Homeಕರ್ನಾಟಕಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

- Advertisement -
- Advertisement -

ಕಲ್ಲು ಹೊಡೆದ ಆರೋಪದ ಮೇಲೆ ಬೆಂಗಳೂರಿನ ಟ್ರಾಫಿಕ್ ಎಎಸ್‌ಐ ಒಬ್ಬರು ವಿಕಲಾಂಗ ಮಹಿಳೆಗೆ ಬೂಟು ಕಾಲಿನಿಂದ ಒದ್ದು ಥಳಿಸಿರುವ ಘಟನೆ ನಡೆದಿದೆ. ಈ ಸಂಬಂಧ ವಿಡಿಯೊ ಲಭ್ಯವಾಗಿದೆ.

ಟೋಯಿಂಗ್‌ ವಾಹನದಲ್ಲಿ ಕುಳಿತ್ತಿದ್ದ ಎಎಸ್‌ಐಗೆ ಕಲ್ಲಿನಿಂದ ಹೊಡೆದ ಆರೋಪದ ಮೇಲೆ ಮಹಿಳೆಯ ಮೇಲೆ ಪ್ರಕರಣವನ್ನೂ ದಾಖಲಿಸಲಾಗಿದೆ. ಅಲ್ಲದೆ ಎಎಸ್‌ಐ, ವಿಕಲಾಂಗ ಮಹಿಳೆಗೆ ಸಾರ್ವಜನಿಕವಾಗಿ ಬೂಟು ಕಾಲಿನಿಂದ ಒದ್ದು ಅವ್ಯಾಚ್ಯ ಪದಗಳಿಂದ ನಿಂದಿಸಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಎಎಸ್‌ಐ ನೀಡಿದ ದೂರಿನ ಆಧಾರದಲ್ಲಿ ಎಸ್.ಜೆ.ಪಾರ್ಕ್ ಪೊಲೀಸರು ವಿಕಲಾಂಗ ಮಹಿಳೆಯ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಎಸ್‌.ಜೆ.ಪಾರ್ಕ್ ಪೊಲೀಸ್ ಠಾಣೆಯ ಸಿಬ್ಬಂದಿ, “ಜನವರಿ 24ರಂದು ಪ್ರಕರಣ ದಾಖಲಾಗಿದೆ. ಟ್ರಾಫಿಕ್‌ ಎಎಸ್‌ಐ ನಾರಾಯಣ್‌ ಅವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನೀಡಲು ಅವರು ನಿರಾಕರಿಸಿದ್ದಾರೆ. ಟ್ರಾಫಿಕ್‌ ಎಎಸ್‌ಐ ನಾರಾಯಣ್‌ ಅವರು ಹಲಸೂರು ಗೇಟ್‌ ಟ್ರಾಫಿಕ್‌ ಪೊಲೀಸ್ ಠಾಣೆಯವರಾಗಿದ್ದಾರೆಂದು ತಿಳಿದುಬಂದಿದೆ.

ಮಹಿಳೆಯನ್ನು ಅವ್ಯಾಚ್ಯವಾಗಿ ನಿಂದಿಸಿ, ಅಮಾನವೀಯವಾಗಿ ಥಳಿಸಿದ ಪೊಲೀಸ್ ಅಧಿಕಾರಿಯ ವಿರುದ್ಧ ಯಾವುದಾದರೂ ಕ್ರಮ ಜರುಗಿಸಲಾಗಿಯೇ ಎಂದು ಪರಿಶೀಲಿಸಲಾಗುತ್ತಿದೆ. ಮೇಲಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸಲಾಗಿದೆ. ಅವರ ಗಮನಕ್ಕೂ ಪ್ರಕರಣವನ್ನು ತರಲಾಗಿದ್ದು, ಪ್ರತಿಕ್ರಿಯೆಗಳನ್ನು ನಿರೀಕ್ಷಿಸಲಾಗಿದೆ.

ಸೂಚನೆ: ಈ ವಿಡಿಯೊದಲ್ಲಿ ಅವಾಚ್ಯ ಶಬ್ದಗಳನ್ನು ಬಳಸಲಾಗಿದೆ.


ಇದನ್ನೂ ಓದಿರಿ: ಪೊಲೀಸ್ ಇಲಾಖೆಯಿಂದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್‌ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

11 COMMENTS

  1. ವಿಕಲಾಂಗ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವ ಈ ಪೊಲೀಸಪ್ಪನನ್ನು ಕೂಡಲೇ ಬಂದಿಸಿ ಜೈಲಿಗೆ ಕಳುಹಿಸಬೇಕು.

  2. ಅಧಿಕಾರ ಇದೆ ಅಂತ ಏನು ಬೇಕಾದರೂ ಮಾಡಿದರೆ ನಡೆಯುತ್ತೆ ಅಂತ ಹುಚ್ಚು ಹುಚ್ಚು ಆಗಿ ದಬ್ಬಾಳಿಕೆ ಹಿಂಸೆ ಮಾಡಿ ಕ್ರೌರಿಯವನ್ನು ಮೆರೆಯುವ ಇಂಥ ಅಧಿಕಾರಿಗಳ ಮೇಲೆ ನೇರ ನಿಷ್ಟೂರ ಕ್ರಮಗಳನ್ನು ಮೇಲಾಧಿಕಾರಿಗಳು ತೆಗೆಯಬೇಕು ಹಾಗು ಮಹಿಳೆ ತಪ್ಪು ಮಾಡಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಅದು ಬಿಟ್ಟು ಈ ರೀತಿ ಅಮಾನವೀಯವಾಗಿ ನಡೆಯುದಲ್ಲ

  3. ಇಂಥ ದುಷ್ಟ ದರ್ಪಿಷ್ಟ ಅಧಿಕಾರಿಗೆ ಶಿಕ್ಷೆ ಆಗಲಿ. ಇದು ಅಮಾನವೀಯ ಘಟನೆ ಖಂಡನಾರ್ಹ

  4. Traffic Police officers should have utmost patience while handling any critical cases on roads. When this type videos are made public, Concerned ACP and above officers should find out fact and resolve the issue to save the reputation of Police Department. Harassment to public should be brought to books without delay.

  5. ಪೊಲೀಸ್ರಾ ಅಲ್ಲ ರಕ್ಷಸ ನಡೆ ಇದು ತುಂಬಾ ಅಮಾನವೀಯ ಅವರಿಗೆ ಕಠಿಣ ಶಿಕ್ಷೆ ಆಗಬೇಕು pension ಅನ್ನೋದು ಸಿಗಬಾರದು ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ನನ್ನದು

  6. ಇದು ಯಾವಾಗ ಮತ್ತು ಯಾವ ದಿನಾಂಕದಂದು ಆಗಿದೆ ಯಾವ ಪೊಲೀಸ್ ಸ್ಟೇಷನ್ ತಿಳಿಸಿ

  7. If anything is happened he should brought to Senior officers anyway this ASI should be punished Should HomeMinister take action. It should be a lesson to others otherwise public will be giving a fitting reply in a near future

  8. ಅವನಿಗೆ ಯಾವ ಶಿಕ್ಷೇನೂ ಆಗೋದಿಲ್ಲ.ಸ್ವಲ್ಪ ಸಮಯದ ನಂತರ ಎಲ್ಲವೂ ಮರೆತುಹೋಗುತ್ತದೆ.ನಮ್ಮಪ್ರಜಾಪ್ರಬುತ್ವ ಕೆಲಸ ಮಾಡೋದು ಹೀಗೆಯೇ

LEAVE A REPLY

Please enter your comment!
Please enter your name here

- Advertisment -

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...