Homeಕರ್ನಾಟಕಬೆಂಗಳೂರು: 1,000 ಕ್ಕೂ ಹೆಚ್ಚು ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಂಡ ಟ್ರಾಫಿಕ್ ಪೊಲೀಸ್

ಬೆಂಗಳೂರು: 1,000 ಕ್ಕೂ ಹೆಚ್ಚು ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಂಡ ಟ್ರಾಫಿಕ್ ಪೊಲೀಸ್

ಕರೆದ ಸ್ಥಳಕ್ಕೆ ಹೋಗದ 270 ಆಟೋ ಮತ್ತು ಹೆಚ್ಚಿನ ದರ ವಿಧಿಸಿದ 312 ಆಟೋಗಳ ವಿರುದ್ಧ ಪ್ರಕರಣದ ದಾಖಲಾಗಿದೆ

- Advertisement -
- Advertisement -

ಬೆಂಗಳೂರಿನ ಆಟೋ ಚಾಲಕರ ವಿರುದ್ಧ ನಗರದ ಟ್ರಾಫಿಕ್ ಪೊಲೀಸರು ಸೋಮವಾರ ವಿಶೇಷ ಕಾರ್ಯಾಚರಣೆ ನಡೆಸಿದ್ದು, ನಿಯಮ ಉಲ್ಲಂಘಿಸಿದ ಸಾವಿರಕ್ಕಿಂತಲೂ ಹೆಚ್ಚಿನ ಆಟೋ ಚಾಲಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಿದ, ಸವಾರಿಯನ್ನು ನಿರಾಕರಿಸಿದ ಹಾಗೂ ಸಂಚಾರಿ ನಿಯಮ ಉಲ್ಲಂಘಿಸಿದ 312 ಆಟೋಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ನಿನ್ನೆ ನಡೆಸಿದ ವಿಶೇಷ ಕಾರ್ಯಚರಣೆಯಲ್ಲಿ, ಟ್ರಾಫಿಕ್ ಪೊಲೀಸರು 270 ಆಟೋ ಚಾಲಕರವ ವಿರುದ್ಧ ಸವಾರಿ ನಿರಾಕರಿಸಿದಕ್ಕಾಗಿ ಮತ್ತು 312 ಆಟೋ ಚಾಲಕರ ವಿರುದ್ಧ ಪ್ರಯಾಣಿಕರಿಗೆ ಹೆಚ್ಚಿನ ಶುಲ್ಕ ವಿಧಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಒಟ್ಟು 1,116 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹೆಚ್ಚಿನ ಹಣಕ್ಕಾಗಿ ಬೇಡಿಕೆ ಸೇರಿದಂತೆ, ಪ್ರಯಾಣಿಕರು ಬಯಸಿದ ಸ್ಥಳಗಳಿಗೆ ಕರೆದೊಯ್ಯಲು ನಿರಾಕರಿಸಿದ ಬಗ್ಗೆ ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಹಿರಿಯ ನಾಗರಿಕರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ” ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಬಿ.ಆರ್. ರವಿಕಾಂತೇಗೌಡ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋ ದರ ಹೆಚ್ಚಳ; ಎಷ್ಟು ದೂರಕ್ಕೆ ಎಷ್ಟಾಗುತ್ತದೆ? ಇಲ್ಲಿದೆ ಸುಲಭ ಲೆಕ್ಕ!

“ಅನೇಕ ಪೊಲೀಸರು ಗ್ರಾಹಕರಂತೆ ನಟಿಸಿ ಆಟೋ ಹತ್ತಿದ್ದಾರೆ. ಈ ವೇಳೆ ಆಟೋ ಚಾಲಕರು ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟಾಗ ಅಥವಾ ಸವಾರಿಗಳನ್ನು ನಿರಾಕರಿಸಿದಾಗ, ಅದಕ್ಕೆ ಅನುಗುಣವಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ”

“ಚಾಲನೆಯ ಸಮಯದಲ್ಲಿ, ಆಟೋ ಚಾಲಕರು ಸಮವಸ್ತ್ರದಲ್ಲಿ ಇಲ್ಲದಿರುವುದು, ಚಾಲನೆ ಮಾಡುವಾಗ ಮೊಬೈಲ್ ಫೋನ್‌ಗಳನ್ನು ಬಳಸುವುದು, ದೋಷಯುಕ್ತ ನಂಬರ್ ಪ್ಲೇಟ್‌ಗಳು ಮತ್ತು ಇತರ ಸಂಚಾರಿ ಅಪರಾಧಗಳಿಗಾಗಿ ಕೂಡಾ ಪ್ರಕರಣ ದಾಖಲಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ದೂರುಗಳು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರಿ ಪೊಲೀಸರು ನಗರದ 44 ಸಂಚಾರ ಠಾಣೆಗಳ ವ್ಯಾಪ್ತಿಯಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿದ್ದಾರೆ. ಎಂ.ಜಿ. ರಸ್ತೆ, ರೆಸಿಡೆನ್ಸಿ ರಸ್ತೆ, ಕ್ವೀನ್ಸ್ ರಸ್ತೆ, ಸದಾಶಿವನಗರ, ಕಾರ್ಪೊರೇಷನ್ ಸರ್ಕಲ್, ಅಶೋಕನಗರ, ವಿಲ್ಸನ್ ಗಾರ್ಡನ್, ಇಂದಿರಾನಗರ, ಪುಲಕೇಶಿನಗರ, ಶಿವಾಜಿನಗರ, ಮಡಿವಾಳ, ಆಡುಗೋಡಿ, ಎಲೆಕ್ಟ್ರಾನಿಕ್ಸ್ ಸಿಟಿ, ಮೈಕೋ ಲೇಔಟ್, ವೈಟ್‌ಫೀಲ್ಡ್, ಎಚ್‌ಎಸ್‌ಆರ್ ಲೇಔಟ್, ಸಿಟಿ ಮಾರ್ಕೆಟ್, ಮಲ್ಲೇಶ್ವರಂ, ಪೀಣ್ಯ, ಹೆಬ್ಬಾಳ, ಚಿಕ್ಕಜಾಲ, ಜಯನಗರ, ಬನಶಂಕರಿ ಮತ್ತಿತರರ ಪ್ರದೇಶಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹೈಕೋರ್ಟ್‌‌ ಆದೇಶದ ನಂತರ ತನ್ನ ಕನಿಷ್ಠ ಆಟೋ ದರವನ್ನು ರೂ. 35 ಕ್ಕೆ ಇಳಿಸಿದ ಉಬರ್‌‌

ಈ ಸಂದರ್ಭದಲ್ಲಿ ಪೊಲೀಸರು 312 ವಾಹನಗಳನ್ನು ವಶಪಡಿಸಿಕೊಂಡಿದ್ದು, ಚಾಲಕರು ದಂಡ ಪಾವತಿಸಿದ ನಂತರ 307 ವಾಹನಗಳನ್ನು ಬಿಡುಗಡೆ ಮಾಡಿದ್ದಾರೆ. ಇನ್ನೂ ಐದು ವಾಹನಗಳು ಪೊಲೀಸರ ವಶದಲ್ಲಿವೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...