Homeಕರ್ನಾಟಕಬೆಂಗಳೂರಿನ ಶಾಲೆಗಳಿಗೆ ನಕಲಿ ಬಾಂಬ್‌ ಬೆದರಿಕೆ ಪ್ರಕರಣ: ಇಂಟರ್‌ಪೋಲ್‌ ನೆರವು ಕೋರಿದ ಪೊಲೀಸರು

ಬೆಂಗಳೂರಿನ ಶಾಲೆಗಳಿಗೆ ನಕಲಿ ಬಾಂಬ್‌ ಬೆದರಿಕೆ ಪ್ರಕರಣ: ಇಂಟರ್‌ಪೋಲ್‌ ನೆರವು ಕೋರಿದ ಪೊಲೀಸರು

- Advertisement -
- Advertisement -

ಬೆಂಗಳೂರು ನಗರದ 48 ಶಾಲೆಗಳಿಗೆ ಕಳೆದ ವಾರ ನಕಲಿ ಬಾಂಬ್‌ ಬೆದರಿಕೆ ಕರೆಗಳು ಬಂದಿದ್ದವು. ಈ ಕುರಿತ ತನಿಖೆಗೆ ಸಹಾಯಕ್ಕಾಗಿ ಸಿಬಿಐ ಮೂಲಕ ಇಂಟರ್‌ಪೋಲ್‌ನ್ನು ಸಂಪರ್ಕಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ.

ಬೆಂಗಳೂರು ನಗರದಲ್ಲಿನ 48 ಶಾಲೆಗಳಿಗೆ ಮತ್ತು ಹೊರವಲಯದಲ್ಲಿರುವ 22 ಶಾಲೆಗಳಿಗೆ ಶುಕ್ರವಾರ ಬೆದರಿಕೆ  ಇಮೇಲ್‌ಗಳು ಬಂದಿವೆ. ಬೆಂಗಳೂರು ನಗರ ಪೊಲೀಸರು 48 ಇಮೇಲ್‌ಗಳ ಮೂಲದ ಬಗ್ಗೆ ತನಿಖೆ ನಡೆಸುತ್ತಿದ್ದರೆ. ಬೆಂಗಳೂರು ಜಿಲ್ಲಾ ಪೊಲೀಸರು ಉಳಿದ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ, ಬೆದರಿಕೆ ಇಮೇಲ್‌ ಬಂದಿರುವ ಬಗ್ಗೆ ಬೆಂಗಳೂರಿನ ಹಲವು ಪೊಲೀಸ್ ಠಾಣೆಗಳಲ್ಲಿ 27 ಎಫ್‌ಐಆರ್‌ಗಳು ದಾಖಲಾಗಿದ್ದು, ಸೋಮವಾರ ಪ್ರಕರಣದ ಕುರಿತು ಸಭೆ ನಡೆಸಲಾಗಿದೆ. ಕಳೆದ ವರ್ಷ ಇದೇ ರೀತಿಯ 6 ಇಮೇಲ್‌ಗಳು ಬಂದಿದ್ದವು. ಪ್ರಕರಣಕ್ಕೆ ಸಂಬಂಧಿಸಿ ಕೆಲವು ಬಾಲಾಪರಾಧಿಗಳನ್ನು ಬಂಧಿಸಲಾಗಿತ್ತು. ಇಮೇಲ್‌ಗಳಲ್ಲಿನ  ಸಾಮ್ಯತೆಯ ಕುರಿತು ತನಿಖೆಗೆ ನಾವು ಆ ಪ್ರಕರಣಗಳ ತನಿಖಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಎಲ್ಲಾ ಶಾಲೆಗಳು ಒಂದೇ ಐಡಿಯಿಂದ ಬೆದರಿಕೆ ಇ-ಮೇಲ್‌ನ್ನು ಸ್ವೀಕರಿಸಿವೆ ಮತ್ತು ಅದರಲ್ಲಿದ್ದ ವಿಷಯವು  ಒಂದೇ ಆಗಿದೆ. ಇಂತಹ ಇಮೇಲ್‌ಗಳನ್ನು ಬರೆಯುವ ಹಿಂದಿನ ಸಂಭವನೀಯ ಕಾರಣಗಳು ಮತ್ತು ಇ-ಇಮೇಲ್‌ ಏನು ಸೂಚಿಸುತ್ತವೆ ಎಂಬುದನ್ನು ಅರ್ಥಮಾಡಿಕೊಳ್ಳಲು ಪೊಲೀಸರು ತಜ್ಞರನ್ನು ಸಂಪರ್ಕಿಸುತ್ತಿದ್ದಾರೆ ಎಂದು ಕಮಿಷನರ್‌ ಹೇಳಿದ್ದಾರೆ.

ಪೊಲೀಸರು ಕಳುಹಿಸಿದ ವಿನಂತಿಗೆ ಇ-ಮೇಲ್ ಸೇವಾ ಪೂರೈಕೆದಾರರು ಪ್ರತಿಕ್ರಿಯಿಸಿದ್ದಾರೆ. ಆ ಮಾರ್ಗಗಳಲ್ಲಿಯೂ ತನಿಖೆಗಳು ನಡೆಯುತ್ತಿವೆ. ಪೊಲೀಸರು ಪ್ರಕರಣವನ್ನು ವಿವರವಾಗಿ ಅರ್ಥಮಾಡಿಕೊಳ್ಳಲು ವಿವಿಧ ದೇಶಗಳಲ್ಲಿ ಇದೇ ರೀತಿಯ ಘಟನೆಗಳ ಬಗ್ಗೆ ಮುಕ್ತ ಮೂಲಗಳ ಮೂಲಕ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಯುಎಸ್ಎ, ಜರ್ಮನಿ, ಮಲೇಷ್ಯಾ ಮತ್ತು ಟ್ರಿನಿಡಾಡ್ ಮತ್ತು ಟೊಬಾಗೊಗೆ ಇದೇ ರೀತಿಯ ಇಮೇಲ್‌ಗಳು ಬಂದಿವೆ. ಈ ಪ್ರಕರಣವು ಸವಾಲಾಗಿದೆ. ಇದು ಒಂದು ರೀತಿಯ ಸೈಬರ್ ಅಪರಾಧ ಮತ್ತು ಇಮೇಲ್‌ಗಳನ್ನು ಕಳುಹಿಸಲು ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್ (VPN) ಬಳಸಲಾಗಿರುವುದರಿಂದ ಪ್ರಕರಣವು ತಾಂತ್ರಿಕ ಜಟಿಲತೆಗಳನ್ನು ಒಳಗೊಂಡಿರುತ್ತದೆ ಎಂದು ಕಮಿಷನರ್‌ ಹೇಳಿದ್ದಾರೆ.

ಆರೋಪಿಯು beeble.comನ ವಿವಿಧ ಇಮೇಲ್ ಐಡಿಗಳಿಂದ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ. ಬೆಂಗಳೂರು ಪೊಲೀಸರು ಆ ಕಂಪನಿಗೆ ಪತ್ರ ಬರೆದು ಅವರಿಂದ ವಿವರ ಪಡೆದಿದ್ದಾರೆ ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.

ಡಿ.1ರಂದು ಬೆಂಗಳೂರಿನ 48 ಶಾಲೆಗಳು ಮತ್ತು ನೆರೆಯ ತಾಲೂಕುಗಳ 20 ಶಾಲೆಗಳಿಗೆ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಲಾಗಿತ್ತು. ತಕ್ಷಣ ಎಚ್ಚೆತ್ತು ಪೊಲೀಸರು ತಪಾಸಣೆ ನಡೆಸಿದಾಗ ಯಾವುದೇ ಸ್ಫೋಟಕಗಳು ಪತ್ತೆಯಾಗಿರಲಿಲ್ಲ. ಬೆಂಗಳೂರಿನ ಬಸವೇಶ್ವರ ನಗರ, ಸದಾಶಿವನಗರ, ಯಲಹಂಕ ಮತ್ತು ಬನ್ನೇರುಘಟ್ಟ ಭಾಗದ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಪೊಲೀಸರು ಶಾಲೆಗಳಿಗೆ ತೆರಳಿ ಮಕ್ಕಳನ್ನು ಮನೆಗೆ ಕಳುಹಿಸಿ ಪರಿಶೀಲನೆ ನಡೆಸಿದ್ದರು.

ಇದನ್ನು ಓದಿ: ‘ಗೋರಕ್‌ಪುರ ಆಸ್ಪತ್ರೆ ದುರಂತ’ ಪುಸ್ತಕ ಬರೆದ ಡಾ.ಕಫೀಲ್ ಖಾನ್ ವಿರುದ್ದ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...