Homeಮುಖಪುಟಬೆಂಗಳೂರು: ಪ್ಯಾಲೆಸ್ತೀನ್‌ ಬೆಂಬಲಿಸಿ ಎಂಜಿ ರಸ್ತೆಯಲ್ಲಿ ನೂರಾರು ಜನರಿಂದ ಪ್ರತಿಭಟನೆ

ಬೆಂಗಳೂರು: ಪ್ಯಾಲೆಸ್ತೀನ್‌ ಬೆಂಬಲಿಸಿ ಎಂಜಿ ರಸ್ತೆಯಲ್ಲಿ ನೂರಾರು ಜನರಿಂದ ಪ್ರತಿಭಟನೆ

- Advertisement -
- Advertisement -

ಹಮಾಸ್ ಸಶಸ್ತ್ರ ಗುಂಪನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದ ಮಂಗಳೂರಿನ ಝಾಕಿರ್‌ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನಡುವೆ ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್‌ಗೆ ಬೆಂಬಲಿಸಿ ಪ್ರತಿಭಟನೆಯೊಂದು ನಡೆದಿದೆ.

ಇಸ್ರೇಲ್‌-ಪ್ಯಾಲೆಸ್ತೀನ್‌ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ಪ್ಯಾಲೆಸ್ತೀನ್‌ಗೆ ಬೆಂಬಲ ನೀಡಲು ಅ.16ರ ಸಂಜೆ ಬೆಂಗಳೂರಿನ ಎಂಜಿ ರಸ್ತೆಯ ಮೆಟ್ರೋ ನಿಲ್ದಾಣದ ಬಳಿ ನೂರಾರು ಜನರು ಜಮಾಯಿಸಿದ್ದರು. ಪ್ಯಾಲೆಸ್ಟೀನ್‌ನ ಗಾಜಾ ಮೇಲೆ ಇಸ್ರೇಲ್‌ ನಡೆಸುತ್ತಿರುವ ದಾಳಿಯನ್ನು ಭಾರತ ಖಂಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಎಂಜಿ ರಸ್ತೆಯ ಉದ್ದಕ್ಕೂ ಮಾನವ ಸರಪಳಿ ನಿರ್ಮಿಸಿ ಮೇಣದಬತ್ತಿ ಹಿಡಿದು ಪ್ಯಾಲೆಸ್ತೀನ್‌ಗೆ ಬೆಂಬಲ ನೀಡುವಂತೆ ಕೋರಿಕೊಂಡರು. ಎಂಜಿ ರಸ್ತೆಯಲ್ಲಿ ಕೆಲ ಯುವಕರು-ಯುವತಿಯರು ಪ್ಯಾಲೆಸ್ತೀನ್‌ಗೆ ಬೆಂಬಲ ನೀಡುವಂತೆ ಪ್ರತಿಭಟನೆ ನಡೆಸಿ ಪ್ಯಾಲೆಸ್ತೀನ್‌ನಲ್ಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿಯ ಕಿರುಪುಸ್ತಕಗಳನ್ನು ಹಂಚಿದ್ದಾರೆ.

ಪ್ರತಿಭಟನೆ ನಡೆಸಿದ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ ಹಾಗೂ ಬಂಧನಕ್ಕೊಳಗಾಗಿದ್ದ ಕೆಲ ಪ್ರತಿಭಟನಾಕಾರರನ್ನು ತಕ್ಷಣ ಬಿಡುಗಡೆಗೊಳಿಸಲಾಗಿದೆ. ಇನ್ನೂ ಕೆಲವರನ್ನು ಕಬ್ಬನ್ ಪಾರ್ಕ್ ಮತ್ತು ಅಶೋಕ್ ನಗರದ ಪೊಲೀಸ್ ಠಾಣೆಗಳಲ್ಲಿ ಇರಿಸಲಾಗಿದೆ.

ಪಿಯುಸಿಎಲ್ ಪ್ರಧಾನ ಕಾರ್ಯದರ್ಶಿ ಐಶ್ವರ್ಯಾ ರವಿಕುಮಾರ್ ಘಟನೆ ಸಂಬಂಧ ಮಾತನಾಡಿ, ”ದೆಹಲಿ, ಮುಂಬೈ ಮತ್ತು ಬೆಂಗಳೂರಿನಂತಹ ನಗರಗಳಲ್ಲಿ ಪ್ಯಾಲೆಸ್ತೀನ್ ಪರವಾಗಿ ನಿಂತಿರುವ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸುತ್ತಿರುವುದು ದುರದೃಷ್ಟಕರ. ಭಾರತ ಯಾವಾಗಲೂ ಪ್ಯಾಲೆಸ್ತೀನ್ ಜೊತೆ ನಿಂತಿದೆ. ಅಧಿಕಾರದಲ್ಲಿರುವವರು ಏನೇ ಮಾಡಲು ಪ್ರಯತ್ನಿಸಿದರೂ ಪ್ಯಾಲೆಸ್ಟೀನಿಯಾದವರಿಗೆ ಬೆಂಬಲ ನೀಡುವ ಜನರನ್ನು ಒಟ್ಟಿಗೆ ಸೇರಿಸಲು ನಾವು ಪ್ರಯತ್ನಿಸಿದ್ದೇವೆ. ಅಲ್ಲಿನ ನರಮೇಧವು ಅತ್ಯಂತ ಕೆಟ್ಟ ಪರಿಸ್ಥಿತಿಗೆ ತಲುಪಿದೆ” ಎಂದು ಹೇಳಿದರು.

ಬ್ರಿಗೇಡ್‌ ರಸ್ತೆಯ ಕಾವೇರಿ ಎಂಪೋರಿಯಂ ವೃತ್ತದಿಂದ ಎಂ.ಜಿ. ರಸ್ತೆಯ ಮೆಟ್ರೊ ನಿಲ್ದಾಣದ ಪಾದಚಾರಿ ಮಾರ್ಗದಲ್ಲಿ ಮಾನವ ಸರಪಳಿ ನಿರ್ಮಿಸಲಾಗಿತ್ತು. ಕೆಲ ಪ್ರತಿಭಟನಾಕಾರರು ಪ್ಯಾಲೆಸ್ಟೀನ್ ಧ್ವಜ ಪ್ರದರ್ಶಿಸಿ ಪ್ಯಾಲೆಸ್ಟೀನ್‌ ಪರ ಘೋಷಣೆಗಳನ್ನು ಕೂಗುತ್ತಿದ್ದರು.

ಇದನ್ನೂ ಓದಿ: ‘ಹೆದರಿಸುವ ಪ್ರಯತ್ನ ಮಾಡಬೇಡಿ, ಎಲ್ಲದಕ್ಕೂ ಸಿದ್ಧರಿದ್ದೇವೆ’: ಇಸ್ರೇಲ್‌ಗೆ ಹಮಾಸ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...