Homeಕರ್ನಾಟಕನಟಿ ರಾಗಿಣಿ, ಸಂಜನಾ ಡ್ರಗ್ಸ್ ಸೇವಿಸಿದ್ದು FSL ಪರೀಕ್ಷೆಯಲ್ಲಿ ದೃಢ

ನಟಿ ರಾಗಿಣಿ, ಸಂಜನಾ ಡ್ರಗ್ಸ್ ಸೇವಿಸಿದ್ದು FSL ಪರೀಕ್ಷೆಯಲ್ಲಿ ದೃಢ

- Advertisement -
- Advertisement -

ಡ್ರಗ್ ಕೇಸ್‌ಗೆ ಸಂಬಂಧಿಸಿದಂತೆ ಬಂಧನದಲ್ಲಿದ್ದು ಜಾಮೀನಿನ ಮೇಲೆ ಹೊರ ಬಂದಿರುವ ಸ್ಯಾಂಡಲ್‌ವುಡ್ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಡ್ರಗ್ಸ್ ಸೇವಿಸಿದ್ದರು ಎಂದು FSL ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇಂತಹದ್ದೆ ಡ್ರಗ್ಸ್ ಸೇವಿಸಿದ್ದರು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದ ರಾಗಿಣಿ ಮತ್ತು ಸಂಜನಾ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಇವರಿಂದ ಕೂದಲಿನ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್‌ ಪರೀಕ್ಷೆಗೆ ಕಳಿಸಲಾಗಿದ್ದು, ನಿನ್ನೆ ಪರೀಕ್ಷಾ ವರದಿ ಬಂದಿದೆ. ವರದಿಯಲ್ಲಿ ಇವರಿಬ್ಬರಿಗೂ ಡ್ರಗ್ಸ್ ತೆಗೆದುಕೊಳ್ಳುವ ಅಭ್ಯಾಸವಿತ್ತು ಎನ್ನಲಾಗಿದೆ.

ಸಿಸಿಬಿ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದು, ನಟಿಯರ ಕೂದಲು ಸೇರಿದ ವಿವಿಧ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್ ಪರೀಕ್ಷೆಗೆ ಕಳಿಸಲಾಗಿತ್ತು. ಸ್ಯಾಂಪಲ್ ಪರೀಕ್ಷೆಯಲ್ಲಿ ಇವರು ಡ್ರಗ್ ಸೇವಿಸಿರುವುದು ದೃಢಪಟ್ಟಿದೆ. ತನಿಖಾಧಿಕಾರಿ ಇನ್ಸ್​ಪೆಕ್ಟರ್​ ಪುನೀತ್​ ಬೆಂಗಳೂರಿನ 33ನೇ CCH​ ಕೋರ್ಟ್​ಗೆ FSL  ವರದಿಯನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: ನಟ ಡಾಲಿ ಧನಂಜಯಗೆ ಜನ್ಮದಿನದ ಸಂಭ್ರಮ: ಸಾಲು ಸಾಲು ಚಿತ್ರಗಳು ಘೋಷಣೆ

10 ತಿಂಗಳ ನಂತರ ಹೈದರಾಬಾದ್ FSL ಕೇಂದ್ರದಿಂದ ರಿಪೋರ್ಟ್ ಬಂದಿದ್ದು, ಆರೋಪ ಸಾಬೀತಾಗಿರುವುದರಿಂದ ನಟಿಯರಿಗೆ ಮತ್ತೆ ಸಂಕಷ್ಟ ಎದುರಾಗಲಿದೆ. ಎಫ್‌ಎಸ್‌ಎಲ್ ವರದಿ ಕೈ ಸೇರಿರುವುದರಿಂದ ಸಿಸಿಬಿ ತನಿಖೆ ಮತ್ತಷ್ಟು ತೀವ್ರಗೊಳ್ಳಲಿದೆ ಎನ್ನಲಾಗಿದೆ. ಆದರೆ, ಜಾಮೀನಿನ ಮೇಲೆ ಇರುವುದರಿಂದ ಸದ್ಯಕ್ಕೆ ಬಂಧನದ ಭೀತಿ ಇಲ್ಲ ಎನ್ನಲಾಗುತ್ತಿದೆ.

ಪಾರ್ಟಿಗಳಲ್ಲಿ ಡ್ರಗ್ಸ್ ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ಪ್ರಕರಣವನ್ನು ಬೆನ್ನತ್ತಿದ ಸಿಸಿಬಿ ಪೊಲೀಸರು, ಕೆಲವರನ್ನು ಬಂಧಿಸಿದ್ದರು. ಕೆಲವರು ಈಗಾಗಲೇ ಜಾಮೀನು ಮೇಲೆ ಹೊರಗೆ ಬಂದಿದ್ದಾರೆ. ಪ್ರಕರಣದ ತನಿಖೆ ಪೂರ್ಣಗೊಳಿಸಿದ್ದ ಪೊಲೀಸರು, 2,900 ಪುಟಗಳ ದೋಷಾರೋಪ ಪಟ್ಟಿಯನ್ನು ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಬಾಲಿವುಡ್‌ ನಟ ಸುಶಾಂತ್ ಸಿಂಗ್ ಅಸಹಜ ಸಾವಿನ ನಂತರ ದೇಶದ ಚಿತ್ರರಂಗ ವಲಯದಲ್ಲಿ ಡ್ರಗ್ಸ್‌ ಮಾಫಿಯಾ ಬಗ್ಗೆ ಸಾಕಷ್ಟು ಸುದ್ದಿಗಳು ಹೊರಬಂದಿದ್ದವು. ಇದರಲ್ಲಿ ಹಲವಾರು ತಾರೆಯರೂ ಸೇರಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದಲ್ಲಿಯೂ ಈ ಜಾಲ ಹರಡಿಕೊಂಡಿದೆ ಎಂಬ ಸುಳಿವು ಸಿಕ್ಕ ನಂತರ ಪೊಲೀಸರು ತನಿಖೆ ಆರಂಭಿಸಿದ್ದರು.


ಇದನ್ನೂ ಓದಿ: ಡ್ರಗ್ಸ್‌ ಪ್ರಕರಣ: ರಾಗಿಣಿ, ಸಂಜನಾ ಸೇರಿದಂತೆ 25 ಜನರ ವಿರುದ್ಧ 2,900 ಪುಟಗಳ ಚಾರ್ಜ್‌ಶೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...