Homeಕರ್ನಾಟಕಬೆಂಗಳೂರಿನ ಶಾಲೆಗಳಿಗೆ ನಕಲಿ ಬಾಂಬ್‌ ಬೆದರಿಕೆ ಪ್ರಕರಣ: ಇಂಟರ್‌ಪೋಲ್‌ ನೆರವು ಕೋರಿದ ಪೊಲೀಸರು

ಬೆಂಗಳೂರಿನ ಶಾಲೆಗಳಿಗೆ ನಕಲಿ ಬಾಂಬ್‌ ಬೆದರಿಕೆ ಪ್ರಕರಣ: ಇಂಟರ್‌ಪೋಲ್‌ ನೆರವು ಕೋರಿದ ಪೊಲೀಸರು

- Advertisement -
- Advertisement -

ಬೆಂಗಳೂರು ನಗರದ 48 ಶಾಲೆಗಳಿಗೆ ಕಳೆದ ವಾರ ನಕಲಿ ಬಾಂಬ್‌ ಬೆದರಿಕೆ ಕರೆಗಳು ಬಂದಿದ್ದವು. ಈ ಕುರಿತ ತನಿಖೆಗೆ ಸಹಾಯಕ್ಕಾಗಿ ಸಿಬಿಐ ಮೂಲಕ ಇಂಟರ್‌ಪೋಲ್‌ನ್ನು ಸಂಪರ್ಕಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ.

ಬೆಂಗಳೂರು ನಗರದಲ್ಲಿನ 48 ಶಾಲೆಗಳಿಗೆ ಮತ್ತು ಹೊರವಲಯದಲ್ಲಿರುವ 22 ಶಾಲೆಗಳಿಗೆ ಶುಕ್ರವಾರ ಬೆದರಿಕೆ  ಇಮೇಲ್‌ಗಳು ಬಂದಿವೆ. ಬೆಂಗಳೂರು ನಗರ ಪೊಲೀಸರು 48 ಇಮೇಲ್‌ಗಳ ಮೂಲದ ಬಗ್ಗೆ ತನಿಖೆ ನಡೆಸುತ್ತಿದ್ದರೆ. ಬೆಂಗಳೂರು ಜಿಲ್ಲಾ ಪೊಲೀಸರು ಉಳಿದ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ, ಬೆದರಿಕೆ ಇಮೇಲ್‌ ಬಂದಿರುವ ಬಗ್ಗೆ ಬೆಂಗಳೂರಿನ ಹಲವು ಪೊಲೀಸ್ ಠಾಣೆಗಳಲ್ಲಿ 27 ಎಫ್‌ಐಆರ್‌ಗಳು ದಾಖಲಾಗಿದ್ದು, ಸೋಮವಾರ ಪ್ರಕರಣದ ಕುರಿತು ಸಭೆ ನಡೆಸಲಾಗಿದೆ. ಕಳೆದ ವರ್ಷ ಇದೇ ರೀತಿಯ 6 ಇಮೇಲ್‌ಗಳು ಬಂದಿದ್ದವು. ಪ್ರಕರಣಕ್ಕೆ ಸಂಬಂಧಿಸಿ ಕೆಲವು ಬಾಲಾಪರಾಧಿಗಳನ್ನು ಬಂಧಿಸಲಾಗಿತ್ತು. ಇಮೇಲ್‌ಗಳಲ್ಲಿನ  ಸಾಮ್ಯತೆಯ ಕುರಿತು ತನಿಖೆಗೆ ನಾವು ಆ ಪ್ರಕರಣಗಳ ತನಿಖಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಎಲ್ಲಾ ಶಾಲೆಗಳು ಒಂದೇ ಐಡಿಯಿಂದ ಬೆದರಿಕೆ ಇ-ಮೇಲ್‌ನ್ನು ಸ್ವೀಕರಿಸಿವೆ ಮತ್ತು ಅದರಲ್ಲಿದ್ದ ವಿಷಯವು  ಒಂದೇ ಆಗಿದೆ. ಇಂತಹ ಇಮೇಲ್‌ಗಳನ್ನು ಬರೆಯುವ ಹಿಂದಿನ ಸಂಭವನೀಯ ಕಾರಣಗಳು ಮತ್ತು ಇ-ಇಮೇಲ್‌ ಏನು ಸೂಚಿಸುತ್ತವೆ ಎಂಬುದನ್ನು ಅರ್ಥಮಾಡಿಕೊಳ್ಳಲು ಪೊಲೀಸರು ತಜ್ಞರನ್ನು ಸಂಪರ್ಕಿಸುತ್ತಿದ್ದಾರೆ ಎಂದು ಕಮಿಷನರ್‌ ಹೇಳಿದ್ದಾರೆ.

ಪೊಲೀಸರು ಕಳುಹಿಸಿದ ವಿನಂತಿಗೆ ಇ-ಮೇಲ್ ಸೇವಾ ಪೂರೈಕೆದಾರರು ಪ್ರತಿಕ್ರಿಯಿಸಿದ್ದಾರೆ. ಆ ಮಾರ್ಗಗಳಲ್ಲಿಯೂ ತನಿಖೆಗಳು ನಡೆಯುತ್ತಿವೆ. ಪೊಲೀಸರು ಪ್ರಕರಣವನ್ನು ವಿವರವಾಗಿ ಅರ್ಥಮಾಡಿಕೊಳ್ಳಲು ವಿವಿಧ ದೇಶಗಳಲ್ಲಿ ಇದೇ ರೀತಿಯ ಘಟನೆಗಳ ಬಗ್ಗೆ ಮುಕ್ತ ಮೂಲಗಳ ಮೂಲಕ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಯುಎಸ್ಎ, ಜರ್ಮನಿ, ಮಲೇಷ್ಯಾ ಮತ್ತು ಟ್ರಿನಿಡಾಡ್ ಮತ್ತು ಟೊಬಾಗೊಗೆ ಇದೇ ರೀತಿಯ ಇಮೇಲ್‌ಗಳು ಬಂದಿವೆ. ಈ ಪ್ರಕರಣವು ಸವಾಲಾಗಿದೆ. ಇದು ಒಂದು ರೀತಿಯ ಸೈಬರ್ ಅಪರಾಧ ಮತ್ತು ಇಮೇಲ್‌ಗಳನ್ನು ಕಳುಹಿಸಲು ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್ (VPN) ಬಳಸಲಾಗಿರುವುದರಿಂದ ಪ್ರಕರಣವು ತಾಂತ್ರಿಕ ಜಟಿಲತೆಗಳನ್ನು ಒಳಗೊಂಡಿರುತ್ತದೆ ಎಂದು ಕಮಿಷನರ್‌ ಹೇಳಿದ್ದಾರೆ.

ಆರೋಪಿಯು beeble.comನ ವಿವಿಧ ಇಮೇಲ್ ಐಡಿಗಳಿಂದ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ. ಬೆಂಗಳೂರು ಪೊಲೀಸರು ಆ ಕಂಪನಿಗೆ ಪತ್ರ ಬರೆದು ಅವರಿಂದ ವಿವರ ಪಡೆದಿದ್ದಾರೆ ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.

ಡಿ.1ರಂದು ಬೆಂಗಳೂರಿನ 48 ಶಾಲೆಗಳು ಮತ್ತು ನೆರೆಯ ತಾಲೂಕುಗಳ 20 ಶಾಲೆಗಳಿಗೆ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಲಾಗಿತ್ತು. ತಕ್ಷಣ ಎಚ್ಚೆತ್ತು ಪೊಲೀಸರು ತಪಾಸಣೆ ನಡೆಸಿದಾಗ ಯಾವುದೇ ಸ್ಫೋಟಕಗಳು ಪತ್ತೆಯಾಗಿರಲಿಲ್ಲ. ಬೆಂಗಳೂರಿನ ಬಸವೇಶ್ವರ ನಗರ, ಸದಾಶಿವನಗರ, ಯಲಹಂಕ ಮತ್ತು ಬನ್ನೇರುಘಟ್ಟ ಭಾಗದ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಪೊಲೀಸರು ಶಾಲೆಗಳಿಗೆ ತೆರಳಿ ಮಕ್ಕಳನ್ನು ಮನೆಗೆ ಕಳುಹಿಸಿ ಪರಿಶೀಲನೆ ನಡೆಸಿದ್ದರು.

ಇದನ್ನು ಓದಿ: ‘ಗೋರಕ್‌ಪುರ ಆಸ್ಪತ್ರೆ ದುರಂತ’ ಪುಸ್ತಕ ಬರೆದ ಡಾ.ಕಫೀಲ್ ಖಾನ್ ವಿರುದ್ದ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...