Homeಕರ್ನಾಟಕಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

- Advertisement -
- Advertisement -

ಕಲ್ಲು ಹೊಡೆದ ಆರೋಪದ ಮೇಲೆ ಬೆಂಗಳೂರಿನ ಟ್ರಾಫಿಕ್ ಎಎಸ್‌ಐ ಒಬ್ಬರು ವಿಕಲಾಂಗ ಮಹಿಳೆಗೆ ಬೂಟು ಕಾಲಿನಿಂದ ಒದ್ದು ಥಳಿಸಿರುವ ಘಟನೆ ನಡೆದಿದೆ. ಈ ಸಂಬಂಧ ವಿಡಿಯೊ ಲಭ್ಯವಾಗಿದೆ.

ಟೋಯಿಂಗ್‌ ವಾಹನದಲ್ಲಿ ಕುಳಿತ್ತಿದ್ದ ಎಎಸ್‌ಐಗೆ ಕಲ್ಲಿನಿಂದ ಹೊಡೆದ ಆರೋಪದ ಮೇಲೆ ಮಹಿಳೆಯ ಮೇಲೆ ಪ್ರಕರಣವನ್ನೂ ದಾಖಲಿಸಲಾಗಿದೆ. ಅಲ್ಲದೆ ಎಎಸ್‌ಐ, ವಿಕಲಾಂಗ ಮಹಿಳೆಗೆ ಸಾರ್ವಜನಿಕವಾಗಿ ಬೂಟು ಕಾಲಿನಿಂದ ಒದ್ದು ಅವ್ಯಾಚ್ಯ ಪದಗಳಿಂದ ನಿಂದಿಸಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಎಎಸ್‌ಐ ನೀಡಿದ ದೂರಿನ ಆಧಾರದಲ್ಲಿ ಎಸ್.ಜೆ.ಪಾರ್ಕ್ ಪೊಲೀಸರು ವಿಕಲಾಂಗ ಮಹಿಳೆಯ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಎಸ್‌.ಜೆ.ಪಾರ್ಕ್ ಪೊಲೀಸ್ ಠಾಣೆಯ ಸಿಬ್ಬಂದಿ, “ಜನವರಿ 24ರಂದು ಪ್ರಕರಣ ದಾಖಲಾಗಿದೆ. ಟ್ರಾಫಿಕ್‌ ಎಎಸ್‌ಐ ನಾರಾಯಣ್‌ ಅವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನೀಡಲು ಅವರು ನಿರಾಕರಿಸಿದ್ದಾರೆ. ಟ್ರಾಫಿಕ್‌ ಎಎಸ್‌ಐ ನಾರಾಯಣ್‌ ಅವರು ಹಲಸೂರು ಗೇಟ್‌ ಟ್ರಾಫಿಕ್‌ ಪೊಲೀಸ್ ಠಾಣೆಯವರಾಗಿದ್ದಾರೆಂದು ತಿಳಿದುಬಂದಿದೆ.

ಮಹಿಳೆಯನ್ನು ಅವ್ಯಾಚ್ಯವಾಗಿ ನಿಂದಿಸಿ, ಅಮಾನವೀಯವಾಗಿ ಥಳಿಸಿದ ಪೊಲೀಸ್ ಅಧಿಕಾರಿಯ ವಿರುದ್ಧ ಯಾವುದಾದರೂ ಕ್ರಮ ಜರುಗಿಸಲಾಗಿಯೇ ಎಂದು ಪರಿಶೀಲಿಸಲಾಗುತ್ತಿದೆ. ಮೇಲಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸಲಾಗಿದೆ. ಅವರ ಗಮನಕ್ಕೂ ಪ್ರಕರಣವನ್ನು ತರಲಾಗಿದ್ದು, ಪ್ರತಿಕ್ರಿಯೆಗಳನ್ನು ನಿರೀಕ್ಷಿಸಲಾಗಿದೆ.

ಸೂಚನೆ: ಈ ವಿಡಿಯೊದಲ್ಲಿ ಅವಾಚ್ಯ ಶಬ್ದಗಳನ್ನು ಬಳಸಲಾಗಿದೆ.


ಇದನ್ನೂ ಓದಿರಿ: ಪೊಲೀಸ್ ಇಲಾಖೆಯಿಂದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್‌ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

11 COMMENTS

  1. ವಿಕಲಾಂಗ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವ ಈ ಪೊಲೀಸಪ್ಪನನ್ನು ಕೂಡಲೇ ಬಂದಿಸಿ ಜೈಲಿಗೆ ಕಳುಹಿಸಬೇಕು.

  2. ಅಧಿಕಾರ ಇದೆ ಅಂತ ಏನು ಬೇಕಾದರೂ ಮಾಡಿದರೆ ನಡೆಯುತ್ತೆ ಅಂತ ಹುಚ್ಚು ಹುಚ್ಚು ಆಗಿ ದಬ್ಬಾಳಿಕೆ ಹಿಂಸೆ ಮಾಡಿ ಕ್ರೌರಿಯವನ್ನು ಮೆರೆಯುವ ಇಂಥ ಅಧಿಕಾರಿಗಳ ಮೇಲೆ ನೇರ ನಿಷ್ಟೂರ ಕ್ರಮಗಳನ್ನು ಮೇಲಾಧಿಕಾರಿಗಳು ತೆಗೆಯಬೇಕು ಹಾಗು ಮಹಿಳೆ ತಪ್ಪು ಮಾಡಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಅದು ಬಿಟ್ಟು ಈ ರೀತಿ ಅಮಾನವೀಯವಾಗಿ ನಡೆಯುದಲ್ಲ

  3. ಇಂಥ ದುಷ್ಟ ದರ್ಪಿಷ್ಟ ಅಧಿಕಾರಿಗೆ ಶಿಕ್ಷೆ ಆಗಲಿ. ಇದು ಅಮಾನವೀಯ ಘಟನೆ ಖಂಡನಾರ್ಹ

  4. Traffic Police officers should have utmost patience while handling any critical cases on roads. When this type videos are made public, Concerned ACP and above officers should find out fact and resolve the issue to save the reputation of Police Department. Harassment to public should be brought to books without delay.

  5. ಪೊಲೀಸ್ರಾ ಅಲ್ಲ ರಕ್ಷಸ ನಡೆ ಇದು ತುಂಬಾ ಅಮಾನವೀಯ ಅವರಿಗೆ ಕಠಿಣ ಶಿಕ್ಷೆ ಆಗಬೇಕು pension ಅನ್ನೋದು ಸಿಗಬಾರದು ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ನನ್ನದು

  6. ಇದು ಯಾವಾಗ ಮತ್ತು ಯಾವ ದಿನಾಂಕದಂದು ಆಗಿದೆ ಯಾವ ಪೊಲೀಸ್ ಸ್ಟೇಷನ್ ತಿಳಿಸಿ

  7. If anything is happened he should brought to Senior officers anyway this ASI should be punished Should HomeMinister take action. It should be a lesson to others otherwise public will be giving a fitting reply in a near future

  8. ಅವನಿಗೆ ಯಾವ ಶಿಕ್ಷೇನೂ ಆಗೋದಿಲ್ಲ.ಸ್ವಲ್ಪ ಸಮಯದ ನಂತರ ಎಲ್ಲವೂ ಮರೆತುಹೋಗುತ್ತದೆ.ನಮ್ಮಪ್ರಜಾಪ್ರಬುತ್ವ ಕೆಲಸ ಮಾಡೋದು ಹೀಗೆಯೇ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...