Homeಕರ್ನಾಟಕಬೆಂಗಳೂರು: ಖಾಸಗಿ ವಿವಿಗೆ ನೀಡಿರುವ ಭೂಮಿ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು: ಖಾಸಗಿ ವಿವಿಗೆ ನೀಡಿರುವ ಭೂಮಿ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

- Advertisement -
- Advertisement -

ಖಾಸಗಿ ವಿದ್ಯಾಸಂಸ್ಥೆಯಾದ ಚಾಣಕ್ಯ ವಿವಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನಲ್ಲಿ 116 ಎಕರೆ ಭೂಮಿ ನೀಡಿರುವುದನ್ನು ಸರ್ಕಾರ ಈ ಕೂಡಲೇ ರದ್ದು ಮಾಡಬೇಕು ಎಂದು ಸಿಪಿಐಎಂನ ರಾಜ್ಯ ಸಮಿತಿ ಸದಸ್ಯ ಜಿ.ಸಿ.ಬೈಯ್ಯಾರೆಡ್ಡಿ ಒತ್ತಾಯಿಸಿದರು.

ಚಾಣಕ್ಯ ಖಾಸಗಿ ವಿವಿಗೆ ಅಕ್ರಮವಾಗಿ ನೀಡಿರುವ ಭೂಮಿ ರದ್ದತಿಗಾಗಿ ಕಾನೂನು ಉಲ್ಲಂಘನೆ ಮಾಡಿರುವ ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮಾರ್ಕ್ಸ್‌ ವಾದಿ ಕಮ್ಯುನಿಸ್ಟ್ ಪಕ್ಷದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ಬಳಿ 2019ರಲ್ಲಿ ಕೆಐಎಡಿಬಿ ರೈತರ ಫಲವತ್ತಾದ 1300 ಎಕರೆ ಕೃಷಿ ಭೂಮಿಯನ್ನು ಸ್ವಾಧೀನ ಮಾಡಿಕೊಂಡಿದೆ. ಅದರಲ್ಲಿ 116 ಎಕರೆ ಭೂಮಿಯನ್ನು ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಅಂದಿನ ಸರ್ಕಾರ ಚಾಣಕ್ಯ ವಿಶ್ವವಿದ್ಯಾಲಯ ಎಂಬ ಖಾಸಗಿ ಸಂಸ್ಥೆಗೆ ಅತೀ ಕಡಿಮೆ ದರದಲ್ಲಿ ನೀಡಿದೆ. ಇದರಿಂದ ಸರ್ಕಾರಕ್ಕೆ ₹250 ಕೋಟಿ ನಷ್ಟ ಉಂಟಾಗಿದೆ ಎಂದು ಆರೋಪಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೊಂದು ದೊಡ್ಡ ಹಗರಣವಾಗಿದ್ದು, ಇದನ್ನು ಇಲ್ಲಿಗೆ ಬಿಡುವ ಪ್ರಶ್ನೆಯೇ ಇಲ್ಲ. ರಾಜ್ಯಾದಾದ್ಯಂತ ಈ ರೀತಿಯ ಪ್ರಕರಣಗಳು ಹಲವಾರು ಬೆಳಕಿಗೆ ಬಂದಿದ್ದು ಈ ಹೋರಾಟವನ್ನು ರಾಜ್ಯವ್ಯಾಪಿ ವಿಸ್ತರಣೆ ಮಾಡುತ್ತೇವೆ ಎಂದು ಗುಡುಗಿದರು.

ದೇಶ ಸ್ವಾತಂತ್ರ್ಯ ಪಡೆದ ನಂತರ 70% ಜನರಿಗೆ ರಾಜಕೀಯ ಸ್ವಾತಂತ್ರ್ಯ ಮಾತ್ರ ಲಭಿಸಿದ್ದು, ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಇನ್ನೂ ಸಿಗಲಿಲ್ಲ. ತೊಂಬತ್ತರ ದಶಕದ ನಂತರ ಜಾಗತೀಕರಣದ ಪ್ರಭಾವದಿಂದ ದೇಶದಲ್ಲಿ ಏಳು ಲಕ್ಷ ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದುಡಿಯುವ ಕೈಗಳಿಗೆ ಕೆಲಸ ಸಿಗುತ್ತಿಲ್ಲ, ವ್ಯವಸಾಯ ಮಾಡಿ ಬದುಕಲು ಸರ್ಕಾರ ಭೂಮಿ ನೀಡುವುದಿಲ್ಲ. ರಾಜ್ಯದ ನಲವತ್ತು ಲಕ್ಷ ಎಕರೆ ಭೂಮಿಗೆ ದಲಿತರು, ಬಡ ರೈತರು ತುಂಡು ಭೂಮಿ ಪಡೆಯಲು ಅರ್ಜಿ ಹಾಕಿಕೊಂಡು ನಲವತ್ತು ವರ್ಷದಿಂದ ಕಾಯುತ್ತಿದ್ದಾರೆ. ಆದರೆ ಸರ್ಕಾರ ಅವರಿಗೆ ಭೂಮಿ‌ ನೀಡಲು ನಿರಾಕರಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರೈತರಿಗೆ ಇನ್ಮುಂದೆ ಸಾಗುವಳಿ ಚೀಟಿ ಕೊಡಲ್ಲ, ಸರ್ಕಾರಿ ಭೂಮಿಯನ್ನು ಲೀಸ್ಗೆ ಕೊಡ್ತೇವೆ ಎಂದು ಕಂದಾಯ ಸಚಿವ ಅಶೋಕ್ ಹೇಳಿದ್ದಾರೆ. ಸರ್ಕಾರ ಭೂಮಿಯನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ‌ ಕೊಟ್ಟು ರೈತರನ್ನು ಒಕ್ಕಲೆಬ್ಬಿಸಿ ಕಂಪನಿ ಕೃಷಿಗೆ ಪ್ರೊತ್ಸಾಹ ನೀಡುತ್ತಿದೆ ಎಂದು ಎಚ್ಚರಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರ ಬಳಿ ಜಮೀನುಗಳು ಇಲ್ಲ. ಅದರಲ್ಲೂ ದೇವನಹಳ್ಳಿ ತಾಲ್ಲೂಕಿನ 70% ಭೂಮಿ ರೈತರ ಬಳಿ ಇಲ್ಲ. ಮುವ್ವತ್ತು, ಐವತ್ತು ಮತ್ತು ನೂರು ಎಕರೆ ಭೂಮಿಯನ್ನು ನಗರದ ಬಂಡವಾಳಶಾಹಿಗಳು ಖರೀದಿಸಿ ಕಾಂಪೌಂಡ್ ಹಾಕಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರು ಬದುಕುವುದಾದರೂ ಹೇಗೆ ಎಂದು ಪ್ರಶ್ನಿಸಿದರು.

ಸರ್ಕಾರ ದೇಶಭಕ್ತಿಯ ಪಾಠ ಮಾಡುತ್ತಿದೆ. ಹಸಿವನ್ನು‌ ನೀಗಿಸುವ ರೈತರು ಮತ್ತು ಸಂಪತ್ತನ್ನು ಸೃಷ್ಟಿ ಮಾಡುವ ಕಾರ್ಮಿಕರು ನಿಜವಾದ ದೇಶಪ್ರೇಮಿಗಳು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕೆಐಎಡಿಬಿ 2019ರಲ್ಲಿ ರೈತರಿಂದ ಸ್ವಾಧೀನ ಮಾಡಿಕೊಂಡ ಭೂಮಿಯನ್ನು ಯಾವುದೇ ಅಭಿವೃದ್ಧಿ ಮಾಡದೆ ಖಾಸಗಿ ಸಂಸ್ಥೆಯಾದ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಎಕರೆಗೆ 50 ಲಕ್ಷ ರೂ.ನಂತೆ ಕೊಡಲಾಗಿದೆ ಎಂದು ಆರೋಪಿಸಿದ ಅವರು, ಸರ್ಕಾರಿ ವಿವಿ ಆದರೆ ಎಕರೆ ಭೂಮಿಯನ್ನ 25 ಲಕ್ಷಕ್ಕೆ ಕೊಡಲಿ, ನಮ್ಮ ಅಭ್ಯಾಂತರವಿಲ್ಲ. ನಿಯಮಗಳ ಪ್ರಕಾರ ಕೆಐಎಡಿಬಿ ಸ್ವಾಧೀನ ಮಾಡಿಕೊಂಡ ಭೂಮಿಯನ್ನು ಕಾರ್ಖಾನೆಗಳ ಅಭಿವೃದ್ಧಿಗೆ ಬಳಸಬೇಕು. ಆದರೆ ರಾಜಕಾರಣಿಗಳು ಮತ್ತು ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ಖಾಸಗಿ ವಿವಿಗೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಬೊಕ್ಕಸಕ್ಕೆ ನಷ್ಟಮಾಡಿ ವಿವಿಗೆ ಭೂಮಿ ನೀಡಿರುವವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪಕ್ಷದ ಜಿಲ್ಲಾ ಕಾರ್ಯದರ್ಶಿ ಚಂದ್ರತೇಜಸ್ವಿ‌‌ ಮಾತನಾಡಿ, “ಕೆಐಎಡಿಬಿ ಸ್ವಾಧೀನ ಮಾಡಿಕೊಂಡ ಭೂಮಿಯನ್ನು ಸರ್ಕಾರ 116 ಖಾಸಗಿ ವಿವಿಗೆ ಮಂಜೂರಿ ಮಾಡಿದೆ. ಇದರಿಂದ ರಾಜ್ಯಕ್ಕೆ 250 ಕೋಟಿ ನಷ್ಟ ಉಂಟಾಗಿದೆ. ಬಿಜೆಪಿ ಸರ್ಕಾರದಲ್ಲಿ ತಮ್ಮ ಆರ್‌ಎಸ್‌ಎಸ್‌ನ ಅಂಗ ಸಂಸ್ಥೆಗಳಿಗೆ ಸಾವಿರಾರು ಎಕರೆ ಭೂಮಿ‌ ಮಂಜೂರು ಮಾಡಿದ್ದಾರೆ” ಎಂದು ದೂರಿದರು.

ಇದನ್ನೂ ಓದಿರಿ: ಮಧ್ಯಪ್ರದೇಶ: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ಪ್ರೀತಂ ಸಿಂಗ್‌ ಲೋಧಿ ಬಿಜೆಪಿಯಿಂದ ಉಚ್ಚಾಟನೆ

ನಗರ ಜಿಲ್ಲೆಯ ಕುರುಬರಹಳ್ಳಿ ಬಳಿ ನಿವೇಶನಕ್ಕಾಗಿ ಮೀಸಲಿಟ್ಟ 35 ಎಕರೆ ಭೂಮಿಯನ್ನು ಜನಸೇವಾ ಟ್ರಸ್ಟ್ ಶಿಕ್ಷಣ ಸಂಸ್ಥೆಗೆ ಅಕ್ರಮವಾಗಿ ಮಂಜೂರು ಮಾಡಿರುವುದು ತಾಜಾ ಉದಾಹರಣೆಯಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಕೆಐಎಡಿಬಿ ನಿಯಮ ಮೀರಿ ಚಾಣಕ್ಯ ಖಾಸಗಿ ವಿವಿಗೆ ಭೂಮಿ ನೀಡಿರುವುದನ್ನು ಈ ಕೂಡಲೇ ರದ್ದು ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಆರ್.ಲತಾ ಅವರ ಮೂಲಕ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಕಮ್ಯುನಿಸ್ಟ್ ಪಕ್ಷದ ನಾಯಕರಾದ ಹರೀಂದ್ರ, ರುದ್ರಾರಾಧ್ಯ, ರೇಣುಕಾರಾಧ್ಯ, ಡಿಎಸ್‌ಎಸ್‌ನ ವೆಂಕಟರಾಜು, ಪಿ.ಎ.ವೆಂಕಟೇಶ್, ದಲಿತ ಮುಖಂಡ ಕಾರಳ್ಳಿ ಶ್ರೀನಿವಾಸ್, ರೈತ ಮುಖಂಡರಾದ ಮುಕುಂದ, ಪ್ರಮೋದ್ ಪ್ರತಿಭಟನೆಯಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...