Homeಕರ್ನಾಟಕಬೆಂಗಳೂರು ಕಾಲ್ತುಳಿತ ಪ್ರಕರಣ: ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಮತ್ತು ಖಜಾಂಚಿ 'ನೈತಿಕ ಹೊಣೆ' ಹೊತ್ತು...

ಬೆಂಗಳೂರು ಕಾಲ್ತುಳಿತ ಪ್ರಕರಣ: ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಮತ್ತು ಖಜಾಂಚಿ ‘ನೈತಿಕ ಹೊಣೆ’ ಹೊತ್ತು ರಾಜೀನಾಮೆ

- Advertisement -
- Advertisement -

ಬೆಂಗಳೂರು: ಜೂನ್ 4ರಂದು ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಐಪಿಎಲ್ 2025ರ ಗೆಲುವಿನ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ‘ನೈತಿಕ ಹೊಣೆಗಾರಿಕೆ’ ಹೊತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಎ.ಶಂಕರ್ ಮತ್ತು ಖಜಾಂಚಿ ಇ.ಎಸ್. ಜೈರಾಮ್ ರಾಜೀನಾಮೆ ನೀಡಿದ್ದಾರೆ ಎಂದು ಎನ್ ಡಿಟಿವಿ ವರದಿ ಮಾಡಿದೆ.

ಐಪಿಎಲ್‌ನ 18 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಆರ್‌ಸಿಬಿ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಆದರೆ ಸಂಭ್ರಮಾಚರಣೆಯ ಮೆರವಣಿಗೆಯಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದರು ಮತ್ತು 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರಿಂದ ಈ ಗೆಲುವು ಕಹಿಘಟನೆಯಾಗಿ ಮರುಕಳುಹಿಸಿತ್ತು. ಬೆಂಗಳೂರಿನಲ್ಲಿ ತಂಡದ ಚೊಚ್ಚಲ ಐಪಿಎಲ್ ಪ್ರಶಸ್ತಿ ಆಚರಣೆಯು ದುರಂತ ತಿರುವು ಪಡೆದು 11 ಅಭಿಮಾನಿಗಳ ಸಾವಿಗೆ ಕಾರಣವಾದ ನಂತರ, ಪೊಲೀಸರು ಪ್ರಕರಣದಲ್ಲಿ ಇಲ್ಲಿಯವರೆಗೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ನಾಲ್ವರಲ್ಲಿ ಫ್ರಾಂಚೈಸಿಯ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಸೇರಿದ್ದಾರೆ.

ಕಳೆದ ಎರಡು ದಿನಗಳಲ್ಲಿ ನಡೆದ ಅನಿರೀಕ್ಷಿತ ಮತ್ತು ದುರದೃಷ್ಟಕರ ಘಟನೆಗಳಿಂದಾಗಿ ಮತ್ತು ಇದರಲ್ಲಿ ನಮ್ಮ ಪಾತ್ರವು ತುಂಬಾ ಸೀಮಿತವಾಗಿದ್ದರೂ, ನೈತಿಕ ಜವಾಬ್ದಾರಿಯ ಕಾರಣದಿಂದಾಗಿ ನಿನ್ನೆ ರಾತ್ರಿ ನಾವು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ಕಾರ್ಯದರ್ಶಿ ಮತ್ತು ಖಜಾಂಚಿ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇವೆ. ಈ ಕುರಿತು 2025ರ ಜೂನ್ 6ರಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೇವೆ ಎಂದು ಎ. ಶಂಕರ್ ಇ.ಎಸ್. ಜೈರಾಮ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ 11 ಅಭಿಮಾನಿಗಳ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಆರ್ಥಿಕ ಸಹಾಯವನ್ನು ಘೋಷಿಸಿದೆ. ವಿಜಯೋತ್ಸವದ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಮತ್ತು ಅವರ ತಂಡದ ಸದಸ್ಯರನ್ನು ನೋಡಲು ಲಕ್ಷಾಂತರ ಜನರು ಸೇರಿದ್ದರು. ಇದು ಸಂಪೂರ್ಣ ಅವ್ಯವಸ್ಥೆಗೆ ಕಾರಣವಾಯಿತು ಮತ್ತು ಅಂತಿಮವಾಗಿ ಬುಧವಾರ ಕ್ರೀಡಾಂಗಣದ ಹೊರಗೆ 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತಕ್ಕೆ ಕಾರಣವಾಯಿತು.

ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ ಘಟನೆ ನಮ್ಮ ತಂಡಕ್ಕೆ ತುಂಬಾ ನೋವನ್ನುಂಟು ಮಾಡಿದೆ ಎಂದು  ಗುರುವಾರದಂದು ಆರ್‌ಸಿಬಿ ಹೇಳಿಕೆ ತಿಳಿಸಿದೆ. ಘಟನೆಯಲ್ಲಿ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರಿಗೆ ಸಹಾಯ ಮಾಡಲು ನಿಧಿಯನ್ನು ಸ್ಥಾಪಿಸಲಾಗುತ್ತಿದೆ ಎಂದು ಫ್ರಾಂಚೈಸಿ ತಿಳಿಸಿದೆ.

ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ ಆರ್‌ಸಿಬಿ ಮೃತರ ಹನ್ನೊಂದು ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಆರ್ಥಿಕ ನೆರವು ಘೋಷಿಸಿದೆ. ಇದಲ್ಲದೆ ಈ ದುರಂತ ಘಟನೆಯಲ್ಲಿ ಗಾಯಗೊಂಡ ಅಭಿಮಾನಿಗಳನ್ನು ಬೆಂಬಲಿಸಲು ಆರ್‌ಸಿಬಿ ಕೇರ್ಸ್ ಎಂಬ ನಿಧಿಯನ್ನು ಸಹ ಸ್ಥಾಪಿಸಲಾಗುತ್ತಿದೆ ಎಂದು ಅದು ಹೇಳಿದೆ.

ಈ ದುರಂತದ ಬಗ್ಗೆ ಪ್ರಸ್ತುತ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಯುತ್ತಿದ್ದು, ಮುಂದಿನ ಹದಿನೈದು ದಿನಗಳಲ್ಲಿ ಅದರ ವರದಿಯನ್ನು ನಿರೀಕ್ಷಿಸಲಾಗಿದೆ. ಟ್ರೋಫಿ ಗೆದ್ದ ಒಂದು ದಿನದ ನಂತರ ವಿಜಯೋತ್ಸವವನ್ನು ನಡೆಸಿದ್ದಕ್ಕಾಗಿ ಆರ್‌ಸಿಬಿಯು ವ್ಯಾಪಕ ಟೀಕೆಗೆ ಗುರಿಯಾಗಿದೆ. ಇದು ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳಿಗೆ ಇಂತಹ ಬೃಹತ್ ಕಾರ್ಯಕ್ರಮಕ್ಕೆ ಅಗತ್ಯವಾದ ಸಾಕಷ್ಟು ಭದ್ರತೆಯನ್ನು ವ್ಯವಸ್ಥೆ ಮಾಡಲು ಸಾಕಷ್ಟು ಸಮಯವನ್ನು ಇಲ್ಲವಾಗಿಸಿತ್ತು.

ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಬುಧವಾರದ ವ್ಯವಸ್ಥೆಯಲ್ಲಿನ ಲೋಪಗಳನ್ನು ಪ್ರಶ್ನಿಸಿದ್ದಾರೆ ಮತ್ತು ಅಂತಹ ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು ಫ್ರಾಂಚೈಸಿ, ಪೊಲೀಸ್ ಮತ್ತು ಜಿಲ್ಲಾಡಳಿತದ ನಡುವೆ ಸರಿಯಾದ ಸಮನ್ವಯದ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

ಕಳೆದ ವರ್ಷ ಭಾರತದ ಟಿ20 ವಿಶ್ವಕಪ್ ಗೆಲುವಿನ ನಂತರ ಮುಂಬೈನಲ್ಲಿ ಲಕ್ಷಾಂತರ ಕ್ರೀಡಾ ಅಭಿಮಾನಿಗಳು ಬೀದಿಗೆ ಇಳಿದಿದ್ದಾಗ ನಡೆಸಿದ ಸರಾಗ ವಿಜಯೋತ್ಸವ ಮೆರವಣಿಗೆಯನ್ನು ಅವರು ಉದಾಹರಣೆಯಾಗಿ ಉಲ್ಲೇಖಿಸಿದರು.

ಆರ್‌ಸಿಬಿಯ ಸಾಮಾಜಿಕ ಮಾಧ್ಯಮ ತಂಡವು ಸಾಮಾಜಿಕ ಮಾಧ್ಯಮ ಪೋಸ್ಟ್‌ನೊಂದಿಗೆ ಜನರನ್ನು ವಿಜಯೋತ್ಸವದ ಮೆರವಣಿಗೆಗೆ ಆಹ್ವಾನಿಸಿತ್ತು. ಆದರೆ ಬೆಂಗಳೂರು ಸಂಚಾರ ಪೊಲೀಸರು ಮಾರ್ಗದಲ್ಲಿನ ದಟ್ಟಣೆಯನ್ನು ಪರಿಗಣಿಸಿ ವಿಜಯೋತ್ಸವ ಮೆರವಣಿಗೆಗೆ ಅವಕಾಶ ನೀಡುವುದು ಕಷ್ಟ ಎಂದು ಹೇಳಿಕೆ ನೀಡಿದ ನಂತರ ಅದನ್ನು ಹಿಂತೆಗೆದುಕೊಂಡಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆರವಣಿಗೆಗೆ ಅನುಮತಿ ನೀಡಿದರು. ಆದರೆ ಜನಸಂದಣಿಯ ಅವ್ಯವಸ್ಥೆ ಮತ್ತು ಮಳೆಯಿಂದಾಗಿ ಅದು ನಡೆಯಲಿಲ್ಲ.

ಭಾರತದ ಮಾಜಿ ವಿಕೆಟ್ ಕೀಪರ್ ಮತ್ತು ಕರ್ನಾಟಕದ ದಂತಕಥೆ ಸೈಯದ್ ಕಿರ್ಮಾನಿ ಇಂಡಿಯಾ ಟುಡೇ ಜೊತೆ  ಕಟುವಾಗಿ ಮಾತನಾಡಿದರು. ಈ ದುರಂತ ಘಟನೆಯನ್ನು “ಮಾರಕ ಸ್ವಾಗತ” ಎಂದು ಕರೆದರು.

ಆಚರಣೆಯಲ್ಲಿ ಭಾಗವಹಿಸಿದ್ದ ಆರ್‌ಸಿಬಿಯ ಅತಿದೊಡ್ಡ ತಾರೆ ವಿರಾಟ್ ಕೊಹ್ಲಿ, ಕ್ರೀಡಾಂಗಣದ ಹೊರಗೆ ನಡೆದ ಘಟನೆಯಿಂದ “ಆಶ್ಚರ್ಯಗೊಂಡಿದ್ದೇನೆ” ಎಂದು ಹೇಳಿದರು.

ನರಗುಂದ: ಮೂವರು ದಲಿತ ಬಾಲಕರನ್ನು ಧ್ವಜಸ್ತಂಭಕ್ಕೆ ಕಟ್ಟಿಹಾಕಿ ದೊಣ್ಣೆ, ಚಪ್ಪಲಿಯಿಂದ ಹಲ್ಲೆ; 8 ಮಂದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...