Homeಕರ್ನಾಟಕಬೆಂಗಳೂರು: ಖಾಸಗಿ ವಿವಿಗೆ ನೀಡಿರುವ ಭೂಮಿ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು: ಖಾಸಗಿ ವಿವಿಗೆ ನೀಡಿರುವ ಭೂಮಿ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

- Advertisement -
- Advertisement -

ಖಾಸಗಿ ವಿದ್ಯಾಸಂಸ್ಥೆಯಾದ ಚಾಣಕ್ಯ ವಿವಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನಲ್ಲಿ 116 ಎಕರೆ ಭೂಮಿ ನೀಡಿರುವುದನ್ನು ಸರ್ಕಾರ ಈ ಕೂಡಲೇ ರದ್ದು ಮಾಡಬೇಕು ಎಂದು ಸಿಪಿಐಎಂನ ರಾಜ್ಯ ಸಮಿತಿ ಸದಸ್ಯ ಜಿ.ಸಿ.ಬೈಯ್ಯಾರೆಡ್ಡಿ ಒತ್ತಾಯಿಸಿದರು.

ಚಾಣಕ್ಯ ಖಾಸಗಿ ವಿವಿಗೆ ಅಕ್ರಮವಾಗಿ ನೀಡಿರುವ ಭೂಮಿ ರದ್ದತಿಗಾಗಿ ಕಾನೂನು ಉಲ್ಲಂಘನೆ ಮಾಡಿರುವ ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮಾರ್ಕ್ಸ್‌ ವಾದಿ ಕಮ್ಯುನಿಸ್ಟ್ ಪಕ್ಷದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ಬಳಿ 2019ರಲ್ಲಿ ಕೆಐಎಡಿಬಿ ರೈತರ ಫಲವತ್ತಾದ 1300 ಎಕರೆ ಕೃಷಿ ಭೂಮಿಯನ್ನು ಸ್ವಾಧೀನ ಮಾಡಿಕೊಂಡಿದೆ. ಅದರಲ್ಲಿ 116 ಎಕರೆ ಭೂಮಿಯನ್ನು ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಅಂದಿನ ಸರ್ಕಾರ ಚಾಣಕ್ಯ ವಿಶ್ವವಿದ್ಯಾಲಯ ಎಂಬ ಖಾಸಗಿ ಸಂಸ್ಥೆಗೆ ಅತೀ ಕಡಿಮೆ ದರದಲ್ಲಿ ನೀಡಿದೆ. ಇದರಿಂದ ಸರ್ಕಾರಕ್ಕೆ ₹250 ಕೋಟಿ ನಷ್ಟ ಉಂಟಾಗಿದೆ ಎಂದು ಆರೋಪಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೊಂದು ದೊಡ್ಡ ಹಗರಣವಾಗಿದ್ದು, ಇದನ್ನು ಇಲ್ಲಿಗೆ ಬಿಡುವ ಪ್ರಶ್ನೆಯೇ ಇಲ್ಲ. ರಾಜ್ಯಾದಾದ್ಯಂತ ಈ ರೀತಿಯ ಪ್ರಕರಣಗಳು ಹಲವಾರು ಬೆಳಕಿಗೆ ಬಂದಿದ್ದು ಈ ಹೋರಾಟವನ್ನು ರಾಜ್ಯವ್ಯಾಪಿ ವಿಸ್ತರಣೆ ಮಾಡುತ್ತೇವೆ ಎಂದು ಗುಡುಗಿದರು.

ದೇಶ ಸ್ವಾತಂತ್ರ್ಯ ಪಡೆದ ನಂತರ 70% ಜನರಿಗೆ ರಾಜಕೀಯ ಸ್ವಾತಂತ್ರ್ಯ ಮಾತ್ರ ಲಭಿಸಿದ್ದು, ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಇನ್ನೂ ಸಿಗಲಿಲ್ಲ. ತೊಂಬತ್ತರ ದಶಕದ ನಂತರ ಜಾಗತೀಕರಣದ ಪ್ರಭಾವದಿಂದ ದೇಶದಲ್ಲಿ ಏಳು ಲಕ್ಷ ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದುಡಿಯುವ ಕೈಗಳಿಗೆ ಕೆಲಸ ಸಿಗುತ್ತಿಲ್ಲ, ವ್ಯವಸಾಯ ಮಾಡಿ ಬದುಕಲು ಸರ್ಕಾರ ಭೂಮಿ ನೀಡುವುದಿಲ್ಲ. ರಾಜ್ಯದ ನಲವತ್ತು ಲಕ್ಷ ಎಕರೆ ಭೂಮಿಗೆ ದಲಿತರು, ಬಡ ರೈತರು ತುಂಡು ಭೂಮಿ ಪಡೆಯಲು ಅರ್ಜಿ ಹಾಕಿಕೊಂಡು ನಲವತ್ತು ವರ್ಷದಿಂದ ಕಾಯುತ್ತಿದ್ದಾರೆ. ಆದರೆ ಸರ್ಕಾರ ಅವರಿಗೆ ಭೂಮಿ‌ ನೀಡಲು ನಿರಾಕರಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರೈತರಿಗೆ ಇನ್ಮುಂದೆ ಸಾಗುವಳಿ ಚೀಟಿ ಕೊಡಲ್ಲ, ಸರ್ಕಾರಿ ಭೂಮಿಯನ್ನು ಲೀಸ್ಗೆ ಕೊಡ್ತೇವೆ ಎಂದು ಕಂದಾಯ ಸಚಿವ ಅಶೋಕ್ ಹೇಳಿದ್ದಾರೆ. ಸರ್ಕಾರ ಭೂಮಿಯನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ‌ ಕೊಟ್ಟು ರೈತರನ್ನು ಒಕ್ಕಲೆಬ್ಬಿಸಿ ಕಂಪನಿ ಕೃಷಿಗೆ ಪ್ರೊತ್ಸಾಹ ನೀಡುತ್ತಿದೆ ಎಂದು ಎಚ್ಚರಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರ ಬಳಿ ಜಮೀನುಗಳು ಇಲ್ಲ. ಅದರಲ್ಲೂ ದೇವನಹಳ್ಳಿ ತಾಲ್ಲೂಕಿನ 70% ಭೂಮಿ ರೈತರ ಬಳಿ ಇಲ್ಲ. ಮುವ್ವತ್ತು, ಐವತ್ತು ಮತ್ತು ನೂರು ಎಕರೆ ಭೂಮಿಯನ್ನು ನಗರದ ಬಂಡವಾಳಶಾಹಿಗಳು ಖರೀದಿಸಿ ಕಾಂಪೌಂಡ್ ಹಾಕಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರು ಬದುಕುವುದಾದರೂ ಹೇಗೆ ಎಂದು ಪ್ರಶ್ನಿಸಿದರು.

ಸರ್ಕಾರ ದೇಶಭಕ್ತಿಯ ಪಾಠ ಮಾಡುತ್ತಿದೆ. ಹಸಿವನ್ನು‌ ನೀಗಿಸುವ ರೈತರು ಮತ್ತು ಸಂಪತ್ತನ್ನು ಸೃಷ್ಟಿ ಮಾಡುವ ಕಾರ್ಮಿಕರು ನಿಜವಾದ ದೇಶಪ್ರೇಮಿಗಳು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಕೆಐಎಡಿಬಿ 2019ರಲ್ಲಿ ರೈತರಿಂದ ಸ್ವಾಧೀನ ಮಾಡಿಕೊಂಡ ಭೂಮಿಯನ್ನು ಯಾವುದೇ ಅಭಿವೃದ್ಧಿ ಮಾಡದೆ ಖಾಸಗಿ ಸಂಸ್ಥೆಯಾದ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಎಕರೆಗೆ 50 ಲಕ್ಷ ರೂ.ನಂತೆ ಕೊಡಲಾಗಿದೆ ಎಂದು ಆರೋಪಿಸಿದ ಅವರು, ಸರ್ಕಾರಿ ವಿವಿ ಆದರೆ ಎಕರೆ ಭೂಮಿಯನ್ನ 25 ಲಕ್ಷಕ್ಕೆ ಕೊಡಲಿ, ನಮ್ಮ ಅಭ್ಯಾಂತರವಿಲ್ಲ. ನಿಯಮಗಳ ಪ್ರಕಾರ ಕೆಐಎಡಿಬಿ ಸ್ವಾಧೀನ ಮಾಡಿಕೊಂಡ ಭೂಮಿಯನ್ನು ಕಾರ್ಖಾನೆಗಳ ಅಭಿವೃದ್ಧಿಗೆ ಬಳಸಬೇಕು. ಆದರೆ ರಾಜಕಾರಣಿಗಳು ಮತ್ತು ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ಖಾಸಗಿ ವಿವಿಗೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಬೊಕ್ಕಸಕ್ಕೆ ನಷ್ಟಮಾಡಿ ವಿವಿಗೆ ಭೂಮಿ ನೀಡಿರುವವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪಕ್ಷದ ಜಿಲ್ಲಾ ಕಾರ್ಯದರ್ಶಿ ಚಂದ್ರತೇಜಸ್ವಿ‌‌ ಮಾತನಾಡಿ, “ಕೆಐಎಡಿಬಿ ಸ್ವಾಧೀನ ಮಾಡಿಕೊಂಡ ಭೂಮಿಯನ್ನು ಸರ್ಕಾರ 116 ಖಾಸಗಿ ವಿವಿಗೆ ಮಂಜೂರಿ ಮಾಡಿದೆ. ಇದರಿಂದ ರಾಜ್ಯಕ್ಕೆ 250 ಕೋಟಿ ನಷ್ಟ ಉಂಟಾಗಿದೆ. ಬಿಜೆಪಿ ಸರ್ಕಾರದಲ್ಲಿ ತಮ್ಮ ಆರ್‌ಎಸ್‌ಎಸ್‌ನ ಅಂಗ ಸಂಸ್ಥೆಗಳಿಗೆ ಸಾವಿರಾರು ಎಕರೆ ಭೂಮಿ‌ ಮಂಜೂರು ಮಾಡಿದ್ದಾರೆ” ಎಂದು ದೂರಿದರು.

ಇದನ್ನೂ ಓದಿರಿ: ಮಧ್ಯಪ್ರದೇಶ: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ಪ್ರೀತಂ ಸಿಂಗ್‌ ಲೋಧಿ ಬಿಜೆಪಿಯಿಂದ ಉಚ್ಚಾಟನೆ

ನಗರ ಜಿಲ್ಲೆಯ ಕುರುಬರಹಳ್ಳಿ ಬಳಿ ನಿವೇಶನಕ್ಕಾಗಿ ಮೀಸಲಿಟ್ಟ 35 ಎಕರೆ ಭೂಮಿಯನ್ನು ಜನಸೇವಾ ಟ್ರಸ್ಟ್ ಶಿಕ್ಷಣ ಸಂಸ್ಥೆಗೆ ಅಕ್ರಮವಾಗಿ ಮಂಜೂರು ಮಾಡಿರುವುದು ತಾಜಾ ಉದಾಹರಣೆಯಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಕೆಐಎಡಿಬಿ ನಿಯಮ ಮೀರಿ ಚಾಣಕ್ಯ ಖಾಸಗಿ ವಿವಿಗೆ ಭೂಮಿ ನೀಡಿರುವುದನ್ನು ಈ ಕೂಡಲೇ ರದ್ದು ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಆರ್.ಲತಾ ಅವರ ಮೂಲಕ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಕಮ್ಯುನಿಸ್ಟ್ ಪಕ್ಷದ ನಾಯಕರಾದ ಹರೀಂದ್ರ, ರುದ್ರಾರಾಧ್ಯ, ರೇಣುಕಾರಾಧ್ಯ, ಡಿಎಸ್‌ಎಸ್‌ನ ವೆಂಕಟರಾಜು, ಪಿ.ಎ.ವೆಂಕಟೇಶ್, ದಲಿತ ಮುಖಂಡ ಕಾರಳ್ಳಿ ಶ್ರೀನಿವಾಸ್, ರೈತ ಮುಖಂಡರಾದ ಮುಕುಂದ, ಪ್ರಮೋದ್ ಪ್ರತಿಭಟನೆಯಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...