Homeಮುಖಪುಟಬೆಂಗಳೂರು: ಪ್ಯಾಲೆಸ್ತೀನ್‌ ಬೆಂಬಲಿಸಿ ಎಂಜಿ ರಸ್ತೆಯಲ್ಲಿ ನೂರಾರು ಜನರಿಂದ ಪ್ರತಿಭಟನೆ

ಬೆಂಗಳೂರು: ಪ್ಯಾಲೆಸ್ತೀನ್‌ ಬೆಂಬಲಿಸಿ ಎಂಜಿ ರಸ್ತೆಯಲ್ಲಿ ನೂರಾರು ಜನರಿಂದ ಪ್ರತಿಭಟನೆ

- Advertisement -
- Advertisement -

ಹಮಾಸ್ ಸಶಸ್ತ್ರ ಗುಂಪನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದ ಮಂಗಳೂರಿನ ಝಾಕಿರ್‌ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನಡುವೆ ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್‌ಗೆ ಬೆಂಬಲಿಸಿ ಪ್ರತಿಭಟನೆಯೊಂದು ನಡೆದಿದೆ.

ಇಸ್ರೇಲ್‌-ಪ್ಯಾಲೆಸ್ತೀನ್‌ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ಪ್ಯಾಲೆಸ್ತೀನ್‌ಗೆ ಬೆಂಬಲ ನೀಡಲು ಅ.16ರ ಸಂಜೆ ಬೆಂಗಳೂರಿನ ಎಂಜಿ ರಸ್ತೆಯ ಮೆಟ್ರೋ ನಿಲ್ದಾಣದ ಬಳಿ ನೂರಾರು ಜನರು ಜಮಾಯಿಸಿದ್ದರು. ಪ್ಯಾಲೆಸ್ಟೀನ್‌ನ ಗಾಜಾ ಮೇಲೆ ಇಸ್ರೇಲ್‌ ನಡೆಸುತ್ತಿರುವ ದಾಳಿಯನ್ನು ಭಾರತ ಖಂಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಎಂಜಿ ರಸ್ತೆಯ ಉದ್ದಕ್ಕೂ ಮಾನವ ಸರಪಳಿ ನಿರ್ಮಿಸಿ ಮೇಣದಬತ್ತಿ ಹಿಡಿದು ಪ್ಯಾಲೆಸ್ತೀನ್‌ಗೆ ಬೆಂಬಲ ನೀಡುವಂತೆ ಕೋರಿಕೊಂಡರು. ಎಂಜಿ ರಸ್ತೆಯಲ್ಲಿ ಕೆಲ ಯುವಕರು-ಯುವತಿಯರು ಪ್ಯಾಲೆಸ್ತೀನ್‌ಗೆ ಬೆಂಬಲ ನೀಡುವಂತೆ ಪ್ರತಿಭಟನೆ ನಡೆಸಿ ಪ್ಯಾಲೆಸ್ತೀನ್‌ನಲ್ಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿಯ ಕಿರುಪುಸ್ತಕಗಳನ್ನು ಹಂಚಿದ್ದಾರೆ.

ಪ್ರತಿಭಟನೆ ನಡೆಸಿದ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ ಹಾಗೂ ಬಂಧನಕ್ಕೊಳಗಾಗಿದ್ದ ಕೆಲ ಪ್ರತಿಭಟನಾಕಾರರನ್ನು ತಕ್ಷಣ ಬಿಡುಗಡೆಗೊಳಿಸಲಾಗಿದೆ. ಇನ್ನೂ ಕೆಲವರನ್ನು ಕಬ್ಬನ್ ಪಾರ್ಕ್ ಮತ್ತು ಅಶೋಕ್ ನಗರದ ಪೊಲೀಸ್ ಠಾಣೆಗಳಲ್ಲಿ ಇರಿಸಲಾಗಿದೆ.

ಪಿಯುಸಿಎಲ್ ಪ್ರಧಾನ ಕಾರ್ಯದರ್ಶಿ ಐಶ್ವರ್ಯಾ ರವಿಕುಮಾರ್ ಘಟನೆ ಸಂಬಂಧ ಮಾತನಾಡಿ, ”ದೆಹಲಿ, ಮುಂಬೈ ಮತ್ತು ಬೆಂಗಳೂರಿನಂತಹ ನಗರಗಳಲ್ಲಿ ಪ್ಯಾಲೆಸ್ತೀನ್ ಪರವಾಗಿ ನಿಂತಿರುವ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸುತ್ತಿರುವುದು ದುರದೃಷ್ಟಕರ. ಭಾರತ ಯಾವಾಗಲೂ ಪ್ಯಾಲೆಸ್ತೀನ್ ಜೊತೆ ನಿಂತಿದೆ. ಅಧಿಕಾರದಲ್ಲಿರುವವರು ಏನೇ ಮಾಡಲು ಪ್ರಯತ್ನಿಸಿದರೂ ಪ್ಯಾಲೆಸ್ಟೀನಿಯಾದವರಿಗೆ ಬೆಂಬಲ ನೀಡುವ ಜನರನ್ನು ಒಟ್ಟಿಗೆ ಸೇರಿಸಲು ನಾವು ಪ್ರಯತ್ನಿಸಿದ್ದೇವೆ. ಅಲ್ಲಿನ ನರಮೇಧವು ಅತ್ಯಂತ ಕೆಟ್ಟ ಪರಿಸ್ಥಿತಿಗೆ ತಲುಪಿದೆ” ಎಂದು ಹೇಳಿದರು.

ಬ್ರಿಗೇಡ್‌ ರಸ್ತೆಯ ಕಾವೇರಿ ಎಂಪೋರಿಯಂ ವೃತ್ತದಿಂದ ಎಂ.ಜಿ. ರಸ್ತೆಯ ಮೆಟ್ರೊ ನಿಲ್ದಾಣದ ಪಾದಚಾರಿ ಮಾರ್ಗದಲ್ಲಿ ಮಾನವ ಸರಪಳಿ ನಿರ್ಮಿಸಲಾಗಿತ್ತು. ಕೆಲ ಪ್ರತಿಭಟನಾಕಾರರು ಪ್ಯಾಲೆಸ್ಟೀನ್ ಧ್ವಜ ಪ್ರದರ್ಶಿಸಿ ಪ್ಯಾಲೆಸ್ಟೀನ್‌ ಪರ ಘೋಷಣೆಗಳನ್ನು ಕೂಗುತ್ತಿದ್ದರು.

ಇದನ್ನೂ ಓದಿ: ‘ಹೆದರಿಸುವ ಪ್ರಯತ್ನ ಮಾಡಬೇಡಿ, ಎಲ್ಲದಕ್ಕೂ ಸಿದ್ಧರಿದ್ದೇವೆ’: ಇಸ್ರೇಲ್‌ಗೆ ಹಮಾಸ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...