HomeUncategorizedಬನಶಂಕರಿ: ಬೀದಿ ವ್ಯಾಪಾರಿಗಳ ಎತ್ತಂಗಡಿಗೆ ಮುಂದಾದ ಬಿಬಿಎಂಪಿ; ತೀವ್ರ ವಿರೋಧ

ಬನಶಂಕರಿ: ಬೀದಿ ವ್ಯಾಪಾರಿಗಳ ಎತ್ತಂಗಡಿಗೆ ಮುಂದಾದ ಬಿಬಿಎಂಪಿ; ತೀವ್ರ ವಿರೋಧ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು, ಪೊಲೀಸರು ಮತ್ತು ಬೀದಿ ಬದಿ ವ್ಯಾಪಾರಿಗಳ ನಡುವೆ ಮತ್ತೊಮ್ಮೆ ಜಟಾಪಟಿ ಶುರುವಾಗಿದೆ.

ನಗರದ ಬೀದಿ ಬದಿಗಳಲ್ಲಿ ಹಣ್ಣು, ಹೂವು, ತರಕಾರಿ ಸೇರಿದಂತೆ ಸಣ್ಣಪುಟ್ಟ ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳನ್ನು ತೆರವುಗೊಳಿಸಲು ಮತ್ತೊಮ್ಮೆ ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ. ಇದಕ್ಕೆ ವ್ಯಾಪಾರಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಇಂದು (ನ.29) ನಗರದ ಬನಶಂಕರಿ ಮತ್ತು ಸಾರಕ್ಕಿ ಮಾರುಕಟ್ಟೆಯ ಬೀದಿ ಬದಿಗಳಲ್ಲಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗಳನ್ನು ಸ್ಥಳ ಬಿಟ್ಟು ತೆರಳುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚಿಸಿದ್ದಾರೆ. ಈ ವೇಳೆ ವ್ಯಾಪಾರಿಗಳು ತಮಗೆ ಬೀದಿ ಬದಿ ವ್ಯಾಪಾರ ಮಾಡಲು ಸ್ವತಃ ಬಿಬಿಎಂಪಿಯೇ ನೀಡಿರುವ ಅನುಮತಿ ಪತ್ರ, ಗುರುತಿನ ಚೀಟಿಗಳನ್ನು ತೋರಿಸಿದ್ದಾರೆ. ಇದರಿಂದ ತೆರವು ಕಾರ್ಯಕ್ಕೆ ಆಗಮಿಸಿದ್ದ ಅಧಿಕಾರಿಗಳು ವಾಪಸ್‌ ತೆರಳಿದ್ದಾರೆ.

ಈ ಕುರಿತು ನಾನು ಗೌರಿ ಜೊತೆ ಮಾತನಾಡಿರುವ ವಕೀಲ ವಿನಯ್, “ನಮ್ಮ ದೇಶದಲ್ಲಿ 2014ರಿಂದ ‘ಬೀದಿ ವ್ಯಾಪಾರಿಗಳ ಜೀವನೋಪಾಯ ರಕ್ಷಣೆ ಹಾಗೂ ನಿಯಂತ್ರಣ ಕಾಯ್ದೆ’ ಜಾರಿಯಲ್ಲಿದೆ. ಬನಶಂಕರಿ ಮತ್ತು ಸಾರಕ್ಕಿ ಮಾರುಕಟ್ಟೆಗಳ ಎಲ್ಲಾ ಬೀದಿ ಬದಿ ವ್ಯಾಪಾರಿಗಳಲ್ಲಿ ಗುರುತಿನ ಚೀಟಿಯಿದೆ. 2017ರಲ್ಲಿ ಬಿಬಿಎಂಪಿ ಸಮೀಕ್ಷೇ ಮಾಡಿ ಗುರುತಿನ ಚೀಟಿ ಕೊಟ್ಟಿದೆ. ಯಾರೂ ಅಕ್ರಮ ಚಟುಚಟಿಕೆ ಮಾಡುತ್ತಿಲ್ಲ. ಬೀದಿಯಲ್ಲಿ ವ್ಯಾಪಾರ ಮಾಡುವುದು ನಮ್ಮ ಹಕ್ಕು. ಅಧಿಕಾರಿಗಳಿಗೆ ವ್ಯಾಪಾರಿಗಳನ್ನು ತೆರವುಗೊಳಿಸಲು ಯಾವುದೇ ಆದೇಶವಿರಲಿಲ್ಲ ಮತ್ತು ಅವರು ವ್ಯಾಪಾರಿಗಳಿಗೆ ಯಾವುದೇ ನೋಟಿಸ್ ಕೂಡ ನೀಡಿರಲಿಲ್ಲ” ಎಂದು ಹೇಳಿದ್ದಾರೆ.

“2017 ಬಿಬಿಎಂಪಿ ಸಮೀಕ್ಷೆ ಬಳಿಕ ಪಟ್ಟಣ ವ್ಯಾಪಾರ ಸಮಿತಿ ರಚನೆಯಾಗಿದೆ. ಈ ಸಮಿತಿ ಅಧೀನಲ್ಲಿ ಮತ್ತೊಮ್ಮೆ ಸಮೀಕ್ಷೆ ಅಗಬೇಕು. ಅದು ಆಗುವವರೆಗೆ ಯಾರನ್ನೂ ತೆರವುಗೊಳಿಸುವಂತಿಲ್ಲ. ನಾವು ಅನುಮತಿ ಪತ್ರ, ಗುರುತಿನ ಚೀಟಿ ತೋರಿಸಿದಾಗ ಅಧಿಕಾರಿಗಳು ವಾಪಸ್ ಹೋಗಿದ್ದಾರೆ. ಬೀದಿ ಬದಿ ವ್ಯಾಪಾರಿಗಳಿಗೆ ಅಧಿಕಾರಿಗಳು ಪದೇ ಪದೇ ಕಿರುಕುಳ ಕೊಡಬಾರದು. ಬೀದಿ ವ್ಯಾಪಾರಿಗಳ ಕಾಯ್ದೆಯ ಸೆಕ್ಷನ್ 27ರಲ್ಲಿ ವ್ಯಾಪಾರಿಗಳಿಗೆ ಕಿರುಕುಳ ಆಗಬಾರದು ಎಂಬುವುದು ಸ್ಪಷ್ಟವಾಗಿದೆ. ಈ ಬಗ್ಗೆ ಹೆಚ್ಚಿನ ಅಧಿಕಾರಿಗಳಿಗೆ ಮಾಹಿತಿ ಇಲ್ಲ. ಕಾಯ್ದೆ ಪ್ರಕಾರ ಅಧಿಕಾರಿಗಳಿಗೂ ತರಬೇತಿ ನೀಡಬೇಕು. ಬೆಂಗಳೂರು ದಕ್ಷಿಣ ವಿಭಾಗದಲ್ಲಿ ಬೀದಿ ವ್ಯಾಪಾರಿಗಳಿಗೆ ಮಾತ್ರ ತರಬೇತಿ ನೀಡಲಾಗಿದೆ ಆದರೆ, ಅಧಿಕಾರಿಗಳಿಗೆ ತರಬೇತಿ ನೀಡಿಲ್ಲ” ಎಂದರು.

ಬನಶಂಕರಿ ಬೀದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಖಾದರ್ ವಾಲಿ ಮಾತನಾಡಿ, “ನಾವು ಇಲ್ಲಿ ಮೂವತ್ತು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇವೆ. ನಮಗೆ ಬಿಬಿಎಂಪಿಯಿಂದ ಅನುಮತಿ ಇದೆ. ಆದರೂ, ಅಧಿಕಾರಿಗಳು ಪದೇ ಕಿರುಕುಳ ಕೊಡುತ್ತಿದ್ದಾರೆ. ಪಾಲಿಕೆಯವರೇ ನಮಗೆ ಬಲವಂತವಾಗಿ ಲೋನ್ ಕೊಟ್ಟು ವ್ಯಾಪಾರ ಮಾಡಿ ಎಂದಿದ್ದರು. ಈಗ ಅವರೇ ತೆರವು ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಿವಿಸಿ ಸದಸ್ಯ ಮಂಜು ಮಾತನಾಡಿ, “ಅಧಿಕಾರಿಗಳಿಗೆ ಬೀದಿ ವ್ಯಾಪಾರಿಗಳ ಕಾಯ್ದೆ ಬಗ್ಗೆ ಮಾಹಿತಿ ಗೊತ್ತಿಲ್ಲ. ಅವರಿಗೆ ಕಾನೂನಿನ ಅರಿವಿಲ್ಲ. ಈ ಹಿಂದೆ ಮೆಟ್ರೋ ನಿಗಮದಿಂದಲೂ ವ್ಯಾಪಾರಿಗಳಿಗೆ ತೊಂದರೆಯಾಗಿತ್ತು. ನಾವು ಪ್ರತಿಭಟಿಸಿದ್ದಕ್ಕೆ ನಮ್ಮನ್ನೇ ಟಾರ್ಗೆಟ್ ಮಾಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಮತ್ತು ಪೊಲೀಸರು ತುಂಬಾ ಕಿರುಕುಳ ನೀಡುತ್ತಿದ್ದಾರೆ.
ದಯವಿಟ್ಟು ಬೀದಿ ವ್ಯಾಪಾರಿಗಳನ್ನು ಬದುಕಲು ಬಿಡಿ” ಎಂದರು.

ಬೆಂಗಳೂರು ಬೀದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟದ ಉಪಾಧ್ಯಕ್ಷ ಸೈಯ್ಯದ್ ಝಮೀರ್ ಮಾತನಾಡಿ, “ನಮಗೆ ಬೀದಿ ಬದಿ ವ್ಯಾಪಾರ ಮಾಡಲು ಪಾಲಿಕೆಯಿಂದ ಅನುಮತಿ ಇದೆ. ನಮ್ಮದು ಕಚ್ಚಾ ವಸ್ತು, ನಾವು ಅವತ್ತಿಂದು ಅವತ್ತೇ ಮಾರಾಟ ಮಾಡಬೇಕು. ಇಲ್ಲದಿದ್ದರೆ ಬಂಡವಾಳ ಹಾಳಾಗುತ್ತದೆ. ಸರ್ಕಾರ ನಮಗೆ 10, 20, 30 ಸಾವಿರ ಸಾಲ ಕೊಟ್ಟ ವ್ಯಾಪಾರ ಮಾಡಲು ಪ್ರೋತ್ಸಾಹಿಸಿದೆ. ಅಧಿಕಾರಿಗಳು ಹೀಗೆ ಕಿರುಕುಳ ಕೊಟ್ಟರೆ ನಾವು ವ್ಯಾಪಾರ ಮಾಡೋದು ಹೇಗೆ? ಸಾಲ ತೀರಿಸೋದು ಹೇಗೆ? ಹೀಗೆ ಎತ್ತಂಗಡಿ ಮಾಡುತ್ತಿದ್ದರೆ ನಮಗೆ ಆಗುವ ನಷ್ಟವನ್ನು ಸರ್ಕಾರ ತುಂಬಿಕೊಡಬೇಕು ಎಂದು” ಹೇಳಿದರು.

ಸಾರಕ್ಕಿ ಮಾರುಕಟ್ಟೆಯ ಅರುಣ್ ಕುಮಾರ್ ಮಾತನಾಡಿ, “ನಮಗೆ ವ್ಯಾಪಾರ ಮಾಡಲು ಅನುಮತಿ ಇದೆ. ಅನುಮತಿ ಕೊಟ್ಟು ಐದು ವರ್ಷ ಆಗಿದೆ. ಈಗ ನ್ಯಾಯಾಲಯದ ಆದೇಶ ಮೇರೆಗೆ ತೆರವುಗೊಳಿಸಲು ಬಂದಿದ್ದಾರೆ. ನಮ್ಮ ಕಡೆಯಿಂದ ವಕೀಲರು ಬಂದು ಮಾತನಾಡಿದ ಬಳಿಕ ಅಧಿಕಾರಿಗಳು ತೆರಳಿದ್ದಾರೆ. ನಮಗೆ ಹಕ್ಕುಪತ್ರ ಇದೆ. ರಸ್ತೆ ಬದಿ ವ್ಯಾಪಾರ ಮಾಡಲು ಗೆರೆ ಹಾಕಿ ಕೊಟ್ಟದ್ದಾರೆ” ಎಂದು ತಿಳಿಸಿದರು.

“ನಮಗೆ ಬೀದಿ ಬದಿ ವ್ಯಾಪಾರ ಮಾಡಲು ಪಾಲಿಕೆಯಿಂದ ಅನುಮತಿ ಇದೆ. ಬಿಬಿಎಂಪಿ ಅಧಿಕಾರಿಗಳೇ ಅನುಮತಿ ಕೊಟ್ಟು ಈಗ ಎತ್ತಂಗಡಿ ಮಾಡಲು ಬಂದಿದ್ದಾರೆ. ಹೀಗಾದರೆ ನಾವು ಎಲ್ಲಿಗೆ ಹೋಗಬೇಕು? ನಮಗೆ ಜೀವನ ಮಾಡಲು ಬೀದಿ ಬದಿ ವ್ಯಾಪಾರವೊಂದೇ ದಾರಿ. ಇದು ಬಿಟ್ಟರೆ ಬೇರೆ ಗೊತ್ತಿಲ್ಲ. ಇಡೀ ಕುಟುಂಬವನ್ನು ಈ ವ್ಯಾಪಾರದಿಂದಲೇ ಸಲಹುತ್ತಿದ್ದೇವೆ. ನಾವು ಯಾವುದೇ ನಿಯಮ ಮೀರಿಲ್ಲ. ಪಾಲಿಕೆಯವರು ನಿಗದಿಪಡಿಸಿದ ಜಾಗದಲ್ಲೇ ವ್ಯಾಪಾರ ಮಾಡುತ್ತಿದ್ದೇವೆ. ಸಾವಿರಾರು ಹೆಣ್ಣು ಮಕ್ಕಳು ನನ್ನಂತೆ ವ್ಯಾಪಾರ ಮಾಡುತ್ತಿದ್ದಾರೆ. ಪಾಲಿಕೆ ಅಧಿಕಾರಿಗಳು ಅವರ ಬಗ್ಗೆ ಸ್ವಲ್ಪ ಯೋಚನೆ ಮಾಡಬೇಕು ಎಂದು ಬೀದಿ ಬದಿ ವ್ಯಾಪಾರಿ ಫರ್ವೀನ್ ತಾಜ್ ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ : ಬೆಂಗಳೂರು: ರಂಗ ಶಂಕರದಲ್ಲಿ ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...