Homeಕರ್ನಾಟಕಮಹಾ ಮಳೆಗೆ ಜಲಾವೃತಗೊಂಡ ಬೆಂಗಳೂರಿನ ರಸ್ತೆಗಳು; ದಿಕ್ಕು ತಪ್ಪಿದ ಗೂಗಲ್ ಮ್ಯಾಪ್!

ಮಹಾ ಮಳೆಗೆ ಜಲಾವೃತಗೊಂಡ ಬೆಂಗಳೂರಿನ ರಸ್ತೆಗಳು; ದಿಕ್ಕು ತಪ್ಪಿದ ಗೂಗಲ್ ಮ್ಯಾಪ್!

- Advertisement -
- Advertisement -

ಬೆಂಗಳೂರು ಧಾರಾಕಾರ ಮಳೆಗೆ ರಸ್ತೆಗಳು ಕೆರೆಯಂತಾಗಿವೆ. ಇದರಿಂದಾಗಿ ಅಗತ್ಯ ಸಂದರ್ಭಗಳಲ್ಲಿ ವಾಹನ ಸವಾರರಿಗೆ ದಾರಿ ತೋರಿಸಬೇಕಾದ ಗೂಗಲ್ ಮ್ಯಾಪ್ ಈಗ ಸವಾರರ ದಿಕ್ಕು ತಪ್ಪಿಸುತ್ತಿದೆ. 

ಬೆಂಗಳೂರಿನ ನಿವಾಸಿಯೊಬ್ಬರು ಜೆ ಪಿ ನಗರದಿಂದ ಹೊಸೂರಿನವರೆಗಿನ ಮಾರ್ಗಕ್ಕಾಗಿ ಗೂಗಲ್‌ ಮ್ಯಾಪ್‌ನಲ್ಲಿ ದಾರಿಯನ್ನು ಸರ್ಚ್‌ ಮಾಡಿದ್ದಾರೆ. ಆದರೆ, ಬೆಂಗಳೂರು ನಗರದ ರಸ್ತೆಗಳು ಜಲಾವೃತಗೊಂಡಿರುವ ಕಾರಣ ಕೆಲ ಮಾರ್ಗಗಳನ್ನು ಗೂಗಲ್ ಮ್ಯಾಪ್ ತೋರಿಸುತ್ತಿಲ್ಲ. 

ಭಾರೀ ಮಳೆಯಿಂದಾಗಿ ಬೆಂಗಳೂರಿನ ಸ್ಥಿತಿ ಸಿಕ್ಕಾಪಟ್ಟೆ ಹದಗೆಟ್ಟಿದೆ. ಯಾವ ರಸ್ತೆ ಜಲಾವೃತವಾಗಿದೆ, ಯಾವ ರಸ್ತೆಯಲ್ಲಿ ಸಂಚರಿಸಿದರೆ ಮುಂದಕ್ಕೆ ಹೋಗಬಹುದು ಎನ್ನುವ ಮಾಹಿತಿಯೇ ಲಭ್ಯವಿಲ್ಲವಾಗಿದೆ. ಕೆಲವು ರಸ್ತೆಗಳನ್ನು ನೀರು ನಿಂತ ಕಾರಣಕ್ಕೆ ಬ್ಲಾಕ್ ಮಾಡಲಾಗಿದೆ. ರಾಜಾಜಿನಗರದ ಒಳ ರಸ್ತೆಯಿಂದ ಮಹಾಕವಿ ಕುವೆಂಪು ರಸ್ತೆವರೆಗೆ ನಮೂದಿಸಿದರೆ ತಲುಪುವ ಸಮಯ ಮಾತ್ರ ತೋರಿಸುತ್ತಿದ್ದು, ಗೂಗಲ್ ಮ್ಯಾಪ್‌ ಯಾವುದೇ ಮಾರ್ಗವನ್ನು ತೋರಿಸುತ್ತಿಲ್ಲ. 

ಈ ಕುರಿತು ರಾಜಾಜಿನಗರದಲ್ಲಿ ಹೊಸದಾಗಿ ಮನೆ ಮಾಡಿರುವ ನಿವಾಸಿ ಧರ್ಮ ಎನ್ನುವವರು ಮಾತನಾಡಿ, “ರಾಜಾಜಿನಗರದಿಂದ ಕುವೆಂಪು ರಸ್ತೆಗೆ ಹತ್ತಿರವಿರುವ ನನ್ನ ಕಚೇರಿಗೆ ತಲುಪಲು ಮ್ಯಾಪ್ ಹಾಕಿದೆ. ಆದರೆ, ಮಳೆಯಿಂದಾಗಿ ಎಲ್ಲಿ ಯಾವ ರಸ್ತೆಯ ಮುಖಾಂತರ ಹೋಗಬೇಕೆಂದು ಗೂಗಲ್‌ ಮ್ಯಾಪ್‌ಗೂ ತಿಳಿಯುತ್ತಿಲ್ಲ. ನಾವೆಂತಹ ಪರಿಸ್ಥಿತಿಗೆ ತಲುಪಿದ್ದೇವೆ ನೋಡಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗೂಗಲ್ ಮ್ಯಾಪ್‌ ದಿಕ್ಕು ತಪ್ಪಿರುವುದರಿಂದ ಆಟೋ ಚಾಲಕರು, ಕ್ಯಾಬ್ ಚಾಲಕರು ಅತಿ ಹೆಚ್ಚು ತೊಂದರೆಗೊಳಗಾಗಿದ್ದಾರೆ. ಅನಿವಾರ್ಯವಾಗಿ ಗೂಗಲ್ ಮ್ಯಾಪ್ ಬಳಸುತ್ತಿದ್ದ ವಾಹನ ಸವಾರರು ಕೂಡ ಕಂಗಾಲಾಗಿದ್ದಾರೆ. ಏನೇ ಆದರೂ ಮಹಾ ಮಳೆಗೆ ವಾಹನ ಸವಾರರಿಗೆ ಸರಿಯಾದ ದಾರಿ ತೋರಿಸಬೇಕಾಗಿದ್ದ ಗೂಗಲ್ ಮ್ಯಾಪ್ ದಿಕ್ಕು ತಪ್ಪಿ ಅದನ್ನು ಅವಲಂಬಿಸಿದ್ದವರನ್ನೂ ದಿಕ್ಕು ತಪ್ಪಿಸುತ್ತಿದೆ. 

ಇದನ್ನೂ ಓದಿ: ಚಿತ್ರದುರ್ಗ: ಸಂತ್ರಸ್ತ ‘ಮಕ್ಕಳೊಡನೆ ನಾವು’ ಬೃಹತ್‌ ಜಾಥಾ ನಾಳೆ        

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...