HomeUncategorizedಬನಶಂಕರಿ: ಬೀದಿ ವ್ಯಾಪಾರಿಗಳ ಎತ್ತಂಗಡಿಗೆ ಮುಂದಾದ ಬಿಬಿಎಂಪಿ; ತೀವ್ರ ವಿರೋಧ

ಬನಶಂಕರಿ: ಬೀದಿ ವ್ಯಾಪಾರಿಗಳ ಎತ್ತಂಗಡಿಗೆ ಮುಂದಾದ ಬಿಬಿಎಂಪಿ; ತೀವ್ರ ವಿರೋಧ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು, ಪೊಲೀಸರು ಮತ್ತು ಬೀದಿ ಬದಿ ವ್ಯಾಪಾರಿಗಳ ನಡುವೆ ಮತ್ತೊಮ್ಮೆ ಜಟಾಪಟಿ ಶುರುವಾಗಿದೆ.

ನಗರದ ಬೀದಿ ಬದಿಗಳಲ್ಲಿ ಹಣ್ಣು, ಹೂವು, ತರಕಾರಿ ಸೇರಿದಂತೆ ಸಣ್ಣಪುಟ್ಟ ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳನ್ನು ತೆರವುಗೊಳಿಸಲು ಮತ್ತೊಮ್ಮೆ ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ. ಇದಕ್ಕೆ ವ್ಯಾಪಾರಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಇಂದು (ನ.29) ನಗರದ ಬನಶಂಕರಿ ಮತ್ತು ಸಾರಕ್ಕಿ ಮಾರುಕಟ್ಟೆಯ ಬೀದಿ ಬದಿಗಳಲ್ಲಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳನ್ನು ಸ್ಥಳ ಬಿಟ್ಟು ತೆರಳುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚಿಸಿದ್ದಾರೆ. ಈ ವೇಳೆ ವ್ಯಾಪಾರಿಗಳು ತಮಗೆ ಬೀದಿ ಬದಿ ವ್ಯಾಪಾರ ಮಾಡಲು ಸ್ವತಃ ಬಿಬಿಎಂಪಿಯೇ ನೀಡಿರುವ ಅನುಮತಿ ಪತ್ರ, ಗುರುತಿನ ಚೀಟಿಗಳನ್ನು ತೋರಿಸಿದ್ದಾರೆ. ಇದರಿಂದ ತೆರವು ಕಾರ್ಯಕ್ಕೆ ಆಗಮಿಸಿದ್ದ ಅಧಿಕಾರಿಗಳು ವಾಪಸ್‌ ತೆರಳಿದ್ದಾರೆ.

ಈ ಕುರಿತು ನಾನು ಗೌರಿ ಜೊತೆ ಮಾತನಾಡಿರುವ ವಕೀಲ ವಿನಯ್, “ನಮ್ಮ ದೇಶದಲ್ಲಿ 2014ರಿಂದ ‘ಬೀದಿ ವ್ಯಾಪಾರಿಗಳ ಜೀವನೋಪಾಯ ರಕ್ಷಣೆ ಹಾಗೂ ನಿಯಂತ್ರಣ ಕಾಯ್ದೆ’ ಜಾರಿಯಲ್ಲಿದೆ. ಬನಶಂಕರಿ ಮತ್ತು ಸಾರಕ್ಕಿ ಮಾರುಕಟ್ಟೆಗಳ ಎಲ್ಲಾ ಬೀದಿ ಬದಿ ವ್ಯಾಪಾರಿಗಳಲ್ಲಿ ಗುರುತಿನ ಚೀಟಿಯಿದೆ. 2017ರಲ್ಲಿ ಬಿಬಿಎಂಪಿ ಸಮೀಕ್ಷೇ ಮಾಡಿ ಗುರುತಿನ ಚೀಟಿ ಕೊಟ್ಟಿದೆ. ಯಾರೂ ಅಕ್ರಮ ಚಟುಚಟಿಕೆ ಮಾಡುತ್ತಿಲ್ಲ. ಬೀದಿಯಲ್ಲಿ ವ್ಯಾಪಾರ ಮಾಡುವುದು ನಮ್ಮ ಹಕ್ಕು. ಅಧಿಕಾರಿಗಳಿಗೆ ವ್ಯಾಪಾರಿಗಳನ್ನು ತೆರವುಗೊಳಿಸಲು ಯಾವುದೇ ಆದೇಶವಿರಲಿಲ್ಲ ಮತ್ತು ಅವರು ವ್ಯಾಪಾರಿಗಳಿಗೆ ಯಾವುದೇ ನೋಟಿಸ್ ಕೂಡ ನೀಡಿರಲಿಲ್ಲ” ಎಂದು ಹೇಳಿದ್ದಾರೆ.

“2017 ಬಿಬಿಎಂಪಿ ಸಮೀಕ್ಷೆ ಬಳಿಕ ಪಟ್ಟಣ ವ್ಯಾಪಾರ ಸಮಿತಿ ರಚನೆಯಾಗಿದೆ. ಈ ಸಮಿತಿ ಅಧೀನಲ್ಲಿ ಮತ್ತೊಮ್ಮೆ ಸಮೀಕ್ಷೆ ಅಗಬೇಕು. ಅದು ಆಗುವವರೆಗೆ ಯಾರನ್ನೂ ತೆರವುಗೊಳಿಸುವಂತಿಲ್ಲ. ನಾವು ಅನುಮತಿ ಪತ್ರ, ಗುರುತಿನ ಚೀಟಿ ತೋರಿಸಿದಾಗ ಅಧಿಕಾರಿಗಳು ವಾಪಸ್ ಹೋಗಿದ್ದಾರೆ. ಬೀದಿ ಬದಿ ವ್ಯಾಪಾರಿಗಳಿಗೆ ಅಧಿಕಾರಿಗಳು ಪದೇ ಪದೇ ಕಿರುಕುಳ ಕೊಡಬಾರದು. ಬೀದಿ ವ್ಯಾಪಾರಿಗಳ ಕಾಯ್ದೆಯ ಸೆಕ್ಷನ್ 27ರಲ್ಲಿ ವ್ಯಾಪಾರಿಗಳಿಗೆ ಕಿರುಕುಳ ಆಗಬಾರದು ಎಂಬುವುದು ಸ್ಪಷ್ಟವಾಗಿದೆ. ಈ ಬಗ್ಗೆ ಹೆಚ್ಚಿನ ಅಧಿಕಾರಿಗಳಿಗೆ ಮಾಹಿತಿ ಇಲ್ಲ. ಕಾಯ್ದೆ ಪ್ರಕಾರ ಅಧಿಕಾರಿಗಳಿಗೂ ತರಬೇತಿ ನೀಡಬೇಕು. ಬೆಂಗಳೂರು ದಕ್ಷಿಣ ವಿಭಾಗದಲ್ಲಿ ಬೀದಿ ವ್ಯಾಪಾರಿಗಳಿಗೆ ಮಾತ್ರ ತರಬೇತಿ ನೀಡಲಾಗಿದೆ ಆದರೆ, ಅಧಿಕಾರಿಗಳಿಗೆ ತರಬೇತಿ ನೀಡಿಲ್ಲ” ಎಂದರು.

ಬನಶಂಕರಿ ಬೀದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಖಾದರ್ ವಾಲಿ ಮಾತನಾಡಿ, “ನಾವು ಇಲ್ಲಿ ಮೂವತ್ತು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇವೆ. ನಮಗೆ ಬಿಬಿಎಂಪಿಯಿಂದ ಅನುಮತಿ ಇದೆ. ಆದರೂ, ಅಧಿಕಾರಿಗಳು ಪದೇ ಕಿರುಕುಳ ಕೊಡುತ್ತಿದ್ದಾರೆ. ಪಾಲಿಕೆಯವರೇ ನಮಗೆ ಬಲವಂತವಾಗಿ ಲೋನ್ ಕೊಟ್ಟು ವ್ಯಾಪಾರ ಮಾಡಿ ಎಂದಿದ್ದರು. ಈಗ ಅವರೇ ತೆರವು ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಿವಿಸಿ ಸದಸ್ಯ ಮಂಜು ಮಾತನಾಡಿ, “ಅಧಿಕಾರಿಗಳಿಗೆ ಬೀದಿ ವ್ಯಾಪಾರಿಗಳ ಕಾಯ್ದೆ ಬಗ್ಗೆ ಮಾಹಿತಿ ಗೊತ್ತಿಲ್ಲ. ಅವರಿಗೆ ಕಾನೂನಿನ ಅರಿವಿಲ್ಲ. ಈ ಹಿಂದೆ ಮೆಟ್ರೋ ನಿಗಮದಿಂದಲೂ ವ್ಯಾಪಾರಿಗಳಿಗೆ ತೊಂದರೆಯಾಗಿತ್ತು. ನಾವು ಪ್ರತಿಭಟಿಸಿದ್ದಕ್ಕೆ ನಮ್ಮನ್ನೇ ಟಾರ್ಗೆಟ್ ಮಾಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಮತ್ತು ಪೊಲೀಸರು ತುಂಬಾ ಕಿರುಕುಳ ನೀಡುತ್ತಿದ್ದಾರೆ.
ದಯವಿಟ್ಟು ಬೀದಿ ವ್ಯಾಪಾರಿಗಳನ್ನು ಬದುಕಲು ಬಿಡಿ” ಎಂದರು.

ಬೆಂಗಳೂರು ಬೀದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟದ ಉಪಾಧ್ಯಕ್ಷ ಸೈಯ್ಯದ್ ಝಮೀರ್ ಮಾತನಾಡಿ, “ನಮಗೆ ಬೀದಿ ಬದಿ ವ್ಯಾಪಾರ ಮಾಡಲು ಪಾಲಿಕೆಯಿಂದ ಅನುಮತಿ ಇದೆ. ನಮ್ಮದು ಕಚ್ಚಾ ವಸ್ತು, ನಾವು ಅವತ್ತಿಂದು ಅವತ್ತೇ ಮಾರಾಟ ಮಾಡಬೇಕು. ಇಲ್ಲದಿದ್ದರೆ ಬಂಡವಾಳ ಹಾಳಾಗುತ್ತದೆ. ಸರ್ಕಾರ ನಮಗೆ 10, 20, 30 ಸಾವಿರ ಸಾಲ ಕೊಟ್ಟ ವ್ಯಾಪಾರ ಮಾಡಲು ಪ್ರೋತ್ಸಾಹಿಸಿದೆ. ಅಧಿಕಾರಿಗಳು ಹೀಗೆ ಕಿರುಕುಳ ಕೊಟ್ಟರೆ ನಾವು ವ್ಯಾಪಾರ ಮಾಡೋದು ಹೇಗೆ? ಸಾಲ ತೀರಿಸೋದು ಹೇಗೆ? ಹೀಗೆ ಎತ್ತಂಗಡಿ ಮಾಡುತ್ತಿದ್ದರೆ ನಮಗೆ ಆಗುವ ನಷ್ಟವನ್ನು ಸರ್ಕಾರ ತುಂಬಿಕೊಡಬೇಕು ಎಂದು” ಹೇಳಿದರು.

ಸಾರಕ್ಕಿ ಮಾರುಕಟ್ಟೆಯ ಅರುಣ್ ಕುಮಾರ್ ಮಾತನಾಡಿ, “ನಮಗೆ ವ್ಯಾಪಾರ ಮಾಡಲು ಅನುಮತಿ ಇದೆ. ಅನುಮತಿ ಕೊಟ್ಟು ಐದು ವರ್ಷ ಆಗಿದೆ. ಈಗ ನ್ಯಾಯಾಲಯದ ಆದೇಶ ಮೇರೆಗೆ ತೆರವುಗೊಳಿಸಲು ಬಂದಿದ್ದಾರೆ. ನಮ್ಮ ಕಡೆಯಿಂದ ವಕೀಲರು ಬಂದು ಮಾತನಾಡಿದ ಬಳಿಕ ಅಧಿಕಾರಿಗಳು ತೆರಳಿದ್ದಾರೆ. ನಮಗೆ ಹಕ್ಕುಪತ್ರ ಇದೆ. ರಸ್ತೆ ಬದಿ ವ್ಯಾಪಾರ ಮಾಡಲು ಗೆರೆ ಹಾಕಿ ಕೊಟ್ಟದ್ದಾರೆ” ಎಂದು ತಿಳಿಸಿದರು.

“ನಮಗೆ ಬೀದಿ ಬದಿ ವ್ಯಾಪಾರ ಮಾಡಲು ಪಾಲಿಕೆಯಿಂದ ಅನುಮತಿ ಇದೆ. ಬಿಬಿಎಂಪಿ ಅಧಿಕಾರಿಗಳೇ ಅನುಮತಿ ಕೊಟ್ಟು ಈಗ ಎತ್ತಂಗಡಿ ಮಾಡಲು ಬಂದಿದ್ದಾರೆ. ಹೀಗಾದರೆ ನಾವು ಎಲ್ಲಿಗೆ ಹೋಗಬೇಕು? ನಮಗೆ ಜೀವನ ಮಾಡಲು ಬೀದಿ ಬದಿ ವ್ಯಾಪಾರವೊಂದೇ ದಾರಿ. ಇದು ಬಿಟ್ಟರೆ ಬೇರೆ ಗೊತ್ತಿಲ್ಲ. ಇಡೀ ಕುಟುಂಬವನ್ನು ಈ ವ್ಯಾಪಾರದಿಂದಲೇ ಸಲಹುತ್ತಿದ್ದೇವೆ. ನಾವು ಯಾವುದೇ ನಿಯಮ ಮೀರಿಲ್ಲ. ಪಾಲಿಕೆಯವರು ನಿಗದಿಪಡಿಸಿದ ಜಾಗದಲ್ಲೇ ವ್ಯಾಪಾರ ಮಾಡುತ್ತಿದ್ದೇವೆ. ಸಾವಿರಾರು ಹೆಣ್ಣು ಮಕ್ಕಳು ನನ್ನಂತೆ ವ್ಯಾಪಾರ ಮಾಡುತ್ತಿದ್ದಾರೆ. ಪಾಲಿಕೆ ಅಧಿಕಾರಿಗಳು ಅವರ ಬಗ್ಗೆ ಸ್ವಲ್ಪ ಯೋಚನೆ ಮಾಡಬೇಕು ಎಂದು ಬೀದಿ ಬದಿ ವ್ಯಾಪಾರಿ ಫರ್ವೀನ್ ತಾಜ್ ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ : ಬೆಂಗಳೂರು: ರಂಗ ಶಂಕರದಲ್ಲಿ ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...