Homeಕರ್ನಾಟಕಬೆಂಗಳೂರು: ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಬೆಂಗಳೂರು: ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕವನ್ನು ಮತ್ತು ಕರ್ನಾಟಕದ ರೈತರನ್ನು ದ್ವೇಷಿಸುತ್ತಾರೆ. ಕರ್ನಾಟಕಕ್ಕೆ ನ್ಯಾಯ ಕೊಡಿ ಎಂದು ಕೇಳಿದ್ದರೂ, ಇದುವರೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಅದಕ್ಕಾಗಿ ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಹಾಗೂ ದೇಶದ ಜನರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು (ಏಪ್ರಿಲ್ 23) ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರ ನೀಡದಿರುವುದನ್ನು ಖಂಡಿಸಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

“ಸೆಪ್ಟೆಂಬರ್ 22, 2023ರಂದು ಬರದ ಕುರಿತು ನಾವು ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದೆವು. ಬಳಿಕ ಕೇಂದ್ರದ ತಂಡ ರಾಜ್ಯಕ್ಕೆ ಬಂದು 4 ದಿನಗಳ ಕಾಲ ಪರಿಶೀಲನೆ ಮಾಡಿ ಕೇಂದ್ರಕ್ಕೆ ವರದಿಯನ್ನು ಸಲ್ಲಿಸಿತ್ತು. ಈ ಮಧ್ಯೆ ಸಚಿವರಾದ ಕೃಷ್ಣ ಬೈರೇಗೌಡ, ಚೆಲುವರಾಯಸ್ವಾಮಿ ಮತ್ತು ಪ್ರಿಯಾಂಕ್ ಖರ್ಗೆ ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿ ಮಾಡಿ ಕರ್ನಾಟಕ ಎದುರಿಸುತ್ತಿರುವ ಬರಗಾಲದ ಬಗ್ಗೆ ವಿವರಿಸಿದ್ದರು. ರಾಜ್ಯದಲ್ಲಿ ಭೀಕರ ಬರಗಾಲವಿದ್ದು, 240 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಿದ್ದೇವೆ. 100 ವರ್ಷಗಳ ನಂತರ ಇಂತಹ ಬರಗಾಲ ಎದುರಾಗಿದೆ ಎಂದು ನಾವು ಮನವಿ ಕೊಟ್ಟಿದ್ದರೂ ಕೂಡ ಅಮಿತ್ ಶಾ ಚನ್ನಪಟ್ಟಣಕ್ಕೆ ಬಂದಿದ್ದ ಸಂದರ್ಭದಲ್ಲಿ ಮನವಿಯನ್ನು ವಿಳಂಬವಾಗಿ ಸಲ್ಲಿಸಿದ್ದಾರೆ ಎಂದಿದ್ದರು” ಎಂದು ಸಿಎಂ ಹೇಳಿದರು.

ಗ್ಯಾರಂಟಿಗಳಿಗೆ ಒಂದು ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ:

“ನಿರ್ಮಲಾ ಸೀತಾರಾಮನ್ ಅವರು ಗ್ಯಾರಂಟಿ ಯೋಜನೆಗಳಿಗೆ ಹಣ ಕೇಳುತ್ತಿದ್ದಾರೆ, ಬರಗಾಲಕ್ಕೆ ಅಲ್ಲ ಎಂದು ಸುಳ್ಳು ಹೇಳಿದ್ದಾರೆ. ನಾವು ಗ್ಯಾರಂಟಿಗಳಿಗೆ ಒಂದೇ ಒಂದು ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ. ನಮಗೆ ಬೇಕಾಗಿಯೂ ಇಲ್ಲ” ಎಂದು ಸಿಎಂ ತಿಳಿಸಿದರು.

ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ:

“ಗ್ಯಾರಂಟಿಗಳಿಗೆ ನಮ್ಮ ಸಂಪನ್ಮೂಲದಿಂದಲೇ ವೆಚ್ಚ ಭರಿಸಿದ್ದೇವೆ. 36 ಸಾವಿರ ಕೋಟಿ ರೂಪಾಯಿಗಳನ್ನು ಕಳೆದ ವರ್ಷ ಹಾಗೂ 52 ಸಾವಿರ ಕೋಟಿ ರೂಪಾಯಿಗಳನ್ನು ಮುಂದಿನ ಸಾಲಿಗೆ ಮೀಸಲಿರಿಸಿದ್ದೇವೆ. ಬರಗಾಲಕ್ಕೆ 48 ಸಾವಿರ ಹೆಕ್ಟೇರ್ ಪ್ರದೇಶ ಬೆಳೆ ನಷ್ಟವಾಗಿದೆ. ರೈತರು ಕಷ್ಟದಲ್ಲಿದ್ದಾರೆ. ನಮ್ಮ ಸರ್ಕಾರ 2 ಸಾವಿರ ರೂ.ವರೆಗೆ 34 ಲಕ್ಷ ರೈತರಿಗೆ ಪರಿಹಾರ ನೀಡಿದೆ. ಇದಕ್ಕಾಗಿ 650 ಕೋಟಿ ರೂ. ವೆಚ್ಚ ಮಾಡಲಾಗಿದೆ. ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ. ಕುಡಿಯುವ ನೀರು, ಮೇವು, ಜನರಿಗೆ ಕೆಲಸ, ಗುಳೇ ಹೋಗುವುದನ್ನು ತಪ್ಪಿಸುವುದು, ರೈತರಿಗೆ ಮೊದಲ ಕಂತಿನ ಪರಿಹಾರ ನೀಡುವುದನ್ನು ಮಾಡಿದ್ದೇವೆ ಎಂದು ಸಿಎಂ ವಿವರಿಸಿದರು.

ನರೇಂದ್ರ ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ?

ನಾವು 18,172 ಕೋಟಿ ರೂಪಾಯಿ ಬರ ಪರಿಹಾರವನ್ನು ಎನ್‌ಡಿಆರ್‌ಎಫ್‌ನಿಂದ ಬಿಡುಗಡೆ ಮಾಡುವಂತೆ ಕೋರಿದ್ದೇವೆ. ಈ ಸಂಬಂಧ ಮನವಿ ಸಲ್ಲಿಸಿ 7 ತಿಂಗಳಾಗಿವೆ. ನಾನೇ ಸ್ವತಃ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿದ್ದೇನೆ. ಸಂಬಂಧಪಟ್ಟವರಿಗೆ ತಿಳಿಸಿ ಕೂಡಲೇ ಹಣ ಬಿಡುಗಡೆ ಮಾಡುವಂತೆ ಹೇಳುವುದಾಗಿ ಪ್ರಧಾನಿ ಹೇಳಿದ್ದರು. ನಂತರ ನಾನು, ಕೃಷ್ಣಬೈರೇಗೌಡ ಡಿಸೆಂಬರ್ 20, 2023ರಂದು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೆವು. ಡಿಸೆಂಬರ್ 23ಕ್ಕೆ ಸಭೆ ಕರೆದು ಇತ್ಯರ್ಥ ಮಾಡುವುದಾಗಿ ಅವರು ಭರವಸೆ ನೀಡಿದ್ದರು. ಆದರೆ ಈವರೆಗೆ ಏನೂ ಮಾಡಿಲ್ಲ. ಹೀಗಿರುವಾಗ ನರೇಂದ್ರ ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ? ರಾಜ್ಯಕ್ಕೆ ಮೇಲಿಂದ ಮೇಲೆ ಬರಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಹೇಳಿ ಪ್ರತಿಭಟಿಸಿ ಅವರ ಗಮನಕ್ಕೆ ತರುವ ಕೆಲಸ ಮಾಡಿದ್ದೇವೆ ಎಂದರು.

ಗೋ ಬ್ಯಾಕ್ ನರೇಂದ್ರ ಮೋದಿ, ಅಮಿತ್ ಶಾ

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಬಜೆಟ್ ಸಂಸತ್ತಿನಲ್ಲಿ ಅನುಮೋದನೆಯಾಗಿದೆ. ಬೊಮ್ಮಾಯಿಯವರೂ ಕೂಡ ತಮ್ಮ ಬಜೆಟ್‌ನಲ್ಲಿ ಧನ್ಯವಾದ ಹೇಳಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವುದಾಗಿ ಘೋಷಿಸಿದ್ದಾರೆ. ಆದರೆ, ಇಂದಿನವರೆಗೆ ಯಾವುದೂ ಆಗಿಲ್ಲ. ಅದರ ಜೊತೆಗೆ 15ನೇ ಹಣಕಾಸು ಆಯೋಗ ಶಿಫಾರಸ್ಸು ಮಾಡಿರುವ 5,495 ಕೋಟಿ ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಕೊಡದೇ ಇರಲು ಕಾರಣ ನಿರ್ಮಲಾ ಸೀತಾರಾಮನ್ ಮತ್ತು ನರೇಂದ್ರ ಮೋದಿ ಎಂದು ಕಿಡಿಕಾರಿದರು.

ಬೆಂಗಳೂರಿನ ಪೆರಿ ಫೆರಲ್ ರಿಂಗ್ ರಸ್ತೆಗೆ 3 ಸಾವಿರ ಕೋಟಿ ಹಾಗೂ ಬೆಂಗಳೂರಿನ ಅಭಿವೃದ್ಧಿಗೆ 3 ಸಾವಿರ ಕೋಟಿ ಕೊಡಿ ಎಂದು ಹಣಕಾಸು ಆಯೋಗ ಶಿಫಾರಸು ಮಾಡಿದೆ. ಅದನ್ನೂ ಕೊಟ್ಟಿಲ್ಲ. ನರೇಂದ್ರ ಮೋದಿಯವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಈಗ ಕರ್ನಾಟಕದ ಮತದಾರರಿಂದ ಮತ ಕೇಳಲು ಬರುತ್ತಿದ್ದಾರೆ. ಹಾಗಾಗಿ, ಗೋ ಬ್ಯಾಕ್ ನರೇಂದ್ರ ಮೋದಿ, ಗೂ ಬ್ಯಾಕ್ ಅಮಿತ್ ಶಾ ಎಂದು ಹೇಳುತ್ತಿದ್ದೇವೆ ಎಂದರು.

ಅಮಿತ್ ಶಾ ಬರ ಪರಿಹಾರ ಕೊಟ್ಟು ರಾಜ್ಯಕ್ಕೆ ಬರಲಿ

ಇಂದು ಬರುತ್ತಿರುವ ಅಮಿತ್ ಶಾ ಅವರು ಸಭೆ ನಡೆಸಿ 18,171 ಕೋಟಿ ರೂ. ರಾಜ್ಯದ ಬರ ಪರಿಹಾರ ಕೊಟ್ಟು ಆಮೇಲೆ ಬರಲಿ. ನಿಮಗೆ ಯಾವುದೇ ಮತ ಕೇಳುವ ಹಕ್ಕು ಇಲ್ಲ ಎಂದು ಅವರಿಗೆ ಹೇಳುತ್ತೇವೆ. ನ್ಯಾಯಯುತ ಬೇಡಿಕೆ ಇಟ್ಟಿದ್ದೇವೆ ಎಂದು ಸಿಎಂ ಹೇಳಿದರು.

ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಬೇಕಾದ ಸ್ಥಿತಿ

ರಾಜ್ಯ ಸರ್ಕಾರ ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಬೇಕಾದ ಪರಿಸ್ಥಿತಿ ಬಂತು. ಅಲ್ಲಿ ಅಟಾರ್ನಿ ಜನರಲ್ ಅವರು ನರೇಂದ್ರ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಅವರು ಹೇಳಿದ ಸುಳ್ಳಿನ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ತೆರಿಗೆ ಅನ್ಯಾಯದ ಬಗ್ಗೆ ರಾಜ್ಯ ಸರ್ಕಾರ ಸೂಕ್ತವಾದ ಹಾಗೂ ಸತ್ಯಾಂಶವನ್ನು ಮಂಡಿಸಿದ್ದರಿಂದ ಕರ್ನಾಟಕದ ಮೇಲೆ ನ್ಯಾಯಾಲಯ ಕರುಣೆ ತೋರಿತು. ಒಂದು ವೇಳೆ ನಾವು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗದೇ ಇದ್ದಿದ್ದರೆ, ಒಂದು ರೂ.ಪರಿಹಾರ ಕೂಡ ನೀಡುತ್ತಿರಲಿಲ್ಲ ಎಂದರು.

ನ್ಯಾಯ ಕೇಳಲು ಜನತಾ ನ್ಯಾಯಾಲಯದ ಮೊರೆ : ಸುರ್ಜೇವಾಲ

ರಾಜ್ಯದ ಪರವಾಗಿ, ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಭಾರತೀಯ ಚೆಂಬು ಪಕ್ಷದ ಸುಳ್ಳುಗಳನ್ನು ಜನತೆಗೆ ತೋರಿಸುತ್ತೇವೆ. ಈಗಾಗಲೇ ಸರ್ವೋಚ್ಚ ನ್ಯಾಯಾಲಯಕ್ಕೇ ಹೋಗಿದ್ದೇವೆ. ನ್ಯಾಯವನ್ನು ಕೇಳಲು ಜನತಾ ನ್ಯಾಯಾಲಯದ ಮೊರೆ ಹೋಗುತ್ತೇವೆ. ಮೋದಿ ಸರ್ಕಾರವನ್ನು ಕರ್ನಾಟಕದಿಂದ ಮಾತ್ರವಲ್ಲದೆ ಭಾರತದ ಇತರೆಡೆಗಳಿಂದಲೂ ಕಿತ್ತು ಹಾಕಲು ಪ್ರಯತ್ನಿಸುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಿದರು.

ಅನ್ಯಾಯ ಸಹಿಸಲು ಸಾಧ್ಯವಿಲ್ಲ

ರಾಜಕೀಯ ಸಂಘರ್ಷ ಮುಂದುವರೆದರೆ ರಾಜ್ಯಕ್ಕೆ ಬರಬೇಕಾದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುವ ಸಾಧ್ಯತೆ ಇಲ್ಲವೇ? ತೊಂದರೆಯಾಗುವುದಿಲ್ಲವೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಹಾಗಾದರೆ ನ್ಯಾಯ ಕೊಡಲಿ. ಅನ್ಯಾಯ ಸಹಿಸಲು ಸಾಧ್ಯವಿಲ್ಲ ಎಂದರು.

ಪ್ರತಿಭಟನೆಯಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಬೈರತಿ ಸುರೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇದನ್ನೂ ಓದಿ : ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ: ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...