್ಣಬೈರೇಗೌಡ ಡಿಸೆಂಬರ್ 20, 2023ರಂದು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೆವು. ಡಿಸೆಂಬರ್ 23ಕ್ಕೆ ಸಭೆ ಕರೆದು ಇತ್ಯರ್ಥ ಮಾಡುವುದಾಗಿ ಅವರು ಭರವಸೆ ನೀಡಿದ್ದರು. ಆದರೆ ಈವರೆಗೆ ಏನೂ ಮಾಡಿಲ್ಲ. ಹೀಗಿರುವಾಗ ನರೇಂದ್ರ ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ? ರಾಜ್ಯಕ್ಕೆ ಮೇಲಿಂದ ಮೇಲೆ ಬರಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಹೇಳಿ ಪ್ರತಿಭಟಿಸಿ ಅವರ ಗಮನಕ್ಕೆ ತರುವ ಕೆಲಸ ಮಾಡಿದ್ದೇವೆ ಎಂದರು.

ಗೋ ಬ್ಯಾಕ್ ನರೇಂದ್ರ ಮೋದಿ, ಅಮಿತ್ ಶಾ

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಬಜೆಟ್ ಸಂಸತ್ತಿನಲ್ಲಿ ಅನುಮೋದನೆಯಾಗಿದೆ. ಬೊಮ್ಮಾಯಿಯವರೂ ಕೂಡ ತಮ್ಮ ಬಜೆಟ್‌ನಲ್ಲಿ ಧನ್ಯವಾದ ಹೇಳಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವುದಾಗಿ ಘೋಷಿಸಿದ್ದಾರೆ. ಆದರೆ, ಇಂದಿನವರೆಗೆ ಯಾವುದೂ ಆಗಿಲ್ಲ. ಅದರ ಜೊತೆಗೆ 15ನೇ ಹಣಕಾಸು ಆಯೋಗ ಶಿಫಾರಸ್ಸು ಮಾಡಿರುವ 5,495 ಕೋಟಿ ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಕೊಡದೇ ಇರಲು ಕಾರಣ ನಿರ್ಮಲಾ ಸೀತಾರಾಮನ್ ಮತ್ತು ನರೇಂದ್ರ ಮೋದಿ ಎಂದು ಕಿಡಿಕಾರಿದರು.

ಬೆಂಗಳೂರಿನ ಪೆರಿ ಫೆರಲ್ ರಿಂಗ್ ರಸ್ತೆಗೆ 3 ಸಾವಿರ ಕೋಟಿ ಹಾಗೂ ಬೆಂಗಳೂರಿನ ಅಭಿವೃದ್ಧಿಗೆ 3 ಸಾವಿರ ಕೋಟಿ ಕೊಡಿ ಎಂದು ಹಣಕಾಸು ಆಯೋಗ ಶಿಫಾರಸು ಮಾಡಿದೆ. ಅದನ್ನೂ ಕೊಟ್ಟಿಲ್ಲ. ನರೇಂದ್ರ ಮೋದಿಯವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಈಗ ಕರ್ನಾಟಕದ ಮತದಾರರಿಂದ ಮತ ಕೇಳಲು ಬರುತ್ತಿದ್ದಾರೆ. ಹಾಗಾಗಿ, ಗೋ ಬ್ಯಾಕ್ ನರೇಂದ್ರ ಮೋದಿ, ಗೂ ಬ್ಯಾಕ್ ಅಮಿತ್ ಶಾ ಎಂದು ಹೇಳುತ್ತಿದ್ದೇವೆ ಎಂದರು.

ಅಮಿತ್ ಶಾ ಬರ ಪರಿಹಾರ ಕೊಟ್ಟು ರಾಜ್ಯಕ್ಕೆ ಬರಲಿ

ಇಂದು ಬರುತ್ತಿರುವ ಅಮಿತ್ ಶಾ ಅವರು ಸಭೆ ನಡೆಸಿ 18,171 ಕೋಟಿ ರೂ. ರಾಜ್ಯದ ಬರ ಪರಿಹಾರ ಕೊಟ್ಟು ಆಮೇಲೆ ಬರಲಿ. ನಿಮಗೆ ಯಾವುದೇ ಮತ ಕೇಳುವ ಹಕ್ಕು ಇಲ್ಲ ಎಂದು ಅವರಿಗೆ ಹೇಳುತ್ತೇವೆ. ನ್ಯಾಯಯುತ ಬೇಡಿಕೆ ಇಟ್ಟಿದ್ದೇವೆ ಎಂದು ಸಿಎಂ ಹೇಳಿದರು.

ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಬೇಕಾದ ಸ್ಥಿತಿ

ರಾಜ್ಯ ಸರ್ಕಾರ ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಬೇಕಾದ ಪರಿಸ್ಥಿತಿ ಬಂತು. ಅಲ್ಲಿ ಅಟಾರ್ನಿ ಜನರಲ್ ಅವರು ನರೇಂದ್ರ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಅವರು ಹೇಳಿದ ಸುಳ್ಳಿನ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ತೆರಿಗೆ ಅನ್ಯಾಯದ ಬಗ್ಗೆ ರಾಜ್ಯ ಸರ್ಕಾರ ಸೂಕ್ತವಾದ ಹಾಗೂ ಸತ್ಯಾಂಶವನ್ನು ಮಂಡಿಸಿದ್ದರಿಂದ ಕರ್ನಾಟಕದ ಮೇಲೆ ನ್ಯಾಯಾಲಯ ಕರುಣೆ ತೋರಿತು. ಒಂದು ವೇಳೆ ನಾವು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗದೇ ಇದ್ದಿದ್ದರೆ, ಒಂದು ರೂ.ಪರಿಹಾರ ಕೂಡ ನೀಡುತ್ತಿರಲಿಲ್ಲ ಎಂದರು.

ನ್ಯಾಯ ಕೇಳಲು ಜನತಾ ನ್ಯಾಯಾಲಯದ ಮೊರೆ : ಸುರ್ಜೇವಾಲ

ರಾಜ್ಯದ ಪರವಾಗಿ, ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಭಾರತೀಯ ಚೆಂಬು ಪಕ್ಷದ ಸುಳ್ಳುಗಳನ್ನು ಜನತೆಗೆ ತೋರಿಸುತ್ತೇವೆ. ಈಗಾಗಲೇ ಸರ್ವೋಚ್ಚ ನ್ಯಾಯಾಲಯಕ್ಕೇ ಹೋಗಿದ್ದೇವೆ. ನ್ಯಾಯವನ್ನು ಕೇಳಲು ಜನತಾ ನ್ಯಾಯಾಲಯದ ಮೊರೆ ಹೋಗುತ್ತೇವೆ. ಮೋದಿ ಸರ್ಕಾರವನ್ನು ಕರ್ನಾಟಕದಿಂದ ಮಾತ್ರವಲ್ಲದೆ ಭಾರತದ ಇತರೆಡೆಗಳಿಂದಲೂ ಕಿತ್ತು ಹಾಕಲು ಪ್ರಯತ್ನಿಸುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಿದರು.

ಅನ್ಯಾಯ ಸಹಿಸಲು ಸಾಧ್ಯವಿಲ್ಲ

ರಾಜಕೀಯ ಸಂಘರ್ಷ ಮುಂದುವರೆದರೆ ರಾಜ್ಯಕ್ಕೆ ಬರಬೇಕಾದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುವ ಸಾಧ್ಯತೆ ಇಲ್ಲವೇ? ತೊಂದರೆಯಾಗುವುದಿಲ್ಲವೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಹಾಗಾದರೆ ನ್ಯಾಯ ಕೊಡಲಿ. ಅನ್ಯಾಯ ಸಹಿಸಲು ಸಾಧ್ಯವಿಲ್ಲ ಎಂದರು.

ಪ್ರತಿಭಟನೆಯಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಬೈರತಿ ಸುರೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇದನ್ನೂ ಓದಿ : ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ: ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...