Homeಕರ್ನಾಟಕಮಹಾ ಮಳೆಗೆ ಜಲಾವೃತಗೊಂಡ ಬೆಂಗಳೂರಿನ ರಸ್ತೆಗಳು; ದಿಕ್ಕು ತಪ್ಪಿದ ಗೂಗಲ್ ಮ್ಯಾಪ್!

ಮಹಾ ಮಳೆಗೆ ಜಲಾವೃತಗೊಂಡ ಬೆಂಗಳೂರಿನ ರಸ್ತೆಗಳು; ದಿಕ್ಕು ತಪ್ಪಿದ ಗೂಗಲ್ ಮ್ಯಾಪ್!

- Advertisement -
- Advertisement -

ಬೆಂಗಳೂರು ಧಾರಾಕಾರ ಮಳೆಗೆ ರಸ್ತೆಗಳು ಕೆರೆಯಂತಾಗಿವೆ. ಇದರಿಂದಾಗಿ ಅಗತ್ಯ ಸಂದರ್ಭಗಳಲ್ಲಿ ವಾಹನ ಸವಾರರಿಗೆ ದಾರಿ ತೋರಿಸಬೇಕಾದ ಗೂಗಲ್ ಮ್ಯಾಪ್ ಈಗ ಸವಾರರ ದಿಕ್ಕು ತಪ್ಪಿಸುತ್ತಿದೆ. 

ಬೆಂಗಳೂರಿನ ನಿವಾಸಿಯೊಬ್ಬರು ಜೆ ಪಿ ನಗರದಿಂದ ಹೊಸೂರಿನವರೆಗಿನ ಮಾರ್ಗಕ್ಕಾಗಿ ಗೂಗಲ್‌ ಮ್ಯಾಪ್‌ನಲ್ಲಿ ದಾರಿಯನ್ನು ಸರ್ಚ್‌ ಮಾಡಿದ್ದಾರೆ. ಆದರೆ, ಬೆಂಗಳೂರು ನಗರದ ರಸ್ತೆಗಳು ಜಲಾವೃತಗೊಂಡಿರುವ ಕಾರಣ ಕೆಲ ಮಾರ್ಗಗಳನ್ನು ಗೂಗಲ್ ಮ್ಯಾಪ್ ತೋರಿಸುತ್ತಿಲ್ಲ. 

ಭಾರೀ ಮಳೆಯಿಂದಾಗಿ ಬೆಂಗಳೂರಿನ ಸ್ಥಿತಿ ಸಿಕ್ಕಾಪಟ್ಟೆ ಹದಗೆಟ್ಟಿದೆ. ಯಾವ ರಸ್ತೆ ಜಲಾವೃತವಾಗಿದೆ, ಯಾವ ರಸ್ತೆಯಲ್ಲಿ ಸಂಚರಿಸಿದರೆ ಮುಂದಕ್ಕೆ ಹೋಗಬಹುದು ಎನ್ನುವ ಮಾಹಿತಿಯೇ ಲಭ್ಯವಿಲ್ಲವಾಗಿದೆ. ಕೆಲವು ರಸ್ತೆಗಳನ್ನು ನೀರು ನಿಂತ ಕಾರಣಕ್ಕೆ ಬ್ಲಾಕ್ ಮಾಡಲಾಗಿದೆ. ರಾಜಾಜಿನಗರದ ಒಳ ರಸ್ತೆಯಿಂದ ಮಹಾಕವಿ ಕುವೆಂಪು ರಸ್ತೆವರೆಗೆ ನಮೂದಿಸಿದರೆ ತಲುಪುವ ಸಮಯ ಮಾತ್ರ ತೋರಿಸುತ್ತಿದ್ದು, ಗೂಗಲ್ ಮ್ಯಾಪ್‌ ಯಾವುದೇ ಮಾರ್ಗವನ್ನು ತೋರಿಸುತ್ತಿಲ್ಲ. 

ಈ ಕುರಿತು ರಾಜಾಜಿನಗರದಲ್ಲಿ ಹೊಸದಾಗಿ ಮನೆ ಮಾಡಿರುವ ನಿವಾಸಿ ಧರ್ಮ ಎನ್ನುವವರು ಮಾತನಾಡಿ, “ರಾಜಾಜಿನಗರದಿಂದ ಕುವೆಂಪು ರಸ್ತೆಗೆ ಹತ್ತಿರವಿರುವ ನನ್ನ ಕಚೇರಿಗೆ ತಲುಪಲು ಮ್ಯಾಪ್ ಹಾಕಿದೆ. ಆದರೆ, ಮಳೆಯಿಂದಾಗಿ ಎಲ್ಲಿ ಯಾವ ರಸ್ತೆಯ ಮುಖಾಂತರ ಹೋಗಬೇಕೆಂದು ಗೂಗಲ್‌ ಮ್ಯಾಪ್‌ಗೂ ತಿಳಿಯುತ್ತಿಲ್ಲ. ನಾವೆಂತಹ ಪರಿಸ್ಥಿತಿಗೆ ತಲುಪಿದ್ದೇವೆ ನೋಡಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗೂಗಲ್ ಮ್ಯಾಪ್‌ ದಿಕ್ಕು ತಪ್ಪಿರುವುದರಿಂದ ಆಟೋ ಚಾಲಕರು, ಕ್ಯಾಬ್ ಚಾಲಕರು ಅತಿ ಹೆಚ್ಚು ತೊಂದರೆಗೊಳಗಾಗಿದ್ದಾರೆ. ಅನಿವಾರ್ಯವಾಗಿ ಗೂಗಲ್ ಮ್ಯಾಪ್ ಬಳಸುತ್ತಿದ್ದ ವಾಹನ ಸವಾರರು ಕೂಡ ಕಂಗಾಲಾಗಿದ್ದಾರೆ. ಏನೇ ಆದರೂ ಮಹಾ ಮಳೆಗೆ ವಾಹನ ಸವಾರರಿಗೆ ಸರಿಯಾದ ದಾರಿ ತೋರಿಸಬೇಕಾಗಿದ್ದ ಗೂಗಲ್ ಮ್ಯಾಪ್ ದಿಕ್ಕು ತಪ್ಪಿ ಅದನ್ನು ಅವಲಂಬಿಸಿದ್ದವರನ್ನೂ ದಿಕ್ಕು ತಪ್ಪಿಸುತ್ತಿದೆ. 

ಇದನ್ನೂ ಓದಿ: ಚಿತ್ರದುರ್ಗ: ಸಂತ್ರಸ್ತ ‘ಮಕ್ಕಳೊಡನೆ ನಾವು’ ಬೃಹತ್‌ ಜಾಥಾ ನಾಳೆ        

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...