Homeಮುಖಪುಟಬೆಂಗಳೂರು: ಪ್ಯಾಲೆಸ್ತೀನ್‌ ಬೆಂಬಲಿಸಿ ಎಂಜಿ ರಸ್ತೆಯಲ್ಲಿ ನೂರಾರು ಜನರಿಂದ ಪ್ರತಿಭಟನೆ

ಬೆಂಗಳೂರು: ಪ್ಯಾಲೆಸ್ತೀನ್‌ ಬೆಂಬಲಿಸಿ ಎಂಜಿ ರಸ್ತೆಯಲ್ಲಿ ನೂರಾರು ಜನರಿಂದ ಪ್ರತಿಭಟನೆ

- Advertisement -
- Advertisement -

ಹಮಾಸ್ ಸಶಸ್ತ್ರ ಗುಂಪನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದ ಮಂಗಳೂರಿನ ಝಾಕಿರ್‌ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನಡುವೆ ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್‌ಗೆ ಬೆಂಬಲಿಸಿ ಪ್ರತಿಭಟನೆಯೊಂದು ನಡೆದಿದೆ.

ಇಸ್ರೇಲ್‌-ಪ್ಯಾಲೆಸ್ತೀನ್‌ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ಪ್ಯಾಲೆಸ್ತೀನ್‌ಗೆ ಬೆಂಬಲ ನೀಡಲು ಅ.16ರ ಸಂಜೆ ಬೆಂಗಳೂರಿನ ಎಂಜಿ ರಸ್ತೆಯ ಮೆಟ್ರೋ ನಿಲ್ದಾಣದ ಬಳಿ ನೂರಾರು ಜನರು ಜಮಾಯಿಸಿದ್ದರು. ಪ್ಯಾಲೆಸ್ಟೀನ್‌ನ ಗಾಜಾ ಮೇಲೆ ಇಸ್ರೇಲ್‌ ನಡೆಸುತ್ತಿರುವ ದಾಳಿಯನ್ನು ಭಾರತ ಖಂಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಎಂಜಿ ರಸ್ತೆಯ ಉದ್ದಕ್ಕೂ ಮಾನವ ಸರಪಳಿ ನಿರ್ಮಿಸಿ ಮೇಣದಬತ್ತಿ ಹಿಡಿದು ಪ್ಯಾಲೆಸ್ತೀನ್‌ಗೆ ಬೆಂಬಲ ನೀಡುವಂತೆ ಕೋರಿಕೊಂಡರು. ಎಂಜಿ ರಸ್ತೆಯಲ್ಲಿ ಕೆಲ ಯುವಕರು-ಯುವತಿಯರು ಪ್ಯಾಲೆಸ್ತೀನ್‌ಗೆ ಬೆಂಬಲ ನೀಡುವಂತೆ ಪ್ರತಿಭಟನೆ ನಡೆಸಿ ಪ್ಯಾಲೆಸ್ತೀನ್‌ನಲ್ಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿಯ ಕಿರುಪುಸ್ತಕಗಳನ್ನು ಹಂಚಿದ್ದಾರೆ.

ಪ್ರತಿಭಟನೆ ನಡೆಸಿದ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ ಹಾಗೂ ಬಂಧನಕ್ಕೊಳಗಾಗಿದ್ದ ಕೆಲ ಪ್ರತಿಭಟನಾಕಾರರನ್ನು ತಕ್ಷಣ ಬಿಡುಗಡೆಗೊಳಿಸಲಾಗಿದೆ. ಇನ್ನೂ ಕೆಲವರನ್ನು ಕಬ್ಬನ್ ಪಾರ್ಕ್ ಮತ್ತು ಅಶೋಕ್ ನಗರದ ಪೊಲೀಸ್ ಠಾಣೆಗಳಲ್ಲಿ ಇರಿಸಲಾಗಿದೆ.

ಪಿಯುಸಿಎಲ್ ಪ್ರಧಾನ ಕಾರ್ಯದರ್ಶಿ ಐಶ್ವರ್ಯಾ ರವಿಕುಮಾರ್ ಘಟನೆ ಸಂಬಂಧ ಮಾತನಾಡಿ, ”ದೆಹಲಿ, ಮುಂಬೈ ಮತ್ತು ಬೆಂಗಳೂರಿನಂತಹ ನಗರಗಳಲ್ಲಿ ಪ್ಯಾಲೆಸ್ತೀನ್ ಪರವಾಗಿ ನಿಂತಿರುವ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸುತ್ತಿರುವುದು ದುರದೃಷ್ಟಕರ. ಭಾರತ ಯಾವಾಗಲೂ ಪ್ಯಾಲೆಸ್ತೀನ್ ಜೊತೆ ನಿಂತಿದೆ. ಅಧಿಕಾರದಲ್ಲಿರುವವರು ಏನೇ ಮಾಡಲು ಪ್ರಯತ್ನಿಸಿದರೂ ಪ್ಯಾಲೆಸ್ಟೀನಿಯಾದವರಿಗೆ ಬೆಂಬಲ ನೀಡುವ ಜನರನ್ನು ಒಟ್ಟಿಗೆ ಸೇರಿಸಲು ನಾವು ಪ್ರಯತ್ನಿಸಿದ್ದೇವೆ. ಅಲ್ಲಿನ ನರಮೇಧವು ಅತ್ಯಂತ ಕೆಟ್ಟ ಪರಿಸ್ಥಿತಿಗೆ ತಲುಪಿದೆ” ಎಂದು ಹೇಳಿದರು.

ಬ್ರಿಗೇಡ್‌ ರಸ್ತೆಯ ಕಾವೇರಿ ಎಂಪೋರಿಯಂ ವೃತ್ತದಿಂದ ಎಂ.ಜಿ. ರಸ್ತೆಯ ಮೆಟ್ರೊ ನಿಲ್ದಾಣದ ಪಾದಚಾರಿ ಮಾರ್ಗದಲ್ಲಿ ಮಾನವ ಸರಪಳಿ ನಿರ್ಮಿಸಲಾಗಿತ್ತು. ಕೆಲ ಪ್ರತಿಭಟನಾಕಾರರು ಪ್ಯಾಲೆಸ್ಟೀನ್ ಧ್ವಜ ಪ್ರದರ್ಶಿಸಿ ಪ್ಯಾಲೆಸ್ಟೀನ್‌ ಪರ ಘೋಷಣೆಗಳನ್ನು ಕೂಗುತ್ತಿದ್ದರು.

ಇದನ್ನೂ ಓದಿ: ‘ಹೆದರಿಸುವ ಪ್ರಯತ್ನ ಮಾಡಬೇಡಿ, ಎಲ್ಲದಕ್ಕೂ ಸಿದ್ಧರಿದ್ದೇವೆ’: ಇಸ್ರೇಲ್‌ಗೆ ಹಮಾಸ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...