Homeಕರ್ನಾಟಕಬೆಂಗಳೂರು ಕಾಲ್ತುಳಿತ | ಆರ್‌ಸಿಬಿ ಮಾರ್ಕೆಟಿಂಗ್ ಮ್ಯಾನೇಜರ್ ಸೇರಿದಂತೆ ನಾಲ್ವರ ಬಂಧನ

ಬೆಂಗಳೂರು ಕಾಲ್ತುಳಿತ | ಆರ್‌ಸಿಬಿ ಮಾರ್ಕೆಟಿಂಗ್ ಮ್ಯಾನೇಜರ್ ಸೇರಿದಂತೆ ನಾಲ್ವರ ಬಂಧನ

- Advertisement -
- Advertisement -

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪರಾಧ ವಿಭಾಗ ಮತ್ತು ಬೆಂಗಳೂರು ಪೊಲೀಸರು ಶುಕ್ರವಾರ ಬೆಳಿಗ್ಗೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB)ನ ಮಾರ್ಕೆಟಿಂಗ್ ಮ್ಯಾನೇಜರ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬೆಂಗಳೂರು ಕಾಲ್ತುಳಿತ

ನಾಲ್ವರು ಪರಾರಿಯಾಗಲು ಯತ್ನಿಸುತ್ತಿದ್ದಾಗ ನಗರದ ಹೊರವಲಯದಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಅವರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಇಲಾಖೆ ಮತ್ತು ಕೇಂದ್ರ ಅಪರಾಧ ವಿಭಾಗದ (CCB) ಉನ್ನತ ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

“ನಾಲ್ವರನ್ನು ಸುರಕ್ಷಿತವಾಗಿರಿಸಲಾಗಿದೆ ಮತ್ತು ಮುಂದಿನ ಪ್ರಕ್ರಿಯೆ ನಡೆಯುತ್ತಿದೆ. ಅವರನ್ನು ಇನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿಲ್ಲ ಮತ್ತು ಬಂಧನ ಪ್ರಕ್ರಿಯೆಯ ಔಪಚಾರಿಕೀಕರಣ ನಡೆಯುತ್ತಿದೆ” ಎಂದು ಮೂಲಗಳು ತಿಳಿಸಿವೆ.

ಪ್ರಮುಖ ಶಂಕಿತರಲ್ಲಿ ಒಬ್ಬನನ್ನು ಆರ್‌ಸಿಬಿಯ ಮಾರ್ಕೆಟಿಂಗ್ ಮತ್ತು ಕಂದಾಯ ಮುಖ್ಯಸ್ಥ ನಿಖಿಲ್ ಸೋಸಲೆ ಎಂದು ಮೂಲಗಳು ಗುರುತಿಸಿವೆ. ಇತರ ಮೂವರ ವಿವರಗಳನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ, ಆದರೆ ಕೆಲವು ಮಾಧ್ಯಮ ವರದಿಗಳು ಎರಡನೇ ಶಂಕಿತನನ್ನು ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯಾದ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್‌ನ ಸುನಿಲ್ ಮ್ಯಾಥ್ಯೂ ಎಂದು ಗುರುತಿಸಿವೆ. ಇತರ ಇಬ್ಬರ ಗುರುತುಗಳು ಇನ್ನೂ ತಿಳಿದುಬಂದಿಲ್ಲ.

ಗುರುವಾರದಂದು ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ​​(ಕೆಎಸ್‌ಸಿಎ) ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ನ ನಂತರ ಈ ಕ್ಷಿಪ್ರ ಕಾರ್ಯಾಚರಣೆ ನಡೆದಿದೆ.

ಬುಧವಾರ ಆರ್‌ಸಿಬಿ ತನ್ನ ಚೊಚ್ಚಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದ ಸಂಭ್ರಮಾಚರಣೆಯಲ್ಲಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಸಾವನ್ನಪ್ಪಿದವರಲ್ಲದೆ, ಅರವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರವು, ಆರ್‌ಸಿಬಿ ಸಂಸ್ಥೆ, ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿತ್ತು.

ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಎಸಿಪಿ, ಸೆಂಟ್ರಲ್ ಡಿಸಿಪಿ, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ನಗರದ ಪೊಲೀಸ್ ಕಮೀಷನರ್‌ ಅವರನ್ನು ತಕ್ಷಣದಿಂದ ಅಮಾನತ್ತು ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಗುರುವಾರ ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ಆರ್‌ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ.” ಎಂದು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದು, “ಆರ್‌ಸಿಬಿ ಸಂಸ್ಥೆ, ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ” ಎಂದು ಹೇಳಿದ್ದರು.

“ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ. ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ.” ಎಂದು ಸಿಎಂ ಹೇಳಿದ್ದರು.

“ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.” ಎಂದು ಸಿದ್ದರಾಮಯ್ಯ ಅವರು ಹೇಳಿದ್ದರು. ಬೆಂಗಳೂರು ಕಾಲ್ತುಳಿತ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ: ಕಾರ್ಯಕ್ರಮ ಬಹಿಷ್ಕರಿಸಿದ ಕೇರಳ ಸರ್ಕಾರ

ರಾಜಭವನದಲ್ಲಿ ಅರೆಸ್ಸೆಸ್‌ ಬಾವುಟ ಹಿಡಿದ ಭಾರತ ಮಾತೆಯ ಚಿತ್ರ: ಕಾರ್ಯಕ್ರಮ ಬಹಿಷ್ಕರಿಸಿದ ಕೇರಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...