Homeಕರ್ನಾಟಕಬೆಂಗಳೂರಿನ ಜೋಡಿ ಕೊಲೆಗೆ ವ್ಯವಹಾರ ವೈಷಮ್ಯವೇ ಕಾರಣ; ವಿಫಲವಾದ ಬಿಜೆಪಿಯ ಹೆಣರಾಜಕಾರಣ

ಬೆಂಗಳೂರಿನ ಜೋಡಿ ಕೊಲೆಗೆ ವ್ಯವಹಾರ ವೈಷಮ್ಯವೇ ಕಾರಣ; ವಿಫಲವಾದ ಬಿಜೆಪಿಯ ಹೆಣರಾಜಕಾರಣ

- Advertisement -
- Advertisement -

ಜುಲೈ 11ರ ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಅಮೃತಹಳ್ಳಿಯಲ್ಲಿರುವ ಏರೋನಿಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ (Aironics Media Pvt Ltd) ಕಂಪನಿಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಆ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಫಣೀಂದ್ರ ಸುಬ್ರಮಣ್ಯ ಹಾಗೂ ಸಿಇಒ ವಿನು ಕುಮಾರ್ ಇಬ್ಬರಿಗೂ ಇರಿದು ಕೊಂದು ಪರಾರಿಯಾಗಿದ್ದಾರೆ. ಈ ಜೋಡಿ ಕೊಲೆಯನ್ನು ಕೋಮುವಾದೀಕರಿಸಿದ ಬಿಜೆಪಿ ಮುಖಂಡರು ಮತ್ತು ಹಿಂದುತ್ವವಾದಿಗಳು, ಹಿಂದೂ ಅರ್ಚಕ, ಹಿಂದೂ ಮುಖಂಡ ಫಣೀಂದ್ರ ಸುಬ್ರಮಣ್ಯರವರ ಕೊಲೆಯಾಗಿದೆ ಎಂದು ಪ್ರಚಾರ ಮಾಡಿದರು. ಇದೇ ಸಂದರ್ಭದಲ್ಲಿ ಬೆಳಗಾವಿಯ ಜೈನ ಮುನಿ ಮತ್ತು ಟಿ.ನರಸೀಪುರದ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಸಂಭವಿಸಿದ್ದರಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂಗಳ ಕೊಲೆಯಾಗುತ್ತಿದೆ ಎಂಬ ಕೋಮು ನಿರೂಪಣೆಯನ್ನು ಹರಿಯಬಿಟ್ಟರು.

ಬಿಜೆಪಿ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಹಿಂದೂ ಮುಖಂಡನನ್ನು ಅನ್ಯಧರ್ಮದವರು ಕೊಂದಿದ್ದಾರೆ ಎಂದು ಆರೋಪಿಸಿದರು. ಆದರೆ ಪೊಲೀಸರು ಶೀಘ್ರವಾಗಿ ಕೊಲೆಗೆ ಸಂಬಂಧಿಸಿದಂತೆ ಸಂತೋಷ್, ಶಬರೀಶ್ (ಫೆಲಿಕ್ಸ್) ಮತ್ತು ವಿನಯ್ ರೆಡ್ಡಿ ಎಂಬ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಅಸಲೀ ಸತ್ಯ ಬಹಿರಂಗವಾಗಿದೆ. ಅದರ ಪ್ರಕಾರ ವೃತ್ತಿ ಮತ್ಸರವೇ ಜೋಡಿ ಕೊಲೆಗೆ ಪ್ರಧಾನ ಕಾರಣ ಹೊರತು ಯಾವುದೇ ಕೋಮು ಸಂಘರ್ಷವಲ್ಲ. ಜೊತೆಗೆ ಕೊಲೆಯಾದವರು ಮತ್ತು ಕೊಲೆ ಆರೋಪಿಗಳೆಲ್ಲರೂ ಒಂದೇ ಧರ್ಮದವರಾಗಿದ್ದಾರೆ.

ಕೊಲೆಯಾದ ಫಣೀಂದ್ರ ಮತ್ತು ವಿನುಕುಮಾರ್ ಜೊತೆಗೆ ಆರೋಪಿಗಳಾದ ಸಂತೋಷ್, ಶಬರೀಶ್ ಈ ಹಿಂದೆ ಜಿ-ನೆಟ್ ಎಂಬ ಇಂಟರ್‌ನೆಟ್ ಸೇವೆ ಒದಗಿಸುವ ಕಂಪನಿಯಲ್ಲಿ ಜೊತೆಯಾಗಿ ಕೆಲಸ ಮಾಡುತ್ತಿದ್ದರು. ಆದರೆ ಆ ಕಂಪನಿಯ ಮಾಲೀಕರಾದ ಅರುಣ್ ಕುಮಾರ್‌ರೊಂದಿಗೆ ಮನಸ್ತಾಪ ಬಂದ ಕಾರಣ ಕೆಲಸ ಬಿಟ್ಟ ಫಣೀಂದ್ರ ಮತ್ತು ವಿನುಕುಮಾರ್ 2022ರ ನವೆಂಬರ್‌ನಲ್ಲಿ ಏರೋನಿಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಎಂಬ ಸ್ವಂತ ಕಂಪನಿ ಆರಂಭಿಸಿದ್ದರು. ಆರಂಭದಿಂದಲೇ ಕಂಪನಿಯು ಸಾಕಷ್ಟು ಜನಪ್ರಿಯತೆ ಪಡೆದದ್ದರಿಂದ ಹಲವಾರು ಗ್ರಾಹಕರು ಜಿ-ನೆಟ್ ಕಂಪನಿ ಬಿಟ್ಟು ಏರೋನಿಕ್ಸ್‌ನಿಂದ ಸೇವೆ ಪಡೆದುಕೊಳ್ಳಲು ಆರಂಭಿಸಿದ್ದರು. ಅಷ್ಟು ಮಾತ್ರವಲ್ಲದೇ ಹಲವಾರು ಉದ್ಯೋಗಿಗಳು ಸಹ ಜಿ-ನೆಟ್ ತೊರೆದು ಏರೋನಿಕ್ಸ್ ಸೇರಿದ್ದರು. ಹಾಗಾಗಿ ಎರಡು ಕಂಪನಿಗಳ ನಡುವೆ ತುರುಸಿನ ಪೈಪೋಟಿ ಏರ್ಪಟ್ಟಿತ್ತು. ಇದರಿಂದ ಹತಾಶಗೊಂಡ ಜಿ-ನೆಟ್ ಮಾಲೀಕ ಅರುಣ್ ಕುಮಾರ್ ಫೆಲಿಕ್ಸ್ ಮತ್ತು ಇತರರಿಗೆ ಸುಪಾರಿ ನೀಡಿ ಫಣೀಂದ್ರ ಮತ್ತು ವಿನುಕುಮಾರ್ ಕೊಲೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಪೊಲೀಸರು ಅರುಣ್ ಕುಮಾರ್‌ರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 302 (ಕೊಲೆ), 120ಬಿ (ಕ್ರಿಮಿನಲ್ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಫಣೀಂದ್ರ ಸುಬ್ರಹ್ಮಣ್ಯಂ ಅವರು ಹಿಂದುತ್ವ ಸಂಘಟನೆಗಳೊಂದಿಗೆ ಶಾಮೀಲಾಗಿದ್ದರೂ ಕೂಡ ಅನ್ಯ ಧರ್ಮದ ಯಾರೊಂದಿಗೂ ಅವರಿಗೆ ವೈರತ್ವವಿರಲಿಲ್ಲ. ಅಲ್ಲದೆ, ಜಿ-ನೆಟ್ ಕಂಪನಿ ಜೊತೆಗಿನ ವ್ಯವಹಾರ ವೈಷಮ್ಯವೇ ಅವರ ಹತ್ಯೆಗೆ ಕಾರಣ ಎಂದು ದೂರುದಾರರಾದ ಅವರ ಸಹೋದ್ಯೋಗಿ ಶಂಕರ್ ನಾರಾಯಣ್ ತಿಳಿಸಿದ್ದಾರೆ; ಡಿಸಿಪಿ (ಈಶಾನ್ಯ) ಲಕ್ಷ್ಮಿ ಪ್ರಸಾದ್ ಆರಂಭಿಕ ತನಿಖೆಯಲ್ಲಿ ಯಾವುದೇ ಕೋಮು ಆಯಾಮ ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಇನ್ನು ಫಣೀಂದ್ರರವರು ಪೂಜೆ ಮಾಡುತ್ತಿರುವ ಫೋಟೊ, ಅವರ ಕಚೇರಿ ಉದ್ಘಾಟನೆ ಸಮಯದಲ್ಲಿ ತೆಗೆಸಿಕೊಂಡಿರುವುದು; ಅದನ್ನು ರೀಲ್ ಒಂದರಲ್ಲಿ ಬಳಸಲಾಗಿದ್ದು ಅದನ್ನೇ ಮುಂದುಮಾಡಿ ಅವರು ಹಿಂದೂ ಅರ್ಚಕ ಎಂದು ತಪ್ಪಾಗಿ ಬಿಂಬಿಸಲಾಗಿದೆ

ಫಣೀಂದ್ರರವರ ವ್ಯವಹಾರ ಪಾಲುದಾರರಾದ ಕನ್ನಡಪರ ಹೋರಾಟಗಾರರಾದ ಬಿ.ಹರೀಶ್ ಕುಮಾರ್‌ರವರು ಮಾತನಾಡಿ, “ಫಣೀಂದ್ರರವರು ಒಳ್ಳೆಯ ಸ್ವಭಾವದವರು. ಅವರು ಹಿಂದುತ್ವವನ್ನು ಒಪ್ಪಿಕೊಂಡರೂ ಸಹ ಅನ್ಯಧರ್ಮದವರನ್ನು ದ್ವೇಷಿಸುವವರಲ್ಲ. ಕೇವಲ 4 ತಿಂಗಳ ಹಿಂದೆ ಹೊಸ ಇಂಟರ್‌ನೆಟ್ ಸೇವೆ ನೀಡುವ ಕಂಪನಿ ಆರಂಭಿಸಿದ್ದೇವೆ. ಎಲ್ಲವೂ ಚೆನ್ನಾಗಿ ನಡೆದುಕೊಂಡು ಹೋಗುತ್ತಿರುವಾಗ ಅವರ ಏಳಿಗೆ ಸಹಿಸದೇ ಕೊಲೆಗೈಯ್ಯಲಾಗಿದೆ” ಎಂದರು.

ಠುಸ್ ಆದ ಬಿಜೆಪಿಯ ಹೆಣದ ರಾಜಕೀಯ

4 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯು ಜನಪರ ಆಡಳಿತ ನೀಡಲು, ಅಭಿವೃದ್ದಿ ಮಾಡಲು ವಿಫಲವಾಗಿ ಸೋತು ಸುಣ್ಣವಾಗಿದೆ. ಆದರೂ ತನ್ನ ಹೆಣ ರಾಜಕಾರಣವನ್ನು ಮಾತ್ರ ಕೈಬಿಟ್ಟಿಲ್ಲ. ರಾಜ್ಯದಲ್ಲಿ ಯಾರಾದರೂ ಸಾವನಪ್ಪಿದ್ದರೆ ಹಿಂದೂ ಮುಖಂಡನ ಕೊಲೆ ಎಂದು ಗಲಭೆ ಎಬ್ಬಿಸಲು ಬಿಜೆಪಿ ಯತ್ನಿಸುತ್ತಿದೆ. ಈ ಹಿಂದೆ ಹೊನ್ನಾವರದಲ್ಲಿ ಪರೇಶ್ ಮೇಸ್ತಾ ಎಂಬ ಯುವಕ ಸಾವನಪ್ಪಿದ ಘಟನೆಯನ್ನು ಕೋಮುವಾದೀಕರಿಸಿ, ಗಲಭೆಗಳನ್ನು ಎಬ್ಬಿಸಿ ಮತಗಳ ಬೇಟೆಯಾಡಿದ್ದ ಬಿಜೆಪಿಗೆ ಇನ್ನೂ ರಕ್ತದ ರುಚಿ ಆರಿಲ್ಲ. ಹಾಗಾಗಿ ಹೆಣಗಳು ಬೀಳುವುದನ್ನೇ ಕಾಯ್ದು ಕೋಮು ಆಯಾಮ ನೀಡಲು ಯತ್ನಿಸುತ್ತಿದೆ. ಆ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ. ಈ ಜೋಡಿ ಕೊಲೆ ವಿಚಾರದಲ್ಲಿಯೂ ಹಾಗೆ ಮಾಡಲು ಯತ್ನಿಸಿತು. ಆದರೆ ನೈಜ ಕಾರಣ ಹೊರಬರುತ್ತಲೇ ಮುಖಭಂಗ ಅನುಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...