Homeಕರ್ನಾಟಕಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು

ಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು

- Advertisement -
- Advertisement -

22 ವರ್ಷದ ಯುವಕರೊಬ್ಬನನ್ನು ಬಂಧನದಲ್ಲಿಟ್ಟು ಸತತ ಚಿತ್ರಹಿಂಸೆ ನೀಡಿ ಆತ ತನ್ನ ಬಲಗೈ ಕಳೆದುಕೊಳ್ಳುವಂತೆ ಮಾಡಿದ್ದಾರೆ ಎಂಬ ಆರೋಪದಲ್ಲಿ ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆಯ ಮೂವರು ಪೊಲೀಸರನ್ನು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಅಮಾನತುಗೊಳಿಸಿದ್ದಾರೆ.

ಕಾರಿನ ಬ್ಯಾಟರಿ ಕಳ್ಳತನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೋಳಿ ಅಂಗಡಿ ನಡೆಸುತ್ತಿದ್ದ ಸಲ್ಮಾನ್ ಖಾನ್ ಎಂಬ ಯುವಕನನ್ನು ವರ್ತೂರು ಪೊಲೀಸರು ಅಕ್ಟೋಬರ್ 27ರಂದು ಬಂಧಿಸಿದ್ದರು. ಮೂರು ದಿನಗಳವರೆಗೆ ಆತನಿಗೆ ಠಾಣೆಯಲ್ಲಿ ಚಿತ್ರಹಿಂಸೆ ನೀಡಲಾಗಿದೆ. ಇದರಿಂದ ಆತ ತನ್ನ ಬಲಗೈ ಕಳೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಘಟನೆ ಬಗ್ಗೆ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿತ್ತು. ಸಲ್ಮಾನ್ ಮೇಲೆ ಹಲ್ಲೆ ನಡೆಸಿರುವುದು ಹಿರಿಯ ಅಧಿಕಾರಿಯ ವಿಚಾರಣೆಯ ನಂತರ ಬೆಳಕಿಗೆ ಬಂದಿದ್ದು, ಹೆಡ್ ಕಾನ್‌ಸ್ಟೆಬಲ್‌ಗಳಾದ ನಾಗಭೂಷಣ ಗೌಡ, ನಾಗರಾಜ್ ಬಿ.ಎನ್ ಮತ್ತು ಶಿವಕುಮಾರ್ ಹೆಚ್ ಎಂಬುವವರನ್ನು ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ: ಕನಸಿನ ಭಾರತಕ್ಕೆ ಸಂವಿಧಾನವೇ ರೋಡ್‌ ಮ್ಯಾಪ್‌: ಗಾಯಕಿ ಎಂ.ಡಿ.ಪಲ್ಲವಿ

ಘಟನೆ ಹಿನ್ನೆಲೆ:

ಕಳ್ಳತನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೋಳಿ ಅಂಗಡಿ ನಡೆಸುತ್ತಿದ್ದ ಸಲ್ಮಾನ್ ಖಾನ್ ಎಂಬ ಯುವಕನನ್ನು ವರ್ತೂರು ಪೊಲೀಸರು ಅಕ್ಟೋಬರ್ 27ರಂದು ಬಂಧಿಸಿದ್ದರು. ಆತನ ಬಗ್ಗೆ ಯಾವುದೇ ಸುಳಿವು ಸಿಗದೇ ಇದ್ದಾಗ ಮನೆಮಂದಿ ನಾಪತ್ತೆ ದೂರು ದಾಖಲಿಸಲು ನಿರಂತರ ಮೂರು ದಿನಗಳ ವರೆಗೆ ಪೊಲೀಸ್ ಠಾಣೆಗೆ ಅಲೆದಾಡಿದ್ದರು. ತಮಗೆ ಆತನ ಬಗ್ಗೆ ಮಾಹಿತಿ ಇಲ್ಲ ಎಂದಿದ್ದ ಪೊಲೀಸರು ದೂರು ದಾಖಲಿಸಿಕೊಳ್ಳಲೂ ನಿರಾಕರಿಸಿದ್ದರು. ನಾಲ್ಕನೇ ದಿನ ತಾಯಿ ಠಾಣೆಗೆ ತೆರಳಿದ್ದ ಸಂದರ್ಭದಲ್ಲಿ ಸಲ್ಮಾನ್ ನನ್ನು ಠಾಣೆಯಲ್ಲಿ ಕೂಡಿ ಹಾಕಿರುವ ವಿಚಾರ ಆಕೆಯ ಗಮನಕ್ಕೆ ಬಂದಿದೆ. ಆ ವೇಳೆ ಆತನನ್ನು ಬಿಡುಗಡೆ ಮಾಡಬೇಕಾದರೆ 50,000 ರೂಪಾಯಿ ನೀಡಬೇಕೆಂದು ಪೊಲೀಸರು ಒತ್ತಡ ಹೇರಿದ್ದರೆಂದು ಸ್ವತಃ ಕುಟುಂಬಸ್ಥರು ಹೇಳಿದ್ದಾರೆ. ಎರಡು-ಮೂರು ದಿನಗಳ ಬಳಿಕ ತಾಯಿ 10,000 ರೂಪಾಯಿ ಹೊಂದಿಸಿ ಆತನನ್ನು ಬಿಡಿಸಿಕೊಂಡು ಬಂದಿದ್ದರು. ಮನೆಗೆ ಬಂದ ಬಳಿಕ, ಪೊಲೀಸರು ಠಾಣೆಯಲ್ಲಿ ಅಮಾನವೀಯವಾಗಿ ಚಿತ್ರಹಿಂಸೆ ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ಆಸ್ಪತ್ರೆಗೆ ದಾಖಲಿಸಿದಾಗ ಪೊಲೀಸರ ಗಂಭೀರ ಹೊಡೆತದ ಪರಿಣಾಮ ಆತನ ಕೈಯಲ್ಲಿ ಸಂಪೂರ್ಣವಾಗಿ ಕೀವು ತುಂಬಿದ್ದು, ಕೂಡಲೇ ಕೈ ಕತ್ತರಿಸಬೇಕೆಂದು ವೈದ್ಯರು ಸೂಚಿಸಿದ್ದಾರೆ. ನವೆಂಬರ್ 8 ರಂದು ಯುವಕನ ಬಲಗೈ ಕತ್ತರಿಸಲಾಗಿದೆ.

ಈ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆಗೆ ಮಾತನಾಡಿರುವ ಸಂತ್ರಸ್ತ ಸಲ್ಮಾನ್ ಕೇರಳ ನೋಂದಣಿ ಸಂಖ್ಯೆಯ ಖಾಸಗಿ ವಾಹನದಲ್ಲಿ ಪೊಲೀಸರು ಆಗಮಿಸಿದ್ದರು ಎಂದಿದ್ದಾರೆ. “ನನ್ನನ್ನು ವರ್ತೂರು ಪೊಲೀಸ್ ಠಾಣೆಗೆ ಕರೆದೊಯ್ದರು, ಅಲ್ಲಿ ಮೂವರು ಪೊಲೀಸರು ನನ್ನ ಮೇಲೆ ನಿರ್ದಯವಾಗಿ ಹಲ್ಲೆ ನಡೆಸಿದರು. ನಾನು ಮೂರು ಕಾರ್ ಬ್ಯಾಟರಿಗಳನ್ನು ಕದ್ದಿರುವುದಾಗಿ ಒಪ್ಪಿಕೊಂಡೆ. ನಾನು ಬ್ಯಾಟರಿಗಳನ್ನು ಮಾರಾಟ ಮಾಡಿದ ಜನರ ಬಳಿಗೆ ಅವರು ನನ್ನನ್ನು ಕರೆದೊಯ್ದರು. ನನ್ನನ್ನು ಮತ್ತೆ ಪೊಲೀಸ್ ಠಾಣೆಗೆ ಕರೆತಂದು, ನಾನು ಮಾಡದ ಇತರ ಕಳ್ಳತನಗಳನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದರು. ಅವುಗಳನ್ನು ಒಪ್ಪಿಕೊಳ್ಳಲು ನಿರಾಕರಿಸಿದಾಗ ಪೊಲೀಸರು ಚಿತ್ರಹಿಂಸೆಯನ್ನು ತೀವ್ರಗೊಳಿಸಿದರು” ಎಂದು ಆರೋಪಿಸಿದ್ದಾರೆ.

“ನನ್ನನ್ನು ತಲೆಕೆಳಗಾಗಿ ಕಟ್ಟಿ ಥಳಿಸಲಾಗಿದೆ. ಮೂರು ದಿನಗಳ ಕಾಲ ಮೂವರು ಪೊಲೀಸರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅವರು ನನ್ನ ಬಲಗೈ ಗುರಿಯಾಗಿಸಿಕೊಂಡು ತೀವ್ರವಾಗಿ ಹೊಡೆದರು. ಅಕ್ಟೋಬರ್ 31 ರಂದು ಪೊಲೀಸ್ ಕಸ್ಟಡಿಯಿಂದ ಬಿಡುಗಡೆ ಮಾಡಲಾಯಿತು.” ಎಂದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಸಲ್ಮಾನ್‌ ತಿಳಿಸಿದ್ದಾರೆ.

ಘಟನೆಯನ್ನು ಶಾಸಕ ರಿಜ್ವಾನ್ ಅರ್ಷದ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸೇರಿದಂತೆ ಹಲವರು ಖಂಡಿಸಿದ್ದರು.

———————

ಇದನ್ನೂ ಓದಿ: ಬೆಂಗಳೂರು ಪೊಲೀಸರ ಚಿತ್ರಹಿಂಸೆಯಿಂದ ಕೈಕಳೆದುಕೊಂಡ ಯುವಕ: ಪಿಎಫ್‌ಐ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...