Homeಮುಖಪುಟಬೆಂಗಳೂರು: ಪ್ಯಾಲೆಸ್ತೀನ್‌ ಬೆಂಬಲಿಸಿ ಎಂಜಿ ರಸ್ತೆಯಲ್ಲಿ ನೂರಾರು ಜನರಿಂದ ಪ್ರತಿಭಟನೆ

ಬೆಂಗಳೂರು: ಪ್ಯಾಲೆಸ್ತೀನ್‌ ಬೆಂಬಲಿಸಿ ಎಂಜಿ ರಸ್ತೆಯಲ್ಲಿ ನೂರಾರು ಜನರಿಂದ ಪ್ರತಿಭಟನೆ

- Advertisement -
- Advertisement -

ಹಮಾಸ್ ಸಶಸ್ತ್ರ ಗುಂಪನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದ ಮಂಗಳೂರಿನ ಝಾಕಿರ್‌ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನಡುವೆ ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್‌ಗೆ ಬೆಂಬಲಿಸಿ ಪ್ರತಿಭಟನೆಯೊಂದು ನಡೆದಿದೆ.

ಇಸ್ರೇಲ್‌-ಪ್ಯಾಲೆಸ್ತೀನ್‌ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ಪ್ಯಾಲೆಸ್ತೀನ್‌ಗೆ ಬೆಂಬಲ ನೀಡಲು ಅ.16ರ ಸಂಜೆ ಬೆಂಗಳೂರಿನ ಎಂಜಿ ರಸ್ತೆಯ ಮೆಟ್ರೋ ನಿಲ್ದಾಣದ ಬಳಿ ನೂರಾರು ಜನರು ಜಮಾಯಿಸಿದ್ದರು. ಪ್ಯಾಲೆಸ್ಟೀನ್‌ನ ಗಾಜಾ ಮೇಲೆ ಇಸ್ರೇಲ್‌ ನಡೆಸುತ್ತಿರುವ ದಾಳಿಯನ್ನು ಭಾರತ ಖಂಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಎಂಜಿ ರಸ್ತೆಯ ಉದ್ದಕ್ಕೂ ಮಾನವ ಸರಪಳಿ ನಿರ್ಮಿಸಿ ಮೇಣದಬತ್ತಿ ಹಿಡಿದು ಪ್ಯಾಲೆಸ್ತೀನ್‌ಗೆ ಬೆಂಬಲ ನೀಡುವಂತೆ ಕೋರಿಕೊಂಡರು. ಎಂಜಿ ರಸ್ತೆಯಲ್ಲಿ ಕೆಲ ಯುವಕರು-ಯುವತಿಯರು ಪ್ಯಾಲೆಸ್ತೀನ್‌ಗೆ ಬೆಂಬಲ ನೀಡುವಂತೆ ಪ್ರತಿಭಟನೆ ನಡೆಸಿ ಪ್ಯಾಲೆಸ್ತೀನ್‌ನಲ್ಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿಯ ಕಿರುಪುಸ್ತಕಗಳನ್ನು ಹಂಚಿದ್ದಾರೆ.

ಪ್ರತಿಭಟನೆ ನಡೆಸಿದ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ ಹಾಗೂ ಬಂಧನಕ್ಕೊಳಗಾಗಿದ್ದ ಕೆಲ ಪ್ರತಿಭಟನಾಕಾರರನ್ನು ತಕ್ಷಣ ಬಿಡುಗಡೆಗೊಳಿಸಲಾಗಿದೆ. ಇನ್ನೂ ಕೆಲವರನ್ನು ಕಬ್ಬನ್ ಪಾರ್ಕ್ ಮತ್ತು ಅಶೋಕ್ ನಗರದ ಪೊಲೀಸ್ ಠಾಣೆಗಳಲ್ಲಿ ಇರಿಸಲಾಗಿದೆ.

ಪಿಯುಸಿಎಲ್ ಪ್ರಧಾನ ಕಾರ್ಯದರ್ಶಿ ಐಶ್ವರ್ಯಾ ರವಿಕುಮಾರ್ ಘಟನೆ ಸಂಬಂಧ ಮಾತನಾಡಿ, ”ದೆಹಲಿ, ಮುಂಬೈ ಮತ್ತು ಬೆಂಗಳೂರಿನಂತಹ ನಗರಗಳಲ್ಲಿ ಪ್ಯಾಲೆಸ್ತೀನ್ ಪರವಾಗಿ ನಿಂತಿರುವ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸುತ್ತಿರುವುದು ದುರದೃಷ್ಟಕರ. ಭಾರತ ಯಾವಾಗಲೂ ಪ್ಯಾಲೆಸ್ತೀನ್ ಜೊತೆ ನಿಂತಿದೆ. ಅಧಿಕಾರದಲ್ಲಿರುವವರು ಏನೇ ಮಾಡಲು ಪ್ರಯತ್ನಿಸಿದರೂ ಪ್ಯಾಲೆಸ್ಟೀನಿಯಾದವರಿಗೆ ಬೆಂಬಲ ನೀಡುವ ಜನರನ್ನು ಒಟ್ಟಿಗೆ ಸೇರಿಸಲು ನಾವು ಪ್ರಯತ್ನಿಸಿದ್ದೇವೆ. ಅಲ್ಲಿನ ನರಮೇಧವು ಅತ್ಯಂತ ಕೆಟ್ಟ ಪರಿಸ್ಥಿತಿಗೆ ತಲುಪಿದೆ” ಎಂದು ಹೇಳಿದರು.

ಬ್ರಿಗೇಡ್‌ ರಸ್ತೆಯ ಕಾವೇರಿ ಎಂಪೋರಿಯಂ ವೃತ್ತದಿಂದ ಎಂ.ಜಿ. ರಸ್ತೆಯ ಮೆಟ್ರೊ ನಿಲ್ದಾಣದ ಪಾದಚಾರಿ ಮಾರ್ಗದಲ್ಲಿ ಮಾನವ ಸರಪಳಿ ನಿರ್ಮಿಸಲಾಗಿತ್ತು. ಕೆಲ ಪ್ರತಿಭಟನಾಕಾರರು ಪ್ಯಾಲೆಸ್ಟೀನ್ ಧ್ವಜ ಪ್ರದರ್ಶಿಸಿ ಪ್ಯಾಲೆಸ್ಟೀನ್‌ ಪರ ಘೋಷಣೆಗಳನ್ನು ಕೂಗುತ್ತಿದ್ದರು.

ಇದನ್ನೂ ಓದಿ: ‘ಹೆದರಿಸುವ ಪ್ರಯತ್ನ ಮಾಡಬೇಡಿ, ಎಲ್ಲದಕ್ಕೂ ಸಿದ್ಧರಿದ್ದೇವೆ’: ಇಸ್ರೇಲ್‌ಗೆ ಹಮಾಸ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...