Homeಕರ್ನಾಟಕಕೋಲಾರ: SC-ST ವಿದ್ಯಾರ್ಥಿಗಳ ಕುಂದುಕೊರತೆ ನಿವಾರಿಸುವಂತೆ ಮೌನ ಪ್ರತಿಭಟನೆ

ಕೋಲಾರ: SC-ST ವಿದ್ಯಾರ್ಥಿಗಳ ಕುಂದುಕೊರತೆ ನಿವಾರಿಸುವಂತೆ ಮೌನ ಪ್ರತಿಭಟನೆ

- Advertisement -
- Advertisement -

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ನೀಡಬೇಕಾದ ಕೆಲವು ಸೌಲಭ್ಯಗಳನ್ನು ನೀಡದ ಕಾರಣಕ್ಕೆ ಕೋಲಾರದ ಸ್ನಾತಕೋತ್ತರ ಕೇಂದ್ರ ಮಂಗಸಂದ್ರದಲ್ಲಿ ವಿದ್ಯಾರ್ಥಿಗಳಿಂದ ”ಮೌನ ಪ್ರತಿಭಟನೆ” ನಡೆಸಲಾಯಿತು.

ಈ ಪ್ರತಿಭಟನೆ ಬೆಳಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಿತು. ಪ್ರತಿಭಟನಾ ಸ್ಥಳಕ್ಕೆ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಡಾ. ಕುಮುದ ಡಿ ಅವರು ಬಂದು ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸಿದರು. ಆದರೆ ಅವರ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ನಿಲ್ಲಿಸಲ್ಲ ಎಂದು ಹೇಳಿದರು.

ವಿದ್ಯಾರ್ಥಿಗಳ ಕುಂದು ಕೊರತೆಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡದ ಕಾರಣದಿಂದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ನಿರಂಜನ ವಾನಳ್ಳಿ ಯವರು ಬರಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು. ಆ ಬಳಿಕೆ ಪ್ರತಿಭಟನಾ ಸ್ಥಳಕ್ಕೆ ಕುಲಪತಿಗಳು ಭೇಟಿ ನೀಡಿದರು. ಈ ವೇಳೆ ಅವರಿಂದಲೂ ಸಹ ಸೂಕ್ತವಾದ ಮಾಹಿತಿಯಾಗಲಿ, ಭರವಸೆಯಾಗಲಿ ನೀಡದ ಕಾರಣ ಪ್ರತಿಭಟನೆಯು ಮುಂದುವರೆಯಿತು.

ವಿಶ್ವವಿದ್ಯಾಲಯದ ಮೌಲ್ಯಮಾಪಕರಾದ ಡಿ ಡೊಮಿನಿಕ್ ಅವರು ಮನವಿ ಪತ್ರವನ್ನು ಪಡೆದರು. ಆ ಬಳಿಕ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳ ಜೊತೆ ಮಾತನಾಡಿ ಸೂಕ್ತ ಕ್ರಮವನ್ನು ಕೈಗೊಳ್ಳಲಾಗುವುದೆಂದು ಬಾಯಿ ಮಾತಿನಲ್ಲಿ ಹೇಳಿದರು. ಆದರೆ ಯಾವುದೇ ರೀತಿಯ ಲಿಖಿತ ರೂಪದಲ್ಲಿ ಭರವಸೆಯನ್ನು ನೀಡದೇ ಇರುವುದು, ಈ ಮೌನ ಪ್ರತಿಭಟನೆಗೆ ಅರ್ಥವೇ ಇಲ್ಲದಂತಾಯಿತು ಎಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮ ಬೇಡಿಕೆಗಳ ಕುರಿತು ಕ್ರಮ ಕೈಗೊಳ್ಳದೆ ಇದ್ದರೆ ಮುಂದೆ ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ವಿದ್ಯಾರ್ಥಿಗಳಿಗಳು ತಿಳಿಸಿದರು.

ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಕುಂದು ಕೊರತೆಗಳ ಕುರಿತು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಸಚಿವರಿಗೆ ಮನವಿ ಪತ್ರ ನೀಡಲಾಗಿದೆ.

1. SC-ST ವಿದ್ಯಾರ್ಥಿಗಳ ಪ್ರವೇಶ ಶುಲ್ಕದ ಕುರಿತು..

2. SC-ST ಸೆಲ್‌ನ ವಿಚಾರದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯ ಕೊರತೆ.

  • TSP-SSP ಹಣದ ಮಾಹಿತಿ
  • ಲ್ಯಾಪ್‌ಟಾಪ್ ವಿತರಣೆ ಕುರಿತು
  • ಆರೋಗ್ಯಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ನೀಡಬೇಕಾದ ಸೌಲಭ್ಯ ಕುರಿತು

3. ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಂಡಿರುವಂತಹ SC-ST ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೀಡಬೇಕಾಗಿರುವ ಬೆಡ್ (ಹಾಸಿಗೆ) ಮತ್ತು ಇತರೆ ಸಾಮಗ್ರಿಗಳನ್ನು ಇಲ್ಲಿಯವರೆಗೆ ನೀಡದಿರುವುದು.

4. NET-KSET ಪರೀಕ್ಷೆಗೆ ನೀಡಬೇಕಾಗಿರುವ ಪುಸ್ತಕಗಳನ್ನು ಇನ್ನೂ ನೀಡದಿರುವುದು.

5. ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಂಡಿರುವ SC-ST ವಿದ್ಯಾರ್ಥಿಗಳಿಗೆ ಸ್ಟೇ ಫಂಡ್ ನೀಡದಿರುವುದು.

6. ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡದ ಪುರುಷರ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣದ ಕುರಿತು.

ಈ ಎಲ್ಲಾ ರೀತಿಯ ಸೌಲಭ್ಯಗಳನ್ನು ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡದ ಸ್ನಾತಕೋತರ ವಿದ್ಯಾರ್ಥಿಗಳಿಗೆ ನೀಡಬೇಕು ಎಂದು ವಿದ್ಯಾರ್ಥಿಗಳು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...