HomeUncategorizedಬನಶಂಕರಿ: ಬೀದಿ ವ್ಯಾಪಾರಿಗಳ ಎತ್ತಂಗಡಿಗೆ ಮುಂದಾದ ಬಿಬಿಎಂಪಿ; ತೀವ್ರ ವಿರೋಧ

ಬನಶಂಕರಿ: ಬೀದಿ ವ್ಯಾಪಾರಿಗಳ ಎತ್ತಂಗಡಿಗೆ ಮುಂದಾದ ಬಿಬಿಎಂಪಿ; ತೀವ್ರ ವಿರೋಧ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು, ಪೊಲೀಸರು ಮತ್ತು ಬೀದಿ ಬದಿ ವ್ಯಾಪಾರಿಗಳ ನಡುವೆ ಮತ್ತೊಮ್ಮೆ ಜಟಾಪಟಿ ಶುರುವಾಗಿದೆ.

ನಗರದ ಬೀದಿ ಬದಿಗಳಲ್ಲಿ ಹಣ್ಣು, ಹೂವು, ತರಕಾರಿ ಸೇರಿದಂತೆ ಸಣ್ಣಪುಟ್ಟ ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳನ್ನು ತೆರವುಗೊಳಿಸಲು ಮತ್ತೊಮ್ಮೆ ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ. ಇದಕ್ಕೆ ವ್ಯಾಪಾರಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಇಂದು (ನ.29) ನಗರದ ಬನಶಂಕರಿ ಮತ್ತು ಸಾರಕ್ಕಿ ಮಾರುಕಟ್ಟೆಯ ಬೀದಿ ಬದಿಗಳಲ್ಲಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳನ್ನು ಸ್ಥಳ ಬಿಟ್ಟು ತೆರಳುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚಿಸಿದ್ದಾರೆ. ಈ ವೇಳೆ ವ್ಯಾಪಾರಿಗಳು ತಮಗೆ ಬೀದಿ ಬದಿ ವ್ಯಾಪಾರ ಮಾಡಲು ಸ್ವತಃ ಬಿಬಿಎಂಪಿಯೇ ನೀಡಿರುವ ಅನುಮತಿ ಪತ್ರ, ಗುರುತಿನ ಚೀಟಿಗಳನ್ನು ತೋರಿಸಿದ್ದಾರೆ. ಇದರಿಂದ ತೆರವು ಕಾರ್ಯಕ್ಕೆ ಆಗಮಿಸಿದ್ದ ಅಧಿಕಾರಿಗಳು ವಾಪಸ್‌ ತೆರಳಿದ್ದಾರೆ.

ಈ ಕುರಿತು ನಾನು ಗೌರಿ ಜೊತೆ ಮಾತನಾಡಿರುವ ವಕೀಲ ವಿನಯ್, “ನಮ್ಮ ದೇಶದಲ್ಲಿ 2014ರಿಂದ ‘ಬೀದಿ ವ್ಯಾಪಾರಿಗಳ ಜೀವನೋಪಾಯ ರಕ್ಷಣೆ ಹಾಗೂ ನಿಯಂತ್ರಣ ಕಾಯ್ದೆ’ ಜಾರಿಯಲ್ಲಿದೆ. ಬನಶಂಕರಿ ಮತ್ತು ಸಾರಕ್ಕಿ ಮಾರುಕಟ್ಟೆಗಳ ಎಲ್ಲಾ ಬೀದಿ ಬದಿ ವ್ಯಾಪಾರಿಗಳಲ್ಲಿ ಗುರುತಿನ ಚೀಟಿಯಿದೆ. 2017ರಲ್ಲಿ ಬಿಬಿಎಂಪಿ ಸಮೀಕ್ಷೇ ಮಾಡಿ ಗುರುತಿನ ಚೀಟಿ ಕೊಟ್ಟಿದೆ. ಯಾರೂ ಅಕ್ರಮ ಚಟುಚಟಿಕೆ ಮಾಡುತ್ತಿಲ್ಲ. ಬೀದಿಯಲ್ಲಿ ವ್ಯಾಪಾರ ಮಾಡುವುದು ನಮ್ಮ ಹಕ್ಕು. ಅಧಿಕಾರಿಗಳಿಗೆ ವ್ಯಾಪಾರಿಗಳನ್ನು ತೆರವುಗೊಳಿಸಲು ಯಾವುದೇ ಆದೇಶವಿರಲಿಲ್ಲ ಮತ್ತು ಅವರು ವ್ಯಾಪಾರಿಗಳಿಗೆ ಯಾವುದೇ ನೋಟಿಸ್ ಕೂಡ ನೀಡಿರಲಿಲ್ಲ” ಎಂದು ಹೇಳಿದ್ದಾರೆ.

“2017 ಬಿಬಿಎಂಪಿ ಸಮೀಕ್ಷೆ ಬಳಿಕ ಪಟ್ಟಣ ವ್ಯಾಪಾರ ಸಮಿತಿ ರಚನೆಯಾಗಿದೆ. ಈ ಸಮಿತಿ ಅಧೀನಲ್ಲಿ ಮತ್ತೊಮ್ಮೆ ಸಮೀಕ್ಷೆ ಅಗಬೇಕು. ಅದು ಆಗುವವರೆಗೆ ಯಾರನ್ನೂ ತೆರವುಗೊಳಿಸುವಂತಿಲ್ಲ. ನಾವು ಅನುಮತಿ ಪತ್ರ, ಗುರುತಿನ ಚೀಟಿ ತೋರಿಸಿದಾಗ ಅಧಿಕಾರಿಗಳು ವಾಪಸ್ ಹೋಗಿದ್ದಾರೆ. ಬೀದಿ ಬದಿ ವ್ಯಾಪಾರಿಗಳಿಗೆ ಅಧಿಕಾರಿಗಳು ಪದೇ ಪದೇ ಕಿರುಕುಳ ಕೊಡಬಾರದು. ಬೀದಿ ವ್ಯಾಪಾರಿಗಳ ಕಾಯ್ದೆಯ ಸೆಕ್ಷನ್ 27ರಲ್ಲಿ ವ್ಯಾಪಾರಿಗಳಿಗೆ ಕಿರುಕುಳ ಆಗಬಾರದು ಎಂಬುವುದು ಸ್ಪಷ್ಟವಾಗಿದೆ. ಈ ಬಗ್ಗೆ ಹೆಚ್ಚಿನ ಅಧಿಕಾರಿಗಳಿಗೆ ಮಾಹಿತಿ ಇಲ್ಲ. ಕಾಯ್ದೆ ಪ್ರಕಾರ ಅಧಿಕಾರಿಗಳಿಗೂ ತರಬೇತಿ ನೀಡಬೇಕು. ಬೆಂಗಳೂರು ದಕ್ಷಿಣ ವಿಭಾಗದಲ್ಲಿ ಬೀದಿ ವ್ಯಾಪಾರಿಗಳಿಗೆ ಮಾತ್ರ ತರಬೇತಿ ನೀಡಲಾಗಿದೆ ಆದರೆ, ಅಧಿಕಾರಿಗಳಿಗೆ ತರಬೇತಿ ನೀಡಿಲ್ಲ” ಎಂದರು.

ಬನಶಂಕರಿ ಬೀದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಖಾದರ್ ವಾಲಿ ಮಾತನಾಡಿ, “ನಾವು ಇಲ್ಲಿ ಮೂವತ್ತು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇವೆ. ನಮಗೆ ಬಿಬಿಎಂಪಿಯಿಂದ ಅನುಮತಿ ಇದೆ. ಆದರೂ, ಅಧಿಕಾರಿಗಳು ಪದೇ ಕಿರುಕುಳ ಕೊಡುತ್ತಿದ್ದಾರೆ. ಪಾಲಿಕೆಯವರೇ ನಮಗೆ ಬಲವಂತವಾಗಿ ಲೋನ್ ಕೊಟ್ಟು ವ್ಯಾಪಾರ ಮಾಡಿ ಎಂದಿದ್ದರು. ಈಗ ಅವರೇ ತೆರವು ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಿವಿಸಿ ಸದಸ್ಯ ಮಂಜು ಮಾತನಾಡಿ, “ಅಧಿಕಾರಿಗಳಿಗೆ ಬೀದಿ ವ್ಯಾಪಾರಿಗಳ ಕಾಯ್ದೆ ಬಗ್ಗೆ ಮಾಹಿತಿ ಗೊತ್ತಿಲ್ಲ. ಅವರಿಗೆ ಕಾನೂನಿನ ಅರಿವಿಲ್ಲ. ಈ ಹಿಂದೆ ಮೆಟ್ರೋ ನಿಗಮದಿಂದಲೂ ವ್ಯಾಪಾರಿಗಳಿಗೆ ತೊಂದರೆಯಾಗಿತ್ತು. ನಾವು ಪ್ರತಿಭಟಿಸಿದ್ದಕ್ಕೆ ನಮ್ಮನ್ನೇ ಟಾರ್ಗೆಟ್ ಮಾಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಮತ್ತು ಪೊಲೀಸರು ತುಂಬಾ ಕಿರುಕುಳ ನೀಡುತ್ತಿದ್ದಾರೆ.
ದಯವಿಟ್ಟು ಬೀದಿ ವ್ಯಾಪಾರಿಗಳನ್ನು ಬದುಕಲು ಬಿಡಿ” ಎಂದರು.

ಬೆಂಗಳೂರು ಬೀದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟದ ಉಪಾಧ್ಯಕ್ಷ ಸೈಯ್ಯದ್ ಝಮೀರ್ ಮಾತನಾಡಿ, “ನಮಗೆ ಬೀದಿ ಬದಿ ವ್ಯಾಪಾರ ಮಾಡಲು ಪಾಲಿಕೆಯಿಂದ ಅನುಮತಿ ಇದೆ. ನಮ್ಮದು ಕಚ್ಚಾ ವಸ್ತು, ನಾವು ಅವತ್ತಿಂದು ಅವತ್ತೇ ಮಾರಾಟ ಮಾಡಬೇಕು. ಇಲ್ಲದಿದ್ದರೆ ಬಂಡವಾಳ ಹಾಳಾಗುತ್ತದೆ. ಸರ್ಕಾರ ನಮಗೆ 10, 20, 30 ಸಾವಿರ ಸಾಲ ಕೊಟ್ಟ ವ್ಯಾಪಾರ ಮಾಡಲು ಪ್ರೋತ್ಸಾಹಿಸಿದೆ. ಅಧಿಕಾರಿಗಳು ಹೀಗೆ ಕಿರುಕುಳ ಕೊಟ್ಟರೆ ನಾವು ವ್ಯಾಪಾರ ಮಾಡೋದು ಹೇಗೆ? ಸಾಲ ತೀರಿಸೋದು ಹೇಗೆ? ಹೀಗೆ ಎತ್ತಂಗಡಿ ಮಾಡುತ್ತಿದ್ದರೆ ನಮಗೆ ಆಗುವ ನಷ್ಟವನ್ನು ಸರ್ಕಾರ ತುಂಬಿಕೊಡಬೇಕು ಎಂದು” ಹೇಳಿದರು.

ಸಾರಕ್ಕಿ ಮಾರುಕಟ್ಟೆಯ ಅರುಣ್ ಕುಮಾರ್ ಮಾತನಾಡಿ, “ನಮಗೆ ವ್ಯಾಪಾರ ಮಾಡಲು ಅನುಮತಿ ಇದೆ. ಅನುಮತಿ ಕೊಟ್ಟು ಐದು ವರ್ಷ ಆಗಿದೆ. ಈಗ ನ್ಯಾಯಾಲಯದ ಆದೇಶ ಮೇರೆಗೆ ತೆರವುಗೊಳಿಸಲು ಬಂದಿದ್ದಾರೆ. ನಮ್ಮ ಕಡೆಯಿಂದ ವಕೀಲರು ಬಂದು ಮಾತನಾಡಿದ ಬಳಿಕ ಅಧಿಕಾರಿಗಳು ತೆರಳಿದ್ದಾರೆ. ನಮಗೆ ಹಕ್ಕುಪತ್ರ ಇದೆ. ರಸ್ತೆ ಬದಿ ವ್ಯಾಪಾರ ಮಾಡಲು ಗೆರೆ ಹಾಕಿ ಕೊಟ್ಟದ್ದಾರೆ” ಎಂದು ತಿಳಿಸಿದರು.

“ನಮಗೆ ಬೀದಿ ಬದಿ ವ್ಯಾಪಾರ ಮಾಡಲು ಪಾಲಿಕೆಯಿಂದ ಅನುಮತಿ ಇದೆ. ಬಿಬಿಎಂಪಿ ಅಧಿಕಾರಿಗಳೇ ಅನುಮತಿ ಕೊಟ್ಟು ಈಗ ಎತ್ತಂಗಡಿ ಮಾಡಲು ಬಂದಿದ್ದಾರೆ. ಹೀಗಾದರೆ ನಾವು ಎಲ್ಲಿಗೆ ಹೋಗಬೇಕು? ನಮಗೆ ಜೀವನ ಮಾಡಲು ಬೀದಿ ಬದಿ ವ್ಯಾಪಾರವೊಂದೇ ದಾರಿ. ಇದು ಬಿಟ್ಟರೆ ಬೇರೆ ಗೊತ್ತಿಲ್ಲ. ಇಡೀ ಕುಟುಂಬವನ್ನು ಈ ವ್ಯಾಪಾರದಿಂದಲೇ ಸಲಹುತ್ತಿದ್ದೇವೆ. ನಾವು ಯಾವುದೇ ನಿಯಮ ಮೀರಿಲ್ಲ. ಪಾಲಿಕೆಯವರು ನಿಗದಿಪಡಿಸಿದ ಜಾಗದಲ್ಲೇ ವ್ಯಾಪಾರ ಮಾಡುತ್ತಿದ್ದೇವೆ. ಸಾವಿರಾರು ಹೆಣ್ಣು ಮಕ್ಕಳು ನನ್ನಂತೆ ವ್ಯಾಪಾರ ಮಾಡುತ್ತಿದ್ದಾರೆ. ಪಾಲಿಕೆ ಅಧಿಕಾರಿಗಳು ಅವರ ಬಗ್ಗೆ ಸ್ವಲ್ಪ ಯೋಚನೆ ಮಾಡಬೇಕು ಎಂದು ಬೀದಿ ಬದಿ ವ್ಯಾಪಾರಿ ಫರ್ವೀನ್ ತಾಜ್ ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ : ಬೆಂಗಳೂರು: ರಂಗ ಶಂಕರದಲ್ಲಿ ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...