ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ರಸ್ತೆಗಳಲ್ಲೇ ನದಿಯಂತೆ ನೀರು ಹರಿಯುತ್ತಿದ್ದು ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ನಡುವೆ ಜಲವಾವೃತ ರಸ್ತೆಯಲ್ಲಿ 23 ವರ್ಷದ ಯುವತಿಯೊಬ್ಬರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಸಾರ್ವಜನಿಕರು ರಾಜ್ಯ ಸರ್ಕಾರದ ಅಸಮರ್ಪಕ ನಿರ್ವಹಣೆ ಮತ್ತು ನಿರ್ಲಕ್ಷ್ಯವನ್ನು ಪ್ರಶ್ನಿಸುತ್ತಿದ್ದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃತ ಯುವತಿಯನ್ನು ಅಖಿಲಾ ಎಂದು ಗುರುತಿಸಲಾಗಿದ್ದು, ಸೋಮವಾರ ರಾತ್ರಿ ತನ್ನ ಸ್ಕೂಟಿಯಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ನಗರದ ವೈಟ್ಫೀಲ್ಡ್ ಪ್ರದೇಶದ ಬಳಿ ವಿದ್ಯುತ್ ಕಂಬಕ್ಕೆ ಆಕಸ್ಮಿಕವಾಗಿ ತಗುಲಿ ಸಾವಿಗೀಡಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ರಸ್ತೆಯು ಜಲಾವೃತಗೊಂಡಿದ್ದರಿಂದ ಯುವತಿ ತನ್ನ ಸ್ಕೂಟಿಯಿಂದ ಇಳಿದು ಮೊಣಕಾಲು ಆಳದ ನೀರಿನಲ್ಲಿ ದ್ವಿಚಕ್ರ ವಾಹನವನ್ನು ತಳ್ಳಿಕೊಂಡು ಹೋಗುತ್ತಿದ್ದರು. ಈ ವೇಳೆ ಅವರು ವಿದ್ಯುತ್ ಕಂಬಕ್ಕೆ ತಗುಲಿದ್ದರಿಂದ ವಿದ್ಯುತ್ ಸ್ಪರ್ಶವಾಗಿದೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರನ್ನು ಅಲ್ಲಿಗೆ ತರುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
Accountability and responsibility is what is missing.
A 23 year girl died in near Sarjapur area of Bengaluru due to electrocution. Severe water-logging led to her death. Akila was returning home on her scooter and due to flooding, she lost balance and hit electric pole. pic.twitter.com/WjtwIOh3Iw
— Suraj Suresh (@Suraj_Suresh16) September 6, 2022
ಅವರ ಸಾವಿಗೆ ಬಿಬಿಎಂಪಿ ಅಧಿಕಾರಿಗಳು ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ನಿರ್ಲಕ್ಷ್ಯವೇ ಕಾರಣ ಎಂದು ಅಖಿಲಾ ಕುಟುಂಬಸ್ಥರು ಆರೋಪಿಸಿದ್ದಾರೆ.
#bengaluru innovation Hub for a reason 💜#bengalururains #monsoon #BBMP #BellandurFloods #Bangalore pic.twitter.com/GTQs8HvSKt
— Govind Kumar (@hey__goku) September 5, 2022
ಮಳೆಯಿಂದಾಗಿ ಬೆಂಗಳೂರಿನಲ್ಲಿ ವರದಿಯಾದ ಮೊದಲ ಸಾವು ಇದಾಗಿದೆ. ರಾತ್ರಿ ಸುರಿದ ಮಳೆಯಿಂದಾಗಿ ಕೆರೆಗಳು ಮತ್ತು ಚರಂಡಿಗಳು ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಮುಳುಗಡೆಯಾಗಿದೆ. ರೇನ್ಬೋ ಡ್ರೈವ್ ಲೇಔಟ್, ಸನ್ನಿ ಬ್ರೂಕ್ಸ್ ಲೇಔಟ್, ಸರ್ಜಾಪುರ ರಸ್ತೆಯ ಕೆಲವು ಪ್ರದೇಶಗಳಲ್ಲಿ ಜಲಾವೃತವಾಗಿದ್ದು, ಬೆಳಿಗ್ಗೆ ವಿದ್ಯಾರ್ಥಿಗಳು ಮತ್ತು ಕಚೇರಿಗೆ ತೆರಳುವವರನ್ನು ಸಾಗಿಸಲು ಟ್ರ್ಯಾಕ್ಟರ್ ಮತ್ತು ದೋಣಿಗಳನ್ನು ಬಳಸಲಾಗಿದೆ.
Bangalore rains hit hard on Sunday night!!#bangalorerains #bangaloretraffic #bellandur #bellandurbridge pic.twitter.com/vVdxRER9yY
— nsrivastava.eth (@nitinkr1991) September 5, 2022
ಮಳೆಯಿಂದಾಗಿ ತೊಂದರೆಗೀಡಾದರೆ ಬಿಬಿಎಂಪಿ 24×7 ಸಹಾಯವಾಣಿ (22660000) ಮತ್ತು WhatsApp ಸಹಾಯವಾಣಿ (9480685700), ಜೊತೆಗೆ ವಲಯ ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ. ಅಲ್ಲದೆ ಟೋಲ್ ಫ್ರೀ ಸಂಖ್ಯೆ 1533 ಕೂಡಾ ಮಳೆ ಸಹಾಯವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ.
In Bangalore, instead of the bus getting you to office, you have to get the bus to office. #bangalorerain pic.twitter.com/bAnKlHl89O
— Dale Vaz (@dale_vaz) September 5, 2022
ಬಿಬಿಎಂಪಿ ವ್ಯಾಪ್ತಿಯಲ್ಲಿ ಮಂಗಳವಾರ ಕೂಡಾ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ ಅಥವಾ ವ್ಯಾಪಕ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ವೈಟ್ಫೀಲ್ಡ್, ಬೆಳ್ಳಂದೂರು, ಮಾರತ್ತಹಳ್ಳಿ ಜಲಾವೃತಗೊಂಡಿದ್ದು ಸಂಚಾರ ಸಮಸ್ಯೆ ಎದುರಿಸುತ್ತಿದೆ. ಅಲ್ಲದೆ ಇಂದಿರಾನಗರ, ಕೆಂಗೇರಿ, ಆರ್.ಆರ್. ನಗರ, ಬೊಮ್ಮನಹಳ್ಳಿ, ಮಹದೇವಪುರ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿದೆ.
Shhhhhh..! Just keep paying the taxes!!#Bangalore #BengaluruRain pic.twitter.com/ds7xztqzYz
— harsh nandan (@HNandan23) September 5, 2022
ಬೆಂಗಳೂರಿನ ನಾಗರಿಕರು ಮಳೆಯಿಂದಾಗಿ ಸಂಕಷ್ಟ ಪಡುತ್ತಿದ್ದರೆ ಬೆಂಗಳೂರು ದಕ್ಷಿಣದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ನಗರದ ಹೊಟೇಲ್ ಒಂದರ ತಿಂಡಿಯ ಬಗ್ಗೆ ಪ್ರಮೋಷನ್ ಮಾಡುವಲ್ಲಿ ನಿರತರಾಗಿದ್ದರು. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ಉಂಟಾಗಿದೆ.
Video dated 5th September.@Tejasvi_Surya was enjoying a good breakfast while Bangalore was drowning.
Has he visited even a single flood affected region? pic.twitter.com/uFnZ4Rjs1m— Lavanya Ballal (@LavanyaBallal) September 6, 2022
ಬೆಂಗಳೂರಿನ ಪರಿಸ್ಥಿತಿಯ ಕುರಿತು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,“ಇದಕ್ಕೆಲ್ಲಾ ಹಿಂದಿನ ಕಾಂಗ್ರೆಸ್ ಸರಕಾರವೇ ಕಾರಣ. ಕಾಂಗ್ರೆಸ್ ಸರ್ಕಾರದ ಯೋಜಿತವಲ್ಲದ ದುರಾಡಳಿತದಿಂದಾಗಿ ಬೆಂಗಳೂರಿನ ಹಲವಾರು ವಸತಿ ಪ್ರದೇಶಗಳು ಪ್ರವಾಹದಂತಹ ಪರಿಸ್ಥಿತಿಗಳನ್ನು ಎದುರಿಸಬೇಕಾಯಿತು” ಎಂದು ಹೇಳಿದ್ದಾರೆ.
ಬೆಂಗಳೂರು ಮತ್ತು ಇತರೆ ಜಿಲ್ಲೆಗಳ ಪ್ರವಾಹ ನಿರ್ವಹಣೆಗೆ ಕರ್ನಾಟಕ ಸರ್ಕಾರವು 600 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ನಿರ್ಧಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.