Homeಕರ್ನಾಟಕಬೆಂಗಳೂರು ಗ್ರಾಮಾಂತರ: ಕೆ ಎಚ್ ಮುನಿಯಪ್ಪನವರ ಗೆಲುವು; ಬಿಜೆಪಿ ವಶವಾದ ದೊಡ್ಡಬಳ್ಳಾಪುರ

ಬೆಂಗಳೂರು ಗ್ರಾಮಾಂತರ: ಕೆ ಎಚ್ ಮುನಿಯಪ್ಪನವರ ಗೆಲುವು; ಬಿಜೆಪಿ ವಶವಾದ ದೊಡ್ಡಬಳ್ಳಾಪುರ

- Advertisement -
- Advertisement -

ಬಿಜೆಪಿಗೆ ಕಷ್ಟದ ನೆಲೆ ಎನ್ನಲಾಗುವ ಬೆಂಗಳೂರು ಗ್ರಾಮಾಂತರದಲ್ಲಿ 2018ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಎರಡು ಸ್ಥಾನಗಳಲ್ಲಿ ಗೆದ್ದಿತ್ತು. ಹೊಸಕೇಟೆ ಕ್ಷೇತ್ರದಲ್ಲಿ ಗೆದ್ದಿದ್ದ ಎಂಟಿಬಿ ನಾಗರಾಜ್ 2019ರ ಆಪರೇಷನ್ ಕಮಲದಲ್ಲಿ ಬಿಜೆಪಿಗೆ ಹೋಗಿದ್ದರು. ನಂತರ ನಡೆದ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಎದುರು ಸೋಲು ಅನುಭವಿಸಿದ್ದರು. 2023ರ ಸದರಿ ಚುನಾವಣೆಯಲ್ಲಿಯೂ ಎಂಟಿಬಿ ನಾಗರಾಜ್ ಶರತ್ ಬಚ್ಚೇಗೌಡ ಎದುರು ಸೋಲು ಕಂಡಿದ್ದಾರೆ.

ಈ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಾಂಗ್ರೆಸ್ ಮೂರು ಸ್ಥಾನದಲ್ಲಿ ಗೆಲುವು ಕಂಡಿದ್ದರೆ ಬಿಜೆಪಿ 1 ಕ್ಷೇತ್ರದಲ್ಲಿ ಗೆದ್ದಿದೆ. ಜೆಡಿಎಸ್ ತನ್ನ ಕ್ಷೇತ್ರಗಳನ್ನು ಕಳೆದುಕೊಂಡಿದೆ.

1. ಹೊಸಕೋಟೆ: ಕಾಂಗ್ರೆಸ್ ಪಕ್ಷದ ಶರತ್ ಬಚ್ಚೇಗೌಡ ಬಿಜೆಪಿಯ ಎನ್ ನಾಗರಾಜ್ (ಎಂಟಿಬಿ) ವಿರುದ್ಧ ಗೆಲುವು ಸಾಧಿಸಿದ್ದಾರೆ.

2. ದೊಡ್ಡಬಳ್ಳಾಪುರ: ಕ್ಷೇತ್ರಕ್ಕೆ ಅಚ್ಚರಿ ಎಂಟ್ರಿ ನೀಡಿದ್ದ ಧೀರಜ್ ಮುನಿರಾಜ್ (82371) ಕಾಂಗ್ರೆಸ್‌ನ ವೆಂಕಟರಮಣಯ್ಯನವರನ್ನು (51039) 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ. ಜೆಡಿಎಸ್‌ನ ಮುನೇಗೌಡ (37616) ಮೂರನೇ ಸ್ಥಾನದಲ್ಲಿದ್ದಾರೆ.

3. ದೇವನಹಳ್ಳಿ: ದೀರ್ಘ ಕಾಲದವರೆಗೆ ಸಂಸದರಾಗಿದ್ದ ಕೆ ಎಚ್ ಮುನಿಯಪ್ಪನವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. ಈ ಬಾರಿ ದೇವನಹಳ್ಳಿಯಿಂದ ಸ್ಪರ್ಧಿಸಿದ್ದ ಅವರು ಜೆಡಿಎಸ್‌ನ ಹಾಲಿ ಶಾಸಕ ನಿಸರ್ಗ ನಾರಾಯಣಸ್ವಾಮಿಯವರಿಂದ (65048) ತೀವ್ರ ಪೈಪೋಟಿ ಎದುರಿಸಿದ್ದರು. ಕೊನೆಗೂ ಮುನಿಯಪ್ಪನವರು ಗೆಲುವಿನ (69324) ನಗೆ ಬೀರಿದ್ದಾರೆ. ಕೆ ಎಚ್ ಮುನಿಯಪ್ಪನವರ ಮಗಳು ರೂಪಕಲಾ ಶಶಿಧರ್ ಅವರು ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ ಕಾಂಗ್ರೆಸ್ ಶಾಸಕಿಯಾಗಿ ಗೆದ್ದಿರುವುದು ವಿಶೇಷ. ಬಿಜೆಪಿಯ ಪಿಳ್ಳ ಮುನಿಶಾಮಪ್ಪ (33331) ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

4. ನೆಲಮಂಗಲ: ಕಾಂಗ್ರೆಸ್‌ನ ಎನ್ ಶ್ರೀನಿವಾಸಯ್ಯ (80537) ಜೆಡಿಎಸ್‌ನ ಹಾಲಿ ಶಾಸಕ ಕೆ ಶ್ರೀನಿವಾಸಮೂರ್ತಿ (49806) ಎದುರು ಸುಲಭ ಗೆಲುವು ಕಂಡಿದ್ದಾರೆ. ಬಿಜೆಪಿಯ ಸಪ್ತಗಿರಿ ಶಂಕರ್ (29279) ಮೂರನೇ ಸ್ಥಾನದಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...