Homeಕರ್ನಾಟಕಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು

ಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು

- Advertisement -
- Advertisement -

22 ವರ್ಷದ ಯುವಕರೊಬ್ಬನನ್ನು ಬಂಧನದಲ್ಲಿಟ್ಟು ಸತತ ಚಿತ್ರಹಿಂಸೆ ನೀಡಿ ಆತ ತನ್ನ ಬಲಗೈ ಕಳೆದುಕೊಳ್ಳುವಂತೆ ಮಾಡಿದ್ದಾರೆ ಎಂಬ ಆರೋಪದಲ್ಲಿ ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆಯ ಮೂವರು ಪೊಲೀಸರನ್ನು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಅಮಾನತುಗೊಳಿಸಿದ್ದಾರೆ.

ಕಾರಿನ ಬ್ಯಾಟರಿ ಕಳ್ಳತನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೋಳಿ ಅಂಗಡಿ ನಡೆಸುತ್ತಿದ್ದ ಸಲ್ಮಾನ್ ಖಾನ್ ಎಂಬ ಯುವಕನನ್ನು ವರ್ತೂರು ಪೊಲೀಸರು ಅಕ್ಟೋಬರ್ 27ರಂದು ಬಂಧಿಸಿದ್ದರು. ಮೂರು ದಿನಗಳವರೆಗೆ ಆತನಿಗೆ ಠಾಣೆಯಲ್ಲಿ ಚಿತ್ರಹಿಂಸೆ ನೀಡಲಾಗಿದೆ. ಇದರಿಂದ ಆತ ತನ್ನ ಬಲಗೈ ಕಳೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಘಟನೆ ಬಗ್ಗೆ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿತ್ತು. ಸಲ್ಮಾನ್ ಮೇಲೆ ಹಲ್ಲೆ ನಡೆಸಿರುವುದು ಹಿರಿಯ ಅಧಿಕಾರಿಯ ವಿಚಾರಣೆಯ ನಂತರ ಬೆಳಕಿಗೆ ಬಂದಿದ್ದು, ಹೆಡ್ ಕಾನ್‌ಸ್ಟೆಬಲ್‌ಗಳಾದ ನಾಗಭೂಷಣ ಗೌಡ, ನಾಗರಾಜ್ ಬಿ.ಎನ್ ಮತ್ತು ಶಿವಕುಮಾರ್ ಹೆಚ್ ಎಂಬುವವರನ್ನು ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ: ಕನಸಿನ ಭಾರತಕ್ಕೆ ಸಂವಿಧಾನವೇ ರೋಡ್‌ ಮ್ಯಾಪ್‌: ಗಾಯಕಿ ಎಂ.ಡಿ.ಪಲ್ಲವಿ

ಘಟನೆ ಹಿನ್ನೆಲೆ:

ಕಳ್ಳತನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೋಳಿ ಅಂಗಡಿ ನಡೆಸುತ್ತಿದ್ದ ಸಲ್ಮಾನ್ ಖಾನ್ ಎಂಬ ಯುವಕನನ್ನು ವರ್ತೂರು ಪೊಲೀಸರು ಅಕ್ಟೋಬರ್ 27ರಂದು ಬಂಧಿಸಿದ್ದರು. ಆತನ ಬಗ್ಗೆ ಯಾವುದೇ ಸುಳಿವು ಸಿಗದೇ ಇದ್ದಾಗ ಮನೆಮಂದಿ ನಾಪತ್ತೆ ದೂರು ದಾಖಲಿಸಲು ನಿರಂತರ ಮೂರು ದಿನಗಳ ವರೆಗೆ ಪೊಲೀಸ್ ಠಾಣೆಗೆ ಅಲೆದಾಡಿದ್ದರು. ತಮಗೆ ಆತನ ಬಗ್ಗೆ ಮಾಹಿತಿ ಇಲ್ಲ ಎಂದಿದ್ದ ಪೊಲೀಸರು ದೂರು ದಾಖಲಿಸಿಕೊಳ್ಳಲೂ ನಿರಾಕರಿಸಿದ್ದರು. ನಾಲ್ಕನೇ ದಿನ ತಾಯಿ ಠಾಣೆಗೆ ತೆರಳಿದ್ದ ಸಂದರ್ಭದಲ್ಲಿ ಸಲ್ಮಾನ್ ನನ್ನು ಠಾಣೆಯಲ್ಲಿ ಕೂಡಿ ಹಾಕಿರುವ ವಿಚಾರ ಆಕೆಯ ಗಮನಕ್ಕೆ ಬಂದಿದೆ. ಆ ವೇಳೆ ಆತನನ್ನು ಬಿಡುಗಡೆ ಮಾಡಬೇಕಾದರೆ 50,000 ರೂಪಾಯಿ ನೀಡಬೇಕೆಂದು ಪೊಲೀಸರು ಒತ್ತಡ ಹೇರಿದ್ದರೆಂದು ಸ್ವತಃ ಕುಟುಂಬಸ್ಥರು ಹೇಳಿದ್ದಾರೆ. ಎರಡು-ಮೂರು ದಿನಗಳ ಬಳಿಕ ತಾಯಿ 10,000 ರೂಪಾಯಿ ಹೊಂದಿಸಿ ಆತನನ್ನು ಬಿಡಿಸಿಕೊಂಡು ಬಂದಿದ್ದರು. ಮನೆಗೆ ಬಂದ ಬಳಿಕ, ಪೊಲೀಸರು ಠಾಣೆಯಲ್ಲಿ ಅಮಾನವೀಯವಾಗಿ ಚಿತ್ರಹಿಂಸೆ ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ಆಸ್ಪತ್ರೆಗೆ ದಾಖಲಿಸಿದಾಗ ಪೊಲೀಸರ ಗಂಭೀರ ಹೊಡೆತದ ಪರಿಣಾಮ ಆತನ ಕೈಯಲ್ಲಿ ಸಂಪೂರ್ಣವಾಗಿ ಕೀವು ತುಂಬಿದ್ದು, ಕೂಡಲೇ ಕೈ ಕತ್ತರಿಸಬೇಕೆಂದು ವೈದ್ಯರು ಸೂಚಿಸಿದ್ದಾರೆ. ನವೆಂಬರ್ 8 ರಂದು ಯುವಕನ ಬಲಗೈ ಕತ್ತರಿಸಲಾಗಿದೆ.

ಈ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆಗೆ ಮಾತನಾಡಿರುವ ಸಂತ್ರಸ್ತ ಸಲ್ಮಾನ್ ಕೇರಳ ನೋಂದಣಿ ಸಂಖ್ಯೆಯ ಖಾಸಗಿ ವಾಹನದಲ್ಲಿ ಪೊಲೀಸರು ಆಗಮಿಸಿದ್ದರು ಎಂದಿದ್ದಾರೆ. “ನನ್ನನ್ನು ವರ್ತೂರು ಪೊಲೀಸ್ ಠಾಣೆಗೆ ಕರೆದೊಯ್ದರು, ಅಲ್ಲಿ ಮೂವರು ಪೊಲೀಸರು ನನ್ನ ಮೇಲೆ ನಿರ್ದಯವಾಗಿ ಹಲ್ಲೆ ನಡೆಸಿದರು. ನಾನು ಮೂರು ಕಾರ್ ಬ್ಯಾಟರಿಗಳನ್ನು ಕದ್ದಿರುವುದಾಗಿ ಒಪ್ಪಿಕೊಂಡೆ. ನಾನು ಬ್ಯಾಟರಿಗಳನ್ನು ಮಾರಾಟ ಮಾಡಿದ ಜನರ ಬಳಿಗೆ ಅವರು ನನ್ನನ್ನು ಕರೆದೊಯ್ದರು. ನನ್ನನ್ನು ಮತ್ತೆ ಪೊಲೀಸ್ ಠಾಣೆಗೆ ಕರೆತಂದು, ನಾನು ಮಾಡದ ಇತರ ಕಳ್ಳತನಗಳನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದರು. ಅವುಗಳನ್ನು ಒಪ್ಪಿಕೊಳ್ಳಲು ನಿರಾಕರಿಸಿದಾಗ ಪೊಲೀಸರು ಚಿತ್ರಹಿಂಸೆಯನ್ನು ತೀವ್ರಗೊಳಿಸಿದರು” ಎಂದು ಆರೋಪಿಸಿದ್ದಾರೆ.

“ನನ್ನನ್ನು ತಲೆಕೆಳಗಾಗಿ ಕಟ್ಟಿ ಥಳಿಸಲಾಗಿದೆ. ಮೂರು ದಿನಗಳ ಕಾಲ ಮೂವರು ಪೊಲೀಸರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅವರು ನನ್ನ ಬಲಗೈ ಗುರಿಯಾಗಿಸಿಕೊಂಡು ತೀವ್ರವಾಗಿ ಹೊಡೆದರು. ಅಕ್ಟೋಬರ್ 31 ರಂದು ಪೊಲೀಸ್ ಕಸ್ಟಡಿಯಿಂದ ಬಿಡುಗಡೆ ಮಾಡಲಾಯಿತು.” ಎಂದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಸಲ್ಮಾನ್‌ ತಿಳಿಸಿದ್ದಾರೆ.

ಘಟನೆಯನ್ನು ಶಾಸಕ ರಿಜ್ವಾನ್ ಅರ್ಷದ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸೇರಿದಂತೆ ಹಲವರು ಖಂಡಿಸಿದ್ದರು.

———————

ಇದನ್ನೂ ಓದಿ: ಬೆಂಗಳೂರು ಪೊಲೀಸರ ಚಿತ್ರಹಿಂಸೆಯಿಂದ ಕೈಕಳೆದುಕೊಂಡ ಯುವಕ: ಪಿಎಫ್‌ಐ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...