Homeಕರ್ನಾಟಕಬೆಂಗಳೂರು: ನಕಲಿ ಅಂಕಪಟ್ಟಿ ದಂಧೆ ಬಯಲಿಗೆಳೆದ ಪೊಲೀಸರು

ಬೆಂಗಳೂರು: ನಕಲಿ ಅಂಕಪಟ್ಟಿ ದಂಧೆ ಬಯಲಿಗೆಳೆದ ಪೊಲೀಸರು

- Advertisement -
- Advertisement -

ನಕಲಿ ಅಂಕಪಟ್ಟಿ ತಯಾರಿಸುವ ದಂಧೆ ನಡೆಸುತ್ತಿದ್ದ ‘ಸಿಸ್ಟಮ್ಸ್ ಕ್ವೆಸ್ಟ್ ಪ್ರೈವೇಟ್ ಲಿಮಿಟೆಡ್‌’ ಎಂಬ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರನ್ನು ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಶನಿವಾರ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಆರೋಪಿ ವಿಕಾಸ್ ಭಗತ್ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳಿಗೆ ನಕಲಿ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ ನೀಡಿದ ಆರೋಪವನ್ನು ಪೊಲೀಸರು ಹೊರಿಸಿದ್ದಾರೆ.

26 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ವಿದ್ಯಾಭ್ಯಾಸವನ್ನು ಕರೆಸ್ಪಾಂಡೆನ್ಸ್ ಕೋರ್ಸ್ ಮೂಲಕ ಮುಂದುವರಿಸುವ ಉದ್ದೇಶದಿಂದ ಶಂಕಿತನ ಕಚೇರಿಯನ್ನು ಸಂಪರ್ಕಿಸಿದಾಗ ನಕಲಿ ಅಂಕ ಪಟ್ಟಿ ತಯಾರಿಸುವ ವಂಚನೆಯ ಯೋಜನೆ ಬಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಚೇರಿ ಸಿಬ್ಬಂದಿಯು ವಿದ್ಯಾರ್ಥಿಗೆ 25,000 ರೂಪಾಯಿ ನೀಡಿದರೆ ಪರೀಕ್ಷೆಗೆ ಹಾಜರಾಗದೆ ನಕಲಿ ಅಂಕಪಟ್ಟಿ ಮತ್ತು ಪ್ರಮಾಣಪತ್ರಗಳನ್ನು ನೀಡುವುದಾಗಿ ಭರವಸೆ ನೀಡಿದ್ದರು. ಹೀಗಾಗಿ ವಿದ್ಯಾರ್ಥಿಯು ಘಟನೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಜನವರಿ 3 ರಂದು ಅಧಿಕೃತವಾಗಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ರಾಜಾಜಿನಗರದ ನ್ಯೂ ಕ್ವೆಸ್ಟ್ ಟೆಕ್ನಾಲಜೀಸ್, ಜೆ.ಪಿ.ನಗರದ ಸಿಸ್ಟಂ ಕ್ವೆಸ್ಟ್, ಚಂದ್ರಪ್ಪ ಲೇಔಟ್‌ನ ಆರೋಹಿ ಇನ್ಸ್‌ಟಿಟ್ಯೂಟ್, ದಾಸರಹಳ್ಳಿಯ ವಿಶ್ವ ಜ್ಯೋತಿ ಕಾಲೇಜು ಮತ್ತು ವಿಜಯನಗರದ ಬೆನಕ ಕರೆಸ್ಪಾಂಡೆನ್ಸ್ ಕಾಲೇಜಿನಲ್ಲಿ ಪೊಲೀಸರು ಹಲವು ಬಾರಿ ಸಂಘಟಿತ ದಾಳಿ ನಡೆಸಿದ್ದು, ಈ ವೇಳೆ 6,800 ನಕಲಿ ಅಂಕಪಟ್ಟಿ ಕಾರ್ಡ್‌ಗಳು, 22 ಕಂಪ್ಯೂಟರ್‌/ಲ್ಯಾಪ್‌ಟಾಪ್‌ಗಳನ್ನು ಮತ್ತು 13 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ವೇಳೆ ಕಂಪನಿ ಮತ್ತು ಅದರ ಸಹವರ್ತಿಗಳ ಕಚೇರಿಗಳ ಬಗ್ಗೆ ಹುಡುಕಾಡಿದಾಗ, ಸಂಸ್ಥೆಯನ್ನು ಕಂಪ್ಯೂಟರ್ ಮತ್ತು ಸಾಫ್ಟ್‌ವೇರ್ ಅಭಿವೃದ್ಧಿಯ ವ್ಯವಹಾರವಾಗಿ ನೋಂದಾಯಿಸಲ್ಪಟ್ಟಿತ್ತು. ಆದರೆ ಈ ಸಂಸ್ಥೆಗಳಲ್ಲಿ ಯಾವುದೇ ಶಿಕ್ಷಣ-ಸಂಬಂಧಿತ ಸೇವೆಗಳನ್ನು ನೀಡುವುದಿಲ್ಲ ಎಂದು ತನಿಖೆಯ ವೇಳೆ ತಿಳಿದುಬಂದಿದೆ.

ಪ್ರಮುಖ ಆರೋಪಿ ವಿಕಾಸ್ ಭಗತ್ ತನಗೆ ಹೆಸರಾಂತ ವಿಶ್ವವಿದ್ಯಾನಿಲಯಗಳೊಂದಿಗೆ ಸಂಪರ್ಕವಿದೆ ಮತ್ತು ವಂಚನೆಯ ಪ್ರಮಾಣಪತ್ರಗಳನ್ನು ನೀಡುವುದಾಗಿ ವಿದ್ಯಾರ್ಥಿಗಳನ್ನು ನಂಬಿಸಿ ವಂಚಿಸುತ್ತಿದ್ದ ಎಂದು ವರದಿಯಾಗಿದೆ.

ಪ್ರತಿ ನಕಲಿ ದಾಖಲೆಗೆ ಭಗತ್ ವಿದ್ಯಾರ್ಥಿಗಳಿಂದ 25 ಸಾವಿರರಿಂದ 30 ಸಾವಿರ ರೂಗಳ ವರೆಗೆ ವಸೂಲಿ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಸಿಕ್ಕಿಂ ವಿಶ್ವವಿದ್ಯಾಲಯ, ಅಣ್ಣಾಮಲೈ ವಿಶ್ವವಿದ್ಯಾಲಯ, ಗೀತಂ ವಿಶ್ವವಿದ್ಯಾಲಯ, ಬಿಎಸ್‌ಐಟಿ ವಿಶ್ವವಿದ್ಯಾಲಯ, ಕುವೆಂಪು ವಿಶ್ವವಿದ್ಯಾಲಯ, ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಬೆಂಗಳೂರು ವಿಶ್ವವಿದ್ಯಾನಿಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿಗಳಿದ್ದವು ಎಂದು ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಶಾರ್ಟ್ ಸೆಲ್ಲಿಂಗ್ ಎಂದರೇನು? ಅದಾನಿಯನ್ನು ಪ್ರಪಾತಕ್ಕೆ ನೂಕುತ್ತಿರುವ ಹಿಂಡೆನ್‌ಬರ್ಗ್‌ ಕಂಪನಿಯ ಹಿನ್ನಲೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...