Homeಕರ್ನಾಟಕಬೆಂಗಳೂರು: 1,000 ಕ್ಕೂ ಹೆಚ್ಚು ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಂಡ ಟ್ರಾಫಿಕ್ ಪೊಲೀಸ್

ಬೆಂಗಳೂರು: 1,000 ಕ್ಕೂ ಹೆಚ್ಚು ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಂಡ ಟ್ರಾಫಿಕ್ ಪೊಲೀಸ್

ಕರೆದ ಸ್ಥಳಕ್ಕೆ ಹೋಗದ 270 ಆಟೋ ಮತ್ತು ಹೆಚ್ಚಿನ ದರ ವಿಧಿಸಿದ 312 ಆಟೋಗಳ ವಿರುದ್ಧ ಪ್ರಕರಣದ ದಾಖಲಾಗಿದೆ

- Advertisement -
- Advertisement -

ಬೆಂಗಳೂರಿನ ಆಟೋ ಚಾಲಕರ ವಿರುದ್ಧ ನಗರದ ಟ್ರಾಫಿಕ್ ಪೊಲೀಸರು ಸೋಮವಾರ ವಿಶೇಷ ಕಾರ್ಯಾಚರಣೆ ನಡೆಸಿದ್ದು, ನಿಯಮ ಉಲ್ಲಂಘಿಸಿದ ಸಾವಿರಕ್ಕಿಂತಲೂ ಹೆಚ್ಚಿನ ಆಟೋ ಚಾಲಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಿದ, ಸವಾರಿಯನ್ನು ನಿರಾಕರಿಸಿದ ಹಾಗೂ ಸಂಚಾರಿ ನಿಯಮ ಉಲ್ಲಂಘಿಸಿದ 312 ಆಟೋಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ನಿನ್ನೆ ನಡೆಸಿದ ವಿಶೇಷ ಕಾರ್ಯಚರಣೆಯಲ್ಲಿ, ಟ್ರಾಫಿಕ್ ಪೊಲೀಸರು 270 ಆಟೋ ಚಾಲಕರವ ವಿರುದ್ಧ ಸವಾರಿ ನಿರಾಕರಿಸಿದಕ್ಕಾಗಿ ಮತ್ತು 312 ಆಟೋ ಚಾಲಕರ ವಿರುದ್ಧ ಪ್ರಯಾಣಿಕರಿಗೆ ಹೆಚ್ಚಿನ ಶುಲ್ಕ ವಿಧಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಒಟ್ಟು 1,116 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹೆಚ್ಚಿನ ಹಣಕ್ಕಾಗಿ ಬೇಡಿಕೆ ಸೇರಿದಂತೆ, ಪ್ರಯಾಣಿಕರು ಬಯಸಿದ ಸ್ಥಳಗಳಿಗೆ ಕರೆದೊಯ್ಯಲು ನಿರಾಕರಿಸಿದ ಬಗ್ಗೆ ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಹಿರಿಯ ನಾಗರಿಕರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ” ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಬಿ.ಆರ್. ರವಿಕಾಂತೇಗೌಡ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋ ದರ ಹೆಚ್ಚಳ; ಎಷ್ಟು ದೂರಕ್ಕೆ ಎಷ್ಟಾಗುತ್ತದೆ? ಇಲ್ಲಿದೆ ಸುಲಭ ಲೆಕ್ಕ!

“ಅನೇಕ ಪೊಲೀಸರು ಗ್ರಾಹಕರಂತೆ ನಟಿಸಿ ಆಟೋ ಹತ್ತಿದ್ದಾರೆ. ಈ ವೇಳೆ ಆಟೋ ಚಾಲಕರು ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟಾಗ ಅಥವಾ ಸವಾರಿಗಳನ್ನು ನಿರಾಕರಿಸಿದಾಗ, ಅದಕ್ಕೆ ಅನುಗುಣವಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ”

“ಚಾಲನೆಯ ಸಮಯದಲ್ಲಿ, ಆಟೋ ಚಾಲಕರು ಸಮವಸ್ತ್ರದಲ್ಲಿ ಇಲ್ಲದಿರುವುದು, ಚಾಲನೆ ಮಾಡುವಾಗ ಮೊಬೈಲ್ ಫೋನ್‌ಗಳನ್ನು ಬಳಸುವುದು, ದೋಷಯುಕ್ತ ನಂಬರ್ ಪ್ಲೇಟ್‌ಗಳು ಮತ್ತು ಇತರ ಸಂಚಾರಿ ಅಪರಾಧಗಳಿಗಾಗಿ ಕೂಡಾ ಪ್ರಕರಣ ದಾಖಲಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ದೂರುಗಳು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರಿ ಪೊಲೀಸರು ನಗರದ 44 ಸಂಚಾರ ಠಾಣೆಗಳ ವ್ಯಾಪ್ತಿಯಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿದ್ದಾರೆ. ಎಂ.ಜಿ. ರಸ್ತೆ, ರೆಸಿಡೆನ್ಸಿ ರಸ್ತೆ, ಕ್ವೀನ್ಸ್ ರಸ್ತೆ, ಸದಾಶಿವನಗರ, ಕಾರ್ಪೊರೇಷನ್ ಸರ್ಕಲ್, ಅಶೋಕನಗರ, ವಿಲ್ಸನ್ ಗಾರ್ಡನ್, ಇಂದಿರಾನಗರ, ಪುಲಕೇಶಿನಗರ, ಶಿವಾಜಿನಗರ, ಮಡಿವಾಳ, ಆಡುಗೋಡಿ, ಎಲೆಕ್ಟ್ರಾನಿಕ್ಸ್ ಸಿಟಿ, ಮೈಕೋ ಲೇಔಟ್, ವೈಟ್‌ಫೀಲ್ಡ್, ಎಚ್‌ಎಸ್‌ಆರ್ ಲೇಔಟ್, ಸಿಟಿ ಮಾರ್ಕೆಟ್, ಮಲ್ಲೇಶ್ವರಂ, ಪೀಣ್ಯ, ಹೆಬ್ಬಾಳ, ಚಿಕ್ಕಜಾಲ, ಜಯನಗರ, ಬನಶಂಕರಿ ಮತ್ತಿತರರ ಪ್ರದೇಶಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹೈಕೋರ್ಟ್‌‌ ಆದೇಶದ ನಂತರ ತನ್ನ ಕನಿಷ್ಠ ಆಟೋ ದರವನ್ನು ರೂ. 35 ಕ್ಕೆ ಇಳಿಸಿದ ಉಬರ್‌‌

ಈ ಸಂದರ್ಭದಲ್ಲಿ ಪೊಲೀಸರು 312 ವಾಹನಗಳನ್ನು ವಶಪಡಿಸಿಕೊಂಡಿದ್ದು, ಚಾಲಕರು ದಂಡ ಪಾವತಿಸಿದ ನಂತರ 307 ವಾಹನಗಳನ್ನು ಬಿಡುಗಡೆ ಮಾಡಿದ್ದಾರೆ. ಇನ್ನೂ ಐದು ವಾಹನಗಳು ಪೊಲೀಸರ ವಶದಲ್ಲಿವೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...